Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಈ ಫೋಟೋ ಅಂಗಾಂಗ ಕಳ್ಳಸಾಗಣೆ ದಂಧೆ ನಡೆಸುವವರದ್ದೇ?

ಫ್ಯಾಕ್ಟ್‌‌ಚೆಕ್‌: ಈ ಫೋಟೋ ಅಂಗಾಂಗ ಕಳ್ಳಸಾಗಣೆ ದಂಧೆ ನಡೆಸುವವರದ್ದೇ?

ವೈರಲ್‌ ಆಗುತ್ತಿರುವ ಫೋಟೋಗಳಲ್ಲಿ ಕೊರೊನಾ ಸಾಂಕ್ರಮಿಕದ ನಡುವೆ ಮಹಾರಾಷ್ಟ್ರದಲ್ಲಿ ಅಂಗಾಂಗ ಕಳ್ಳಸಾಗಣೆ ದಂಧೆ ನಡೆಯುತ್ತಿದೆ ಎಂದು ಉಲ್ಲೇಖಿಸಲಾಗಿದೆ.

- Advertisement -
- Advertisement -

ವಿದ್ಯುತ್ ಚಿತಾಗಾರದಲ್ಲಿ ನಡೆಯುತ್ತಿರುವ ಶವ ಸಂಸ್ಕಾರದಂತೆ ತೋರುವ ಹಲವಾರು ಫೋಟೋಗಳನ್ನು ಕೊರೊನಾ ಸಾಂಕ್ರಮಿಕದ ನಡುವೆ ಮಹಾರಾಷ್ಟ್ರದಲ್ಲಿ ಅಂಗಾಂಗ ಕಳ್ಳಸಾಗಣೆ ದಂಧೆ ನಡೆಯುತ್ತಿದೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಮಹಿಳೆ ಹಾಗೂ ಇಬ್ಬರು ಪುರುಷರು ಸೇರಿಕೊಂಡು ಈ ಶವ ಸಂಸ್ಕಾರ ನಡೆಸುತ್ತಿರುವ ಫೋಟೋಗಳಲ್ಲಿ ದೇಹವನ್ನು ಹಾಳೆಯಲ್ಲಿ ಸುತ್ತಿರುವುದನ್ನು ತೋರಿಸುತ್ತದೆ. ಈ ಚಿತ್ರವನ್ನು ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್‌ ಸೋಗಿನಲ್ಲಿ ಅಂಗಾಂಗ ದಂಧೆ ನಡೆಯುತ್ತಿದೆ ಎಂಬ ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ವೈರಲ್ ಸಂದೇಶವು ವಿಸ್ತಾರವಾದ ಕತೆಯನ್ನು ಹೇಳುತ್ತದೆ. ಅದರ ಪ್ರಕಾರ, “ಭಯಂದರ್‌ನ ಗೋರೈ ಪ್ರದೇಶದಲ್ಲಿ ಯಾವುದೇ ಕೊರೊನಾ ವೈರಸ್ ಪ್ರಕರಣಗಳು ಕಂಡುಬಂದಿಲ್ಲ. ಆದರೆ ಕಳೆದ ಕೆಲವು ದಿನಗಳಲ್ಲಿ ಸಾಧಾರಣವಾದ ಕೆಮ್ಮು ಮತ್ತು ಶೀತದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದರು. ಅಲ್ಲಿ ಅವರನ್ನು ಬಲವಂತವಾಗಿ ಆಸ್ಪತ್ರೆಯಲ್ಲಿ ದಾಖಲಿಸಿ ಅವರು ಕೊರೊನಾ ಪಾಸಿಟಿವ್ ಆಗಿದ್ದಾರೆ ಎಂದು ಹೇಳಿದ್ದಾರೆ”

ನಂತರ ಆ ವ್ಯಕ್ತಿ ಮೃತಪಟ್ಟಿದ್ದು, ಕುಟುಂಬದ ಸದಸ್ಯರು ಅವರ ಅಂತ್ಯ ಕ್ರಿಯೆ ಮಾಡಲು ಹೊರಟಿದ್ದರು. ಈ ಸಮಯದಲ್ಲಿ ಶವವನ್ನು ನೋಡಲು ಒತ್ತಾಯಿಸಿದ್ದರು ಆಗ ಶವದ ಎಲ್ಲಾ ಅಂಗಾಂಗಳು ಕಾಣೆಯಾಗಿದ್ದವು ಎಂದು ಆ ಪೋಸ್ಟ್ ಹೇಳುತ್ತದೆ.

ವೈದ್ಯರನ್ನು ದೇವರ ಸ್ವರೂಪವಾಗಿ ನೋಡುತ್ತಿರುವಾಗ, ವೈದ್ಯರು ಇಂತಹ ಘೋರ ಕೃತ್ಯಗಳನ್ನು ಮಾಡಿದ್ದಾರೆ ಎಂದು ವೈರಲ್‌ ಪೋಸ್ಟ್‌ ಆರೋಪಿಸುತ್ತದೆ. ಇದಕ್ಕಿಂತಲೂ ಮೊದಲು ಇಂತಹ ಎಷ್ಟು ಘಟನೆಗಳು ನಡೆದಿವೆಯೊ ಎಂದು ಆಶ್ಚರ್ಯ ವ್ಯಕ್ತಪಡಿಸಿ ಇದನ್ನು ಸಿಬಿಐ ತನಿಖೆ ನಡೆಸಬೇಕು ಎಂದು ಅದು ಒತ್ತಾಯಿಸಿದೆ.

ಫೇಸ್‌ಬುಕ್ ಹಾಗೂ ಟ್ವಿಟರ್‌ನಲ್ಲಿ ಇದೇ ರೀತಿಯ ಸಂದೇಶದೊಂದಿಗೆ ಅನೇಕ ಜನರು ಈ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಅಂತಹ ಹೆಚ್ಚಿನ ಪೋಸ್ಟ್‌ಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್‌

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಫೋಟೋಗಳನ್ನು ರಿವರ್ಸ್ ಇಮೇಜ್ ಹುಡುಕಾಟ ನಡೆಸಿ ಅದು ದೆಹಲಿ ಕ್ರೈಮ್ ಪ್ರೆಸ್ ಎಂಬ ವೆಬ್‌ಸೈಟ್‌ ಬರೆದಿರುವ ಲೇಖನವೆಂದು ದಿ ಕ್ವಿಂಟ್ ಪತ್ತೆ ಹಚ್ಚಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಅದೇ ವೈರಲ್ ಕತೆಯಲ್ಲಿ ಅಲ್ಲೂ ಕೂಡಾ ಫೋಟೋಗಳನ್ನು ಬಳಸಲಾಗಿದೆ.

ಈ ಲೇಖನವನ್ನು ಓಂ ಶುಕ್ಲಾ ಎಂಬವರು ಬರೆದಿದ್ದು, ಅವರ ಫೇಸ್‌ಬುಕ್‌ ಬಯೊದಲ್ಲಿ ಅವರನ್ನು ಸ್ಪೆಷಲ್‌ ಇನ್ವೆಸ್ಟಿಗೇಟರ್‌ ಎಂದು ಉಲ್ಲೇಖಿಸಿದ್ದಾರೆ.

ನಂತರ, ಫೇಸ್‌ಬುಕ್‌ನಲ್ಲಿ ’ಮಾನವ ಅಂಗಾಂಗ ಕಳ್ಳಸಾಗಣೆ’ (मानव अंगो की तस्करी) ಎಂಬ ಕೀವರ್ಡ್ ಅನ್ನು ಶುಕ್ಲಾ ಅವರ ಹೆಸರಿನೊಂದಿಗೆ ಹುಡುಕಾಟವನ್ನು ನಡೆಸಿದಾಗ, ಲಕ್ನೋ ಮೂಲದ ಮಹಿಳೆಯಾದ ’ವರ್ಷಾ ವರ್ಮಾ’ ಎಂಬ ಹೆಸರಿನ ಪೋಸ್ಟ್ ಕಂಡುಕೊಳ್ಳಲಾಗಿದೆ.

ಜುಲೈ 21 ರ ದಿನಾಂಕದಂದು ಹಾಕಲಾದ ಅವರ ಪೋಸ್ಟ್,  ವೈರಲ್ ಫೋಟೋಗಳಲ್ಲಿ ಕಾಣಿಸಿಕೊಂಡ ಮಹಿಳೆ ಇವರೆ ಆಗಿದ್ದು. ಮಹಾರಾಷ್ಟ್ರದಲ್ಲಿ ಅಂಗಾಂಗ ದಂಧೆ ನಡೆಯುತ್ತಿದೆ ಎಂದು ತಪ್ಪಾಗಿ ಉಲ್ಲೇಖಿಸಲು ತನ್ನ ಫೋಟೋಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ವೈರಲ್ ಫೋಟೊದಲ್ಲಿ ಅವರು, ಅವರ ಸಹೋದ್ಯೋಗಿ ದೀಪಕ್ ಮಹಾಜನ್, ”ಏಕ್ ಕೋಶಿಶ್ ಐಸಿ ಭಿ” ಎನ್‌ಜಿಒ ಮೂಲಕ ವಾರಸುದಾರರ ಶವಗಳನ್ನು ದಫನ್ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ವೈರಲ್‌ ಆಗುತ್ತಿರುವ ಚಿತ್ರವನ್ನು ವರ್ಷಾ ವರ್ಮ ಜುಲೈ 18 ರಂದು ಪೋಸ್ಟ್ ಮಾಡಿದ್ದರು. ಆ ಪೋಸ್ಟ್‌ನಲ್ಲಿ ಲಕ್ನೋದ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಮೃತಪಟ್ಟ 43 ವರ್ಷದ ವಾರಸುದಾರರಿಲ್ಲದ ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಯ ನಂತರ ದಹನ ಮಾಡಿದ್ದಾರೆ ಎಂಬ ಸಂದೇಶ ಬರೆದಿದ್ದರು.

ಲಾಕ್‌ಡೌನ್ ಸಮಯದಲ್ಲಿ ಅವರು ಇಲ್ಲಿಯವರೆಗೆ ಅಂತಹ 17 ವಾರಸುದಾರರಿಲ್ಲದ ಶವಗಳನ್ನು ಅಂತ್ಯಸಂಸ್ಕಾರ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಶುಕ್ಲಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೋರಿ ವರ್ಷಾ ವರ್ಮ ಸೈಬರ್ ಸೆಲ್‌ಗೆ ಎಫ್‌ಐಆರ್ ಕೂಡ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಜುಲೈ 18 ರಂದು ಲಖನೌದಲ್ಲಿ ಈ ಶವಸಂಸ್ಕಾರ ನಡೆದಿದೆ ಎಂದು “ದಿ ಕ್ವಿಂಟ್” ದೃಡಪಡಿಸಿದೆ.

ವರ್ಷಾ ವರ್ಮ ತನ್ನ ವಕೀಲರ ಸಲಹೆಯನ್ನು ಪಡೆದುಕೊಂಡು ಸ್ಥಳೀಯ ಸೈಬರ್ ಸೆಲ್ ಮತ್ತು ಪೊಲೀಸ್ ಠಾಣೆಯಲ್ಲಿ ಶುಕ್ಲಾ ವಿರುದ್ಧ ಎಫ್ಐಆರ್ ದಾಖಲಿಸಿದ್ದರು ಮತ್ತು ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಯೋಜಿಸುತ್ತಿದ್ದಾರೆ ಎಂದು ದಿ ಕ್ವಿಂಟ್‌ಗೆ ಹೇಳಿದ್ದಾರೆ.

ಒಟ್ಟಿನಲ್ಲಿ ವಾರಿಸುದಾರರಿಲ್ಲದ ಶವವನ್ನು ಅಂತ್ಯ ಕ್ರಿಯೆ ಮಾಡುವ ಫೋಟೋಗಳನ್ನು ಮಹಾರಾಷ್ಟ್ರದಲ್ಲಿ ನಡೆಸುತ್ತಿರುವ ಮಾನವ ಅಂಗಾಂಗ ಕಳ್ಳಸಾಗಣೆ ದಂಧೆ ಬಯಲಾಗಿದೆ ಎಂಬ ಸುಳ್ಳು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಎಂಬುದು ಸ್ಪಷ್ಟವಾಗಿದೆ.
ಕೃಪೆ: ದಿ ಕ್ವಿಂಟ್


ಓದಿ: ಫ್ಯಾಕ್ಟ್‌ಚೆಕ್: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು 


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...