Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ಫ್ಯಾಕ್ಟ್‌‌ಚೆಕ್: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ಧರ್ಮಗಳ ನಡುವೆ ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆಂಬ ಆರೋಪ ಹೊತ್ತಿರುವ ಝಾಕಿರ್‌ ನಾಯಕ್ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಯ ವಾಂಟೆಡ್ ಪಟ್ಟಿಯಲ್ಲಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಬೋಧಕ ಝಾಕಿರ್ ನಾಯಕ್‌ಗೆ ಮಲೇಷ್ಯಾದಲ್ಲಿ ಪೌರತ್ವ ನೀಡಲಾಗಿದೆ ಎಂಬ ಹೇಳಿಕೆಯಿರುವ ಚಿತ್ರವೊಂದು 2017 ರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಧರ್ಮಗಳ ನಡುವೆ ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆಂಬ ಆರೋಪ ಹೊತ್ತಿರುವ ಝಾಕಿರ್‌ ನಾಯಕ್ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಯ ವಾಂಟೆಡ್ ಪಟ್ಟಿಯಲ್ಲಿದ್ದಾರೆ.

ಝಾಕಿರ್ ನಾಯಕ್ ಅವರಿಗೆ ಮಲೇಷ್ಯಾ ಸಂಪೂರ್ಣ ಪೌರತ್ವ ನೀಡಿದೆ ಎಂಬ ಹೇಳಿಕೆಯೊಂದಿಗೆ ಈ ಚಿತ್ರ 2017 ರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. “Drzakirnaikofficial” ಎಂಬ ಬಳಕೆದಾರರ ಹೆಸರಿನಲ್ಲಿ ಕಾರ್ಯನಿರ್ವಹಿಸುವ Instagram ಪುಟವು ಸೆಪ್ಟೆಂಬರ್ 2019 ರಲ್ಲಿ ಚಿತ್ರವನ್ನು ಅಪ್‌ಲೋಡ್ ಮಾಡಿತ್ತು. ಅಂದಿನಿಂದ ಇದು 39 ಸಾವಿರಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ.

ಆರ್ಕೈವ್‌ ಇಲ್ಲಿದೆ.

ಆದರೆ ಈ ಚಿತ್ರವು 2020 ರ ಆಗಸ್ಟ್‌ನಿಂದ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ ತೊಡಗಿದೆ. ಫೇಸ್‌ಬುಕ್ ಹಾಗೂ ಟ್ವಿಟರ್‌ ನಂತಹ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಹಲವರು ಜನರು ಇದನ್ನು ಶೇರ್‌ ಮಾಡುತ್ತಿದ್ದಾರೆ.

ಆರ್ಕೈವ್ ಇಲ್ಲಿದೆ. 

ಫ್ಯಾಕ್ಟ್‌‌ಚೆಕ್‌

ಈ ಚಿತ್ರವು ”ಪಾರ್ಟಿ ಬೂಮಿಪುಟೆರಾ ಪರ್ಕಾಸಾ ಮಲೇಷ್ಯಾ” ಪಕ್ಷವನ್ನು ಸ್ಥಾಪಿಸಿದ ಮಲೇಷಿಯಾದ ಬಲಪಂಥೀಯ ರಾಜಕೀಯ ಮುಖಂಡ ಇಬ್ರಾಹಿಂ ಅಲಿ ಮತ್ತು ಮಲಯ ಮೂಲದ ಸಂಸ್ಥೆ ”ಪೆರ್ಟುಬುಹಾನ್ ಪ್ರಿಬುಮಿ ಪೆರ್ಕಾಸಾ” ಝಾಕಿರ್ ನಾಯಕ್‌ಗೆ 2017 ರಂದು ‘ವಾರಿಯರ್ ಪ್ರಶಸ್ತಿ’ ನೀಡಿ ಗೌರವಿಸಿದಾಗಿನ ಚಿತ್ರವಾಗಿದೆ.

ರಿವರ್ಸ್ ಇಮೇಜ್ ಮೂಲಕ ಈ ಚಿತ್ರವನ್ನು ಹುಡುಕಾಡಿದಾಗ ಮಲಯ ಭಾಷೆಯ ದಿನಪತ್ರಿಕೆ ”ಬೆರಿಟಾ ಹರಿಯನ್”  ವರದಿಯೊಂದರಲ್ಲಿ ಈ ಚಿತ್ರವನ್ನು ಬಳಸಲಾಗಿದೆ. ಅದು 16 ಏಪ್ರಿಲ್, 2017 ರ ಚಿತ್ರವಾಗಿದೆ ಎಂದು ಈ ಮೂಲಕ ತಿಳಿಯಬಹುದು.

ಈ ಲೇಖನದಲ್ಲಿ ”ಝಾಕಿರ್ ನಾಯಕ್‌ಗೆ ಪರ್ಕಾಸಾ ನೆಗರಾ ಸ್ಥಳೀಯ ಹೀರೋ ಸ್ಟಾರ್‌, ಇದು ಮಲೇಷ್ಯಾದ ಸ್ಥಳೀಯ ಸಂಘಟನೆ ಪೆರ್ಕಾಸಾದ ಅತ್ಯುನ್ನತ ಪ್ರಶಸ್ತಿ” ಎಂದು ಲೇಖನದಲ್ಲಿ ತಿಳಿಸಲಾಗಿದೆ.

ಸಮಾರಂಭವು ಮಲೇಷ್ಯಾ ವಿಶ್ವವಿದ್ಯಾಲಯದಲ್ಲಿ ನಡೆದ ‘ಇಜ್ತಿಮಕ್ 150 ಮಲೇಷಿಯಾ ಇಸ್ಲಾಮಿಕ್ ಸ್ಕಾಲರ್ಸ್‌’ ಎಂಬ ಕಾರ್ಯಕ್ರಮದ ಭಾಗವಾಗಿದ್ದು, ಅದರಲ್ಲಿ ‘ಇಸ್ಲಾಮೋಫೋಬಿಯಾವನ್ನು ನಿಭಾಯಿಸುವುದು’ ಎಂಬ ವಿಷಯದ ಕುರಿತು ಝಾಕಿರ್‌ ನಾಯಕ್ ಮಾತನಾಡಿದ್ದರು.

ಈ ಚಿತ್ರವನ್ನು ಇಂಗ್ಲಿಷ್ ಭಾಷೆಯ ಮಲಯೇಶಿಯನ್ ಪತ್ರಿಕೆ ನ್ಯೂ ಸ್ಟ್ರೈಟ್ಸ್ ಟೈಮ್ಸ್ ಪ್ರೆಸ್ (ಎನ್‌ಎಸ್‌ಟಿಪಿ) ಛಾಯಾಗ್ರಾಹಕ ಮೊಹಮ್ಮದ್ ಯುಸ್ನಿ ಆರಿಫಿನ್‌ಗೆ ಕ್ಲಿಕ್ಕಿಸಿದ್ದರು.

ಝಾಕಿರ್ ನಾಯಕ್ ಮಲೇಷಿಯನ್ ನಾಗರಿಕನಾ?

ಢಾಕಾ ಕೆಫೆಯ ಮೇಲೆ ನಡೆದ ದಾಳಿಯಲ್ಲಿ ಆರೋಪಿಗಳು ಝಾಕಿರ್‌ ನಾಯಕ್ ಭಾಷಣಗಳಿಂದ ಪ್ರೇರಿತರಾಗಿದ್ದಾರೆಂದು ತಿಳಿದುಬಂದ ನಂತರ ಝಾಕಿರ್ ನಾಯಕ್ ಜುಲೈ 2016 ರಲ್ಲಿ ಮಲೇಷ್ಯಾಕ್ಕೆ ಪಲಾಯನ ಮಾಡಿದ್ದರು.

22 ಅಕ್ಟೋಬರ್ 2019 ರ ಆನ್‌ಲೈನ್ ನ್ಯೂಸ್ ಪೋರ್ಟಲ್, ಮಲೇಶಿಯಾಕಿನಿ ಎಂಬ ಸುದ್ದಿಯ ವರದಿಯಲ್ಲಿ, “ವಿವಾದಾತ್ಮಕ ಬೋಧಕ ಡಾ. ಝಾಕಿರ್ ನಾಯಕ್ ಮಲೇಷಿಯಾದ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ ಬಗ್ಗೆ ಯಾವುದೇ ದಾಖಲೆಗಳಿಲ್ಲ” ಎಂದು ಹೇಳಿದೆ.

ಈ ಹೇಳಿಕೆಯನ್ನು ಗೃಹ ಸಚಿವ ಮುಹಿದ್ದೀನ್ ಯಾಸಿನ್ ನೀಡಿದ್ದಾರೆ. ಎನ್ಆರ್ಡಿ 21 ಏಪ್ರಿಲ್ 2016 ರಂದು ಝಾಕಿರ್ ಅಬ್ದುಲ್ ಕರೀಮ್ ನಾಯಕ್ (ಸಾಮಾನ್ಯವಾಗಿ ಡಾ ಝಾಕಿರ್ ಎಂದು ಕರೆಯಲ್ಪಡುವ) ಗೆ ಮೈಪಿಆರ್ ನೀಡಿತು” ಎಂದು ಅವರು ಹೇಳಿದ್ದರು.

ಮಲೇಷ್ಯಾದ ರಾಷ್ಟ್ರೀಯ ನೋಂದಣಿ ಇಲಾಖೆ (ಎನ್‌ಆರ್‌ಡಿ) ಶಾಶ್ವತ ನಿವಾಸಿಗಳಿಗೆ ಮೈಪಿಆರ್ ಕಾರ್ಡ್‌ಗಳನ್ನು ನೀಡುತ್ತದೆ.

ಆಗಸ್ಟ್ 11, 2019 ರಂದು ಮಲೇಷ್ಯಾದ ಕೋಟಾ ಬಹ್ರುನಲ್ಲಿ ಮಾಡಿದ ಭಾಷಣದಲ್ಲಿ ಝಾಕಿರ್‌ ನಾಯಕ್ ಚೀನೀಯರ ವಿರುದ್ಧ ಅವರನ್ನು “ಅತಿಥಿಗಳು” ಎಂದು ಜನಾಂಗೀಯ ಟೀಕೆಗಳನ್ನು ವ್ಯಕ್ತಪಡಿಸಿದ ನಂತರ ಈ ಹೇಳಿಕೆ ಬಂದಿದ್ದವು. ಝಾಕಿರ್‌ ನಾಯಕ್ ಅವರ ಶಾಶ್ವತ ನಿವಾಸಿ ಸ್ಥಾನವನ್ನು ಕಿತ್ತುಕೊಳ್ಳಬಹುದು ಎಂದು ಪ್ರಧಾನಮಂತ್ರಿ ಮಹಾತಿರ್ ಅವರ ಹೇಳಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.

“ಅವರಿಗೆ (ಝಾಕಿರ್‌ ನಾಯಕ್) ಪಿಆರ್ ಸ್ಥಾನಮಾನವಿದೆ. ಅವರು ರಾಷ್ಟ್ರದ ನೆಮ್ಮದಿಗೆ ಹಾನಿಕಾರಕವಾದದ್ದನ್ನು ಮಾಡಿದರೆ ನಾವು ಅದನ್ನು ಕಿತ್ತುಕೊಳ್ಳಬಹುದು. ಈ ಕ್ಷಣದಲ್ಲಿ, ಅವರು ಅದನ್ನು ಮಾಡುತ್ತಿದ್ದಾನೋ ಇಲ್ಲವೋ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರು ಅದನ್ನು ಮಾಡುತ್ತಿದ್ದರೆ, ಅವರ ಪಿಆರ್ ಸ್ಥಾನಮಾನವನ್ನು ನಾವು ಕಿತ್ತುಕೊಳ್ಳುವುದು ಅವಶ್ಯಕ.” ಎಂದು ಪ್ರಧಾನ ಮಂತ್ರಿ ಮಹಾತಿರ್‌ ಹೇಳಿದ್ದರು.

ಆದರೆ, ಮಲೇಷ್ಯಾ ಸರ್ಕಾರವು ನಾಯಕ್‌ಗೆ ಪೌರತ್ವ ನೀಡಿದ ಬಗ್ಗೆ ಯಾವುದೇ ವರದಿಗಳಿಲ್ಲ. ಸ್ಪಷ್ಟವಾಗಿ ಹೇಳಬೇಕಾದರೆ ಹಳೆಯ ಚಿತ್ರವನ್ನು ಸಂದರ್ಭಕ್ಕೆ ಹೊರತಾಗಿ ಹಂಚಿಕೊಳ್ಳಲಾಗಿದೆ.


ಓದಿ:  ಹಿಂದೂ ದೇವಾಲಯದಲ್ಲಿ ಏಸು ಫೋಟೊ ಇಟ್ಟು ಪೂಜೆ ಮಾಡಲು SP ದಿವ್ಯಾ ಸಾರಾ ಥಾಮಸ್ ಒತ್ತಾಯಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...