Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ಫ್ಯಾಕ್ಟ್‌‌ಚೆಕ್: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ಧರ್ಮಗಳ ನಡುವೆ ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆಂಬ ಆರೋಪ ಹೊತ್ತಿರುವ ಝಾಕಿರ್‌ ನಾಯಕ್ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಯ ವಾಂಟೆಡ್ ಪಟ್ಟಿಯಲ್ಲಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಬೋಧಕ ಝಾಕಿರ್ ನಾಯಕ್‌ಗೆ ಮಲೇಷ್ಯಾದಲ್ಲಿ ಪೌರತ್ವ ನೀಡಲಾಗಿದೆ ಎಂಬ ಹೇಳಿಕೆಯಿರುವ ಚಿತ್ರವೊಂದು 2017 ರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಧರ್ಮಗಳ ನಡುವೆ ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆಂಬ ಆರೋಪ ಹೊತ್ತಿರುವ ಝಾಕಿರ್‌ ನಾಯಕ್ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಯ ವಾಂಟೆಡ್ ಪಟ್ಟಿಯಲ್ಲಿದ್ದಾರೆ.

ಝಾಕಿರ್ ನಾಯಕ್ ಅವರಿಗೆ ಮಲೇಷ್ಯಾ ಸಂಪೂರ್ಣ ಪೌರತ್ವ ನೀಡಿದೆ ಎಂಬ ಹೇಳಿಕೆಯೊಂದಿಗೆ ಈ ಚಿತ್ರ 2017 ರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. “Drzakirnaikofficial” ಎಂಬ ಬಳಕೆದಾರರ ಹೆಸರಿನಲ್ಲಿ ಕಾರ್ಯನಿರ್ವಹಿಸುವ Instagram ಪುಟವು ಸೆಪ್ಟೆಂಬರ್ 2019 ರಲ್ಲಿ ಚಿತ್ರವನ್ನು ಅಪ್‌ಲೋಡ್ ಮಾಡಿತ್ತು. ಅಂದಿನಿಂದ ಇದು 39 ಸಾವಿರಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ.

ಆರ್ಕೈವ್‌ ಇಲ್ಲಿದೆ.

ಆದರೆ ಈ ಚಿತ್ರವು 2020 ರ ಆಗಸ್ಟ್‌ನಿಂದ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ ತೊಡಗಿದೆ. ಫೇಸ್‌ಬುಕ್ ಹಾಗೂ ಟ್ವಿಟರ್‌ ನಂತಹ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಹಲವರು ಜನರು ಇದನ್ನು ಶೇರ್‌ ಮಾಡುತ್ತಿದ್ದಾರೆ.

ಆರ್ಕೈವ್ ಇಲ್ಲಿದೆ. 

ಫ್ಯಾಕ್ಟ್‌‌ಚೆಕ್‌

ಈ ಚಿತ್ರವು ”ಪಾರ್ಟಿ ಬೂಮಿಪುಟೆರಾ ಪರ್ಕಾಸಾ ಮಲೇಷ್ಯಾ” ಪಕ್ಷವನ್ನು ಸ್ಥಾಪಿಸಿದ ಮಲೇಷಿಯಾದ ಬಲಪಂಥೀಯ ರಾಜಕೀಯ ಮುಖಂಡ ಇಬ್ರಾಹಿಂ ಅಲಿ ಮತ್ತು ಮಲಯ ಮೂಲದ ಸಂಸ್ಥೆ ”ಪೆರ್ಟುಬುಹಾನ್ ಪ್ರಿಬುಮಿ ಪೆರ್ಕಾಸಾ” ಝಾಕಿರ್ ನಾಯಕ್‌ಗೆ 2017 ರಂದು ‘ವಾರಿಯರ್ ಪ್ರಶಸ್ತಿ’ ನೀಡಿ ಗೌರವಿಸಿದಾಗಿನ ಚಿತ್ರವಾಗಿದೆ.

ರಿವರ್ಸ್ ಇಮೇಜ್ ಮೂಲಕ ಈ ಚಿತ್ರವನ್ನು ಹುಡುಕಾಡಿದಾಗ ಮಲಯ ಭಾಷೆಯ ದಿನಪತ್ರಿಕೆ ”ಬೆರಿಟಾ ಹರಿಯನ್”  ವರದಿಯೊಂದರಲ್ಲಿ ಈ ಚಿತ್ರವನ್ನು ಬಳಸಲಾಗಿದೆ. ಅದು 16 ಏಪ್ರಿಲ್, 2017 ರ ಚಿತ್ರವಾಗಿದೆ ಎಂದು ಈ ಮೂಲಕ ತಿಳಿಯಬಹುದು.

ಈ ಲೇಖನದಲ್ಲಿ ”ಝಾಕಿರ್ ನಾಯಕ್‌ಗೆ ಪರ್ಕಾಸಾ ನೆಗರಾ ಸ್ಥಳೀಯ ಹೀರೋ ಸ್ಟಾರ್‌, ಇದು ಮಲೇಷ್ಯಾದ ಸ್ಥಳೀಯ ಸಂಘಟನೆ ಪೆರ್ಕಾಸಾದ ಅತ್ಯುನ್ನತ ಪ್ರಶಸ್ತಿ” ಎಂದು ಲೇಖನದಲ್ಲಿ ತಿಳಿಸಲಾಗಿದೆ.

ಸಮಾರಂಭವು ಮಲೇಷ್ಯಾ ವಿಶ್ವವಿದ್ಯಾಲಯದಲ್ಲಿ ನಡೆದ ‘ಇಜ್ತಿಮಕ್ 150 ಮಲೇಷಿಯಾ ಇಸ್ಲಾಮಿಕ್ ಸ್ಕಾಲರ್ಸ್‌’ ಎಂಬ ಕಾರ್ಯಕ್ರಮದ ಭಾಗವಾಗಿದ್ದು, ಅದರಲ್ಲಿ ‘ಇಸ್ಲಾಮೋಫೋಬಿಯಾವನ್ನು ನಿಭಾಯಿಸುವುದು’ ಎಂಬ ವಿಷಯದ ಕುರಿತು ಝಾಕಿರ್‌ ನಾಯಕ್ ಮಾತನಾಡಿದ್ದರು.

ಈ ಚಿತ್ರವನ್ನು ಇಂಗ್ಲಿಷ್ ಭಾಷೆಯ ಮಲಯೇಶಿಯನ್ ಪತ್ರಿಕೆ ನ್ಯೂ ಸ್ಟ್ರೈಟ್ಸ್ ಟೈಮ್ಸ್ ಪ್ರೆಸ್ (ಎನ್‌ಎಸ್‌ಟಿಪಿ) ಛಾಯಾಗ್ರಾಹಕ ಮೊಹಮ್ಮದ್ ಯುಸ್ನಿ ಆರಿಫಿನ್‌ಗೆ ಕ್ಲಿಕ್ಕಿಸಿದ್ದರು.

ಝಾಕಿರ್ ನಾಯಕ್ ಮಲೇಷಿಯನ್ ನಾಗರಿಕನಾ?

ಢಾಕಾ ಕೆಫೆಯ ಮೇಲೆ ನಡೆದ ದಾಳಿಯಲ್ಲಿ ಆರೋಪಿಗಳು ಝಾಕಿರ್‌ ನಾಯಕ್ ಭಾಷಣಗಳಿಂದ ಪ್ರೇರಿತರಾಗಿದ್ದಾರೆಂದು ತಿಳಿದುಬಂದ ನಂತರ ಝಾಕಿರ್ ನಾಯಕ್ ಜುಲೈ 2016 ರಲ್ಲಿ ಮಲೇಷ್ಯಾಕ್ಕೆ ಪಲಾಯನ ಮಾಡಿದ್ದರು.

22 ಅಕ್ಟೋಬರ್ 2019 ರ ಆನ್‌ಲೈನ್ ನ್ಯೂಸ್ ಪೋರ್ಟಲ್, ಮಲೇಶಿಯಾಕಿನಿ ಎಂಬ ಸುದ್ದಿಯ ವರದಿಯಲ್ಲಿ, “ವಿವಾದಾತ್ಮಕ ಬೋಧಕ ಡಾ. ಝಾಕಿರ್ ನಾಯಕ್ ಮಲೇಷಿಯಾದ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ ಬಗ್ಗೆ ಯಾವುದೇ ದಾಖಲೆಗಳಿಲ್ಲ” ಎಂದು ಹೇಳಿದೆ.

ಈ ಹೇಳಿಕೆಯನ್ನು ಗೃಹ ಸಚಿವ ಮುಹಿದ್ದೀನ್ ಯಾಸಿನ್ ನೀಡಿದ್ದಾರೆ. ಎನ್ಆರ್ಡಿ 21 ಏಪ್ರಿಲ್ 2016 ರಂದು ಝಾಕಿರ್ ಅಬ್ದುಲ್ ಕರೀಮ್ ನಾಯಕ್ (ಸಾಮಾನ್ಯವಾಗಿ ಡಾ ಝಾಕಿರ್ ಎಂದು ಕರೆಯಲ್ಪಡುವ) ಗೆ ಮೈಪಿಆರ್ ನೀಡಿತು” ಎಂದು ಅವರು ಹೇಳಿದ್ದರು.

ಮಲೇಷ್ಯಾದ ರಾಷ್ಟ್ರೀಯ ನೋಂದಣಿ ಇಲಾಖೆ (ಎನ್‌ಆರ್‌ಡಿ) ಶಾಶ್ವತ ನಿವಾಸಿಗಳಿಗೆ ಮೈಪಿಆರ್ ಕಾರ್ಡ್‌ಗಳನ್ನು ನೀಡುತ್ತದೆ.

ಆಗಸ್ಟ್ 11, 2019 ರಂದು ಮಲೇಷ್ಯಾದ ಕೋಟಾ ಬಹ್ರುನಲ್ಲಿ ಮಾಡಿದ ಭಾಷಣದಲ್ಲಿ ಝಾಕಿರ್‌ ನಾಯಕ್ ಚೀನೀಯರ ವಿರುದ್ಧ ಅವರನ್ನು “ಅತಿಥಿಗಳು” ಎಂದು ಜನಾಂಗೀಯ ಟೀಕೆಗಳನ್ನು ವ್ಯಕ್ತಪಡಿಸಿದ ನಂತರ ಈ ಹೇಳಿಕೆ ಬಂದಿದ್ದವು. ಝಾಕಿರ್‌ ನಾಯಕ್ ಅವರ ಶಾಶ್ವತ ನಿವಾಸಿ ಸ್ಥಾನವನ್ನು ಕಿತ್ತುಕೊಳ್ಳಬಹುದು ಎಂದು ಪ್ರಧಾನಮಂತ್ರಿ ಮಹಾತಿರ್ ಅವರ ಹೇಳಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.

“ಅವರಿಗೆ (ಝಾಕಿರ್‌ ನಾಯಕ್) ಪಿಆರ್ ಸ್ಥಾನಮಾನವಿದೆ. ಅವರು ರಾಷ್ಟ್ರದ ನೆಮ್ಮದಿಗೆ ಹಾನಿಕಾರಕವಾದದ್ದನ್ನು ಮಾಡಿದರೆ ನಾವು ಅದನ್ನು ಕಿತ್ತುಕೊಳ್ಳಬಹುದು. ಈ ಕ್ಷಣದಲ್ಲಿ, ಅವರು ಅದನ್ನು ಮಾಡುತ್ತಿದ್ದಾನೋ ಇಲ್ಲವೋ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರು ಅದನ್ನು ಮಾಡುತ್ತಿದ್ದರೆ, ಅವರ ಪಿಆರ್ ಸ್ಥಾನಮಾನವನ್ನು ನಾವು ಕಿತ್ತುಕೊಳ್ಳುವುದು ಅವಶ್ಯಕ.” ಎಂದು ಪ್ರಧಾನ ಮಂತ್ರಿ ಮಹಾತಿರ್‌ ಹೇಳಿದ್ದರು.

ಆದರೆ, ಮಲೇಷ್ಯಾ ಸರ್ಕಾರವು ನಾಯಕ್‌ಗೆ ಪೌರತ್ವ ನೀಡಿದ ಬಗ್ಗೆ ಯಾವುದೇ ವರದಿಗಳಿಲ್ಲ. ಸ್ಪಷ್ಟವಾಗಿ ಹೇಳಬೇಕಾದರೆ ಹಳೆಯ ಚಿತ್ರವನ್ನು ಸಂದರ್ಭಕ್ಕೆ ಹೊರತಾಗಿ ಹಂಚಿಕೊಳ್ಳಲಾಗಿದೆ.


ಓದಿ:  ಹಿಂದೂ ದೇವಾಲಯದಲ್ಲಿ ಏಸು ಫೋಟೊ ಇಟ್ಟು ಪೂಜೆ ಮಾಡಲು SP ದಿವ್ಯಾ ಸಾರಾ ಥಾಮಸ್ ಒತ್ತಾಯಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...