Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಮೋದಿಯ ಶಿಫಾರಸ್ಸಿನಂತೆ ಈ ಯುವ ವಿಜ್ಞಾನಿಯನ್ನು ಡಿಆರ್‌‌ಡಿಒಗೆ ಸೇರಿಸಲಾಗಿದೆಯೆ?

ಫ್ಯಾಕ್ಟ್‌ಚೆಕ್: ಮೋದಿಯ ಶಿಫಾರಸ್ಸಿನಂತೆ ಈ ಯುವ ವಿಜ್ಞಾನಿಯನ್ನು ಡಿಆರ್‌‌ಡಿಒಗೆ ಸೇರಿಸಲಾಗಿದೆಯೆ?

ಇವರು ಜರ್ಮನಿಯ ಹ್ಯಾನೋವರ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಡ್ರೋನ್ ಎಕ್ಸ್‌ಪೋ 2018 ರಲ್ಲಿ ಆಲ್ಬರ್ಟ್ ಐನ್‌ಸ್ಟೈನ್ ಇನ್ನೋವೇಶನ್ ಚಿನ್ನದ ಪದಕವನ್ನು ಗೆದ್ದಿದ್ದರು.

- Advertisement -
- Advertisement -

ಅಸಾಮಾನ್ಯ ಸಾಧನೆ ಮಾಡಿದ ಈ ಯುವ ವಿಜ್ಞಾನಿಯನ್ನು ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ)ಗೆ ಸೇರ್ಪಡೆ ಮಾಡಿದ್ದಾರೆ ಎಂದು ಹೇಳಲಾದ ಯುವ ಡ್ರೋನ್ ವಿಜ್ಞಾನಿ ‘ಪ್ರತಾಪ್’ ಅವರ ಕಥೆಯು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದೆ.

ಟ್ವಿಟ್ಟರ್‌ ಬಳಕೆದಾರ ಅಮಿತ್ ಸಿಂಗ್ ರಾಜಾವತ್ (@satya_AmitSingh) ಎಂಬವರು, ಫ್ರಾನ್ಸ್‌ನಿಂದ ಉನ್ನತ ಉದ್ಯೋಗ ಪ್ರಸ್ತಾಪವನ್ನು ನಿರಾಕರಿಸಿದ ಪ್ರತಾಪ್ ಅನ್ನು ಪ್ರಧಾನಿ ನರೇಂದ್ರ ಮೋದಿ ಡಿಆರ್‌ಡಿಒಗೆ ಸೇರಲು ಸೂಚಿಸಿದ್ದಾರೆ ಎಂದು ಬರೆದಿ‌ದ್ದಾರೆ.

ಈ ಟ್ವೀಟ್‌ 7,400 ಕ್ಕೂ ಹೆಚ್ಚು ಲೈಕ್‌ಗಳು ಮತ್ತು 1,600 ರಿಟ್ವೀಟ್‌ಗಳಾಗಿವೆ.

ಇದೆ ಕತೆಯನ್ನು ಫೇಸ್‌ಬುಕ್‌ನಲ್ಲಿ ಕೂಡಾ ಹಂಚಿಕೊಳ್ಳಲಾಗುತ್ತಿದೆ.

ಇದೇ ಸುದ್ದಿಯನ್ನು ಸುಳ್ಳು ಮಾಹಿತಿಯೊಂದಿಗೆ ಇಂಡಿಯಾಗ್ಲಿಟ್ಜ್ ಎಂಬ ವೆಬ್‌ಸೈಟ್ ಸಹ ಹಂಚಿಕೊಂಡಿದೆ.

ಫ್ಯಾಕ್ಟ್‌‌ಚೆಕ್‌

“ಪ್ರತಾಪ್ ಡ್ರೋನ್ ವಿಜ್ಞಾನಿ” ಎಂಬ ಪದಗಳನ್ನು ಬಳಸಿ ಗೂಗಲ್‌ನಲ್ಲಿ ಹುಡುಕಾಡಿದರೆ 2019 ರ ಡಿಸೆಂಬರ್‌ನಿಂದ ಹಲವಾರು ಸುದ್ದಿ ವರದಿಗಳು ಕಾಣಬಹುದಾಗಿದೆ. ಇದರಲ್ಲಿ ಇರುವ 22 ವರ್ಷದ ‘ಡ್ರೋನ್ ಬಾಯ್’ ಪ್ರತಾಪ್ ನಮ್ಮ ಕರ್ನಾಟಕದ ಕೃಷಿಕ ಕುಟುಂಬದಿಂದ ಬಂದ ಯುವ ವಿಜ್ಞಾನಿ ಎಂದು ಉಲ್ಲೇಖಿಸಲಾಗಿದೆ. ಜರ್ಮನಿಯ ಹ್ಯಾನೋವರ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಡ್ರೋನ್ ಎಕ್ಸ್‌ಪೋ 2018 ರಲ್ಲಿ ಇವರು ಆಲ್ಬರ್ಟ್ ಐನ್‌ಸ್ಟೈನ್ ಇನ್ನೋವೇಶನ್ ಚಿನ್ನದ ಪದಕವನ್ನು ಗೆದ್ದಿದ್ದರು.

ಈ ಬಗ್ಗೆ “ದಿಕ್ವಿಂಟ್” ಸುದ್ದ ಜಾಲತಾಣ ಪ್ರತಾಪ್ ಅವರನ್ನು ಸಂಪರ್ಕಿಸಿ ಮಾಹಿತಿ ಪಡೆದಿದೆ. ಅವರೇ ಹೇಳುವಂತೆ “ನಾನು ಯೋಜನೆಗಾಗಿ ಡಿಆರ್ಡಿಒ ಜೊತೆ ಮಾತುಕತೆ ನಡೆಸುತ್ತಿದ್ದೇನೆ, ಅದರ ಬಗ್ಗೆ ಏನನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ. ಆದರೆ ಇನ್ನೂ ಪ್ರಧಾನಿ ಅಥವಾ ಪ್ರಧಾನ ಮಂತ್ರಿ ಕಚೇರಿಯಿಂದ ಯಾವುದೇ ಸಂವಹನ ನಡೆದಿಲ್ಲ. ಡಿಆರ್‌ಡಿಒಗೆ ನಾನು ಹೋಗುತ್ತಿದ್ದೇನೆ ಎಂಬ ಸುದ್ದಿ ಸುಳ್ಳಾಗಿದೆ.” ಎಂದು ಹೇಳಿದ್ದಾರೆ.

ಇಂಡಿಯಾ ಟೈಮ್ಸ್ 30 ಡಿಸೆಂಬರ್ 2019 ರ ವರದಿಯು “ನಿರ್ಣಾಯಕ ರಾಷ್ಟ್ರೀಯ ಯೋಜನೆಗಳಲ್ಲಿ ಡ್ರೋನ್ ಅನ್ವಯಿಕೆಗಾಗಿ ಡಿಆರ್ಡಿಒ ಜೊತೆಗಿನ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳುತ್ತದೆ.

ಈ ಬಗ್ಗೆ ಕೇಳಿದಾಗ ಪ್ರತಾಪ್, “ನಾನು ಡಿಆರ್ಡಿಒ ದೊಂದಿಗೆ ಕೆಲಸ ಮಾಡಿದ್ದೇನೆ ಆದರೆ ನೇರವಾಗಿ ಅಲ್ಲ. ಡಿಆರ್‌ಡಿಒನ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಮತ್ತೊಂದು ಕಂಪನಿಯೊಂದಿಗೆ ಪಾಲುದಾರಿಕೆ ಹೊಂದಿದ್ದೇನೆ” ಎಂದು ಹೇಳಿದ್ದಾರೆ.

ಡಿಆರ್‌ಡಿಒದಲ್ಲಿ ಪ್ರವೇಶ ಪ್ರವೇಶ ಪಡೆಯಲು ಕನಿಷ್ಠ ಅರ್ಹತೆಯಾದ ಸ್ನಾತಕೋತ್ತರ ಪದವಿಯನ್ನು ಪ್ರತಾಪ್ ಪ್ರಸ್ತುತ ಹೊಂದಿಲ್ಲ ಎಂಬುದನ್ನು ಸಹ ಗಮನಿಸಬೇಕಾಗುತ್ತದೆ.

ಇಲ್ಲಿಗೆ ಪ್ರತಾಪ್ ಡಿಆರ್‌ಡಿಒ ದಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಸ್ಪಷ್ಟವಾಗಿ ಹೇಳಬಹುದಾಗಿದೆ.


ಓದಿ: ತೈಲ ಬೆಲೆ ಏರಿಕೆ ಖಂಡಿಸಿ ಪೆಟ್ರೋಲ್ ಬಂಕ್‌ ಮೇಲೆ ದಾಳಿ?; ಫ್ಯಾಕ್ಟ್‌‌ಚೆಕ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...