Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

- Advertisement -
- Advertisement -

ಗುಜರಾತ್‌ನಲ್ಲಿ ಹೈಕೋರ್ಟ್ ಸಂಪೂರ್ಣ ಮೀಸಲಾತಿ ರದ್ದುಗೊಳಿಸಿದೆ ಎಂಬ ಒಂದು ಪೋಸ್ಟ್‌ ಸಾಮಾಜಿಕ ಜಾಲತಾಣಗಳಾದ ಟ್ವಿಟರ್‌, ಫೇಸ್‌ಬುಕ್‌, ವಾಟ್ಸಾಪ್‌ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆ ವೈರಲ್ ಪೋಸ್ಟ್‌ನಲ್ಲಿ, “ಗುಜರಾತ್‌ ಹೈಕೋರ್ಟ್‌ ಮೀಸಲಾತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ. ಮೀಸಲಾತಿ ರದ್ದುಗೊಳಿಸಿದ ದೇಶದ ಮೊದಲ ರಾಜ್ಯ ಗುಜರಾತ್‌ ಆಗಿದೆ. ಅಲ್ಲಿ, ಸರ್ಕಾರಿ ಉದ್ಯೋಗವಾಗಲಿ ಅಥವಾ ಖಾಸಗಿ ಉದ್ಯೋಗವಾಗಿ ಇನ್ನು ಮುಂದೆ ಮೀಸಲಾತಿ ಇರುವುದಿಲ್ಲ” ಎಂದು ಹೇಳಿಕೊಳ್ಳಲಾಗಿದೆ. 

ವೈರಲ್ ಆಗಿರುವ ಪೋಸ್ಟ್‌ನಲ್ಲಿ, ಮುಂದಿನ 25 ವರ್ಷಗಳಲ್ಲಿ, ಮೀಸಲಾತಿಯು ಶಿಕ್ಷಣ, ಉದ್ಯೋಗಗಳು, ಪ್ರಯಾಣ, ಹೋಟೆಲ್ ಬುಕಿಂಗ್ ಇತ್ಯಾದಿಗಳಿಗೆ ಅನ್ವಯಿಸುವುದಿಲ್ಲ ಎಂದು ಹೇಳಲಾಗಿದೆ. ಅಲ್ಲದೆ, ವೈರಲ್ ಪೋಸ್ಟ್ ಜೊತೆಗೆ ಟೈಮ್ಸ್ ಆಫ್ ಇಂಡಿಯಾ ಲೇಖನದ ಲಿಂಕ್ ಅನ್ನು ಸಹ ಹಂಚಿಕೊಳ್ಳಲಾಗಿದೆ. ಈ ಸಂದೇಶವು 2020ರಲ್ಲೂ ವೈರಲ್ ಆಗಿತ್ತು. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ. 

ಈ ವೈರಲ್ ಪೋಸ್ಟ್‌ನ ಕೀವರ್ಡ್‌ಗಳನ್ನು ಬಳಿಸಿಕೊಂಡು ಗೂಗಲ್‌ನಲ್ಲಿ ಹುಡುಕಿದಾಗ, ಇದಕ್ಕೆ ಸಂಬಂಧಿಸಿದ ಯಾವುದೇ ಸುದ್ದಿ ಕಂಡುಬಂದಿಲ್ಲ. ಗುಜರಾತ್ ಹೈಕೋರ್ಟ್ ರಾಜ್ಯದಲ್ಲಿ ಮೀಸಲಾತಿಯನ್ನು ರದ್ದುಪಡಿಸಲು ನಿರ್ಧರಿಸಿದ್ದರೆ, ಅದು ರಾಷ್ಟ್ರೀಯ ವಿಷಯವಾಗುತ್ತಿತ್ತು ಮತ್ತು ಎಲ್ಲಾ ಮಾಧ್ಯಮ ಸಂಸ್ಥೆಗಳು ಅದನ್ನು ವರದಿ ಮಾಡುತ್ತಿದ್ದವು. ಆದರೆ ಈ ವೈರಲ್ ಹೇಳಿಕೆಯನ್ನು ದೃಢೀಕರಿಸುವ ಯಾವುದೇ ಅಧಿಕೃತ ವರದಿಯು ನಮಗೆ ದೊರೆತಿಲ್ಲ.

ಹೆಚ್ಚಿನ ತನಿಖೆಗಾಗಿ, ಗುಜರಾತ್ ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿದಾಗಲೂ, ವೈರಲ್ ಕ್ಲೈಮ್ ಅನ್ನು ಮೌಲ್ಯೀಕರಿಸುವ ಯಾವುದೇ ಪುರಾವೆಗಳು ಅಲ್ಲಿ ದೊರೆತಿಲ್ಲ. ಆದರೆ, ಗುಜರಾತ್ ಹೈಕೋರ್ಟ್ ವೆಬ್‌ಸೈಟ್‌ನ ನೇಮಕಾತಿ ವಿಭಾಗದ ಪ್ರಸ್ತುತ ಆರಂಭಿಕ ವಿಭಾಗದಲ್ಲಿ ಇಂಗ್ಲಿಷ್ ಸ್ಟೆನೋಗ್ರಾಫರ್ ಗ್ರೇಡ್ II ರ 09 ಖಾಲಿ ಹುದ್ದೆಗಳ ನೇಮಕಾತಿಗಾಗಿ ಹೊರಡಿಸಿದ್ದ ಜಾಹೀರಾತು ದೊರೆತಿದೆ. ಹೈಕೋರ್ಟ್‌ನ ಈ ನೇಮಕಾತಿ ಜಾಹೀರಾತಿನಲ್ಲಿ 09 ಹುದ್ದೆಗಳನ್ನು ವಿವಿಧ ಮೀಸಲಾತಿ ವರ್ಗಗಳ ಪ್ರಕಾರ ವಿಂಗಡಿಸಲ್ಪಟ್ಟಿದೆ. ಇದರಿಂದ ಅಲ್ಲಿನ ನ್ಯಾಯಾಲಯವು ನೇಮಕಾತಿಯಲ್ಲಿ ಮೀಸಲಾತಿ ನಿಯಮಗಳನ್ನು ಪಾಲಿಸುತ್ತಿರುವುದು ಸ್ಪಷ್ಟವಾಗಿದೆ.

Image Credit: High Court of Gujarat

ವೈರಲ್ ಆಗುತ್ತಿರುವ ಪೋಸ್ಟ್‌ನ ವಿವರಣೆಯಲ್ಲಿ ಟೈಮ್ಸ್ ಆಫ್ ಇಂಡಿಯಾದ ಲಿಂಕ್ ಅನ್ನು ಸಹ ಹೊಂದಿದೆ. ಆ ಲೇಖನವು 11 ಸೆಪ್ಟೆಂಬರ್ 2015 ರದ್ದಾಗಿದೆ. ಸುಮಾರು 6 ವರ್ಷಗಳಷ್ಟು ಹಳೆಯದಾದ ಈ ಲೇಖನವು ಗುಜರಾತ್ ಹೈಕೋರ್ಟ್‌ನ ಆದೇಶವನ್ನು ವರದಿ ಮಾಡಿದೆ. ಅದರಲ್ಲಿ, ಅಭ್ಯರ್ಥಿಯ ಅರ್ಹತೆಯ ಗರಿಷ್ಟ ವಯಸ್ಸು ಸಾಮಾನ್ಯ ವರ್ಗದ ಕಟ್-ಆಫ್‌ಗಿನ್ನ ಹೆಚ್ಚಿದ್ದಾಗ ಅವರನ್ನು ಅರ್ಹ ಮೀಸಲು ವರ್ಗದ ಅಭ್ಯರ್ಥಿಗಳು (MRC) ಎಂದು ಪರಿಗಣಿಸಬೇಕು. ಅವರು ಸಾಮಾನ್ಯ ವರ್ಗದ ಕಟ್-ಆಫ್‌ಗಿಂತ ಹೆಚ್ಚು ಅಂಕಗಳನ್ನು ಪಡೆದಿದ್ದರೂ, ಅವರನ್ನು ಸಾಮಾನ್ಯ ವರ್ಗದಲ್ಲಿ ಇರಿಸಲಾಗುವುದಿಲ್ಲ ಎಂದು ನ್ಯಾಯಾಲಯವು ತೀರ್ಪು ನೀಡಿದೆ. ಈ ಲೇಖನದಲ್ಲಿಯೂ ಗುಜರಾತ್ ಹೈಕೋರ್ಟ್ ರಾಜ್ಯದಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆ ಎಂದು ಸುಳಿವು ನೀಡುವ ಯಾವ ಅಂಶವೂ ಕಂಡುಬಂದಿಲ್ಲ.

ಲೇಖನದ ಮುಖ್ಯಾಂಶವು, “ಕೋಟಾ ಅಭ್ಯರ್ಥಿಗಳು ವಯೋಮಿತಿ ಸಡಿಲಿಕೆಯನ್ನು ಪಡೆದ್ದಾಗ, ಅವರನ್ನು ಸಾಮಾನ್ಯ ವರ್ಗಕ್ಕೆ ಬದಲಾಯಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಗುಜರಾತ್ ಹೈಕೋರ್ಟ್ ಹೇಳಿದೆ. ಹೀಗಾಗಿ, ಗುಜರಾತ್‌ ಹೈಕೋರ್ಟ್‌ ಗುಜರಾತ್‌ನಲ್ಲಿ ಮೀಸಲಾತಿಯನ್ನು ರದ್ದುಪಡಿಸಿದೆ ಎಂದು ತಪ್ಪಾಗಿ ಹೇಳಿಕೊಂಡು ವೈರಲ್‌ ಆಗುತ್ತಿರುವ ಪೋಸ್ಟ್‌ ಸುಳ್ಳಾಗಿದ್ದು, ಜನರನ್ನು ದಾರಿ ತಪ್ಪಿಸುವುದರ ಜೊತೆಗೆ, ಮೀಸಲಾತಿಯ ವಿರುದ್ದ ಪ್ರಚೋದನೆಯನ್ನು ನೀಡುತ್ತಿದೆ. 

ಮೀಸಲಾತಿ ಕುರಿತು ಒಂದಿಷ್ಟು

ಮೀಸಲಾತಿ ಎಂಬುದು ಬಡತನ ನಿವಾರಣ ಕಾರ್ಯಕ್ರಮವಲ್ಲ. ಸಮಾನತೆ ಹಾಗೂ ಪರಿವರ್ತನೆ ತರುವ ಕಾರ್ಯಕ್ರಮವೂ ಅಲ್ಲ. ಬದಲಿಗೆ ಇರುವ ವ್ಯವಸ್ಥೆಯಲ್ಲೇ ಪ್ರಾತಿನಿಧ್ಯವನ್ನು ಖಾತರಿಗೊಳಿಸುವ ಮೂಲಕ ಸಾಮಾಜಿಕ ನ್ಯಾಯವನ್ನು ಜಾರಿಗೊಳಿಸುವ ಕಾರ್ಯಕ್ರಮವಾಗಿದೆ. ಅದು ಸಾಮಾಜಿಕ ಸಮಾನತೆಯ ತಳಹದಿಯಲ್ಲಿರಬೇಕೆ ಹೊರತು ಆರ್ಥಿಕ ತಳಹದಿಯಲ್ಲಿ ಅಲ್ಲ ಎಂಬ ಚರ್ಚೆ ಹಿಂದಿನಿಂದಲೂ ಇದೆ.

ಇದನ್ನೂ ಓದಿ: EWS ಎಂಬ ಕಣ್ಕಟ್ಟಿನ ಮೀಸಲಾತಿ; ಸುಪ್ರೀಂಕೋರ್ಟ್‌ನಲ್ಲಾದರೂ ನ್ಯಾಯ ದೊರಕುವುದೇ?


ಇದನ್ನೂ ಓದಿ: Fact Check: ಬಿಪಿನ್ ರಾವತ್‌ರವರ ಹೆಲಿಕಾಪ್ಟರ್ ಪತನ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...