Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

- Advertisement -
- Advertisement -

ಗುಜರಾತ್‌ನಲ್ಲಿ ಹೈಕೋರ್ಟ್ ಸಂಪೂರ್ಣ ಮೀಸಲಾತಿ ರದ್ದುಗೊಳಿಸಿದೆ ಎಂಬ ಒಂದು ಪೋಸ್ಟ್‌ ಸಾಮಾಜಿಕ ಜಾಲತಾಣಗಳಾದ ಟ್ವಿಟರ್‌, ಫೇಸ್‌ಬುಕ್‌, ವಾಟ್ಸಾಪ್‌ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆ ವೈರಲ್ ಪೋಸ್ಟ್‌ನಲ್ಲಿ, “ಗುಜರಾತ್‌ ಹೈಕೋರ್ಟ್‌ ಮೀಸಲಾತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ. ಮೀಸಲಾತಿ ರದ್ದುಗೊಳಿಸಿದ ದೇಶದ ಮೊದಲ ರಾಜ್ಯ ಗುಜರಾತ್‌ ಆಗಿದೆ. ಅಲ್ಲಿ, ಸರ್ಕಾರಿ ಉದ್ಯೋಗವಾಗಲಿ ಅಥವಾ ಖಾಸಗಿ ಉದ್ಯೋಗವಾಗಿ ಇನ್ನು ಮುಂದೆ ಮೀಸಲಾತಿ ಇರುವುದಿಲ್ಲ” ಎಂದು ಹೇಳಿಕೊಳ್ಳಲಾಗಿದೆ. 

ವೈರಲ್ ಆಗಿರುವ ಪೋಸ್ಟ್‌ನಲ್ಲಿ, ಮುಂದಿನ 25 ವರ್ಷಗಳಲ್ಲಿ, ಮೀಸಲಾತಿಯು ಶಿಕ್ಷಣ, ಉದ್ಯೋಗಗಳು, ಪ್ರಯಾಣ, ಹೋಟೆಲ್ ಬುಕಿಂಗ್ ಇತ್ಯಾದಿಗಳಿಗೆ ಅನ್ವಯಿಸುವುದಿಲ್ಲ ಎಂದು ಹೇಳಲಾಗಿದೆ. ಅಲ್ಲದೆ, ವೈರಲ್ ಪೋಸ್ಟ್ ಜೊತೆಗೆ ಟೈಮ್ಸ್ ಆಫ್ ಇಂಡಿಯಾ ಲೇಖನದ ಲಿಂಕ್ ಅನ್ನು ಸಹ ಹಂಚಿಕೊಳ್ಳಲಾಗಿದೆ. ಈ ಸಂದೇಶವು 2020ರಲ್ಲೂ ವೈರಲ್ ಆಗಿತ್ತು. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ. 

ಈ ವೈರಲ್ ಪೋಸ್ಟ್‌ನ ಕೀವರ್ಡ್‌ಗಳನ್ನು ಬಳಿಸಿಕೊಂಡು ಗೂಗಲ್‌ನಲ್ಲಿ ಹುಡುಕಿದಾಗ, ಇದಕ್ಕೆ ಸಂಬಂಧಿಸಿದ ಯಾವುದೇ ಸುದ್ದಿ ಕಂಡುಬಂದಿಲ್ಲ. ಗುಜರಾತ್ ಹೈಕೋರ್ಟ್ ರಾಜ್ಯದಲ್ಲಿ ಮೀಸಲಾತಿಯನ್ನು ರದ್ದುಪಡಿಸಲು ನಿರ್ಧರಿಸಿದ್ದರೆ, ಅದು ರಾಷ್ಟ್ರೀಯ ವಿಷಯವಾಗುತ್ತಿತ್ತು ಮತ್ತು ಎಲ್ಲಾ ಮಾಧ್ಯಮ ಸಂಸ್ಥೆಗಳು ಅದನ್ನು ವರದಿ ಮಾಡುತ್ತಿದ್ದವು. ಆದರೆ ಈ ವೈರಲ್ ಹೇಳಿಕೆಯನ್ನು ದೃಢೀಕರಿಸುವ ಯಾವುದೇ ಅಧಿಕೃತ ವರದಿಯು ನಮಗೆ ದೊರೆತಿಲ್ಲ.

ಹೆಚ್ಚಿನ ತನಿಖೆಗಾಗಿ, ಗುಜರಾತ್ ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿದಾಗಲೂ, ವೈರಲ್ ಕ್ಲೈಮ್ ಅನ್ನು ಮೌಲ್ಯೀಕರಿಸುವ ಯಾವುದೇ ಪುರಾವೆಗಳು ಅಲ್ಲಿ ದೊರೆತಿಲ್ಲ. ಆದರೆ, ಗುಜರಾತ್ ಹೈಕೋರ್ಟ್ ವೆಬ್‌ಸೈಟ್‌ನ ನೇಮಕಾತಿ ವಿಭಾಗದ ಪ್ರಸ್ತುತ ಆರಂಭಿಕ ವಿಭಾಗದಲ್ಲಿ ಇಂಗ್ಲಿಷ್ ಸ್ಟೆನೋಗ್ರಾಫರ್ ಗ್ರೇಡ್ II ರ 09 ಖಾಲಿ ಹುದ್ದೆಗಳ ನೇಮಕಾತಿಗಾಗಿ ಹೊರಡಿಸಿದ್ದ ಜಾಹೀರಾತು ದೊರೆತಿದೆ. ಹೈಕೋರ್ಟ್‌ನ ಈ ನೇಮಕಾತಿ ಜಾಹೀರಾತಿನಲ್ಲಿ 09 ಹುದ್ದೆಗಳನ್ನು ವಿವಿಧ ಮೀಸಲಾತಿ ವರ್ಗಗಳ ಪ್ರಕಾರ ವಿಂಗಡಿಸಲ್ಪಟ್ಟಿದೆ. ಇದರಿಂದ ಅಲ್ಲಿನ ನ್ಯಾಯಾಲಯವು ನೇಮಕಾತಿಯಲ್ಲಿ ಮೀಸಲಾತಿ ನಿಯಮಗಳನ್ನು ಪಾಲಿಸುತ್ತಿರುವುದು ಸ್ಪಷ್ಟವಾಗಿದೆ.

Image Credit: High Court of Gujarat

ವೈರಲ್ ಆಗುತ್ತಿರುವ ಪೋಸ್ಟ್‌ನ ವಿವರಣೆಯಲ್ಲಿ ಟೈಮ್ಸ್ ಆಫ್ ಇಂಡಿಯಾದ ಲಿಂಕ್ ಅನ್ನು ಸಹ ಹೊಂದಿದೆ. ಆ ಲೇಖನವು 11 ಸೆಪ್ಟೆಂಬರ್ 2015 ರದ್ದಾಗಿದೆ. ಸುಮಾರು 6 ವರ್ಷಗಳಷ್ಟು ಹಳೆಯದಾದ ಈ ಲೇಖನವು ಗುಜರಾತ್ ಹೈಕೋರ್ಟ್‌ನ ಆದೇಶವನ್ನು ವರದಿ ಮಾಡಿದೆ. ಅದರಲ್ಲಿ, ಅಭ್ಯರ್ಥಿಯ ಅರ್ಹತೆಯ ಗರಿಷ್ಟ ವಯಸ್ಸು ಸಾಮಾನ್ಯ ವರ್ಗದ ಕಟ್-ಆಫ್‌ಗಿನ್ನ ಹೆಚ್ಚಿದ್ದಾಗ ಅವರನ್ನು ಅರ್ಹ ಮೀಸಲು ವರ್ಗದ ಅಭ್ಯರ್ಥಿಗಳು (MRC) ಎಂದು ಪರಿಗಣಿಸಬೇಕು. ಅವರು ಸಾಮಾನ್ಯ ವರ್ಗದ ಕಟ್-ಆಫ್‌ಗಿಂತ ಹೆಚ್ಚು ಅಂಕಗಳನ್ನು ಪಡೆದಿದ್ದರೂ, ಅವರನ್ನು ಸಾಮಾನ್ಯ ವರ್ಗದಲ್ಲಿ ಇರಿಸಲಾಗುವುದಿಲ್ಲ ಎಂದು ನ್ಯಾಯಾಲಯವು ತೀರ್ಪು ನೀಡಿದೆ. ಈ ಲೇಖನದಲ್ಲಿಯೂ ಗುಜರಾತ್ ಹೈಕೋರ್ಟ್ ರಾಜ್ಯದಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆ ಎಂದು ಸುಳಿವು ನೀಡುವ ಯಾವ ಅಂಶವೂ ಕಂಡುಬಂದಿಲ್ಲ.

ಲೇಖನದ ಮುಖ್ಯಾಂಶವು, “ಕೋಟಾ ಅಭ್ಯರ್ಥಿಗಳು ವಯೋಮಿತಿ ಸಡಿಲಿಕೆಯನ್ನು ಪಡೆದ್ದಾಗ, ಅವರನ್ನು ಸಾಮಾನ್ಯ ವರ್ಗಕ್ಕೆ ಬದಲಾಯಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಗುಜರಾತ್ ಹೈಕೋರ್ಟ್ ಹೇಳಿದೆ. ಹೀಗಾಗಿ, ಗುಜರಾತ್‌ ಹೈಕೋರ್ಟ್‌ ಗುಜರಾತ್‌ನಲ್ಲಿ ಮೀಸಲಾತಿಯನ್ನು ರದ್ದುಪಡಿಸಿದೆ ಎಂದು ತಪ್ಪಾಗಿ ಹೇಳಿಕೊಂಡು ವೈರಲ್‌ ಆಗುತ್ತಿರುವ ಪೋಸ್ಟ್‌ ಸುಳ್ಳಾಗಿದ್ದು, ಜನರನ್ನು ದಾರಿ ತಪ್ಪಿಸುವುದರ ಜೊತೆಗೆ, ಮೀಸಲಾತಿಯ ವಿರುದ್ದ ಪ್ರಚೋದನೆಯನ್ನು ನೀಡುತ್ತಿದೆ. 

ಮೀಸಲಾತಿ ಕುರಿತು ಒಂದಿಷ್ಟು

ಮೀಸಲಾತಿ ಎಂಬುದು ಬಡತನ ನಿವಾರಣ ಕಾರ್ಯಕ್ರಮವಲ್ಲ. ಸಮಾನತೆ ಹಾಗೂ ಪರಿವರ್ತನೆ ತರುವ ಕಾರ್ಯಕ್ರಮವೂ ಅಲ್ಲ. ಬದಲಿಗೆ ಇರುವ ವ್ಯವಸ್ಥೆಯಲ್ಲೇ ಪ್ರಾತಿನಿಧ್ಯವನ್ನು ಖಾತರಿಗೊಳಿಸುವ ಮೂಲಕ ಸಾಮಾಜಿಕ ನ್ಯಾಯವನ್ನು ಜಾರಿಗೊಳಿಸುವ ಕಾರ್ಯಕ್ರಮವಾಗಿದೆ. ಅದು ಸಾಮಾಜಿಕ ಸಮಾನತೆಯ ತಳಹದಿಯಲ್ಲಿರಬೇಕೆ ಹೊರತು ಆರ್ಥಿಕ ತಳಹದಿಯಲ್ಲಿ ಅಲ್ಲ ಎಂಬ ಚರ್ಚೆ ಹಿಂದಿನಿಂದಲೂ ಇದೆ.

ಇದನ್ನೂ ಓದಿ: EWS ಎಂಬ ಕಣ್ಕಟ್ಟಿನ ಮೀಸಲಾತಿ; ಸುಪ್ರೀಂಕೋರ್ಟ್‌ನಲ್ಲಾದರೂ ನ್ಯಾಯ ದೊರಕುವುದೇ?


ಇದನ್ನೂ ಓದಿ: Fact Check: ಬಿಪಿನ್ ರಾವತ್‌ರವರ ಹೆಲಿಕಾಪ್ಟರ್ ಪತನ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...