Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

- Advertisement -
- Advertisement -

ಗುಜರಾತ್‌ನಲ್ಲಿ ಹೈಕೋರ್ಟ್ ಸಂಪೂರ್ಣ ಮೀಸಲಾತಿ ರದ್ದುಗೊಳಿಸಿದೆ ಎಂಬ ಒಂದು ಪೋಸ್ಟ್‌ ಸಾಮಾಜಿಕ ಜಾಲತಾಣಗಳಾದ ಟ್ವಿಟರ್‌, ಫೇಸ್‌ಬುಕ್‌, ವಾಟ್ಸಾಪ್‌ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆ ವೈರಲ್ ಪೋಸ್ಟ್‌ನಲ್ಲಿ, “ಗುಜರಾತ್‌ ಹೈಕೋರ್ಟ್‌ ಮೀಸಲಾತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ. ಮೀಸಲಾತಿ ರದ್ದುಗೊಳಿಸಿದ ದೇಶದ ಮೊದಲ ರಾಜ್ಯ ಗುಜರಾತ್‌ ಆಗಿದೆ. ಅಲ್ಲಿ, ಸರ್ಕಾರಿ ಉದ್ಯೋಗವಾಗಲಿ ಅಥವಾ ಖಾಸಗಿ ಉದ್ಯೋಗವಾಗಿ ಇನ್ನು ಮುಂದೆ ಮೀಸಲಾತಿ ಇರುವುದಿಲ್ಲ” ಎಂದು ಹೇಳಿಕೊಳ್ಳಲಾಗಿದೆ. 

ವೈರಲ್ ಆಗಿರುವ ಪೋಸ್ಟ್‌ನಲ್ಲಿ, ಮುಂದಿನ 25 ವರ್ಷಗಳಲ್ಲಿ, ಮೀಸಲಾತಿಯು ಶಿಕ್ಷಣ, ಉದ್ಯೋಗಗಳು, ಪ್ರಯಾಣ, ಹೋಟೆಲ್ ಬುಕಿಂಗ್ ಇತ್ಯಾದಿಗಳಿಗೆ ಅನ್ವಯಿಸುವುದಿಲ್ಲ ಎಂದು ಹೇಳಲಾಗಿದೆ. ಅಲ್ಲದೆ, ವೈರಲ್ ಪೋಸ್ಟ್ ಜೊತೆಗೆ ಟೈಮ್ಸ್ ಆಫ್ ಇಂಡಿಯಾ ಲೇಖನದ ಲಿಂಕ್ ಅನ್ನು ಸಹ ಹಂಚಿಕೊಳ್ಳಲಾಗಿದೆ. ಈ ಸಂದೇಶವು 2020ರಲ್ಲೂ ವೈರಲ್ ಆಗಿತ್ತು. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ. 

ಈ ವೈರಲ್ ಪೋಸ್ಟ್‌ನ ಕೀವರ್ಡ್‌ಗಳನ್ನು ಬಳಿಸಿಕೊಂಡು ಗೂಗಲ್‌ನಲ್ಲಿ ಹುಡುಕಿದಾಗ, ಇದಕ್ಕೆ ಸಂಬಂಧಿಸಿದ ಯಾವುದೇ ಸುದ್ದಿ ಕಂಡುಬಂದಿಲ್ಲ. ಗುಜರಾತ್ ಹೈಕೋರ್ಟ್ ರಾಜ್ಯದಲ್ಲಿ ಮೀಸಲಾತಿಯನ್ನು ರದ್ದುಪಡಿಸಲು ನಿರ್ಧರಿಸಿದ್ದರೆ, ಅದು ರಾಷ್ಟ್ರೀಯ ವಿಷಯವಾಗುತ್ತಿತ್ತು ಮತ್ತು ಎಲ್ಲಾ ಮಾಧ್ಯಮ ಸಂಸ್ಥೆಗಳು ಅದನ್ನು ವರದಿ ಮಾಡುತ್ತಿದ್ದವು. ಆದರೆ ಈ ವೈರಲ್ ಹೇಳಿಕೆಯನ್ನು ದೃಢೀಕರಿಸುವ ಯಾವುದೇ ಅಧಿಕೃತ ವರದಿಯು ನಮಗೆ ದೊರೆತಿಲ್ಲ.

ಹೆಚ್ಚಿನ ತನಿಖೆಗಾಗಿ, ಗುಜರಾತ್ ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿದಾಗಲೂ, ವೈರಲ್ ಕ್ಲೈಮ್ ಅನ್ನು ಮೌಲ್ಯೀಕರಿಸುವ ಯಾವುದೇ ಪುರಾವೆಗಳು ಅಲ್ಲಿ ದೊರೆತಿಲ್ಲ. ಆದರೆ, ಗುಜರಾತ್ ಹೈಕೋರ್ಟ್ ವೆಬ್‌ಸೈಟ್‌ನ ನೇಮಕಾತಿ ವಿಭಾಗದ ಪ್ರಸ್ತುತ ಆರಂಭಿಕ ವಿಭಾಗದಲ್ಲಿ ಇಂಗ್ಲಿಷ್ ಸ್ಟೆನೋಗ್ರಾಫರ್ ಗ್ರೇಡ್ II ರ 09 ಖಾಲಿ ಹುದ್ದೆಗಳ ನೇಮಕಾತಿಗಾಗಿ ಹೊರಡಿಸಿದ್ದ ಜಾಹೀರಾತು ದೊರೆತಿದೆ. ಹೈಕೋರ್ಟ್‌ನ ಈ ನೇಮಕಾತಿ ಜಾಹೀರಾತಿನಲ್ಲಿ 09 ಹುದ್ದೆಗಳನ್ನು ವಿವಿಧ ಮೀಸಲಾತಿ ವರ್ಗಗಳ ಪ್ರಕಾರ ವಿಂಗಡಿಸಲ್ಪಟ್ಟಿದೆ. ಇದರಿಂದ ಅಲ್ಲಿನ ನ್ಯಾಯಾಲಯವು ನೇಮಕಾತಿಯಲ್ಲಿ ಮೀಸಲಾತಿ ನಿಯಮಗಳನ್ನು ಪಾಲಿಸುತ್ತಿರುವುದು ಸ್ಪಷ್ಟವಾಗಿದೆ.

Image Credit: High Court of Gujarat

ವೈರಲ್ ಆಗುತ್ತಿರುವ ಪೋಸ್ಟ್‌ನ ವಿವರಣೆಯಲ್ಲಿ ಟೈಮ್ಸ್ ಆಫ್ ಇಂಡಿಯಾದ ಲಿಂಕ್ ಅನ್ನು ಸಹ ಹೊಂದಿದೆ. ಆ ಲೇಖನವು 11 ಸೆಪ್ಟೆಂಬರ್ 2015 ರದ್ದಾಗಿದೆ. ಸುಮಾರು 6 ವರ್ಷಗಳಷ್ಟು ಹಳೆಯದಾದ ಈ ಲೇಖನವು ಗುಜರಾತ್ ಹೈಕೋರ್ಟ್‌ನ ಆದೇಶವನ್ನು ವರದಿ ಮಾಡಿದೆ. ಅದರಲ್ಲಿ, ಅಭ್ಯರ್ಥಿಯ ಅರ್ಹತೆಯ ಗರಿಷ್ಟ ವಯಸ್ಸು ಸಾಮಾನ್ಯ ವರ್ಗದ ಕಟ್-ಆಫ್‌ಗಿನ್ನ ಹೆಚ್ಚಿದ್ದಾಗ ಅವರನ್ನು ಅರ್ಹ ಮೀಸಲು ವರ್ಗದ ಅಭ್ಯರ್ಥಿಗಳು (MRC) ಎಂದು ಪರಿಗಣಿಸಬೇಕು. ಅವರು ಸಾಮಾನ್ಯ ವರ್ಗದ ಕಟ್-ಆಫ್‌ಗಿಂತ ಹೆಚ್ಚು ಅಂಕಗಳನ್ನು ಪಡೆದಿದ್ದರೂ, ಅವರನ್ನು ಸಾಮಾನ್ಯ ವರ್ಗದಲ್ಲಿ ಇರಿಸಲಾಗುವುದಿಲ್ಲ ಎಂದು ನ್ಯಾಯಾಲಯವು ತೀರ್ಪು ನೀಡಿದೆ. ಈ ಲೇಖನದಲ್ಲಿಯೂ ಗುಜರಾತ್ ಹೈಕೋರ್ಟ್ ರಾಜ್ಯದಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆ ಎಂದು ಸುಳಿವು ನೀಡುವ ಯಾವ ಅಂಶವೂ ಕಂಡುಬಂದಿಲ್ಲ.

ಲೇಖನದ ಮುಖ್ಯಾಂಶವು, “ಕೋಟಾ ಅಭ್ಯರ್ಥಿಗಳು ವಯೋಮಿತಿ ಸಡಿಲಿಕೆಯನ್ನು ಪಡೆದ್ದಾಗ, ಅವರನ್ನು ಸಾಮಾನ್ಯ ವರ್ಗಕ್ಕೆ ಬದಲಾಯಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಗುಜರಾತ್ ಹೈಕೋರ್ಟ್ ಹೇಳಿದೆ. ಹೀಗಾಗಿ, ಗುಜರಾತ್‌ ಹೈಕೋರ್ಟ್‌ ಗುಜರಾತ್‌ನಲ್ಲಿ ಮೀಸಲಾತಿಯನ್ನು ರದ್ದುಪಡಿಸಿದೆ ಎಂದು ತಪ್ಪಾಗಿ ಹೇಳಿಕೊಂಡು ವೈರಲ್‌ ಆಗುತ್ತಿರುವ ಪೋಸ್ಟ್‌ ಸುಳ್ಳಾಗಿದ್ದು, ಜನರನ್ನು ದಾರಿ ತಪ್ಪಿಸುವುದರ ಜೊತೆಗೆ, ಮೀಸಲಾತಿಯ ವಿರುದ್ದ ಪ್ರಚೋದನೆಯನ್ನು ನೀಡುತ್ತಿದೆ. 

ಮೀಸಲಾತಿ ಕುರಿತು ಒಂದಿಷ್ಟು

ಮೀಸಲಾತಿ ಎಂಬುದು ಬಡತನ ನಿವಾರಣ ಕಾರ್ಯಕ್ರಮವಲ್ಲ. ಸಮಾನತೆ ಹಾಗೂ ಪರಿವರ್ತನೆ ತರುವ ಕಾರ್ಯಕ್ರಮವೂ ಅಲ್ಲ. ಬದಲಿಗೆ ಇರುವ ವ್ಯವಸ್ಥೆಯಲ್ಲೇ ಪ್ರಾತಿನಿಧ್ಯವನ್ನು ಖಾತರಿಗೊಳಿಸುವ ಮೂಲಕ ಸಾಮಾಜಿಕ ನ್ಯಾಯವನ್ನು ಜಾರಿಗೊಳಿಸುವ ಕಾರ್ಯಕ್ರಮವಾಗಿದೆ. ಅದು ಸಾಮಾಜಿಕ ಸಮಾನತೆಯ ತಳಹದಿಯಲ್ಲಿರಬೇಕೆ ಹೊರತು ಆರ್ಥಿಕ ತಳಹದಿಯಲ್ಲಿ ಅಲ್ಲ ಎಂಬ ಚರ್ಚೆ ಹಿಂದಿನಿಂದಲೂ ಇದೆ.

ಇದನ್ನೂ ಓದಿ: EWS ಎಂಬ ಕಣ್ಕಟ್ಟಿನ ಮೀಸಲಾತಿ; ಸುಪ್ರೀಂಕೋರ್ಟ್‌ನಲ್ಲಾದರೂ ನ್ಯಾಯ ದೊರಕುವುದೇ?


ಇದನ್ನೂ ಓದಿ: Fact Check: ಬಿಪಿನ್ ರಾವತ್‌ರವರ ಹೆಲಿಕಾಪ್ಟರ್ ಪತನ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...