Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಮೋದಿಯ ಶಿಫಾರಸ್ಸಿನಂತೆ ಈ ಯುವ ವಿಜ್ಞಾನಿಯನ್ನು ಡಿಆರ್‌‌ಡಿಒಗೆ ಸೇರಿಸಲಾಗಿದೆಯೆ?

ಫ್ಯಾಕ್ಟ್‌ಚೆಕ್: ಮೋದಿಯ ಶಿಫಾರಸ್ಸಿನಂತೆ ಈ ಯುವ ವಿಜ್ಞಾನಿಯನ್ನು ಡಿಆರ್‌‌ಡಿಒಗೆ ಸೇರಿಸಲಾಗಿದೆಯೆ?

ಇವರು ಜರ್ಮನಿಯ ಹ್ಯಾನೋವರ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಡ್ರೋನ್ ಎಕ್ಸ್‌ಪೋ 2018 ರಲ್ಲಿ ಆಲ್ಬರ್ಟ್ ಐನ್‌ಸ್ಟೈನ್ ಇನ್ನೋವೇಶನ್ ಚಿನ್ನದ ಪದಕವನ್ನು ಗೆದ್ದಿದ್ದರು.

- Advertisement -
- Advertisement -

ಅಸಾಮಾನ್ಯ ಸಾಧನೆ ಮಾಡಿದ ಈ ಯುವ ವಿಜ್ಞಾನಿಯನ್ನು ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ)ಗೆ ಸೇರ್ಪಡೆ ಮಾಡಿದ್ದಾರೆ ಎಂದು ಹೇಳಲಾದ ಯುವ ಡ್ರೋನ್ ವಿಜ್ಞಾನಿ ‘ಪ್ರತಾಪ್’ ಅವರ ಕಥೆಯು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದೆ.

ಟ್ವಿಟ್ಟರ್‌ ಬಳಕೆದಾರ ಅಮಿತ್ ಸಿಂಗ್ ರಾಜಾವತ್ (@satya_AmitSingh) ಎಂಬವರು, ಫ್ರಾನ್ಸ್‌ನಿಂದ ಉನ್ನತ ಉದ್ಯೋಗ ಪ್ರಸ್ತಾಪವನ್ನು ನಿರಾಕರಿಸಿದ ಪ್ರತಾಪ್ ಅನ್ನು ಪ್ರಧಾನಿ ನರೇಂದ್ರ ಮೋದಿ ಡಿಆರ್‌ಡಿಒಗೆ ಸೇರಲು ಸೂಚಿಸಿದ್ದಾರೆ ಎಂದು ಬರೆದಿ‌ದ್ದಾರೆ.

ಈ ಟ್ವೀಟ್‌ 7,400 ಕ್ಕೂ ಹೆಚ್ಚು ಲೈಕ್‌ಗಳು ಮತ್ತು 1,600 ರಿಟ್ವೀಟ್‌ಗಳಾಗಿವೆ.

ಇದೆ ಕತೆಯನ್ನು ಫೇಸ್‌ಬುಕ್‌ನಲ್ಲಿ ಕೂಡಾ ಹಂಚಿಕೊಳ್ಳಲಾಗುತ್ತಿದೆ.

ಇದೇ ಸುದ್ದಿಯನ್ನು ಸುಳ್ಳು ಮಾಹಿತಿಯೊಂದಿಗೆ ಇಂಡಿಯಾಗ್ಲಿಟ್ಜ್ ಎಂಬ ವೆಬ್‌ಸೈಟ್ ಸಹ ಹಂಚಿಕೊಂಡಿದೆ.

ಫ್ಯಾಕ್ಟ್‌‌ಚೆಕ್‌

“ಪ್ರತಾಪ್ ಡ್ರೋನ್ ವಿಜ್ಞಾನಿ” ಎಂಬ ಪದಗಳನ್ನು ಬಳಸಿ ಗೂಗಲ್‌ನಲ್ಲಿ ಹುಡುಕಾಡಿದರೆ 2019 ರ ಡಿಸೆಂಬರ್‌ನಿಂದ ಹಲವಾರು ಸುದ್ದಿ ವರದಿಗಳು ಕಾಣಬಹುದಾಗಿದೆ. ಇದರಲ್ಲಿ ಇರುವ 22 ವರ್ಷದ ‘ಡ್ರೋನ್ ಬಾಯ್’ ಪ್ರತಾಪ್ ನಮ್ಮ ಕರ್ನಾಟಕದ ಕೃಷಿಕ ಕುಟುಂಬದಿಂದ ಬಂದ ಯುವ ವಿಜ್ಞಾನಿ ಎಂದು ಉಲ್ಲೇಖಿಸಲಾಗಿದೆ. ಜರ್ಮನಿಯ ಹ್ಯಾನೋವರ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಡ್ರೋನ್ ಎಕ್ಸ್‌ಪೋ 2018 ರಲ್ಲಿ ಇವರು ಆಲ್ಬರ್ಟ್ ಐನ್‌ಸ್ಟೈನ್ ಇನ್ನೋವೇಶನ್ ಚಿನ್ನದ ಪದಕವನ್ನು ಗೆದ್ದಿದ್ದರು.

ಈ ಬಗ್ಗೆ “ದಿಕ್ವಿಂಟ್” ಸುದ್ದ ಜಾಲತಾಣ ಪ್ರತಾಪ್ ಅವರನ್ನು ಸಂಪರ್ಕಿಸಿ ಮಾಹಿತಿ ಪಡೆದಿದೆ. ಅವರೇ ಹೇಳುವಂತೆ “ನಾನು ಯೋಜನೆಗಾಗಿ ಡಿಆರ್ಡಿಒ ಜೊತೆ ಮಾತುಕತೆ ನಡೆಸುತ್ತಿದ್ದೇನೆ, ಅದರ ಬಗ್ಗೆ ಏನನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ. ಆದರೆ ಇನ್ನೂ ಪ್ರಧಾನಿ ಅಥವಾ ಪ್ರಧಾನ ಮಂತ್ರಿ ಕಚೇರಿಯಿಂದ ಯಾವುದೇ ಸಂವಹನ ನಡೆದಿಲ್ಲ. ಡಿಆರ್‌ಡಿಒಗೆ ನಾನು ಹೋಗುತ್ತಿದ್ದೇನೆ ಎಂಬ ಸುದ್ದಿ ಸುಳ್ಳಾಗಿದೆ.” ಎಂದು ಹೇಳಿದ್ದಾರೆ.

ಇಂಡಿಯಾ ಟೈಮ್ಸ್ 30 ಡಿಸೆಂಬರ್ 2019 ರ ವರದಿಯು “ನಿರ್ಣಾಯಕ ರಾಷ್ಟ್ರೀಯ ಯೋಜನೆಗಳಲ್ಲಿ ಡ್ರೋನ್ ಅನ್ವಯಿಕೆಗಾಗಿ ಡಿಆರ್ಡಿಒ ಜೊತೆಗಿನ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳುತ್ತದೆ.

ಈ ಬಗ್ಗೆ ಕೇಳಿದಾಗ ಪ್ರತಾಪ್, “ನಾನು ಡಿಆರ್ಡಿಒ ದೊಂದಿಗೆ ಕೆಲಸ ಮಾಡಿದ್ದೇನೆ ಆದರೆ ನೇರವಾಗಿ ಅಲ್ಲ. ಡಿಆರ್‌ಡಿಒನ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಮತ್ತೊಂದು ಕಂಪನಿಯೊಂದಿಗೆ ಪಾಲುದಾರಿಕೆ ಹೊಂದಿದ್ದೇನೆ” ಎಂದು ಹೇಳಿದ್ದಾರೆ.

ಡಿಆರ್‌ಡಿಒದಲ್ಲಿ ಪ್ರವೇಶ ಪ್ರವೇಶ ಪಡೆಯಲು ಕನಿಷ್ಠ ಅರ್ಹತೆಯಾದ ಸ್ನಾತಕೋತ್ತರ ಪದವಿಯನ್ನು ಪ್ರತಾಪ್ ಪ್ರಸ್ತುತ ಹೊಂದಿಲ್ಲ ಎಂಬುದನ್ನು ಸಹ ಗಮನಿಸಬೇಕಾಗುತ್ತದೆ.

ಇಲ್ಲಿಗೆ ಪ್ರತಾಪ್ ಡಿಆರ್‌ಡಿಒ ದಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಸ್ಪಷ್ಟವಾಗಿ ಹೇಳಬಹುದಾಗಿದೆ.


ಓದಿ: ತೈಲ ಬೆಲೆ ಏರಿಕೆ ಖಂಡಿಸಿ ಪೆಟ್ರೋಲ್ ಬಂಕ್‌ ಮೇಲೆ ದಾಳಿ?; ಫ್ಯಾಕ್ಟ್‌‌ಚೆಕ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...