Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ಫ್ಯಾಕ್ಟ್‌‌ಚೆಕ್: ಝಾಕಿರ್‌ ನಾಯಕ್‌ಗೆ ಮಲೇಷಿಯನ್ ಪೌರತ್ವ ನೀಡಲಾಗಿದೆಯೆ?

ಧರ್ಮಗಳ ನಡುವೆ ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆಂಬ ಆರೋಪ ಹೊತ್ತಿರುವ ಝಾಕಿರ್‌ ನಾಯಕ್ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಯ ವಾಂಟೆಡ್ ಪಟ್ಟಿಯಲ್ಲಿದ್ದಾರೆ.

- Advertisement -
- Advertisement -

ವಿವಾದಾತ್ಮಕ ಬೋಧಕ ಝಾಕಿರ್ ನಾಯಕ್‌ಗೆ ಮಲೇಷ್ಯಾದಲ್ಲಿ ಪೌರತ್ವ ನೀಡಲಾಗಿದೆ ಎಂಬ ಹೇಳಿಕೆಯಿರುವ ಚಿತ್ರವೊಂದು 2017 ರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಧರ್ಮಗಳ ನಡುವೆ ದ್ವೇಷವನ್ನು ಹುಟ್ಟುಹಾಕುತ್ತಿದ್ದಾರೆಂಬ ಆರೋಪ ಹೊತ್ತಿರುವ ಝಾಕಿರ್‌ ನಾಯಕ್ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಯ ವಾಂಟೆಡ್ ಪಟ್ಟಿಯಲ್ಲಿದ್ದಾರೆ.

ಝಾಕಿರ್ ನಾಯಕ್ ಅವರಿಗೆ ಮಲೇಷ್ಯಾ ಸಂಪೂರ್ಣ ಪೌರತ್ವ ನೀಡಿದೆ ಎಂಬ ಹೇಳಿಕೆಯೊಂದಿಗೆ ಈ ಚಿತ್ರ 2017 ರಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. “Drzakirnaikofficial” ಎಂಬ ಬಳಕೆದಾರರ ಹೆಸರಿನಲ್ಲಿ ಕಾರ್ಯನಿರ್ವಹಿಸುವ Instagram ಪುಟವು ಸೆಪ್ಟೆಂಬರ್ 2019 ರಲ್ಲಿ ಚಿತ್ರವನ್ನು ಅಪ್‌ಲೋಡ್ ಮಾಡಿತ್ತು. ಅಂದಿನಿಂದ ಇದು 39 ಸಾವಿರಕ್ಕೂ ಹೆಚ್ಚು ಲೈಕ್‌ಗಳನ್ನು ಗಳಿಸಿದೆ.

ಆರ್ಕೈವ್‌ ಇಲ್ಲಿದೆ.

ಆದರೆ ಈ ಚಿತ್ರವು 2020 ರ ಆಗಸ್ಟ್‌ನಿಂದ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ ತೊಡಗಿದೆ. ಫೇಸ್‌ಬುಕ್ ಹಾಗೂ ಟ್ವಿಟರ್‌ ನಂತಹ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಹಲವರು ಜನರು ಇದನ್ನು ಶೇರ್‌ ಮಾಡುತ್ತಿದ್ದಾರೆ.

ಆರ್ಕೈವ್ ಇಲ್ಲಿದೆ. 

ಫ್ಯಾಕ್ಟ್‌‌ಚೆಕ್‌

ಈ ಚಿತ್ರವು ”ಪಾರ್ಟಿ ಬೂಮಿಪುಟೆರಾ ಪರ್ಕಾಸಾ ಮಲೇಷ್ಯಾ” ಪಕ್ಷವನ್ನು ಸ್ಥಾಪಿಸಿದ ಮಲೇಷಿಯಾದ ಬಲಪಂಥೀಯ ರಾಜಕೀಯ ಮುಖಂಡ ಇಬ್ರಾಹಿಂ ಅಲಿ ಮತ್ತು ಮಲಯ ಮೂಲದ ಸಂಸ್ಥೆ ”ಪೆರ್ಟುಬುಹಾನ್ ಪ್ರಿಬುಮಿ ಪೆರ್ಕಾಸಾ” ಝಾಕಿರ್ ನಾಯಕ್‌ಗೆ 2017 ರಂದು ‘ವಾರಿಯರ್ ಪ್ರಶಸ್ತಿ’ ನೀಡಿ ಗೌರವಿಸಿದಾಗಿನ ಚಿತ್ರವಾಗಿದೆ.

ರಿವರ್ಸ್ ಇಮೇಜ್ ಮೂಲಕ ಈ ಚಿತ್ರವನ್ನು ಹುಡುಕಾಡಿದಾಗ ಮಲಯ ಭಾಷೆಯ ದಿನಪತ್ರಿಕೆ ”ಬೆರಿಟಾ ಹರಿಯನ್”  ವರದಿಯೊಂದರಲ್ಲಿ ಈ ಚಿತ್ರವನ್ನು ಬಳಸಲಾಗಿದೆ. ಅದು 16 ಏಪ್ರಿಲ್, 2017 ರ ಚಿತ್ರವಾಗಿದೆ ಎಂದು ಈ ಮೂಲಕ ತಿಳಿಯಬಹುದು.

ಈ ಲೇಖನದಲ್ಲಿ ”ಝಾಕಿರ್ ನಾಯಕ್‌ಗೆ ಪರ್ಕಾಸಾ ನೆಗರಾ ಸ್ಥಳೀಯ ಹೀರೋ ಸ್ಟಾರ್‌, ಇದು ಮಲೇಷ್ಯಾದ ಸ್ಥಳೀಯ ಸಂಘಟನೆ ಪೆರ್ಕಾಸಾದ ಅತ್ಯುನ್ನತ ಪ್ರಶಸ್ತಿ” ಎಂದು ಲೇಖನದಲ್ಲಿ ತಿಳಿಸಲಾಗಿದೆ.

ಸಮಾರಂಭವು ಮಲೇಷ್ಯಾ ವಿಶ್ವವಿದ್ಯಾಲಯದಲ್ಲಿ ನಡೆದ ‘ಇಜ್ತಿಮಕ್ 150 ಮಲೇಷಿಯಾ ಇಸ್ಲಾಮಿಕ್ ಸ್ಕಾಲರ್ಸ್‌’ ಎಂಬ ಕಾರ್ಯಕ್ರಮದ ಭಾಗವಾಗಿದ್ದು, ಅದರಲ್ಲಿ ‘ಇಸ್ಲಾಮೋಫೋಬಿಯಾವನ್ನು ನಿಭಾಯಿಸುವುದು’ ಎಂಬ ವಿಷಯದ ಕುರಿತು ಝಾಕಿರ್‌ ನಾಯಕ್ ಮಾತನಾಡಿದ್ದರು.

ಈ ಚಿತ್ರವನ್ನು ಇಂಗ್ಲಿಷ್ ಭಾಷೆಯ ಮಲಯೇಶಿಯನ್ ಪತ್ರಿಕೆ ನ್ಯೂ ಸ್ಟ್ರೈಟ್ಸ್ ಟೈಮ್ಸ್ ಪ್ರೆಸ್ (ಎನ್‌ಎಸ್‌ಟಿಪಿ) ಛಾಯಾಗ್ರಾಹಕ ಮೊಹಮ್ಮದ್ ಯುಸ್ನಿ ಆರಿಫಿನ್‌ಗೆ ಕ್ಲಿಕ್ಕಿಸಿದ್ದರು.

ಝಾಕಿರ್ ನಾಯಕ್ ಮಲೇಷಿಯನ್ ನಾಗರಿಕನಾ?

ಢಾಕಾ ಕೆಫೆಯ ಮೇಲೆ ನಡೆದ ದಾಳಿಯಲ್ಲಿ ಆರೋಪಿಗಳು ಝಾಕಿರ್‌ ನಾಯಕ್ ಭಾಷಣಗಳಿಂದ ಪ್ರೇರಿತರಾಗಿದ್ದಾರೆಂದು ತಿಳಿದುಬಂದ ನಂತರ ಝಾಕಿರ್ ನಾಯಕ್ ಜುಲೈ 2016 ರಲ್ಲಿ ಮಲೇಷ್ಯಾಕ್ಕೆ ಪಲಾಯನ ಮಾಡಿದ್ದರು.

22 ಅಕ್ಟೋಬರ್ 2019 ರ ಆನ್‌ಲೈನ್ ನ್ಯೂಸ್ ಪೋರ್ಟಲ್, ಮಲೇಶಿಯಾಕಿನಿ ಎಂಬ ಸುದ್ದಿಯ ವರದಿಯಲ್ಲಿ, “ವಿವಾದಾತ್ಮಕ ಬೋಧಕ ಡಾ. ಝಾಕಿರ್ ನಾಯಕ್ ಮಲೇಷಿಯಾದ ಪೌರತ್ವಕ್ಕಾಗಿ ಅರ್ಜಿ ಸಲ್ಲಿಸಿದ ಬಗ್ಗೆ ಯಾವುದೇ ದಾಖಲೆಗಳಿಲ್ಲ” ಎಂದು ಹೇಳಿದೆ.

ಈ ಹೇಳಿಕೆಯನ್ನು ಗೃಹ ಸಚಿವ ಮುಹಿದ್ದೀನ್ ಯಾಸಿನ್ ನೀಡಿದ್ದಾರೆ. ಎನ್ಆರ್ಡಿ 21 ಏಪ್ರಿಲ್ 2016 ರಂದು ಝಾಕಿರ್ ಅಬ್ದುಲ್ ಕರೀಮ್ ನಾಯಕ್ (ಸಾಮಾನ್ಯವಾಗಿ ಡಾ ಝಾಕಿರ್ ಎಂದು ಕರೆಯಲ್ಪಡುವ) ಗೆ ಮೈಪಿಆರ್ ನೀಡಿತು” ಎಂದು ಅವರು ಹೇಳಿದ್ದರು.

ಮಲೇಷ್ಯಾದ ರಾಷ್ಟ್ರೀಯ ನೋಂದಣಿ ಇಲಾಖೆ (ಎನ್‌ಆರ್‌ಡಿ) ಶಾಶ್ವತ ನಿವಾಸಿಗಳಿಗೆ ಮೈಪಿಆರ್ ಕಾರ್ಡ್‌ಗಳನ್ನು ನೀಡುತ್ತದೆ.

ಆಗಸ್ಟ್ 11, 2019 ರಂದು ಮಲೇಷ್ಯಾದ ಕೋಟಾ ಬಹ್ರುನಲ್ಲಿ ಮಾಡಿದ ಭಾಷಣದಲ್ಲಿ ಝಾಕಿರ್‌ ನಾಯಕ್ ಚೀನೀಯರ ವಿರುದ್ಧ ಅವರನ್ನು “ಅತಿಥಿಗಳು” ಎಂದು ಜನಾಂಗೀಯ ಟೀಕೆಗಳನ್ನು ವ್ಯಕ್ತಪಡಿಸಿದ ನಂತರ ಈ ಹೇಳಿಕೆ ಬಂದಿದ್ದವು. ಝಾಕಿರ್‌ ನಾಯಕ್ ಅವರ ಶಾಶ್ವತ ನಿವಾಸಿ ಸ್ಥಾನವನ್ನು ಕಿತ್ತುಕೊಳ್ಳಬಹುದು ಎಂದು ಪ್ರಧಾನಮಂತ್ರಿ ಮಹಾತಿರ್ ಅವರ ಹೇಳಿರುವುದಾಗಿ ಎನ್ಡಿಟಿವಿ ವರದಿ ಮಾಡಿದೆ.

“ಅವರಿಗೆ (ಝಾಕಿರ್‌ ನಾಯಕ್) ಪಿಆರ್ ಸ್ಥಾನಮಾನವಿದೆ. ಅವರು ರಾಷ್ಟ್ರದ ನೆಮ್ಮದಿಗೆ ಹಾನಿಕಾರಕವಾದದ್ದನ್ನು ಮಾಡಿದರೆ ನಾವು ಅದನ್ನು ಕಿತ್ತುಕೊಳ್ಳಬಹುದು. ಈ ಕ್ಷಣದಲ್ಲಿ, ಅವರು ಅದನ್ನು ಮಾಡುತ್ತಿದ್ದಾನೋ ಇಲ್ಲವೋ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರು ಅದನ್ನು ಮಾಡುತ್ತಿದ್ದರೆ, ಅವರ ಪಿಆರ್ ಸ್ಥಾನಮಾನವನ್ನು ನಾವು ಕಿತ್ತುಕೊಳ್ಳುವುದು ಅವಶ್ಯಕ.” ಎಂದು ಪ್ರಧಾನ ಮಂತ್ರಿ ಮಹಾತಿರ್‌ ಹೇಳಿದ್ದರು.

ಆದರೆ, ಮಲೇಷ್ಯಾ ಸರ್ಕಾರವು ನಾಯಕ್‌ಗೆ ಪೌರತ್ವ ನೀಡಿದ ಬಗ್ಗೆ ಯಾವುದೇ ವರದಿಗಳಿಲ್ಲ. ಸ್ಪಷ್ಟವಾಗಿ ಹೇಳಬೇಕಾದರೆ ಹಳೆಯ ಚಿತ್ರವನ್ನು ಸಂದರ್ಭಕ್ಕೆ ಹೊರತಾಗಿ ಹಂಚಿಕೊಳ್ಳಲಾಗಿದೆ.


ಓದಿ:  ಹಿಂದೂ ದೇವಾಲಯದಲ್ಲಿ ಏಸು ಫೋಟೊ ಇಟ್ಟು ಪೂಜೆ ಮಾಡಲು SP ದಿವ್ಯಾ ಸಾರಾ ಥಾಮಸ್ ಒತ್ತಾಯಿಸಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...