Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ಫ್ಯಾಕ್ಟ್‌‌ಚೆಕ್: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ಧರ್ಮಗಳ ನಡುವೆ ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆಂಬ ಆರೋಪ ಹೊತ್ತಿರುವ ಝಾಕಿರ್‌ ನಾಯಕ್ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಯ ವಾಂಟೆಡ್ ಪಟ್ಟಿಯಲ್ಲಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಬೋಧಕ ಝಾಕಿರ್ ನಾಯಕ್‌ಗೆ ಮಲೇಷ್ಯಾದಲ್ಲಿ ಪೌರತ್ವ ನೀಡಲಾಗಿದೆ ಎಂಬ ಹೇಳಿಕೆಯಿರುವ ಚಿತ್ರವೊಂದು 2017 ರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಧರ್ಮಗಳ ನಡುವೆ ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆಂಬ ಆರೋಪ ಹೊತ್ತಿರುವ ಝಾಕಿರ್‌ ನಾಯಕ್ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಯ ವಾಂಟೆಡ್ ಪಟ್ಟಿಯಲ್ಲಿದ್ದಾರೆ.

ಝಾಕಿರ್ ನಾಯಕ್ ಅವರಿಗೆ ಮಲೇಷ್ಯಾ ಸಂಪೂರ್ಣ ಪೌರತ್ವ ನೀಡಿದೆ ಎಂಬ ಹೇಳಿಕೆಯೊಂದಿಗೆ ಈ ಚಿತ್ರ 2017 ರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. “Drzakirnaikofficial” ಎಂಬ ಬಳಕೆದಾರರ ಹೆಸರಿನಲ್ಲಿ ಕಾರ್ಯನಿರ್ವಹಿಸುವ Instagram ಪುಟವು ಸೆಪ್ಟೆಂಬರ್ 2019 ರಲ್ಲಿ ಚಿತ್ರವನ್ನು ಅಪ್‌ಲೋಡ್ ಮಾಡಿತ್ತು. ಅಂದಿನಿಂದ ಇದು 39 ಸಾವಿರಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ.

ಆರ್ಕೈವ್‌ ಇಲ್ಲಿದೆ.

ಆದರೆ ಈ ಚಿತ್ರವು 2020 ರ ಆಗಸ್ಟ್‌ನಿಂದ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ ತೊಡಗಿದೆ. ಫೇಸ್‌ಬುಕ್ ಹಾಗೂ ಟ್ವಿಟರ್‌ ನಂತಹ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಹಲವರು ಜನರು ಇದನ್ನು ಶೇರ್‌ ಮಾಡುತ್ತಿದ್ದಾರೆ.

ಆರ್ಕೈವ್ ಇಲ್ಲಿದೆ. 

ಫ್ಯಾಕ್ಟ್‌‌ಚೆಕ್‌

ಈ ಚಿತ್ರವು ”ಪಾರ್ಟಿ ಬೂಮಿಪುಟೆರಾ ಪರ್ಕಾಸಾ ಮಲೇಷ್ಯಾ” ಪಕ್ಷವನ್ನು ಸ್ಥಾಪಿಸಿದ ಮಲೇಷಿಯಾದ ಬಲಪಂಥೀಯ ರಾಜಕೀಯ ಮುಖಂಡ ಇಬ್ರಾಹಿಂ ಅಲಿ ಮತ್ತು ಮಲಯ ಮೂಲದ ಸಂಸ್ಥೆ ”ಪೆರ್ಟುಬುಹಾನ್ ಪ್ರಿಬುಮಿ ಪೆರ್ಕಾಸಾ” ಝಾಕಿರ್ ನಾಯಕ್‌ಗೆ 2017 ರಂದು ‘ವಾರಿಯರ್ ಪ್ರಶಸ್ತಿ’ ನೀಡಿ ಗೌರವಿಸಿದಾಗಿನ ಚಿತ್ರವಾಗಿದೆ.

ರಿವರ್ಸ್ ಇಮೇಜ್ ಮೂಲಕ ಈ ಚಿತ್ರವನ್ನು ಹುಡುಕಾಡಿದಾಗ ಮಲಯ ಭಾಷೆಯ ದಿನಪತ್ರಿಕೆ ”ಬೆರಿಟಾ ಹರಿಯನ್”  ವರದಿಯೊಂದರಲ್ಲಿ ಈ ಚಿತ್ರವನ್ನು ಬಳಸಲಾಗಿದೆ. ಅದು 16 ಏಪ್ರಿಲ್, 2017 ರ ಚಿತ್ರವಾಗಿದೆ ಎಂದು ಈ ಮೂಲಕ ತಿಳಿಯಬಹುದು.

ಈ ಲೇಖನದಲ್ಲಿ ”ಝಾಕಿರ್ ನಾಯಕ್‌ಗೆ ಪರ್ಕಾಸಾ ನೆಗರಾ ಸ್ಥಳೀಯ ಹೀರೋ ಸ್ಟಾರ್‌, ಇದು ಮಲೇಷ್ಯಾದ ಸ್ಥಳೀಯ ಸಂಘಟನೆ ಪೆರ್ಕಾಸಾದ ಅತ್ಯುನ್ನತ ಪ್ರಶಸ್ತಿ” ಎಂದು ಲೇಖನದಲ್ಲಿ ತಿಳಿಸಲಾಗಿದೆ.

ಸಮಾರಂಭವು ಮಲೇಷ್ಯಾ ವಿಶ್ವವಿದ್ಯಾಲಯದಲ್ಲಿ ನಡೆದ ‘ಇಜ್ತಿಮಕ್ 150 ಮಲೇಷಿಯಾ ಇಸ್ಲಾಮಿಕ್ ಸ್ಕಾಲರ್ಸ್‌’ ಎಂಬ ಕಾರ್ಯಕ್ರಮದ ಭಾಗವಾಗಿದ್ದು, ಅದರಲ್ಲಿ ‘ಇಸ್ಲಾಮೋಫೋಬಿಯಾವನ್ನು ನಿಭಾಯಿಸುವುದು’ ಎಂಬ ವಿಷಯದ ಕುರಿತು ಝಾಕಿರ್‌ ನಾಯಕ್ ಮಾತನಾಡಿದ್ದರು.

ಈ ಚಿತ್ರವನ್ನು ಇಂಗ್ಲಿಷ್ ಭಾಷೆಯ ಮಲಯೇಶಿಯನ್ ಪತ್ರಿಕೆ ನ್ಯೂ ಸ್ಟ್ರೈಟ್ಸ್ ಟೈಮ್ಸ್ ಪ್ರೆಸ್ (ಎನ್‌ಎಸ್‌ಟಿಪಿ) ಛಾಯಾಗ್ರಾಹಕ ಮೊಹಮ್ಮದ್ ಯುಸ್ನಿ ಆರಿಫಿನ್‌ಗೆ ಕ್ಲಿಕ್ಕಿಸಿದ್ದರು.

ಝಾಕಿರ್ ನಾಯಕ್ ಮಲೇಷಿಯನ್ ನಾಗರಿಕನಾ?

ಢಾಕಾ ಕೆಫೆಯ ಮೇಲೆ ನಡೆದ ದಾಳಿಯಲ್ಲಿ ಆರೋಪಿಗಳು ಝಾಕಿರ್‌ ನಾಯಕ್ ಭಾಷಣಗಳಿಂದ ಪ್ರೇರಿತರಾಗಿದ್ದಾರೆಂದು ತಿಳಿದುಬಂದ ನಂತರ ಝಾಕಿರ್ ನಾಯಕ್ ಜುಲೈ 2016 ರಲ್ಲಿ ಮಲೇಷ್ಯಾಕ್ಕೆ ಪಲಾಯನ ಮಾಡಿದ್ದರು.

22 ಅಕ್ಟೋಬರ್ 2019 ರ ಆನ್‌ಲೈನ್ ನ್ಯೂಸ್ ಪೋರ್ಟಲ್, ಮಲೇಶಿಯಾಕಿನಿ ಎಂಬ ಸುದ್ದಿಯ ವರದಿಯಲ್ಲಿ, “ವಿವಾದಾತ್ಮಕ ಬೋಧಕ ಡಾ. ಝಾಕಿರ್ ನಾಯಕ್ ಮಲೇಷಿಯಾದ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ ಬಗ್ಗೆ ಯಾವುದೇ ದಾಖಲೆಗಳಿಲ್ಲ” ಎಂದು ಹೇಳಿದೆ.

ಈ ಹೇಳಿಕೆಯನ್ನು ಗೃಹ ಸಚಿವ ಮುಹಿದ್ದೀನ್ ಯಾಸಿನ್ ನೀಡಿದ್ದಾರೆ. ಎನ್ಆರ್ಡಿ 21 ಏಪ್ರಿಲ್ 2016 ರಂದು ಝಾಕಿರ್ ಅಬ್ದುಲ್ ಕರೀಮ್ ನಾಯಕ್ (ಸಾಮಾನ್ಯವಾಗಿ ಡಾ ಝಾಕಿರ್ ಎಂದು ಕರೆಯಲ್ಪಡುವ) ಗೆ ಮೈಪಿಆರ್ ನೀಡಿತು” ಎಂದು ಅವರು ಹೇಳಿದ್ದರು.

ಮಲೇಷ್ಯಾದ ರಾಷ್ಟ್ರೀಯ ನೋಂದಣಿ ಇಲಾಖೆ (ಎನ್‌ಆರ್‌ಡಿ) ಶಾಶ್ವತ ನಿವಾಸಿಗಳಿಗೆ ಮೈಪಿಆರ್ ಕಾರ್ಡ್‌ಗಳನ್ನು ನೀಡುತ್ತದೆ.

ಆಗಸ್ಟ್ 11, 2019 ರಂದು ಮಲೇಷ್ಯಾದ ಕೋಟಾ ಬಹ್ರುನಲ್ಲಿ ಮಾಡಿದ ಭಾಷಣದಲ್ಲಿ ಝಾಕಿರ್‌ ನಾಯಕ್ ಚೀನೀಯರ ವಿರುದ್ಧ ಅವರನ್ನು “ಅತಿಥಿಗಳು” ಎಂದು ಜನಾಂಗೀಯ ಟೀಕೆಗಳನ್ನು ವ್ಯಕ್ತಪಡಿಸಿದ ನಂತರ ಈ ಹೇಳಿಕೆ ಬಂದಿದ್ದವು. ಝಾಕಿರ್‌ ನಾಯಕ್ ಅವರ ಶಾಶ್ವತ ನಿವಾಸಿ ಸ್ಥಾನವನ್ನು ಕಿತ್ತುಕೊಳ್ಳಬಹುದು ಎಂದು ಪ್ರಧಾನಮಂತ್ರಿ ಮಹಾತಿರ್ ಅವರ ಹೇಳಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.

“ಅವರಿಗೆ (ಝಾಕಿರ್‌ ನಾಯಕ್) ಪಿಆರ್ ಸ್ಥಾನಮಾನವಿದೆ. ಅವರು ರಾಷ್ಟ್ರದ ನೆಮ್ಮದಿಗೆ ಹಾನಿಕಾರಕವಾದದ್ದನ್ನು ಮಾಡಿದರೆ ನಾವು ಅದನ್ನು ಕಿತ್ತುಕೊಳ್ಳಬಹುದು. ಈ ಕ್ಷಣದಲ್ಲಿ, ಅವರು ಅದನ್ನು ಮಾಡುತ್ತಿದ್ದಾನೋ ಇಲ್ಲವೋ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರು ಅದನ್ನು ಮಾಡುತ್ತಿದ್ದರೆ, ಅವರ ಪಿಆರ್ ಸ್ಥಾನಮಾನವನ್ನು ನಾವು ಕಿತ್ತುಕೊಳ್ಳುವುದು ಅವಶ್ಯಕ.” ಎಂದು ಪ್ರಧಾನ ಮಂತ್ರಿ ಮಹಾತಿರ್‌ ಹೇಳಿದ್ದರು.

ಆದರೆ, ಮಲೇಷ್ಯಾ ಸರ್ಕಾರವು ನಾಯಕ್‌ಗೆ ಪೌರತ್ವ ನೀಡಿದ ಬಗ್ಗೆ ಯಾವುದೇ ವರದಿಗಳಿಲ್ಲ. ಸ್ಪಷ್ಟವಾಗಿ ಹೇಳಬೇಕಾದರೆ ಹಳೆಯ ಚಿತ್ರವನ್ನು ಸಂದರ್ಭಕ್ಕೆ ಹೊರತಾಗಿ ಹಂಚಿಕೊಳ್ಳಲಾಗಿದೆ.


ಓದಿ:  ಹಿಂದೂ ದೇವಾಲಯದಲ್ಲಿ ಏಸು ಫೋಟೊ ಇಟ್ಟು ಪೂಜೆ ಮಾಡಲು SP ದಿವ್ಯಾ ಸಾರಾ ಥಾಮಸ್ ಒತ್ತಾಯಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...