Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ಫ್ಯಾಕ್ಟ್‌‌ಚೆಕ್: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ಧರ್ಮಗಳ ನಡುವೆ ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆಂಬ ಆರೋಪ ಹೊತ್ತಿರುವ ಝಾಕಿರ್‌ ನಾಯಕ್ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಯ ವಾಂಟೆಡ್ ಪಟ್ಟಿಯಲ್ಲಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಬೋಧಕ ಝಾಕಿರ್ ನಾಯಕ್‌ಗೆ ಮಲೇಷ್ಯಾದಲ್ಲಿ ಪೌರತ್ವ ನೀಡಲಾಗಿದೆ ಎಂಬ ಹೇಳಿಕೆಯಿರುವ ಚಿತ್ರವೊಂದು 2017 ರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಧರ್ಮಗಳ ನಡುವೆ ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆಂಬ ಆರೋಪ ಹೊತ್ತಿರುವ ಝಾಕಿರ್‌ ನಾಯಕ್ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಯ ವಾಂಟೆಡ್ ಪಟ್ಟಿಯಲ್ಲಿದ್ದಾರೆ.

ಝಾಕಿರ್ ನಾಯಕ್ ಅವರಿಗೆ ಮಲೇಷ್ಯಾ ಸಂಪೂರ್ಣ ಪೌರತ್ವ ನೀಡಿದೆ ಎಂಬ ಹೇಳಿಕೆಯೊಂದಿಗೆ ಈ ಚಿತ್ರ 2017 ರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. “Drzakirnaikofficial” ಎಂಬ ಬಳಕೆದಾರರ ಹೆಸರಿನಲ್ಲಿ ಕಾರ್ಯನಿರ್ವಹಿಸುವ Instagram ಪುಟವು ಸೆಪ್ಟೆಂಬರ್ 2019 ರಲ್ಲಿ ಚಿತ್ರವನ್ನು ಅಪ್‌ಲೋಡ್ ಮಾಡಿತ್ತು. ಅಂದಿನಿಂದ ಇದು 39 ಸಾವಿರಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ.

ಆರ್ಕೈವ್‌ ಇಲ್ಲಿದೆ.

ಆದರೆ ಈ ಚಿತ್ರವು 2020 ರ ಆಗಸ್ಟ್‌ನಿಂದ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ ತೊಡಗಿದೆ. ಫೇಸ್‌ಬುಕ್ ಹಾಗೂ ಟ್ವಿಟರ್‌ ನಂತಹ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಹಲವರು ಜನರು ಇದನ್ನು ಶೇರ್‌ ಮಾಡುತ್ತಿದ್ದಾರೆ.

ಆರ್ಕೈವ್ ಇಲ್ಲಿದೆ. 

ಫ್ಯಾಕ್ಟ್‌‌ಚೆಕ್‌

ಈ ಚಿತ್ರವು ”ಪಾರ್ಟಿ ಬೂಮಿಪುಟೆರಾ ಪರ್ಕಾಸಾ ಮಲೇಷ್ಯಾ” ಪಕ್ಷವನ್ನು ಸ್ಥಾಪಿಸಿದ ಮಲೇಷಿಯಾದ ಬಲಪಂಥೀಯ ರಾಜಕೀಯ ಮುಖಂಡ ಇಬ್ರಾಹಿಂ ಅಲಿ ಮತ್ತು ಮಲಯ ಮೂಲದ ಸಂಸ್ಥೆ ”ಪೆರ್ಟುಬುಹಾನ್ ಪ್ರಿಬುಮಿ ಪೆರ್ಕಾಸಾ” ಝಾಕಿರ್ ನಾಯಕ್‌ಗೆ 2017 ರಂದು ‘ವಾರಿಯರ್ ಪ್ರಶಸ್ತಿ’ ನೀಡಿ ಗೌರವಿಸಿದಾಗಿನ ಚಿತ್ರವಾಗಿದೆ.

ರಿವರ್ಸ್ ಇಮೇಜ್ ಮೂಲಕ ಈ ಚಿತ್ರವನ್ನು ಹುಡುಕಾಡಿದಾಗ ಮಲಯ ಭಾಷೆಯ ದಿನಪತ್ರಿಕೆ ”ಬೆರಿಟಾ ಹರಿಯನ್”  ವರದಿಯೊಂದರಲ್ಲಿ ಈ ಚಿತ್ರವನ್ನು ಬಳಸಲಾಗಿದೆ. ಅದು 16 ಏಪ್ರಿಲ್, 2017 ರ ಚಿತ್ರವಾಗಿದೆ ಎಂದು ಈ ಮೂಲಕ ತಿಳಿಯಬಹುದು.

ಈ ಲೇಖನದಲ್ಲಿ ”ಝಾಕಿರ್ ನಾಯಕ್‌ಗೆ ಪರ್ಕಾಸಾ ನೆಗರಾ ಸ್ಥಳೀಯ ಹೀರೋ ಸ್ಟಾರ್‌, ಇದು ಮಲೇಷ್ಯಾದ ಸ್ಥಳೀಯ ಸಂಘಟನೆ ಪೆರ್ಕಾಸಾದ ಅತ್ಯುನ್ನತ ಪ್ರಶಸ್ತಿ” ಎಂದು ಲೇಖನದಲ್ಲಿ ತಿಳಿಸಲಾಗಿದೆ.

ಸಮಾರಂಭವು ಮಲೇಷ್ಯಾ ವಿಶ್ವವಿದ್ಯಾಲಯದಲ್ಲಿ ನಡೆದ ‘ಇಜ್ತಿಮಕ್ 150 ಮಲೇಷಿಯಾ ಇಸ್ಲಾಮಿಕ್ ಸ್ಕಾಲರ್ಸ್‌’ ಎಂಬ ಕಾರ್ಯಕ್ರಮದ ಭಾಗವಾಗಿದ್ದು, ಅದರಲ್ಲಿ ‘ಇಸ್ಲಾಮೋಫೋಬಿಯಾವನ್ನು ನಿಭಾಯಿಸುವುದು’ ಎಂಬ ವಿಷಯದ ಕುರಿತು ಝಾಕಿರ್‌ ನಾಯಕ್ ಮಾತನಾಡಿದ್ದರು.

ಈ ಚಿತ್ರವನ್ನು ಇಂಗ್ಲಿಷ್ ಭಾಷೆಯ ಮಲಯೇಶಿಯನ್ ಪತ್ರಿಕೆ ನ್ಯೂ ಸ್ಟ್ರೈಟ್ಸ್ ಟೈಮ್ಸ್ ಪ್ರೆಸ್ (ಎನ್‌ಎಸ್‌ಟಿಪಿ) ಛಾಯಾಗ್ರಾಹಕ ಮೊಹಮ್ಮದ್ ಯುಸ್ನಿ ಆರಿಫಿನ್‌ಗೆ ಕ್ಲಿಕ್ಕಿಸಿದ್ದರು.

ಝಾಕಿರ್ ನಾಯಕ್ ಮಲೇಷಿಯನ್ ನಾಗರಿಕನಾ?

ಢಾಕಾ ಕೆಫೆಯ ಮೇಲೆ ನಡೆದ ದಾಳಿಯಲ್ಲಿ ಆರೋಪಿಗಳು ಝಾಕಿರ್‌ ನಾಯಕ್ ಭಾಷಣಗಳಿಂದ ಪ್ರೇರಿತರಾಗಿದ್ದಾರೆಂದು ತಿಳಿದುಬಂದ ನಂತರ ಝಾಕಿರ್ ನಾಯಕ್ ಜುಲೈ 2016 ರಲ್ಲಿ ಮಲೇಷ್ಯಾಕ್ಕೆ ಪಲಾಯನ ಮಾಡಿದ್ದರು.

22 ಅಕ್ಟೋಬರ್ 2019 ರ ಆನ್‌ಲೈನ್ ನ್ಯೂಸ್ ಪೋರ್ಟಲ್, ಮಲೇಶಿಯಾಕಿನಿ ಎಂಬ ಸುದ್ದಿಯ ವರದಿಯಲ್ಲಿ, “ವಿವಾದಾತ್ಮಕ ಬೋಧಕ ಡಾ. ಝಾಕಿರ್ ನಾಯಕ್ ಮಲೇಷಿಯಾದ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ ಬಗ್ಗೆ ಯಾವುದೇ ದಾಖಲೆಗಳಿಲ್ಲ” ಎಂದು ಹೇಳಿದೆ.

ಈ ಹೇಳಿಕೆಯನ್ನು ಗೃಹ ಸಚಿವ ಮುಹಿದ್ದೀನ್ ಯಾಸಿನ್ ನೀಡಿದ್ದಾರೆ. ಎನ್ಆರ್ಡಿ 21 ಏಪ್ರಿಲ್ 2016 ರಂದು ಝಾಕಿರ್ ಅಬ್ದುಲ್ ಕರೀಮ್ ನಾಯಕ್ (ಸಾಮಾನ್ಯವಾಗಿ ಡಾ ಝಾಕಿರ್ ಎಂದು ಕರೆಯಲ್ಪಡುವ) ಗೆ ಮೈಪಿಆರ್ ನೀಡಿತು” ಎಂದು ಅವರು ಹೇಳಿದ್ದರು.

ಮಲೇಷ್ಯಾದ ರಾಷ್ಟ್ರೀಯ ನೋಂದಣಿ ಇಲಾಖೆ (ಎನ್‌ಆರ್‌ಡಿ) ಶಾಶ್ವತ ನಿವಾಸಿಗಳಿಗೆ ಮೈಪಿಆರ್ ಕಾರ್ಡ್‌ಗಳನ್ನು ನೀಡುತ್ತದೆ.

ಆಗಸ್ಟ್ 11, 2019 ರಂದು ಮಲೇಷ್ಯಾದ ಕೋಟಾ ಬಹ್ರುನಲ್ಲಿ ಮಾಡಿದ ಭಾಷಣದಲ್ಲಿ ಝಾಕಿರ್‌ ನಾಯಕ್ ಚೀನೀಯರ ವಿರುದ್ಧ ಅವರನ್ನು “ಅತಿಥಿಗಳು” ಎಂದು ಜನಾಂಗೀಯ ಟೀಕೆಗಳನ್ನು ವ್ಯಕ್ತಪಡಿಸಿದ ನಂತರ ಈ ಹೇಳಿಕೆ ಬಂದಿದ್ದವು. ಝಾಕಿರ್‌ ನಾಯಕ್ ಅವರ ಶಾಶ್ವತ ನಿವಾಸಿ ಸ್ಥಾನವನ್ನು ಕಿತ್ತುಕೊಳ್ಳಬಹುದು ಎಂದು ಪ್ರಧಾನಮಂತ್ರಿ ಮಹಾತಿರ್ ಅವರ ಹೇಳಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.

“ಅವರಿಗೆ (ಝಾಕಿರ್‌ ನಾಯಕ್) ಪಿಆರ್ ಸ್ಥಾನಮಾನವಿದೆ. ಅವರು ರಾಷ್ಟ್ರದ ನೆಮ್ಮದಿಗೆ ಹಾನಿಕಾರಕವಾದದ್ದನ್ನು ಮಾಡಿದರೆ ನಾವು ಅದನ್ನು ಕಿತ್ತುಕೊಳ್ಳಬಹುದು. ಈ ಕ್ಷಣದಲ್ಲಿ, ಅವರು ಅದನ್ನು ಮಾಡುತ್ತಿದ್ದಾನೋ ಇಲ್ಲವೋ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರು ಅದನ್ನು ಮಾಡುತ್ತಿದ್ದರೆ, ಅವರ ಪಿಆರ್ ಸ್ಥಾನಮಾನವನ್ನು ನಾವು ಕಿತ್ತುಕೊಳ್ಳುವುದು ಅವಶ್ಯಕ.” ಎಂದು ಪ್ರಧಾನ ಮಂತ್ರಿ ಮಹಾತಿರ್‌ ಹೇಳಿದ್ದರು.

ಆದರೆ, ಮಲೇಷ್ಯಾ ಸರ್ಕಾರವು ನಾಯಕ್‌ಗೆ ಪೌರತ್ವ ನೀಡಿದ ಬಗ್ಗೆ ಯಾವುದೇ ವರದಿಗಳಿಲ್ಲ. ಸ್ಪಷ್ಟವಾಗಿ ಹೇಳಬೇಕಾದರೆ ಹಳೆಯ ಚಿತ್ರವನ್ನು ಸಂದರ್ಭಕ್ಕೆ ಹೊರತಾಗಿ ಹಂಚಿಕೊಳ್ಳಲಾಗಿದೆ.


ಓದಿ:  ಹಿಂದೂ ದೇವಾಲಯದಲ್ಲಿ ಏಸು ಫೋಟೊ ಇಟ್ಟು ಪೂಜೆ ಮಾಡಲು SP ದಿವ್ಯಾ ಸಾರಾ ಥಾಮಸ್ ಒತ್ತಾಯಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...