Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಮೋದಿಯ ಶಿಫಾರಸ್ಸಿನಂತೆ ಈ ಯುವ ವಿಜ್ಞಾನಿಯನ್ನು ಡಿಆರ್‌‌ಡಿಒಗೆ ಸೇರಿಸಲಾಗಿದೆಯೆ?

ಫ್ಯಾಕ್ಟ್‌ಚೆಕ್: ಮೋದಿಯ ಶಿಫಾರಸ್ಸಿನಂತೆ ಈ ಯುವ ವಿಜ್ಞಾನಿಯನ್ನು ಡಿಆರ್‌‌ಡಿಒಗೆ ಸೇರಿಸಲಾಗಿದೆಯೆ?

ಇವರು ಜರ್ಮನಿಯ ಹ್ಯಾನೋವರ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಡ್ರೋನ್ ಎಕ್ಸ್‌ಪೋ 2018 ರಲ್ಲಿ ಆಲ್ಬರ್ಟ್ ಐನ್‌ಸ್ಟೈನ್ ಇನ್ನೋವೇಶನ್ ಚಿನ್ನದ ಪದಕವನ್ನು ಗೆದ್ದಿದ್ದರು.

- Advertisement -
- Advertisement -

ಅಸಾಮಾನ್ಯ ಸಾಧನೆ ಮಾಡಿದ ಈ ಯುವ ವಿಜ್ಞಾನಿಯನ್ನು ಸ್ವತಃ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ)ಗೆ ಸೇರ್ಪಡೆ ಮಾಡಿದ್ದಾರೆ ಎಂದು ಹೇಳಲಾದ ಯುವ ಡ್ರೋನ್ ವಿಜ್ಞಾನಿ ‘ಪ್ರತಾಪ್’ ಅವರ ಕಥೆಯು ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡಿದೆ.

ಟ್ವಿಟ್ಟರ್‌ ಬಳಕೆದಾರ ಅಮಿತ್ ಸಿಂಗ್ ರಾಜಾವತ್ (@satya_AmitSingh) ಎಂಬವರು, ಫ್ರಾನ್ಸ್‌ನಿಂದ ಉನ್ನತ ಉದ್ಯೋಗ ಪ್ರಸ್ತಾಪವನ್ನು ನಿರಾಕರಿಸಿದ ಪ್ರತಾಪ್ ಅನ್ನು ಪ್ರಧಾನಿ ನರೇಂದ್ರ ಮೋದಿ ಡಿಆರ್‌ಡಿಒಗೆ ಸೇರಲು ಸೂಚಿಸಿದ್ದಾರೆ ಎಂದು ಬರೆದಿ‌ದ್ದಾರೆ.

ಈ ಟ್ವೀಟ್‌ 7,400 ಕ್ಕೂ ಹೆಚ್ಚು ಲೈಕ್‌ಗಳು ಮತ್ತು 1,600 ರಿಟ್ವೀಟ್‌ಗಳಾಗಿವೆ.

ಇದೆ ಕತೆಯನ್ನು ಫೇಸ್‌ಬುಕ್‌ನಲ್ಲಿ ಕೂಡಾ ಹಂಚಿಕೊಳ್ಳಲಾಗುತ್ತಿದೆ.

ಇದೇ ಸುದ್ದಿಯನ್ನು ಸುಳ್ಳು ಮಾಹಿತಿಯೊಂದಿಗೆ ಇಂಡಿಯಾಗ್ಲಿಟ್ಜ್ ಎಂಬ ವೆಬ್‌ಸೈಟ್ ಸಹ ಹಂಚಿಕೊಂಡಿದೆ.

ಫ್ಯಾಕ್ಟ್‌‌ಚೆಕ್‌

“ಪ್ರತಾಪ್ ಡ್ರೋನ್ ವಿಜ್ಞಾನಿ” ಎಂಬ ಪದಗಳನ್ನು ಬಳಸಿ ಗೂಗಲ್‌ನಲ್ಲಿ ಹುಡುಕಾಡಿದರೆ 2019 ರ ಡಿಸೆಂಬರ್‌ನಿಂದ ಹಲವಾರು ಸುದ್ದಿ ವರದಿಗಳು ಕಾಣಬಹುದಾಗಿದೆ. ಇದರಲ್ಲಿ ಇರುವ 22 ವರ್ಷದ ‘ಡ್ರೋನ್ ಬಾಯ್’ ಪ್ರತಾಪ್ ನಮ್ಮ ಕರ್ನಾಟಕದ ಕೃಷಿಕ ಕುಟುಂಬದಿಂದ ಬಂದ ಯುವ ವಿಜ್ಞಾನಿ ಎಂದು ಉಲ್ಲೇಖಿಸಲಾಗಿದೆ. ಜರ್ಮನಿಯ ಹ್ಯಾನೋವರ್‌ನಲ್ಲಿ ನಡೆದ ಅಂತರರಾಷ್ಟ್ರೀಯ ಡ್ರೋನ್ ಎಕ್ಸ್‌ಪೋ 2018 ರಲ್ಲಿ ಇವರು ಆಲ್ಬರ್ಟ್ ಐನ್‌ಸ್ಟೈನ್ ಇನ್ನೋವೇಶನ್ ಚಿನ್ನದ ಪದಕವನ್ನು ಗೆದ್ದಿದ್ದರು.

ಈ ಬಗ್ಗೆ “ದಿಕ್ವಿಂಟ್” ಸುದ್ದ ಜಾಲತಾಣ ಪ್ರತಾಪ್ ಅವರನ್ನು ಸಂಪರ್ಕಿಸಿ ಮಾಹಿತಿ ಪಡೆದಿದೆ. ಅವರೇ ಹೇಳುವಂತೆ “ನಾನು ಯೋಜನೆಗಾಗಿ ಡಿಆರ್ಡಿಒ ಜೊತೆ ಮಾತುಕತೆ ನಡೆಸುತ್ತಿದ್ದೇನೆ, ಅದರ ಬಗ್ಗೆ ಏನನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ. ಆದರೆ ಇನ್ನೂ ಪ್ರಧಾನಿ ಅಥವಾ ಪ್ರಧಾನ ಮಂತ್ರಿ ಕಚೇರಿಯಿಂದ ಯಾವುದೇ ಸಂವಹನ ನಡೆದಿಲ್ಲ. ಡಿಆರ್‌ಡಿಒಗೆ ನಾನು ಹೋಗುತ್ತಿದ್ದೇನೆ ಎಂಬ ಸುದ್ದಿ ಸುಳ್ಳಾಗಿದೆ.” ಎಂದು ಹೇಳಿದ್ದಾರೆ.

ಇಂಡಿಯಾ ಟೈಮ್ಸ್ 30 ಡಿಸೆಂಬರ್ 2019 ರ ವರದಿಯು “ನಿರ್ಣಾಯಕ ರಾಷ್ಟ್ರೀಯ ಯೋಜನೆಗಳಲ್ಲಿ ಡ್ರೋನ್ ಅನ್ವಯಿಕೆಗಾಗಿ ಡಿಆರ್ಡಿಒ ಜೊತೆಗಿನ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳುತ್ತದೆ.

ಈ ಬಗ್ಗೆ ಕೇಳಿದಾಗ ಪ್ರತಾಪ್, “ನಾನು ಡಿಆರ್ಡಿಒ ದೊಂದಿಗೆ ಕೆಲಸ ಮಾಡಿದ್ದೇನೆ ಆದರೆ ನೇರವಾಗಿ ಅಲ್ಲ. ಡಿಆರ್‌ಡಿಒನ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಮತ್ತೊಂದು ಕಂಪನಿಯೊಂದಿಗೆ ಪಾಲುದಾರಿಕೆ ಹೊಂದಿದ್ದೇನೆ” ಎಂದು ಹೇಳಿದ್ದಾರೆ.

ಡಿಆರ್‌ಡಿಒದಲ್ಲಿ ಪ್ರವೇಶ ಪ್ರವೇಶ ಪಡೆಯಲು ಕನಿಷ್ಠ ಅರ್ಹತೆಯಾದ ಸ್ನಾತಕೋತ್ತರ ಪದವಿಯನ್ನು ಪ್ರತಾಪ್ ಪ್ರಸ್ತುತ ಹೊಂದಿಲ್ಲ ಎಂಬುದನ್ನು ಸಹ ಗಮನಿಸಬೇಕಾಗುತ್ತದೆ.

ಇಲ್ಲಿಗೆ ಪ್ರತಾಪ್ ಡಿಆರ್‌ಡಿಒ ದಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಸ್ಪಷ್ಟವಾಗಿ ಹೇಳಬಹುದಾಗಿದೆ.


ಓದಿ: ತೈಲ ಬೆಲೆ ಏರಿಕೆ ಖಂಡಿಸಿ ಪೆಟ್ರೋಲ್ ಬಂಕ್‌ ಮೇಲೆ ದಾಳಿ?; ಫ್ಯಾಕ್ಟ್‌‌ಚೆಕ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...