Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ಫ್ಯಾಕ್ಟ್‌‌ಚೆಕ್: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ಧರ್ಮಗಳ ನಡುವೆ ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆಂಬ ಆರೋಪ ಹೊತ್ತಿರುವ ಝಾಕಿರ್‌ ನಾಯಕ್ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಯ ವಾಂಟೆಡ್ ಪಟ್ಟಿಯಲ್ಲಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಬೋಧಕ ಝಾಕಿರ್ ನಾಯಕ್‌ಗೆ ಮಲೇಷ್ಯಾದಲ್ಲಿ ಪೌರತ್ವ ನೀಡಲಾಗಿದೆ ಎಂಬ ಹೇಳಿಕೆಯಿರುವ ಚಿತ್ರವೊಂದು 2017 ರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಧರ್ಮಗಳ ನಡುವೆ ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆಂಬ ಆರೋಪ ಹೊತ್ತಿರುವ ಝಾಕಿರ್‌ ನಾಯಕ್ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಯ ವಾಂಟೆಡ್ ಪಟ್ಟಿಯಲ್ಲಿದ್ದಾರೆ.

ಝಾಕಿರ್ ನಾಯಕ್ ಅವರಿಗೆ ಮಲೇಷ್ಯಾ ಸಂಪೂರ್ಣ ಪೌರತ್ವ ನೀಡಿದೆ ಎಂಬ ಹೇಳಿಕೆಯೊಂದಿಗೆ ಈ ಚಿತ್ರ 2017 ರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. “Drzakirnaikofficial” ಎಂಬ ಬಳಕೆದಾರರ ಹೆಸರಿನಲ್ಲಿ ಕಾರ್ಯನಿರ್ವಹಿಸುವ Instagram ಪುಟವು ಸೆಪ್ಟೆಂಬರ್ 2019 ರಲ್ಲಿ ಚಿತ್ರವನ್ನು ಅಪ್‌ಲೋಡ್ ಮಾಡಿತ್ತು. ಅಂದಿನಿಂದ ಇದು 39 ಸಾವಿರಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ.

ಆರ್ಕೈವ್‌ ಇಲ್ಲಿದೆ.

ಆದರೆ ಈ ಚಿತ್ರವು 2020 ರ ಆಗಸ್ಟ್‌ನಿಂದ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ ತೊಡಗಿದೆ. ಫೇಸ್‌ಬುಕ್ ಹಾಗೂ ಟ್ವಿಟರ್‌ ನಂತಹ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಹಲವರು ಜನರು ಇದನ್ನು ಶೇರ್‌ ಮಾಡುತ್ತಿದ್ದಾರೆ.

ಆರ್ಕೈವ್ ಇಲ್ಲಿದೆ. 

ಫ್ಯಾಕ್ಟ್‌‌ಚೆಕ್‌

ಈ ಚಿತ್ರವು ”ಪಾರ್ಟಿ ಬೂಮಿಪುಟೆರಾ ಪರ್ಕಾಸಾ ಮಲೇಷ್ಯಾ” ಪಕ್ಷವನ್ನು ಸ್ಥಾಪಿಸಿದ ಮಲೇಷಿಯಾದ ಬಲಪಂಥೀಯ ರಾಜಕೀಯ ಮುಖಂಡ ಇಬ್ರಾಹಿಂ ಅಲಿ ಮತ್ತು ಮಲಯ ಮೂಲದ ಸಂಸ್ಥೆ ”ಪೆರ್ಟುಬುಹಾನ್ ಪ್ರಿಬುಮಿ ಪೆರ್ಕಾಸಾ” ಝಾಕಿರ್ ನಾಯಕ್‌ಗೆ 2017 ರಂದು ‘ವಾರಿಯರ್ ಪ್ರಶಸ್ತಿ’ ನೀಡಿ ಗೌರವಿಸಿದಾಗಿನ ಚಿತ್ರವಾಗಿದೆ.

ರಿವರ್ಸ್ ಇಮೇಜ್ ಮೂಲಕ ಈ ಚಿತ್ರವನ್ನು ಹುಡುಕಾಡಿದಾಗ ಮಲಯ ಭಾಷೆಯ ದಿನಪತ್ರಿಕೆ ”ಬೆರಿಟಾ ಹರಿಯನ್”  ವರದಿಯೊಂದರಲ್ಲಿ ಈ ಚಿತ್ರವನ್ನು ಬಳಸಲಾಗಿದೆ. ಅದು 16 ಏಪ್ರಿಲ್, 2017 ರ ಚಿತ್ರವಾಗಿದೆ ಎಂದು ಈ ಮೂಲಕ ತಿಳಿಯಬಹುದು.

ಈ ಲೇಖನದಲ್ಲಿ ”ಝಾಕಿರ್ ನಾಯಕ್‌ಗೆ ಪರ್ಕಾಸಾ ನೆಗರಾ ಸ್ಥಳೀಯ ಹೀರೋ ಸ್ಟಾರ್‌, ಇದು ಮಲೇಷ್ಯಾದ ಸ್ಥಳೀಯ ಸಂಘಟನೆ ಪೆರ್ಕಾಸಾದ ಅತ್ಯುನ್ನತ ಪ್ರಶಸ್ತಿ” ಎಂದು ಲೇಖನದಲ್ಲಿ ತಿಳಿಸಲಾಗಿದೆ.

ಸಮಾರಂಭವು ಮಲೇಷ್ಯಾ ವಿಶ್ವವಿದ್ಯಾಲಯದಲ್ಲಿ ನಡೆದ ‘ಇಜ್ತಿಮಕ್ 150 ಮಲೇಷಿಯಾ ಇಸ್ಲಾಮಿಕ್ ಸ್ಕಾಲರ್ಸ್‌’ ಎಂಬ ಕಾರ್ಯಕ್ರಮದ ಭಾಗವಾಗಿದ್ದು, ಅದರಲ್ಲಿ ‘ಇಸ್ಲಾಮೋಫೋಬಿಯಾವನ್ನು ನಿಭಾಯಿಸುವುದು’ ಎಂಬ ವಿಷಯದ ಕುರಿತು ಝಾಕಿರ್‌ ನಾಯಕ್ ಮಾತನಾಡಿದ್ದರು.

ಈ ಚಿತ್ರವನ್ನು ಇಂಗ್ಲಿಷ್ ಭಾಷೆಯ ಮಲಯೇಶಿಯನ್ ಪತ್ರಿಕೆ ನ್ಯೂ ಸ್ಟ್ರೈಟ್ಸ್ ಟೈಮ್ಸ್ ಪ್ರೆಸ್ (ಎನ್‌ಎಸ್‌ಟಿಪಿ) ಛಾಯಾಗ್ರಾಹಕ ಮೊಹಮ್ಮದ್ ಯುಸ್ನಿ ಆರಿಫಿನ್‌ಗೆ ಕ್ಲಿಕ್ಕಿಸಿದ್ದರು.

ಝಾಕಿರ್ ನಾಯಕ್ ಮಲೇಷಿಯನ್ ನಾಗರಿಕನಾ?

ಢಾಕಾ ಕೆಫೆಯ ಮೇಲೆ ನಡೆದ ದಾಳಿಯಲ್ಲಿ ಆರೋಪಿಗಳು ಝಾಕಿರ್‌ ನಾಯಕ್ ಭಾಷಣಗಳಿಂದ ಪ್ರೇರಿತರಾಗಿದ್ದಾರೆಂದು ತಿಳಿದುಬಂದ ನಂತರ ಝಾಕಿರ್ ನಾಯಕ್ ಜುಲೈ 2016 ರಲ್ಲಿ ಮಲೇಷ್ಯಾಕ್ಕೆ ಪಲಾಯನ ಮಾಡಿದ್ದರು.

22 ಅಕ್ಟೋಬರ್ 2019 ರ ಆನ್‌ಲೈನ್ ನ್ಯೂಸ್ ಪೋರ್ಟಲ್, ಮಲೇಶಿಯಾಕಿನಿ ಎಂಬ ಸುದ್ದಿಯ ವರದಿಯಲ್ಲಿ, “ವಿವಾದಾತ್ಮಕ ಬೋಧಕ ಡಾ. ಝಾಕಿರ್ ನಾಯಕ್ ಮಲೇಷಿಯಾದ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ ಬಗ್ಗೆ ಯಾವುದೇ ದಾಖಲೆಗಳಿಲ್ಲ” ಎಂದು ಹೇಳಿದೆ.

ಈ ಹೇಳಿಕೆಯನ್ನು ಗೃಹ ಸಚಿವ ಮುಹಿದ್ದೀನ್ ಯಾಸಿನ್ ನೀಡಿದ್ದಾರೆ. ಎನ್ಆರ್ಡಿ 21 ಏಪ್ರಿಲ್ 2016 ರಂದು ಝಾಕಿರ್ ಅಬ್ದುಲ್ ಕರೀಮ್ ನಾಯಕ್ (ಸಾಮಾನ್ಯವಾಗಿ ಡಾ ಝಾಕಿರ್ ಎಂದು ಕರೆಯಲ್ಪಡುವ) ಗೆ ಮೈಪಿಆರ್ ನೀಡಿತು” ಎಂದು ಅವರು ಹೇಳಿದ್ದರು.

ಮಲೇಷ್ಯಾದ ರಾಷ್ಟ್ರೀಯ ನೋಂದಣಿ ಇಲಾಖೆ (ಎನ್‌ಆರ್‌ಡಿ) ಶಾಶ್ವತ ನಿವಾಸಿಗಳಿಗೆ ಮೈಪಿಆರ್ ಕಾರ್ಡ್‌ಗಳನ್ನು ನೀಡುತ್ತದೆ.

ಆಗಸ್ಟ್ 11, 2019 ರಂದು ಮಲೇಷ್ಯಾದ ಕೋಟಾ ಬಹ್ರುನಲ್ಲಿ ಮಾಡಿದ ಭಾಷಣದಲ್ಲಿ ಝಾಕಿರ್‌ ನಾಯಕ್ ಚೀನೀಯರ ವಿರುದ್ಧ ಅವರನ್ನು “ಅತಿಥಿಗಳು” ಎಂದು ಜನಾಂಗೀಯ ಟೀಕೆಗಳನ್ನು ವ್ಯಕ್ತಪಡಿಸಿದ ನಂತರ ಈ ಹೇಳಿಕೆ ಬಂದಿದ್ದವು. ಝಾಕಿರ್‌ ನಾಯಕ್ ಅವರ ಶಾಶ್ವತ ನಿವಾಸಿ ಸ್ಥಾನವನ್ನು ಕಿತ್ತುಕೊಳ್ಳಬಹುದು ಎಂದು ಪ್ರಧಾನಮಂತ್ರಿ ಮಹಾತಿರ್ ಅವರ ಹೇಳಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.

“ಅವರಿಗೆ (ಝಾಕಿರ್‌ ನಾಯಕ್) ಪಿಆರ್ ಸ್ಥಾನಮಾನವಿದೆ. ಅವರು ರಾಷ್ಟ್ರದ ನೆಮ್ಮದಿಗೆ ಹಾನಿಕಾರಕವಾದದ್ದನ್ನು ಮಾಡಿದರೆ ನಾವು ಅದನ್ನು ಕಿತ್ತುಕೊಳ್ಳಬಹುದು. ಈ ಕ್ಷಣದಲ್ಲಿ, ಅವರು ಅದನ್ನು ಮಾಡುತ್ತಿದ್ದಾನೋ ಇಲ್ಲವೋ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರು ಅದನ್ನು ಮಾಡುತ್ತಿದ್ದರೆ, ಅವರ ಪಿಆರ್ ಸ್ಥಾನಮಾನವನ್ನು ನಾವು ಕಿತ್ತುಕೊಳ್ಳುವುದು ಅವಶ್ಯಕ.” ಎಂದು ಪ್ರಧಾನ ಮಂತ್ರಿ ಮಹಾತಿರ್‌ ಹೇಳಿದ್ದರು.

ಆದರೆ, ಮಲೇಷ್ಯಾ ಸರ್ಕಾರವು ನಾಯಕ್‌ಗೆ ಪೌರತ್ವ ನೀಡಿದ ಬಗ್ಗೆ ಯಾವುದೇ ವರದಿಗಳಿಲ್ಲ. ಸ್ಪಷ್ಟವಾಗಿ ಹೇಳಬೇಕಾದರೆ ಹಳೆಯ ಚಿತ್ರವನ್ನು ಸಂದರ್ಭಕ್ಕೆ ಹೊರತಾಗಿ ಹಂಚಿಕೊಳ್ಳಲಾಗಿದೆ.


ಓದಿ:  ಹಿಂದೂ ದೇವಾಲಯದಲ್ಲಿ ಏಸು ಫೋಟೊ ಇಟ್ಟು ಪೂಜೆ ಮಾಡಲು SP ದಿವ್ಯಾ ಸಾರಾ ಥಾಮಸ್ ಒತ್ತಾಯಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...