Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ಫ್ಯಾಕ್ಟ್‌‌ಚೆಕ್: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ಧರ್ಮಗಳ ನಡುವೆ ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆಂಬ ಆರೋಪ ಹೊತ್ತಿರುವ ಝಾಕಿರ್‌ ನಾಯಕ್ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಯ ವಾಂಟೆಡ್ ಪಟ್ಟಿಯಲ್ಲಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಬೋಧಕ ಝಾಕಿರ್ ನಾಯಕ್‌ಗೆ ಮಲೇಷ್ಯಾದಲ್ಲಿ ಪೌರತ್ವ ನೀಡಲಾಗಿದೆ ಎಂಬ ಹೇಳಿಕೆಯಿರುವ ಚಿತ್ರವೊಂದು 2017 ರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಧರ್ಮಗಳ ನಡುವೆ ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆಂಬ ಆರೋಪ ಹೊತ್ತಿರುವ ಝಾಕಿರ್‌ ನಾಯಕ್ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಯ ವಾಂಟೆಡ್ ಪಟ್ಟಿಯಲ್ಲಿದ್ದಾರೆ.

ಝಾಕಿರ್ ನಾಯಕ್ ಅವರಿಗೆ ಮಲೇಷ್ಯಾ ಸಂಪೂರ್ಣ ಪೌರತ್ವ ನೀಡಿದೆ ಎಂಬ ಹೇಳಿಕೆಯೊಂದಿಗೆ ಈ ಚಿತ್ರ 2017 ರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. “Drzakirnaikofficial” ಎಂಬ ಬಳಕೆದಾರರ ಹೆಸರಿನಲ್ಲಿ ಕಾರ್ಯನಿರ್ವಹಿಸುವ Instagram ಪುಟವು ಸೆಪ್ಟೆಂಬರ್ 2019 ರಲ್ಲಿ ಚಿತ್ರವನ್ನು ಅಪ್‌ಲೋಡ್ ಮಾಡಿತ್ತು. ಅಂದಿನಿಂದ ಇದು 39 ಸಾವಿರಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ.

ಆರ್ಕೈವ್‌ ಇಲ್ಲಿದೆ.

ಆದರೆ ಈ ಚಿತ್ರವು 2020 ರ ಆಗಸ್ಟ್‌ನಿಂದ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ ತೊಡಗಿದೆ. ಫೇಸ್‌ಬುಕ್ ಹಾಗೂ ಟ್ವಿಟರ್‌ ನಂತಹ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಹಲವರು ಜನರು ಇದನ್ನು ಶೇರ್‌ ಮಾಡುತ್ತಿದ್ದಾರೆ.

ಆರ್ಕೈವ್ ಇಲ್ಲಿದೆ. 

ಫ್ಯಾಕ್ಟ್‌‌ಚೆಕ್‌

ಈ ಚಿತ್ರವು ”ಪಾರ್ಟಿ ಬೂಮಿಪುಟೆರಾ ಪರ್ಕಾಸಾ ಮಲೇಷ್ಯಾ” ಪಕ್ಷವನ್ನು ಸ್ಥಾಪಿಸಿದ ಮಲೇಷಿಯಾದ ಬಲಪಂಥೀಯ ರಾಜಕೀಯ ಮುಖಂಡ ಇಬ್ರಾಹಿಂ ಅಲಿ ಮತ್ತು ಮಲಯ ಮೂಲದ ಸಂಸ್ಥೆ ”ಪೆರ್ಟುಬುಹಾನ್ ಪ್ರಿಬುಮಿ ಪೆರ್ಕಾಸಾ” ಝಾಕಿರ್ ನಾಯಕ್‌ಗೆ 2017 ರಂದು ‘ವಾರಿಯರ್ ಪ್ರಶಸ್ತಿ’ ನೀಡಿ ಗೌರವಿಸಿದಾಗಿನ ಚಿತ್ರವಾಗಿದೆ.

ರಿವರ್ಸ್ ಇಮೇಜ್ ಮೂಲಕ ಈ ಚಿತ್ರವನ್ನು ಹುಡುಕಾಡಿದಾಗ ಮಲಯ ಭಾಷೆಯ ದಿನಪತ್ರಿಕೆ ”ಬೆರಿಟಾ ಹರಿಯನ್”  ವರದಿಯೊಂದರಲ್ಲಿ ಈ ಚಿತ್ರವನ್ನು ಬಳಸಲಾಗಿದೆ. ಅದು 16 ಏಪ್ರಿಲ್, 2017 ರ ಚಿತ್ರವಾಗಿದೆ ಎಂದು ಈ ಮೂಲಕ ತಿಳಿಯಬಹುದು.

ಈ ಲೇಖನದಲ್ಲಿ ”ಝಾಕಿರ್ ನಾಯಕ್‌ಗೆ ಪರ್ಕಾಸಾ ನೆಗರಾ ಸ್ಥಳೀಯ ಹೀರೋ ಸ್ಟಾರ್‌, ಇದು ಮಲೇಷ್ಯಾದ ಸ್ಥಳೀಯ ಸಂಘಟನೆ ಪೆರ್ಕಾಸಾದ ಅತ್ಯುನ್ನತ ಪ್ರಶಸ್ತಿ” ಎಂದು ಲೇಖನದಲ್ಲಿ ತಿಳಿಸಲಾಗಿದೆ.

ಸಮಾರಂಭವು ಮಲೇಷ್ಯಾ ವಿಶ್ವವಿದ್ಯಾಲಯದಲ್ಲಿ ನಡೆದ ‘ಇಜ್ತಿಮಕ್ 150 ಮಲೇಷಿಯಾ ಇಸ್ಲಾಮಿಕ್ ಸ್ಕಾಲರ್ಸ್‌’ ಎಂಬ ಕಾರ್ಯಕ್ರಮದ ಭಾಗವಾಗಿದ್ದು, ಅದರಲ್ಲಿ ‘ಇಸ್ಲಾಮೋಫೋಬಿಯಾವನ್ನು ನಿಭಾಯಿಸುವುದು’ ಎಂಬ ವಿಷಯದ ಕುರಿತು ಝಾಕಿರ್‌ ನಾಯಕ್ ಮಾತನಾಡಿದ್ದರು.

ಈ ಚಿತ್ರವನ್ನು ಇಂಗ್ಲಿಷ್ ಭಾಷೆಯ ಮಲಯೇಶಿಯನ್ ಪತ್ರಿಕೆ ನ್ಯೂ ಸ್ಟ್ರೈಟ್ಸ್ ಟೈಮ್ಸ್ ಪ್ರೆಸ್ (ಎನ್‌ಎಸ್‌ಟಿಪಿ) ಛಾಯಾಗ್ರಾಹಕ ಮೊಹಮ್ಮದ್ ಯುಸ್ನಿ ಆರಿಫಿನ್‌ಗೆ ಕ್ಲಿಕ್ಕಿಸಿದ್ದರು.

ಝಾಕಿರ್ ನಾಯಕ್ ಮಲೇಷಿಯನ್ ನಾಗರಿಕನಾ?

ಢಾಕಾ ಕೆಫೆಯ ಮೇಲೆ ನಡೆದ ದಾಳಿಯಲ್ಲಿ ಆರೋಪಿಗಳು ಝಾಕಿರ್‌ ನಾಯಕ್ ಭಾಷಣಗಳಿಂದ ಪ್ರೇರಿತರಾಗಿದ್ದಾರೆಂದು ತಿಳಿದುಬಂದ ನಂತರ ಝಾಕಿರ್ ನಾಯಕ್ ಜುಲೈ 2016 ರಲ್ಲಿ ಮಲೇಷ್ಯಾಕ್ಕೆ ಪಲಾಯನ ಮಾಡಿದ್ದರು.

22 ಅಕ್ಟೋಬರ್ 2019 ರ ಆನ್‌ಲೈನ್ ನ್ಯೂಸ್ ಪೋರ್ಟಲ್, ಮಲೇಶಿಯಾಕಿನಿ ಎಂಬ ಸುದ್ದಿಯ ವರದಿಯಲ್ಲಿ, “ವಿವಾದಾತ್ಮಕ ಬೋಧಕ ಡಾ. ಝಾಕಿರ್ ನಾಯಕ್ ಮಲೇಷಿಯಾದ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ ಬಗ್ಗೆ ಯಾವುದೇ ದಾಖಲೆಗಳಿಲ್ಲ” ಎಂದು ಹೇಳಿದೆ.

ಈ ಹೇಳಿಕೆಯನ್ನು ಗೃಹ ಸಚಿವ ಮುಹಿದ್ದೀನ್ ಯಾಸಿನ್ ನೀಡಿದ್ದಾರೆ. ಎನ್ಆರ್ಡಿ 21 ಏಪ್ರಿಲ್ 2016 ರಂದು ಝಾಕಿರ್ ಅಬ್ದುಲ್ ಕರೀಮ್ ನಾಯಕ್ (ಸಾಮಾನ್ಯವಾಗಿ ಡಾ ಝಾಕಿರ್ ಎಂದು ಕರೆಯಲ್ಪಡುವ) ಗೆ ಮೈಪಿಆರ್ ನೀಡಿತು” ಎಂದು ಅವರು ಹೇಳಿದ್ದರು.

ಮಲೇಷ್ಯಾದ ರಾಷ್ಟ್ರೀಯ ನೋಂದಣಿ ಇಲಾಖೆ (ಎನ್‌ಆರ್‌ಡಿ) ಶಾಶ್ವತ ನಿವಾಸಿಗಳಿಗೆ ಮೈಪಿಆರ್ ಕಾರ್ಡ್‌ಗಳನ್ನು ನೀಡುತ್ತದೆ.

ಆಗಸ್ಟ್ 11, 2019 ರಂದು ಮಲೇಷ್ಯಾದ ಕೋಟಾ ಬಹ್ರುನಲ್ಲಿ ಮಾಡಿದ ಭಾಷಣದಲ್ಲಿ ಝಾಕಿರ್‌ ನಾಯಕ್ ಚೀನೀಯರ ವಿರುದ್ಧ ಅವರನ್ನು “ಅತಿಥಿಗಳು” ಎಂದು ಜನಾಂಗೀಯ ಟೀಕೆಗಳನ್ನು ವ್ಯಕ್ತಪಡಿಸಿದ ನಂತರ ಈ ಹೇಳಿಕೆ ಬಂದಿದ್ದವು. ಝಾಕಿರ್‌ ನಾಯಕ್ ಅವರ ಶಾಶ್ವತ ನಿವಾಸಿ ಸ್ಥಾನವನ್ನು ಕಿತ್ತುಕೊಳ್ಳಬಹುದು ಎಂದು ಪ್ರಧಾನಮಂತ್ರಿ ಮಹಾತಿರ್ ಅವರ ಹೇಳಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.

“ಅವರಿಗೆ (ಝಾಕಿರ್‌ ನಾಯಕ್) ಪಿಆರ್ ಸ್ಥಾನಮಾನವಿದೆ. ಅವರು ರಾಷ್ಟ್ರದ ನೆಮ್ಮದಿಗೆ ಹಾನಿಕಾರಕವಾದದ್ದನ್ನು ಮಾಡಿದರೆ ನಾವು ಅದನ್ನು ಕಿತ್ತುಕೊಳ್ಳಬಹುದು. ಈ ಕ್ಷಣದಲ್ಲಿ, ಅವರು ಅದನ್ನು ಮಾಡುತ್ತಿದ್ದಾನೋ ಇಲ್ಲವೋ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರು ಅದನ್ನು ಮಾಡುತ್ತಿದ್ದರೆ, ಅವರ ಪಿಆರ್ ಸ್ಥಾನಮಾನವನ್ನು ನಾವು ಕಿತ್ತುಕೊಳ್ಳುವುದು ಅವಶ್ಯಕ.” ಎಂದು ಪ್ರಧಾನ ಮಂತ್ರಿ ಮಹಾತಿರ್‌ ಹೇಳಿದ್ದರು.

ಆದರೆ, ಮಲೇಷ್ಯಾ ಸರ್ಕಾರವು ನಾಯಕ್‌ಗೆ ಪೌರತ್ವ ನೀಡಿದ ಬಗ್ಗೆ ಯಾವುದೇ ವರದಿಗಳಿಲ್ಲ. ಸ್ಪಷ್ಟವಾಗಿ ಹೇಳಬೇಕಾದರೆ ಹಳೆಯ ಚಿತ್ರವನ್ನು ಸಂದರ್ಭಕ್ಕೆ ಹೊರತಾಗಿ ಹಂಚಿಕೊಳ್ಳಲಾಗಿದೆ.


ಓದಿ:  ಹಿಂದೂ ದೇವಾಲಯದಲ್ಲಿ ಏಸು ಫೋಟೊ ಇಟ್ಟು ಪೂಜೆ ಮಾಡಲು SP ದಿವ್ಯಾ ಸಾರಾ ಥಾಮಸ್ ಒತ್ತಾಯಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...