Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

- Advertisement -
- Advertisement -

ಗುಜರಾತ್‌ನಲ್ಲಿ ಹೈಕೋರ್ಟ್ ಸಂಪೂರ್ಣ ಮೀಸಲಾತಿ ರದ್ದುಗೊಳಿಸಿದೆ ಎಂಬ ಒಂದು ಪೋಸ್ಟ್‌ ಸಾಮಾಜಿಕ ಜಾಲತಾಣಗಳಾದ ಟ್ವಿಟರ್‌, ಫೇಸ್‌ಬುಕ್‌, ವಾಟ್ಸಾಪ್‌ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆ ವೈರಲ್ ಪೋಸ್ಟ್‌ನಲ್ಲಿ, “ಗುಜರಾತ್‌ ಹೈಕೋರ್ಟ್‌ ಮೀಸಲಾತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ. ಮೀಸಲಾತಿ ರದ್ದುಗೊಳಿಸಿದ ದೇಶದ ಮೊದಲ ರಾಜ್ಯ ಗುಜರಾತ್‌ ಆಗಿದೆ. ಅಲ್ಲಿ, ಸರ್ಕಾರಿ ಉದ್ಯೋಗವಾಗಲಿ ಅಥವಾ ಖಾಸಗಿ ಉದ್ಯೋಗವಾಗಿ ಇನ್ನು ಮುಂದೆ ಮೀಸಲಾತಿ ಇರುವುದಿಲ್ಲ” ಎಂದು ಹೇಳಿಕೊಳ್ಳಲಾಗಿದೆ. 

ವೈರಲ್ ಆಗಿರುವ ಪೋಸ್ಟ್‌ನಲ್ಲಿ, ಮುಂದಿನ 25 ವರ್ಷಗಳಲ್ಲಿ, ಮೀಸಲಾತಿಯು ಶಿಕ್ಷಣ, ಉದ್ಯೋಗಗಳು, ಪ್ರಯಾಣ, ಹೋಟೆಲ್ ಬುಕಿಂಗ್ ಇತ್ಯಾದಿಗಳಿಗೆ ಅನ್ವಯಿಸುವುದಿಲ್ಲ ಎಂದು ಹೇಳಲಾಗಿದೆ. ಅಲ್ಲದೆ, ವೈರಲ್ ಪೋಸ್ಟ್ ಜೊತೆಗೆ ಟೈಮ್ಸ್ ಆಫ್ ಇಂಡಿಯಾ ಲೇಖನದ ಲಿಂಕ್ ಅನ್ನು ಸಹ ಹಂಚಿಕೊಳ್ಳಲಾಗಿದೆ. ಈ ಸಂದೇಶವು 2020ರಲ್ಲೂ ವೈರಲ್ ಆಗಿತ್ತು. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ. 

ಈ ವೈರಲ್ ಪೋಸ್ಟ್‌ನ ಕೀವರ್ಡ್‌ಗಳನ್ನು ಬಳಿಸಿಕೊಂಡು ಗೂಗಲ್‌ನಲ್ಲಿ ಹುಡುಕಿದಾಗ, ಇದಕ್ಕೆ ಸಂಬಂಧಿಸಿದ ಯಾವುದೇ ಸುದ್ದಿ ಕಂಡುಬಂದಿಲ್ಲ. ಗುಜರಾತ್ ಹೈಕೋರ್ಟ್ ರಾಜ್ಯದಲ್ಲಿ ಮೀಸಲಾತಿಯನ್ನು ರದ್ದುಪಡಿಸಲು ನಿರ್ಧರಿಸಿದ್ದರೆ, ಅದು ರಾಷ್ಟ್ರೀಯ ವಿಷಯವಾಗುತ್ತಿತ್ತು ಮತ್ತು ಎಲ್ಲಾ ಮಾಧ್ಯಮ ಸಂಸ್ಥೆಗಳು ಅದನ್ನು ವರದಿ ಮಾಡುತ್ತಿದ್ದವು. ಆದರೆ ಈ ವೈರಲ್ ಹೇಳಿಕೆಯನ್ನು ದೃಢೀಕರಿಸುವ ಯಾವುದೇ ಅಧಿಕೃತ ವರದಿಯು ನಮಗೆ ದೊರೆತಿಲ್ಲ.

ಹೆಚ್ಚಿನ ತನಿಖೆಗಾಗಿ, ಗುಜರಾತ್ ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿದಾಗಲೂ, ವೈರಲ್ ಕ್ಲೈಮ್ ಅನ್ನು ಮೌಲ್ಯೀಕರಿಸುವ ಯಾವುದೇ ಪುರಾವೆಗಳು ಅಲ್ಲಿ ದೊರೆತಿಲ್ಲ. ಆದರೆ, ಗುಜರಾತ್ ಹೈಕೋರ್ಟ್ ವೆಬ್‌ಸೈಟ್‌ನ ನೇಮಕಾತಿ ವಿಭಾಗದ ಪ್ರಸ್ತುತ ಆರಂಭಿಕ ವಿಭಾಗದಲ್ಲಿ ಇಂಗ್ಲಿಷ್ ಸ್ಟೆನೋಗ್ರಾಫರ್ ಗ್ರೇಡ್ II ರ 09 ಖಾಲಿ ಹುದ್ದೆಗಳ ನೇಮಕಾತಿಗಾಗಿ ಹೊರಡಿಸಿದ್ದ ಜಾಹೀರಾತು ದೊರೆತಿದೆ. ಹೈಕೋರ್ಟ್‌ನ ಈ ನೇಮಕಾತಿ ಜಾಹೀರಾತಿನಲ್ಲಿ 09 ಹುದ್ದೆಗಳನ್ನು ವಿವಿಧ ಮೀಸಲಾತಿ ವರ್ಗಗಳ ಪ್ರಕಾರ ವಿಂಗಡಿಸಲ್ಪಟ್ಟಿದೆ. ಇದರಿಂದ ಅಲ್ಲಿನ ನ್ಯಾಯಾಲಯವು ನೇಮಕಾತಿಯಲ್ಲಿ ಮೀಸಲಾತಿ ನಿಯಮಗಳನ್ನು ಪಾಲಿಸುತ್ತಿರುವುದು ಸ್ಪಷ್ಟವಾಗಿದೆ.

Image Credit: High Court of Gujarat

ವೈರಲ್ ಆಗುತ್ತಿರುವ ಪೋಸ್ಟ್‌ನ ವಿವರಣೆಯಲ್ಲಿ ಟೈಮ್ಸ್ ಆಫ್ ಇಂಡಿಯಾದ ಲಿಂಕ್ ಅನ್ನು ಸಹ ಹೊಂದಿದೆ. ಆ ಲೇಖನವು 11 ಸೆಪ್ಟೆಂಬರ್ 2015 ರದ್ದಾಗಿದೆ. ಸುಮಾರು 6 ವರ್ಷಗಳಷ್ಟು ಹಳೆಯದಾದ ಈ ಲೇಖನವು ಗುಜರಾತ್ ಹೈಕೋರ್ಟ್‌ನ ಆದೇಶವನ್ನು ವರದಿ ಮಾಡಿದೆ. ಅದರಲ್ಲಿ, ಅಭ್ಯರ್ಥಿಯ ಅರ್ಹತೆಯ ಗರಿಷ್ಟ ವಯಸ್ಸು ಸಾಮಾನ್ಯ ವರ್ಗದ ಕಟ್-ಆಫ್‌ಗಿನ್ನ ಹೆಚ್ಚಿದ್ದಾಗ ಅವರನ್ನು ಅರ್ಹ ಮೀಸಲು ವರ್ಗದ ಅಭ್ಯರ್ಥಿಗಳು (MRC) ಎಂದು ಪರಿಗಣಿಸಬೇಕು. ಅವರು ಸಾಮಾನ್ಯ ವರ್ಗದ ಕಟ್-ಆಫ್‌ಗಿಂತ ಹೆಚ್ಚು ಅಂಕಗಳನ್ನು ಪಡೆದಿದ್ದರೂ, ಅವರನ್ನು ಸಾಮಾನ್ಯ ವರ್ಗದಲ್ಲಿ ಇರಿಸಲಾಗುವುದಿಲ್ಲ ಎಂದು ನ್ಯಾಯಾಲಯವು ತೀರ್ಪು ನೀಡಿದೆ. ಈ ಲೇಖನದಲ್ಲಿಯೂ ಗುಜರಾತ್ ಹೈಕೋರ್ಟ್ ರಾಜ್ಯದಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆ ಎಂದು ಸುಳಿವು ನೀಡುವ ಯಾವ ಅಂಶವೂ ಕಂಡುಬಂದಿಲ್ಲ.

ಲೇಖನದ ಮುಖ್ಯಾಂಶವು, “ಕೋಟಾ ಅಭ್ಯರ್ಥಿಗಳು ವಯೋಮಿತಿ ಸಡಿಲಿಕೆಯನ್ನು ಪಡೆದ್ದಾಗ, ಅವರನ್ನು ಸಾಮಾನ್ಯ ವರ್ಗಕ್ಕೆ ಬದಲಾಯಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಗುಜರಾತ್ ಹೈಕೋರ್ಟ್ ಹೇಳಿದೆ. ಹೀಗಾಗಿ, ಗುಜರಾತ್‌ ಹೈಕೋರ್ಟ್‌ ಗುಜರಾತ್‌ನಲ್ಲಿ ಮೀಸಲಾತಿಯನ್ನು ರದ್ದುಪಡಿಸಿದೆ ಎಂದು ತಪ್ಪಾಗಿ ಹೇಳಿಕೊಂಡು ವೈರಲ್‌ ಆಗುತ್ತಿರುವ ಪೋಸ್ಟ್‌ ಸುಳ್ಳಾಗಿದ್ದು, ಜನರನ್ನು ದಾರಿ ತಪ್ಪಿಸುವುದರ ಜೊತೆಗೆ, ಮೀಸಲಾತಿಯ ವಿರುದ್ದ ಪ್ರಚೋದನೆಯನ್ನು ನೀಡುತ್ತಿದೆ. 

ಮೀಸಲಾತಿ ಕುರಿತು ಒಂದಿಷ್ಟು

ಮೀಸಲಾತಿ ಎಂಬುದು ಬಡತನ ನಿವಾರಣ ಕಾರ್ಯಕ್ರಮವಲ್ಲ. ಸಮಾನತೆ ಹಾಗೂ ಪರಿವರ್ತನೆ ತರುವ ಕಾರ್ಯಕ್ರಮವೂ ಅಲ್ಲ. ಬದಲಿಗೆ ಇರುವ ವ್ಯವಸ್ಥೆಯಲ್ಲೇ ಪ್ರಾತಿನಿಧ್ಯವನ್ನು ಖಾತರಿಗೊಳಿಸುವ ಮೂಲಕ ಸಾಮಾಜಿಕ ನ್ಯಾಯವನ್ನು ಜಾರಿಗೊಳಿಸುವ ಕಾರ್ಯಕ್ರಮವಾಗಿದೆ. ಅದು ಸಾಮಾಜಿಕ ಸಮಾನತೆಯ ತಳಹದಿಯಲ್ಲಿರಬೇಕೆ ಹೊರತು ಆರ್ಥಿಕ ತಳಹದಿಯಲ್ಲಿ ಅಲ್ಲ ಎಂಬ ಚರ್ಚೆ ಹಿಂದಿನಿಂದಲೂ ಇದೆ.

ಇದನ್ನೂ ಓದಿ: EWS ಎಂಬ ಕಣ್ಕಟ್ಟಿನ ಮೀಸಲಾತಿ; ಸುಪ್ರೀಂಕೋರ್ಟ್‌ನಲ್ಲಾದರೂ ನ್ಯಾಯ ದೊರಕುವುದೇ?


ಇದನ್ನೂ ಓದಿ: Fact Check: ಬಿಪಿನ್ ರಾವತ್‌ರವರ ಹೆಲಿಕಾಪ್ಟರ್ ಪತನ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...