Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

- Advertisement -
- Advertisement -

ಗುಜರಾತ್‌ನಲ್ಲಿ ಹೈಕೋರ್ಟ್ ಸಂಪೂರ್ಣ ಮೀಸಲಾತಿ ರದ್ದುಗೊಳಿಸಿದೆ ಎಂಬ ಒಂದು ಪೋಸ್ಟ್‌ ಸಾಮಾಜಿಕ ಜಾಲತಾಣಗಳಾದ ಟ್ವಿಟರ್‌, ಫೇಸ್‌ಬುಕ್‌, ವಾಟ್ಸಾಪ್‌ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆ ವೈರಲ್ ಪೋಸ್ಟ್‌ನಲ್ಲಿ, “ಗುಜರಾತ್‌ ಹೈಕೋರ್ಟ್‌ ಮೀಸಲಾತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ. ಮೀಸಲಾತಿ ರದ್ದುಗೊಳಿಸಿದ ದೇಶದ ಮೊದಲ ರಾಜ್ಯ ಗುಜರಾತ್‌ ಆಗಿದೆ. ಅಲ್ಲಿ, ಸರ್ಕಾರಿ ಉದ್ಯೋಗವಾಗಲಿ ಅಥವಾ ಖಾಸಗಿ ಉದ್ಯೋಗವಾಗಿ ಇನ್ನು ಮುಂದೆ ಮೀಸಲಾತಿ ಇರುವುದಿಲ್ಲ” ಎಂದು ಹೇಳಿಕೊಳ್ಳಲಾಗಿದೆ. 

ವೈರಲ್ ಆಗಿರುವ ಪೋಸ್ಟ್‌ನಲ್ಲಿ, ಮುಂದಿನ 25 ವರ್ಷಗಳಲ್ಲಿ, ಮೀಸಲಾತಿಯು ಶಿಕ್ಷಣ, ಉದ್ಯೋಗಗಳು, ಪ್ರಯಾಣ, ಹೋಟೆಲ್ ಬುಕಿಂಗ್ ಇತ್ಯಾದಿಗಳಿಗೆ ಅನ್ವಯಿಸುವುದಿಲ್ಲ ಎಂದು ಹೇಳಲಾಗಿದೆ. ಅಲ್ಲದೆ, ವೈರಲ್ ಪೋಸ್ಟ್ ಜೊತೆಗೆ ಟೈಮ್ಸ್ ಆಫ್ ಇಂಡಿಯಾ ಲೇಖನದ ಲಿಂಕ್ ಅನ್ನು ಸಹ ಹಂಚಿಕೊಳ್ಳಲಾಗಿದೆ. ಈ ಸಂದೇಶವು 2020ರಲ್ಲೂ ವೈರಲ್ ಆಗಿತ್ತು. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ. 

ಈ ವೈರಲ್ ಪೋಸ್ಟ್‌ನ ಕೀವರ್ಡ್‌ಗಳನ್ನು ಬಳಿಸಿಕೊಂಡು ಗೂಗಲ್‌ನಲ್ಲಿ ಹುಡುಕಿದಾಗ, ಇದಕ್ಕೆ ಸಂಬಂಧಿಸಿದ ಯಾವುದೇ ಸುದ್ದಿ ಕಂಡುಬಂದಿಲ್ಲ. ಗುಜರಾತ್ ಹೈಕೋರ್ಟ್ ರಾಜ್ಯದಲ್ಲಿ ಮೀಸಲಾತಿಯನ್ನು ರದ್ದುಪಡಿಸಲು ನಿರ್ಧರಿಸಿದ್ದರೆ, ಅದು ರಾಷ್ಟ್ರೀಯ ವಿಷಯವಾಗುತ್ತಿತ್ತು ಮತ್ತು ಎಲ್ಲಾ ಮಾಧ್ಯಮ ಸಂಸ್ಥೆಗಳು ಅದನ್ನು ವರದಿ ಮಾಡುತ್ತಿದ್ದವು. ಆದರೆ ಈ ವೈರಲ್ ಹೇಳಿಕೆಯನ್ನು ದೃಢೀಕರಿಸುವ ಯಾವುದೇ ಅಧಿಕೃತ ವರದಿಯು ನಮಗೆ ದೊರೆತಿಲ್ಲ.

ಹೆಚ್ಚಿನ ತನಿಖೆಗಾಗಿ, ಗುಜರಾತ್ ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿದಾಗಲೂ, ವೈರಲ್ ಕ್ಲೈಮ್ ಅನ್ನು ಮೌಲ್ಯೀಕರಿಸುವ ಯಾವುದೇ ಪುರಾವೆಗಳು ಅಲ್ಲಿ ದೊರೆತಿಲ್ಲ. ಆದರೆ, ಗುಜರಾತ್ ಹೈಕೋರ್ಟ್ ವೆಬ್‌ಸೈಟ್‌ನ ನೇಮಕಾತಿ ವಿಭಾಗದ ಪ್ರಸ್ತುತ ಆರಂಭಿಕ ವಿಭಾಗದಲ್ಲಿ ಇಂಗ್ಲಿಷ್ ಸ್ಟೆನೋಗ್ರಾಫರ್ ಗ್ರೇಡ್ II ರ 09 ಖಾಲಿ ಹುದ್ದೆಗಳ ನೇಮಕಾತಿಗಾಗಿ ಹೊರಡಿಸಿದ್ದ ಜಾಹೀರಾತು ದೊರೆತಿದೆ. ಹೈಕೋರ್ಟ್‌ನ ಈ ನೇಮಕಾತಿ ಜಾಹೀರಾತಿನಲ್ಲಿ 09 ಹುದ್ದೆಗಳನ್ನು ವಿವಿಧ ಮೀಸಲಾತಿ ವರ್ಗಗಳ ಪ್ರಕಾರ ವಿಂಗಡಿಸಲ್ಪಟ್ಟಿದೆ. ಇದರಿಂದ ಅಲ್ಲಿನ ನ್ಯಾಯಾಲಯವು ನೇಮಕಾತಿಯಲ್ಲಿ ಮೀಸಲಾತಿ ನಿಯಮಗಳನ್ನು ಪಾಲಿಸುತ್ತಿರುವುದು ಸ್ಪಷ್ಟವಾಗಿದೆ.

Image Credit: High Court of Gujarat

ವೈರಲ್ ಆಗುತ್ತಿರುವ ಪೋಸ್ಟ್‌ನ ವಿವರಣೆಯಲ್ಲಿ ಟೈಮ್ಸ್ ಆಫ್ ಇಂಡಿಯಾದ ಲಿಂಕ್ ಅನ್ನು ಸಹ ಹೊಂದಿದೆ. ಆ ಲೇಖನವು 11 ಸೆಪ್ಟೆಂಬರ್ 2015 ರದ್ದಾಗಿದೆ. ಸುಮಾರು 6 ವರ್ಷಗಳಷ್ಟು ಹಳೆಯದಾದ ಈ ಲೇಖನವು ಗುಜರಾತ್ ಹೈಕೋರ್ಟ್‌ನ ಆದೇಶವನ್ನು ವರದಿ ಮಾಡಿದೆ. ಅದರಲ್ಲಿ, ಅಭ್ಯರ್ಥಿಯ ಅರ್ಹತೆಯ ಗರಿಷ್ಟ ವಯಸ್ಸು ಸಾಮಾನ್ಯ ವರ್ಗದ ಕಟ್-ಆಫ್‌ಗಿನ್ನ ಹೆಚ್ಚಿದ್ದಾಗ ಅವರನ್ನು ಅರ್ಹ ಮೀಸಲು ವರ್ಗದ ಅಭ್ಯರ್ಥಿಗಳು (MRC) ಎಂದು ಪರಿಗಣಿಸಬೇಕು. ಅವರು ಸಾಮಾನ್ಯ ವರ್ಗದ ಕಟ್-ಆಫ್‌ಗಿಂತ ಹೆಚ್ಚು ಅಂಕಗಳನ್ನು ಪಡೆದಿದ್ದರೂ, ಅವರನ್ನು ಸಾಮಾನ್ಯ ವರ್ಗದಲ್ಲಿ ಇರಿಸಲಾಗುವುದಿಲ್ಲ ಎಂದು ನ್ಯಾಯಾಲಯವು ತೀರ್ಪು ನೀಡಿದೆ. ಈ ಲೇಖನದಲ್ಲಿಯೂ ಗುಜರಾತ್ ಹೈಕೋರ್ಟ್ ರಾಜ್ಯದಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆ ಎಂದು ಸುಳಿವು ನೀಡುವ ಯಾವ ಅಂಶವೂ ಕಂಡುಬಂದಿಲ್ಲ.

ಲೇಖನದ ಮುಖ್ಯಾಂಶವು, “ಕೋಟಾ ಅಭ್ಯರ್ಥಿಗಳು ವಯೋಮಿತಿ ಸಡಿಲಿಕೆಯನ್ನು ಪಡೆದ್ದಾಗ, ಅವರನ್ನು ಸಾಮಾನ್ಯ ವರ್ಗಕ್ಕೆ ಬದಲಾಯಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಗುಜರಾತ್ ಹೈಕೋರ್ಟ್ ಹೇಳಿದೆ. ಹೀಗಾಗಿ, ಗುಜರಾತ್‌ ಹೈಕೋರ್ಟ್‌ ಗುಜರಾತ್‌ನಲ್ಲಿ ಮೀಸಲಾತಿಯನ್ನು ರದ್ದುಪಡಿಸಿದೆ ಎಂದು ತಪ್ಪಾಗಿ ಹೇಳಿಕೊಂಡು ವೈರಲ್‌ ಆಗುತ್ತಿರುವ ಪೋಸ್ಟ್‌ ಸುಳ್ಳಾಗಿದ್ದು, ಜನರನ್ನು ದಾರಿ ತಪ್ಪಿಸುವುದರ ಜೊತೆಗೆ, ಮೀಸಲಾತಿಯ ವಿರುದ್ದ ಪ್ರಚೋದನೆಯನ್ನು ನೀಡುತ್ತಿದೆ. 

ಮೀಸಲಾತಿ ಕುರಿತು ಒಂದಿಷ್ಟು

ಮೀಸಲಾತಿ ಎಂಬುದು ಬಡತನ ನಿವಾರಣ ಕಾರ್ಯಕ್ರಮವಲ್ಲ. ಸಮಾನತೆ ಹಾಗೂ ಪರಿವರ್ತನೆ ತರುವ ಕಾರ್ಯಕ್ರಮವೂ ಅಲ್ಲ. ಬದಲಿಗೆ ಇರುವ ವ್ಯವಸ್ಥೆಯಲ್ಲೇ ಪ್ರಾತಿನಿಧ್ಯವನ್ನು ಖಾತರಿಗೊಳಿಸುವ ಮೂಲಕ ಸಾಮಾಜಿಕ ನ್ಯಾಯವನ್ನು ಜಾರಿಗೊಳಿಸುವ ಕಾರ್ಯಕ್ರಮವಾಗಿದೆ. ಅದು ಸಾಮಾಜಿಕ ಸಮಾನತೆಯ ತಳಹದಿಯಲ್ಲಿರಬೇಕೆ ಹೊರತು ಆರ್ಥಿಕ ತಳಹದಿಯಲ್ಲಿ ಅಲ್ಲ ಎಂಬ ಚರ್ಚೆ ಹಿಂದಿನಿಂದಲೂ ಇದೆ.

ಇದನ್ನೂ ಓದಿ: EWS ಎಂಬ ಕಣ್ಕಟ್ಟಿನ ಮೀಸಲಾತಿ; ಸುಪ್ರೀಂಕೋರ್ಟ್‌ನಲ್ಲಾದರೂ ನ್ಯಾಯ ದೊರಕುವುದೇ?


ಇದನ್ನೂ ಓದಿ: Fact Check: ಬಿಪಿನ್ ರಾವತ್‌ರವರ ಹೆಲಿಕಾಪ್ಟರ್ ಪತನ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...