Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ಈ ಫೋಟೋ ಅಂಗಾಂಗ ಕಳ್ಳಸಾಗಣೆ ದಂಧೆ ನಡೆಸುವವರದ್ದೇ?

ಫ್ಯಾಕ್ಟ್‌‌ಚೆಕ್‌: ಈ ಫೋಟೋ ಅಂಗಾಂಗ ಕಳ್ಳಸಾಗಣೆ ದಂಧೆ ನಡೆಸುವವರದ್ದೇ?

ವೈರಲ್‌ ಆಗುತ್ತಿರುವ ಫೋಟೋಗಳಲ್ಲಿ ಕೊರೊನಾ ಸಾಂಕ್ರಮಿಕದ ನಡುವೆ ಮಹಾರಾಷ್ಟ್ರದಲ್ಲಿ ಅಂಗಾಂಗ ಕಳ್ಳಸಾಗಣೆ ದಂಧೆ ನಡೆಯುತ್ತಿದೆ ಎಂದು ಉಲ್ಲೇಖಿಸಲಾಗಿದೆ.

- Advertisement -
- Advertisement -

ವಿದ್ಯುತ್ ಚಿತಾಗಾರದಲ್ಲಿ ನಡೆಯುತ್ತಿರುವ ಶವ ಸಂಸ್ಕಾರದಂತೆ ತೋರುವ ಹಲವಾರು ಫೋಟೋಗಳನ್ನು ಕೊರೊನಾ ಸಾಂಕ್ರಮಿಕದ ನಡುವೆ ಮಹಾರಾಷ್ಟ್ರದಲ್ಲಿ ಅಂಗಾಂಗ ಕಳ್ಳಸಾಗಣೆ ದಂಧೆ ನಡೆಯುತ್ತಿದೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಮಹಿಳೆ ಹಾಗೂ ಇಬ್ಬರು ಪುರುಷರು ಸೇರಿಕೊಂಡು ಈ ಶವ ಸಂಸ್ಕಾರ ನಡೆಸುತ್ತಿರುವ ಫೋಟೋಗಳಲ್ಲಿ ದೇಹವನ್ನು ಹಾಳೆಯಲ್ಲಿ ಸುತ್ತಿರುವುದನ್ನು ತೋರಿಸುತ್ತದೆ. ಈ ಚಿತ್ರವನ್ನು ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್‌ ಸೋಗಿನಲ್ಲಿ ಅಂಗಾಂಗ ದಂಧೆ ನಡೆಯುತ್ತಿದೆ ಎಂಬ ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ವೈರಲ್ ಸಂದೇಶವು ವಿಸ್ತಾರವಾದ ಕತೆಯನ್ನು ಹೇಳುತ್ತದೆ. ಅದರ ಪ್ರಕಾರ, “ಭಯಂದರ್‌ನ ಗೋರೈ ಪ್ರದೇಶದಲ್ಲಿ ಯಾವುದೇ ಕೊರೊನಾ ವೈರಸ್ ಪ್ರಕರಣಗಳು ಕಂಡುಬಂದಿಲ್ಲ. ಆದರೆ ಕಳೆದ ಕೆಲವು ದಿನಗಳಲ್ಲಿ ಸಾಧಾರಣವಾದ ಕೆಮ್ಮು ಮತ್ತು ಶೀತದಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋಗಿದ್ದರು. ಅಲ್ಲಿ ಅವರನ್ನು ಬಲವಂತವಾಗಿ ಆಸ್ಪತ್ರೆಯಲ್ಲಿ ದಾಖಲಿಸಿ ಅವರು ಕೊರೊನಾ ಪಾಸಿಟಿವ್ ಆಗಿದ್ದಾರೆ ಎಂದು ಹೇಳಿದ್ದಾರೆ”

ನಂತರ ಆ ವ್ಯಕ್ತಿ ಮೃತಪಟ್ಟಿದ್ದು, ಕುಟುಂಬದ ಸದಸ್ಯರು ಅವರ ಅಂತ್ಯ ಕ್ರಿಯೆ ಮಾಡಲು ಹೊರಟಿದ್ದರು. ಈ ಸಮಯದಲ್ಲಿ ಶವವನ್ನು ನೋಡಲು ಒತ್ತಾಯಿಸಿದ್ದರು ಆಗ ಶವದ ಎಲ್ಲಾ ಅಂಗಾಂಗಳು ಕಾಣೆಯಾಗಿದ್ದವು ಎಂದು ಆ ಪೋಸ್ಟ್ ಹೇಳುತ್ತದೆ.

ವೈದ್ಯರನ್ನು ದೇವರ ಸ್ವರೂಪವಾಗಿ ನೋಡುತ್ತಿರುವಾಗ, ವೈದ್ಯರು ಇಂತಹ ಘೋರ ಕೃತ್ಯಗಳನ್ನು ಮಾಡಿದ್ದಾರೆ ಎಂದು ವೈರಲ್‌ ಪೋಸ್ಟ್‌ ಆರೋಪಿಸುತ್ತದೆ. ಇದಕ್ಕಿಂತಲೂ ಮೊದಲು ಇಂತಹ ಎಷ್ಟು ಘಟನೆಗಳು ನಡೆದಿವೆಯೊ ಎಂದು ಆಶ್ಚರ್ಯ ವ್ಯಕ್ತಪಡಿಸಿ ಇದನ್ನು ಸಿಬಿಐ ತನಿಖೆ ನಡೆಸಬೇಕು ಎಂದು ಅದು ಒತ್ತಾಯಿಸಿದೆ.

ಫೇಸ್‌ಬುಕ್ ಹಾಗೂ ಟ್ವಿಟರ್‌ನಲ್ಲಿ ಇದೇ ರೀತಿಯ ಸಂದೇಶದೊಂದಿಗೆ ಅನೇಕ ಜನರು ಈ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಅಂತಹ ಹೆಚ್ಚಿನ ಪೋಸ್ಟ್‌ಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್‌

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ಫೋಟೋಗಳನ್ನು ರಿವರ್ಸ್ ಇಮೇಜ್ ಹುಡುಕಾಟ ನಡೆಸಿ ಅದು ದೆಹಲಿ ಕ್ರೈಮ್ ಪ್ರೆಸ್ ಎಂಬ ವೆಬ್‌ಸೈಟ್‌ ಬರೆದಿರುವ ಲೇಖನವೆಂದು ದಿ ಕ್ವಿಂಟ್ ಪತ್ತೆ ಹಚ್ಚಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಅದೇ ವೈರಲ್ ಕತೆಯಲ್ಲಿ ಅಲ್ಲೂ ಕೂಡಾ ಫೋಟೋಗಳನ್ನು ಬಳಸಲಾಗಿದೆ.

ಈ ಲೇಖನವನ್ನು ಓಂ ಶುಕ್ಲಾ ಎಂಬವರು ಬರೆದಿದ್ದು, ಅವರ ಫೇಸ್‌ಬುಕ್‌ ಬಯೊದಲ್ಲಿ ಅವರನ್ನು ಸ್ಪೆಷಲ್‌ ಇನ್ವೆಸ್ಟಿಗೇಟರ್‌ ಎಂದು ಉಲ್ಲೇಖಿಸಿದ್ದಾರೆ.

ನಂತರ, ಫೇಸ್‌ಬುಕ್‌ನಲ್ಲಿ ’ಮಾನವ ಅಂಗಾಂಗ ಕಳ್ಳಸಾಗಣೆ’ (मानव अंगो की तस्करी) ಎಂಬ ಕೀವರ್ಡ್ ಅನ್ನು ಶುಕ್ಲಾ ಅವರ ಹೆಸರಿನೊಂದಿಗೆ ಹುಡುಕಾಟವನ್ನು ನಡೆಸಿದಾಗ, ಲಕ್ನೋ ಮೂಲದ ಮಹಿಳೆಯಾದ ’ವರ್ಷಾ ವರ್ಮಾ’ ಎಂಬ ಹೆಸರಿನ ಪೋಸ್ಟ್ ಕಂಡುಕೊಳ್ಳಲಾಗಿದೆ.

ಜುಲೈ 21 ರ ದಿನಾಂಕದಂದು ಹಾಕಲಾದ ಅವರ ಪೋಸ್ಟ್,  ವೈರಲ್ ಫೋಟೋಗಳಲ್ಲಿ ಕಾಣಿಸಿಕೊಂಡ ಮಹಿಳೆ ಇವರೆ ಆಗಿದ್ದು. ಮಹಾರಾಷ್ಟ್ರದಲ್ಲಿ ಅಂಗಾಂಗ ದಂಧೆ ನಡೆಯುತ್ತಿದೆ ಎಂದು ತಪ್ಪಾಗಿ ಉಲ್ಲೇಖಿಸಲು ತನ್ನ ಫೋಟೋಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ವೈರಲ್ ಫೋಟೊದಲ್ಲಿ ಅವರು, ಅವರ ಸಹೋದ್ಯೋಗಿ ದೀಪಕ್ ಮಹಾಜನ್, ”ಏಕ್ ಕೋಶಿಶ್ ಐಸಿ ಭಿ” ಎನ್‌ಜಿಒ ಮೂಲಕ ವಾರಸುದಾರರ ಶವಗಳನ್ನು ದಫನ್ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದ್ದಾರೆ.

ವೈರಲ್‌ ಆಗುತ್ತಿರುವ ಚಿತ್ರವನ್ನು ವರ್ಷಾ ವರ್ಮ ಜುಲೈ 18 ರಂದು ಪೋಸ್ಟ್ ಮಾಡಿದ್ದರು. ಆ ಪೋಸ್ಟ್‌ನಲ್ಲಿ ಲಕ್ನೋದ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಮೃತಪಟ್ಟ 43 ವರ್ಷದ ವಾರಸುದಾರರಿಲ್ಲದ ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಯ ನಂತರ ದಹನ ಮಾಡಿದ್ದಾರೆ ಎಂಬ ಸಂದೇಶ ಬರೆದಿದ್ದರು.

ಲಾಕ್‌ಡೌನ್ ಸಮಯದಲ್ಲಿ ಅವರು ಇಲ್ಲಿಯವರೆಗೆ ಅಂತಹ 17 ವಾರಸುದಾರರಿಲ್ಲದ ಶವಗಳನ್ನು ಅಂತ್ಯಸಂಸ್ಕಾರ ಮಾಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ. ಶುಕ್ಲಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೋರಿ ವರ್ಷಾ ವರ್ಮ ಸೈಬರ್ ಸೆಲ್‌ಗೆ ಎಫ್‌ಐಆರ್ ಕೂಡ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಜುಲೈ 18 ರಂದು ಲಖನೌದಲ್ಲಿ ಈ ಶವಸಂಸ್ಕಾರ ನಡೆದಿದೆ ಎಂದು “ದಿ ಕ್ವಿಂಟ್” ದೃಡಪಡಿಸಿದೆ.

ವರ್ಷಾ ವರ್ಮ ತನ್ನ ವಕೀಲರ ಸಲಹೆಯನ್ನು ಪಡೆದುಕೊಂಡು ಸ್ಥಳೀಯ ಸೈಬರ್ ಸೆಲ್ ಮತ್ತು ಪೊಲೀಸ್ ಠಾಣೆಯಲ್ಲಿ ಶುಕ್ಲಾ ವಿರುದ್ಧ ಎಫ್ಐಆರ್ ದಾಖಲಿಸಿದ್ದರು ಮತ್ತು ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಯೋಜಿಸುತ್ತಿದ್ದಾರೆ ಎಂದು ದಿ ಕ್ವಿಂಟ್‌ಗೆ ಹೇಳಿದ್ದಾರೆ.

ಒಟ್ಟಿನಲ್ಲಿ ವಾರಿಸುದಾರರಿಲ್ಲದ ಶವವನ್ನು ಅಂತ್ಯ ಕ್ರಿಯೆ ಮಾಡುವ ಫೋಟೋಗಳನ್ನು ಮಹಾರಾಷ್ಟ್ರದಲ್ಲಿ ನಡೆಸುತ್ತಿರುವ ಮಾನವ ಅಂಗಾಂಗ ಕಳ್ಳಸಾಗಣೆ ದಂಧೆ ಬಯಲಾಗಿದೆ ಎಂಬ ಸುಳ್ಳು ನಿರೂಪಣೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಎಂಬುದು ಸ್ಪಷ್ಟವಾಗಿದೆ.
ಕೃಪೆ: ದಿ ಕ್ವಿಂಟ್


ಓದಿ: ಫ್ಯಾಕ್ಟ್‌ಚೆಕ್: ಮಾಸ್ಕ್ ಧರಿಸದ ಮೇಕೆ ಬಂಧಿಸಿದ ಕಾನ್ಪುರ ಪೊಲೀಸರು?- ತಪ್ಪು ವರದಿ ಮಾಡಿದ ಮಾಧ್ಯಮಗಳು 


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...