Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ಫ್ಯಾಕ್ಟ್‌‌ಚೆಕ್: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ಧರ್ಮಗಳ ನಡುವೆ ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆಂಬ ಆರೋಪ ಹೊತ್ತಿರುವ ಝಾಕಿರ್‌ ನಾಯಕ್ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಯ ವಾಂಟೆಡ್ ಪಟ್ಟಿಯಲ್ಲಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಬೋಧಕ ಝಾಕಿರ್ ನಾಯಕ್‌ಗೆ ಮಲೇಷ್ಯಾದಲ್ಲಿ ಪೌರತ್ವ ನೀಡಲಾಗಿದೆ ಎಂಬ ಹೇಳಿಕೆಯಿರುವ ಚಿತ್ರವೊಂದು 2017 ರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಧರ್ಮಗಳ ನಡುವೆ ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆಂಬ ಆರೋಪ ಹೊತ್ತಿರುವ ಝಾಕಿರ್‌ ನಾಯಕ್ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಯ ವಾಂಟೆಡ್ ಪಟ್ಟಿಯಲ್ಲಿದ್ದಾರೆ.

ಝಾಕಿರ್ ನಾಯಕ್ ಅವರಿಗೆ ಮಲೇಷ್ಯಾ ಸಂಪೂರ್ಣ ಪೌರತ್ವ ನೀಡಿದೆ ಎಂಬ ಹೇಳಿಕೆಯೊಂದಿಗೆ ಈ ಚಿತ್ರ 2017 ರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. “Drzakirnaikofficial” ಎಂಬ ಬಳಕೆದಾರರ ಹೆಸರಿನಲ್ಲಿ ಕಾರ್ಯನಿರ್ವಹಿಸುವ Instagram ಪುಟವು ಸೆಪ್ಟೆಂಬರ್ 2019 ರಲ್ಲಿ ಚಿತ್ರವನ್ನು ಅಪ್‌ಲೋಡ್ ಮಾಡಿತ್ತು. ಅಂದಿನಿಂದ ಇದು 39 ಸಾವಿರಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ.

ಆರ್ಕೈವ್‌ ಇಲ್ಲಿದೆ.

ಆದರೆ ಈ ಚಿತ್ರವು 2020 ರ ಆಗಸ್ಟ್‌ನಿಂದ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ ತೊಡಗಿದೆ. ಫೇಸ್‌ಬುಕ್ ಹಾಗೂ ಟ್ವಿಟರ್‌ ನಂತಹ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಹಲವರು ಜನರು ಇದನ್ನು ಶೇರ್‌ ಮಾಡುತ್ತಿದ್ದಾರೆ.

ಆರ್ಕೈವ್ ಇಲ್ಲಿದೆ. 

ಫ್ಯಾಕ್ಟ್‌‌ಚೆಕ್‌

ಈ ಚಿತ್ರವು ”ಪಾರ್ಟಿ ಬೂಮಿಪುಟೆರಾ ಪರ್ಕಾಸಾ ಮಲೇಷ್ಯಾ” ಪಕ್ಷವನ್ನು ಸ್ಥಾಪಿಸಿದ ಮಲೇಷಿಯಾದ ಬಲಪಂಥೀಯ ರಾಜಕೀಯ ಮುಖಂಡ ಇಬ್ರಾಹಿಂ ಅಲಿ ಮತ್ತು ಮಲಯ ಮೂಲದ ಸಂಸ್ಥೆ ”ಪೆರ್ಟುಬುಹಾನ್ ಪ್ರಿಬುಮಿ ಪೆರ್ಕಾಸಾ” ಝಾಕಿರ್ ನಾಯಕ್‌ಗೆ 2017 ರಂದು ‘ವಾರಿಯರ್ ಪ್ರಶಸ್ತಿ’ ನೀಡಿ ಗೌರವಿಸಿದಾಗಿನ ಚಿತ್ರವಾಗಿದೆ.

ರಿವರ್ಸ್ ಇಮೇಜ್ ಮೂಲಕ ಈ ಚಿತ್ರವನ್ನು ಹುಡುಕಾಡಿದಾಗ ಮಲಯ ಭಾಷೆಯ ದಿನಪತ್ರಿಕೆ ”ಬೆರಿಟಾ ಹರಿಯನ್”  ವರದಿಯೊಂದರಲ್ಲಿ ಈ ಚಿತ್ರವನ್ನು ಬಳಸಲಾಗಿದೆ. ಅದು 16 ಏಪ್ರಿಲ್, 2017 ರ ಚಿತ್ರವಾಗಿದೆ ಎಂದು ಈ ಮೂಲಕ ತಿಳಿಯಬಹುದು.

ಈ ಲೇಖನದಲ್ಲಿ ”ಝಾಕಿರ್ ನಾಯಕ್‌ಗೆ ಪರ್ಕಾಸಾ ನೆಗರಾ ಸ್ಥಳೀಯ ಹೀರೋ ಸ್ಟಾರ್‌, ಇದು ಮಲೇಷ್ಯಾದ ಸ್ಥಳೀಯ ಸಂಘಟನೆ ಪೆರ್ಕಾಸಾದ ಅತ್ಯುನ್ನತ ಪ್ರಶಸ್ತಿ” ಎಂದು ಲೇಖನದಲ್ಲಿ ತಿಳಿಸಲಾಗಿದೆ.

ಸಮಾರಂಭವು ಮಲೇಷ್ಯಾ ವಿಶ್ವವಿದ್ಯಾಲಯದಲ್ಲಿ ನಡೆದ ‘ಇಜ್ತಿಮಕ್ 150 ಮಲೇಷಿಯಾ ಇಸ್ಲಾಮಿಕ್ ಸ್ಕಾಲರ್ಸ್‌’ ಎಂಬ ಕಾರ್ಯಕ್ರಮದ ಭಾಗವಾಗಿದ್ದು, ಅದರಲ್ಲಿ ‘ಇಸ್ಲಾಮೋಫೋಬಿಯಾವನ್ನು ನಿಭಾಯಿಸುವುದು’ ಎಂಬ ವಿಷಯದ ಕುರಿತು ಝಾಕಿರ್‌ ನಾಯಕ್ ಮಾತನಾಡಿದ್ದರು.

ಈ ಚಿತ್ರವನ್ನು ಇಂಗ್ಲಿಷ್ ಭಾಷೆಯ ಮಲಯೇಶಿಯನ್ ಪತ್ರಿಕೆ ನ್ಯೂ ಸ್ಟ್ರೈಟ್ಸ್ ಟೈಮ್ಸ್ ಪ್ರೆಸ್ (ಎನ್‌ಎಸ್‌ಟಿಪಿ) ಛಾಯಾಗ್ರಾಹಕ ಮೊಹಮ್ಮದ್ ಯುಸ್ನಿ ಆರಿಫಿನ್‌ಗೆ ಕ್ಲಿಕ್ಕಿಸಿದ್ದರು.

ಝಾಕಿರ್ ನಾಯಕ್ ಮಲೇಷಿಯನ್ ನಾಗರಿಕನಾ?

ಢಾಕಾ ಕೆಫೆಯ ಮೇಲೆ ನಡೆದ ದಾಳಿಯಲ್ಲಿ ಆರೋಪಿಗಳು ಝಾಕಿರ್‌ ನಾಯಕ್ ಭಾಷಣಗಳಿಂದ ಪ್ರೇರಿತರಾಗಿದ್ದಾರೆಂದು ತಿಳಿದುಬಂದ ನಂತರ ಝಾಕಿರ್ ನಾಯಕ್ ಜುಲೈ 2016 ರಲ್ಲಿ ಮಲೇಷ್ಯಾಕ್ಕೆ ಪಲಾಯನ ಮಾಡಿದ್ದರು.

22 ಅಕ್ಟೋಬರ್ 2019 ರ ಆನ್‌ಲೈನ್ ನ್ಯೂಸ್ ಪೋರ್ಟಲ್, ಮಲೇಶಿಯಾಕಿನಿ ಎಂಬ ಸುದ್ದಿಯ ವರದಿಯಲ್ಲಿ, “ವಿವಾದಾತ್ಮಕ ಬೋಧಕ ಡಾ. ಝಾಕಿರ್ ನಾಯಕ್ ಮಲೇಷಿಯಾದ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ ಬಗ್ಗೆ ಯಾವುದೇ ದಾಖಲೆಗಳಿಲ್ಲ” ಎಂದು ಹೇಳಿದೆ.

ಈ ಹೇಳಿಕೆಯನ್ನು ಗೃಹ ಸಚಿವ ಮುಹಿದ್ದೀನ್ ಯಾಸಿನ್ ನೀಡಿದ್ದಾರೆ. ಎನ್ಆರ್ಡಿ 21 ಏಪ್ರಿಲ್ 2016 ರಂದು ಝಾಕಿರ್ ಅಬ್ದುಲ್ ಕರೀಮ್ ನಾಯಕ್ (ಸಾಮಾನ್ಯವಾಗಿ ಡಾ ಝಾಕಿರ್ ಎಂದು ಕರೆಯಲ್ಪಡುವ) ಗೆ ಮೈಪಿಆರ್ ನೀಡಿತು” ಎಂದು ಅವರು ಹೇಳಿದ್ದರು.

ಮಲೇಷ್ಯಾದ ರಾಷ್ಟ್ರೀಯ ನೋಂದಣಿ ಇಲಾಖೆ (ಎನ್‌ಆರ್‌ಡಿ) ಶಾಶ್ವತ ನಿವಾಸಿಗಳಿಗೆ ಮೈಪಿಆರ್ ಕಾರ್ಡ್‌ಗಳನ್ನು ನೀಡುತ್ತದೆ.

ಆಗಸ್ಟ್ 11, 2019 ರಂದು ಮಲೇಷ್ಯಾದ ಕೋಟಾ ಬಹ್ರುನಲ್ಲಿ ಮಾಡಿದ ಭಾಷಣದಲ್ಲಿ ಝಾಕಿರ್‌ ನಾಯಕ್ ಚೀನೀಯರ ವಿರುದ್ಧ ಅವರನ್ನು “ಅತಿಥಿಗಳು” ಎಂದು ಜನಾಂಗೀಯ ಟೀಕೆಗಳನ್ನು ವ್ಯಕ್ತಪಡಿಸಿದ ನಂತರ ಈ ಹೇಳಿಕೆ ಬಂದಿದ್ದವು. ಝಾಕಿರ್‌ ನಾಯಕ್ ಅವರ ಶಾಶ್ವತ ನಿವಾಸಿ ಸ್ಥಾನವನ್ನು ಕಿತ್ತುಕೊಳ್ಳಬಹುದು ಎಂದು ಪ್ರಧಾನಮಂತ್ರಿ ಮಹಾತಿರ್ ಅವರ ಹೇಳಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.

“ಅವರಿಗೆ (ಝಾಕಿರ್‌ ನಾಯಕ್) ಪಿಆರ್ ಸ್ಥಾನಮಾನವಿದೆ. ಅವರು ರಾಷ್ಟ್ರದ ನೆಮ್ಮದಿಗೆ ಹಾನಿಕಾರಕವಾದದ್ದನ್ನು ಮಾಡಿದರೆ ನಾವು ಅದನ್ನು ಕಿತ್ತುಕೊಳ್ಳಬಹುದು. ಈ ಕ್ಷಣದಲ್ಲಿ, ಅವರು ಅದನ್ನು ಮಾಡುತ್ತಿದ್ದಾನೋ ಇಲ್ಲವೋ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರು ಅದನ್ನು ಮಾಡುತ್ತಿದ್ದರೆ, ಅವರ ಪಿಆರ್ ಸ್ಥಾನಮಾನವನ್ನು ನಾವು ಕಿತ್ತುಕೊಳ್ಳುವುದು ಅವಶ್ಯಕ.” ಎಂದು ಪ್ರಧಾನ ಮಂತ್ರಿ ಮಹಾತಿರ್‌ ಹೇಳಿದ್ದರು.

ಆದರೆ, ಮಲೇಷ್ಯಾ ಸರ್ಕಾರವು ನಾಯಕ್‌ಗೆ ಪೌರತ್ವ ನೀಡಿದ ಬಗ್ಗೆ ಯಾವುದೇ ವರದಿಗಳಿಲ್ಲ. ಸ್ಪಷ್ಟವಾಗಿ ಹೇಳಬೇಕಾದರೆ ಹಳೆಯ ಚಿತ್ರವನ್ನು ಸಂದರ್ಭಕ್ಕೆ ಹೊರತಾಗಿ ಹಂಚಿಕೊಳ್ಳಲಾಗಿದೆ.


ಓದಿ:  ಹಿಂದೂ ದೇವಾಲಯದಲ್ಲಿ ಏಸು ಫೋಟೊ ಇಟ್ಟು ಪೂಜೆ ಮಾಡಲು SP ದಿವ್ಯಾ ಸಾರಾ ಥಾಮಸ್ ಒತ್ತಾಯಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...