Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಮೋದಿಯ ಶಿಫಾರಸ್ಸಿನಂತೆ ಈ ಯುವ ವಿಜ್ಞಾನಿಯನ್ನು ಡಿಆರ್‌‌ಡಿಒಗೆ ಸೇರಿಸಲಾಗಿದೆಯೆ?

ಫ್ಯಾಕ್ಟ್‌ಚೆಕ್: ಮೋದಿಯ ಶಿಫಾರಸ್ಸಿನಂತೆ ಈ ಯುವ ವಿಜ್ಞಾನಿಯನ್ನು ಡಿಆರ್‌‌ಡಿಒಗೆ ಸೇರಿಸಲಾಗಿದೆಯೆ?

ಇವರು ಜರ್ಮನಿಯ ಹ್ಯಾನೋವರ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಡ್ರೋನ್ ಎಕ್ಸ್‌ಪೋ 2018 ರಲ್ಲಿ ಆಲ್ಬರ್ಟ್ ಐನ್‌ಸ್ಟೈನ್ ಇನ್ನೋವೇಶನ್ ಚಿನ್ನದ ಪದಕವನ್ನು ಗೆದ್ದಿದ್ದರು.

- Advertisement -
- Advertisement -

ಅಸಾಮಾನ್ಯ ಸಾಧನೆ ಮಾಡಿದ ಈ ಯುವ ವಿಜ್ಞಾನಿಯನ್ನು ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ)ಗೆ ಸೇರ್ಪಡೆ ಮಾಡಿದ್ದಾರೆ ಎಂದು ಹೇಳಲಾದ ಯುವ ಡ್ರೋನ್ ವಿಜ್ಞಾನಿ ‘ಪ್ರತಾಪ್’ ಅವರ ಕಥೆಯು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದೆ.

ಟ್ವಿಟ್ಟರ್‌ ಬಳಕೆದಾರ ಅಮಿತ್ ಸಿಂಗ್ ರಾಜಾವತ್ (@satya_AmitSingh) ಎಂಬವರು, ಫ್ರಾನ್ಸ್‌ನಿಂದ ಉನ್ನತ ಉದ್ಯೋಗ ಪ್ರಸ್ತಾಪವನ್ನು ನಿರಾಕರಿಸಿದ ಪ್ರತಾಪ್ ಅನ್ನು ಪ್ರಧಾನಿ ನರೇಂದ್ರ ಮೋದಿ ಡಿಆರ್‌ಡಿಒಗೆ ಸೇರಲು ಸೂಚಿಸಿದ್ದಾರೆ ಎಂದು ಬರೆದಿ‌ದ್ದಾರೆ.

ಈ ಟ್ವೀಟ್‌ 7,400 ಕ್ಕೂ ಹೆಚ್ಚು ಲೈಕ್‌ಗಳು ಮತ್ತು 1,600 ರಿಟ್ವೀಟ್‌ಗಳಾಗಿವೆ.

ಇದೆ ಕತೆಯನ್ನು ಫೇಸ್‌ಬುಕ್‌ನಲ್ಲಿ ಕೂಡಾ ಹಂಚಿಕೊಳ್ಳಲಾಗುತ್ತಿದೆ.

ಇದೇ ಸುದ್ದಿಯನ್ನು ಸುಳ್ಳು ಮಾಹಿತಿಯೊಂದಿಗೆ ಇಂಡಿಯಾಗ್ಲಿಟ್ಜ್ ಎಂಬ ವೆಬ್‌ಸೈಟ್ ಸಹ ಹಂಚಿಕೊಂಡಿದೆ.

ಫ್ಯಾಕ್ಟ್‌‌ಚೆಕ್‌

“ಪ್ರತಾಪ್ ಡ್ರೋನ್ ವಿಜ್ಞಾನಿ” ಎಂಬ ಪದಗಳನ್ನು ಬಳಸಿ ಗೂಗಲ್‌ನಲ್ಲಿ ಹುಡುಕಾಡಿದರೆ 2019 ರ ಡಿಸೆಂಬರ್‌ನಿಂದ ಹಲವಾರು ಸುದ್ದಿ ವರದಿಗಳು ಕಾಣಬಹುದಾಗಿದೆ. ಇದರಲ್ಲಿ ಇರುವ 22 ವರ್ಷದ ‘ಡ್ರೋನ್ ಬಾಯ್’ ಪ್ರತಾಪ್ ನಮ್ಮ ಕರ್ನಾಟಕದ ಕೃಷಿಕ ಕುಟುಂಬದಿಂದ ಬಂದ ಯುವ ವಿಜ್ಞಾನಿ ಎಂದು ಉಲ್ಲೇಖಿಸಲಾಗಿದೆ. ಜರ್ಮನಿಯ ಹ್ಯಾನೋವರ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಡ್ರೋನ್ ಎಕ್ಸ್‌ಪೋ 2018 ರಲ್ಲಿ ಇವರು ಆಲ್ಬರ್ಟ್ ಐನ್‌ಸ್ಟೈನ್ ಇನ್ನೋವೇಶನ್ ಚಿನ್ನದ ಪದಕವನ್ನು ಗೆದ್ದಿದ್ದರು.

ಈ ಬಗ್ಗೆ “ದಿಕ್ವಿಂಟ್” ಸುದ್ದ ಜಾಲತಾಣ ಪ್ರತಾಪ್ ಅವರನ್ನು ಸಂಪರ್ಕಿಸಿ ಮಾಹಿತಿ ಪಡೆದಿದೆ. ಅವರೇ ಹೇಳುವಂತೆ “ನಾನು ಯೋಜನೆಗಾಗಿ ಡಿಆರ್ಡಿಒ ಜೊತೆ ಮಾತುಕತೆ ನಡೆಸುತ್ತಿದ್ದೇನೆ, ಅದರ ಬಗ್ಗೆ ಏನನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ. ಆದರೆ ಇನ್ನೂ ಪ್ರಧಾನಿ ಅಥವಾ ಪ್ರಧಾನ ಮಂತ್ರಿ ಕಚೇರಿಯಿಂದ ಯಾವುದೇ ಸಂವಹನ ನಡೆದಿಲ್ಲ. ಡಿಆರ್‌ಡಿಒಗೆ ನಾನು ಹೋಗುತ್ತಿದ್ದೇನೆ ಎಂಬ ಸುದ್ದಿ ಸುಳ್ಳಾಗಿದೆ.” ಎಂದು ಹೇಳಿದ್ದಾರೆ.

ಇಂಡಿಯಾ ಟೈಮ್ಸ್ 30 ಡಿಸೆಂಬರ್ 2019 ರ ವರದಿಯು “ನಿರ್ಣಾಯಕ ರಾಷ್ಟ್ರೀಯ ಯೋಜನೆಗಳಲ್ಲಿ ಡ್ರೋನ್ ಅನ್ವಯಿಕೆಗಾಗಿ ಡಿಆರ್ಡಿಒ ಜೊತೆಗಿನ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳುತ್ತದೆ.

ಈ ಬಗ್ಗೆ ಕೇಳಿದಾಗ ಪ್ರತಾಪ್, “ನಾನು ಡಿಆರ್ಡಿಒ ದೊಂದಿಗೆ ಕೆಲಸ ಮಾಡಿದ್ದೇನೆ ಆದರೆ ನೇರವಾಗಿ ಅಲ್ಲ. ಡಿಆರ್‌ಡಿಒನ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಮತ್ತೊಂದು ಕಂಪನಿಯೊಂದಿಗೆ ಪಾಲುದಾರಿಕೆ ಹೊಂದಿದ್ದೇನೆ” ಎಂದು ಹೇಳಿದ್ದಾರೆ.

ಡಿಆರ್‌ಡಿಒದಲ್ಲಿ ಪ್ರವೇಶ ಪ್ರವೇಶ ಪಡೆಯಲು ಕನಿಷ್ಠ ಅರ್ಹತೆಯಾದ ಸ್ನಾತಕೋತ್ತರ ಪದವಿಯನ್ನು ಪ್ರತಾಪ್ ಪ್ರಸ್ತುತ ಹೊಂದಿಲ್ಲ ಎಂಬುದನ್ನು ಸಹ ಗಮನಿಸಬೇಕಾಗುತ್ತದೆ.

ಇಲ್ಲಿಗೆ ಪ್ರತಾಪ್ ಡಿಆರ್‌ಡಿಒ ದಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಸ್ಪಷ್ಟವಾಗಿ ಹೇಳಬಹುದಾಗಿದೆ.


ಓದಿ: ತೈಲ ಬೆಲೆ ಏರಿಕೆ ಖಂಡಿಸಿ ಪೆಟ್ರೋಲ್ ಬಂಕ್‌ ಮೇಲೆ ದಾಳಿ?; ಫ್ಯಾಕ್ಟ್‌‌ಚೆಕ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...