Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

- Advertisement -
- Advertisement -

ಗುಜರಾತ್‌ನಲ್ಲಿ ಹೈಕೋರ್ಟ್ ಸಂಪೂರ್ಣ ಮೀಸಲಾತಿ ರದ್ದುಗೊಳಿಸಿದೆ ಎಂಬ ಒಂದು ಪೋಸ್ಟ್‌ ಸಾಮಾಜಿಕ ಜಾಲತಾಣಗಳಾದ ಟ್ವಿಟರ್‌, ಫೇಸ್‌ಬುಕ್‌, ವಾಟ್ಸಾಪ್‌ಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆ ವೈರಲ್ ಪೋಸ್ಟ್‌ನಲ್ಲಿ, “ಗುಜರಾತ್‌ ಹೈಕೋರ್ಟ್‌ ಮೀಸಲಾತಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಿದೆ. ಮೀಸಲಾತಿ ರದ್ದುಗೊಳಿಸಿದ ದೇಶದ ಮೊದಲ ರಾಜ್ಯ ಗುಜರಾತ್‌ ಆಗಿದೆ. ಅಲ್ಲಿ, ಸರ್ಕಾರಿ ಉದ್ಯೋಗವಾಗಲಿ ಅಥವಾ ಖಾಸಗಿ ಉದ್ಯೋಗವಾಗಿ ಇನ್ನು ಮುಂದೆ ಮೀಸಲಾತಿ ಇರುವುದಿಲ್ಲ” ಎಂದು ಹೇಳಿಕೊಳ್ಳಲಾಗಿದೆ. 

ವೈರಲ್ ಆಗಿರುವ ಪೋಸ್ಟ್‌ನಲ್ಲಿ, ಮುಂದಿನ 25 ವರ್ಷಗಳಲ್ಲಿ, ಮೀಸಲಾತಿಯು ಶಿಕ್ಷಣ, ಉದ್ಯೋಗಗಳು, ಪ್ರಯಾಣ, ಹೋಟೆಲ್ ಬುಕಿಂಗ್ ಇತ್ಯಾದಿಗಳಿಗೆ ಅನ್ವಯಿಸುವುದಿಲ್ಲ ಎಂದು ಹೇಳಲಾಗಿದೆ. ಅಲ್ಲದೆ, ವೈರಲ್ ಪೋಸ್ಟ್ ಜೊತೆಗೆ ಟೈಮ್ಸ್ ಆಫ್ ಇಂಡಿಯಾ ಲೇಖನದ ಲಿಂಕ್ ಅನ್ನು ಸಹ ಹಂಚಿಕೊಳ್ಳಲಾಗಿದೆ. ಈ ಸಂದೇಶವು 2020ರಲ್ಲೂ ವೈರಲ್ ಆಗಿತ್ತು. ಇದು ನಿಜವೇ ಎಂಬುದನ್ನು ಪರಿಶೀಲಿಸೋಣ. 

ಈ ವೈರಲ್ ಪೋಸ್ಟ್‌ನ ಕೀವರ್ಡ್‌ಗಳನ್ನು ಬಳಿಸಿಕೊಂಡು ಗೂಗಲ್‌ನಲ್ಲಿ ಹುಡುಕಿದಾಗ, ಇದಕ್ಕೆ ಸಂಬಂಧಿಸಿದ ಯಾವುದೇ ಸುದ್ದಿ ಕಂಡುಬಂದಿಲ್ಲ. ಗುಜರಾತ್ ಹೈಕೋರ್ಟ್ ರಾಜ್ಯದಲ್ಲಿ ಮೀಸಲಾತಿಯನ್ನು ರದ್ದುಪಡಿಸಲು ನಿರ್ಧರಿಸಿದ್ದರೆ, ಅದು ರಾಷ್ಟ್ರೀಯ ವಿಷಯವಾಗುತ್ತಿತ್ತು ಮತ್ತು ಎಲ್ಲಾ ಮಾಧ್ಯಮ ಸಂಸ್ಥೆಗಳು ಅದನ್ನು ವರದಿ ಮಾಡುತ್ತಿದ್ದವು. ಆದರೆ ಈ ವೈರಲ್ ಹೇಳಿಕೆಯನ್ನು ದೃಢೀಕರಿಸುವ ಯಾವುದೇ ಅಧಿಕೃತ ವರದಿಯು ನಮಗೆ ದೊರೆತಿಲ್ಲ.

ಹೆಚ್ಚಿನ ತನಿಖೆಗಾಗಿ, ಗುಜರಾತ್ ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿದಾಗಲೂ, ವೈರಲ್ ಕ್ಲೈಮ್ ಅನ್ನು ಮೌಲ್ಯೀಕರಿಸುವ ಯಾವುದೇ ಪುರಾವೆಗಳು ಅಲ್ಲಿ ದೊರೆತಿಲ್ಲ. ಆದರೆ, ಗುಜರಾತ್ ಹೈಕೋರ್ಟ್ ವೆಬ್‌ಸೈಟ್‌ನ ನೇಮಕಾತಿ ವಿಭಾಗದ ಪ್ರಸ್ತುತ ಆರಂಭಿಕ ವಿಭಾಗದಲ್ಲಿ ಇಂಗ್ಲಿಷ್ ಸ್ಟೆನೋಗ್ರಾಫರ್ ಗ್ರೇಡ್ II ರ 09 ಖಾಲಿ ಹುದ್ದೆಗಳ ನೇಮಕಾತಿಗಾಗಿ ಹೊರಡಿಸಿದ್ದ ಜಾಹೀರಾತು ದೊರೆತಿದೆ. ಹೈಕೋರ್ಟ್‌ನ ಈ ನೇಮಕಾತಿ ಜಾಹೀರಾತಿನಲ್ಲಿ 09 ಹುದ್ದೆಗಳನ್ನು ವಿವಿಧ ಮೀಸಲಾತಿ ವರ್ಗಗಳ ಪ್ರಕಾರ ವಿಂಗಡಿಸಲ್ಪಟ್ಟಿದೆ. ಇದರಿಂದ ಅಲ್ಲಿನ ನ್ಯಾಯಾಲಯವು ನೇಮಕಾತಿಯಲ್ಲಿ ಮೀಸಲಾತಿ ನಿಯಮಗಳನ್ನು ಪಾಲಿಸುತ್ತಿರುವುದು ಸ್ಪಷ್ಟವಾಗಿದೆ.

Image Credit: High Court of Gujarat

ವೈರಲ್ ಆಗುತ್ತಿರುವ ಪೋಸ್ಟ್‌ನ ವಿವರಣೆಯಲ್ಲಿ ಟೈಮ್ಸ್ ಆಫ್ ಇಂಡಿಯಾದ ಲಿಂಕ್ ಅನ್ನು ಸಹ ಹೊಂದಿದೆ. ಆ ಲೇಖನವು 11 ಸೆಪ್ಟೆಂಬರ್ 2015 ರದ್ದಾಗಿದೆ. ಸುಮಾರು 6 ವರ್ಷಗಳಷ್ಟು ಹಳೆಯದಾದ ಈ ಲೇಖನವು ಗುಜರಾತ್ ಹೈಕೋರ್ಟ್‌ನ ಆದೇಶವನ್ನು ವರದಿ ಮಾಡಿದೆ. ಅದರಲ್ಲಿ, ಅಭ್ಯರ್ಥಿಯ ಅರ್ಹತೆಯ ಗರಿಷ್ಟ ವಯಸ್ಸು ಸಾಮಾನ್ಯ ವರ್ಗದ ಕಟ್-ಆಫ್‌ಗಿನ್ನ ಹೆಚ್ಚಿದ್ದಾಗ ಅವರನ್ನು ಅರ್ಹ ಮೀಸಲು ವರ್ಗದ ಅಭ್ಯರ್ಥಿಗಳು (MRC) ಎಂದು ಪರಿಗಣಿಸಬೇಕು. ಅವರು ಸಾಮಾನ್ಯ ವರ್ಗದ ಕಟ್-ಆಫ್‌ಗಿಂತ ಹೆಚ್ಚು ಅಂಕಗಳನ್ನು ಪಡೆದಿದ್ದರೂ, ಅವರನ್ನು ಸಾಮಾನ್ಯ ವರ್ಗದಲ್ಲಿ ಇರಿಸಲಾಗುವುದಿಲ್ಲ ಎಂದು ನ್ಯಾಯಾಲಯವು ತೀರ್ಪು ನೀಡಿದೆ. ಈ ಲೇಖನದಲ್ಲಿಯೂ ಗುಜರಾತ್ ಹೈಕೋರ್ಟ್ ರಾಜ್ಯದಲ್ಲಿ ಮೀಸಲಾತಿಯನ್ನು ರದ್ದುಗೊಳಿಸಿದೆ ಎಂದು ಸುಳಿವು ನೀಡುವ ಯಾವ ಅಂಶವೂ ಕಂಡುಬಂದಿಲ್ಲ.

ಲೇಖನದ ಮುಖ್ಯಾಂಶವು, “ಕೋಟಾ ಅಭ್ಯರ್ಥಿಗಳು ವಯೋಮಿತಿ ಸಡಿಲಿಕೆಯನ್ನು ಪಡೆದ್ದಾಗ, ಅವರನ್ನು ಸಾಮಾನ್ಯ ವರ್ಗಕ್ಕೆ ಬದಲಾಯಿಸುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಗುಜರಾತ್ ಹೈಕೋರ್ಟ್ ಹೇಳಿದೆ. ಹೀಗಾಗಿ, ಗುಜರಾತ್‌ ಹೈಕೋರ್ಟ್‌ ಗುಜರಾತ್‌ನಲ್ಲಿ ಮೀಸಲಾತಿಯನ್ನು ರದ್ದುಪಡಿಸಿದೆ ಎಂದು ತಪ್ಪಾಗಿ ಹೇಳಿಕೊಂಡು ವೈರಲ್‌ ಆಗುತ್ತಿರುವ ಪೋಸ್ಟ್‌ ಸುಳ್ಳಾಗಿದ್ದು, ಜನರನ್ನು ದಾರಿ ತಪ್ಪಿಸುವುದರ ಜೊತೆಗೆ, ಮೀಸಲಾತಿಯ ವಿರುದ್ದ ಪ್ರಚೋದನೆಯನ್ನು ನೀಡುತ್ತಿದೆ. 

ಮೀಸಲಾತಿ ಕುರಿತು ಒಂದಿಷ್ಟು

ಮೀಸಲಾತಿ ಎಂಬುದು ಬಡತನ ನಿವಾರಣ ಕಾರ್ಯಕ್ರಮವಲ್ಲ. ಸಮಾನತೆ ಹಾಗೂ ಪರಿವರ್ತನೆ ತರುವ ಕಾರ್ಯಕ್ರಮವೂ ಅಲ್ಲ. ಬದಲಿಗೆ ಇರುವ ವ್ಯವಸ್ಥೆಯಲ್ಲೇ ಪ್ರಾತಿನಿಧ್ಯವನ್ನು ಖಾತರಿಗೊಳಿಸುವ ಮೂಲಕ ಸಾಮಾಜಿಕ ನ್ಯಾಯವನ್ನು ಜಾರಿಗೊಳಿಸುವ ಕಾರ್ಯಕ್ರಮವಾಗಿದೆ. ಅದು ಸಾಮಾಜಿಕ ಸಮಾನತೆಯ ತಳಹದಿಯಲ್ಲಿರಬೇಕೆ ಹೊರತು ಆರ್ಥಿಕ ತಳಹದಿಯಲ್ಲಿ ಅಲ್ಲ ಎಂಬ ಚರ್ಚೆ ಹಿಂದಿನಿಂದಲೂ ಇದೆ.

ಇದನ್ನೂ ಓದಿ: EWS ಎಂಬ ಕಣ್ಕಟ್ಟಿನ ಮೀಸಲಾತಿ; ಸುಪ್ರೀಂಕೋರ್ಟ್‌ನಲ್ಲಾದರೂ ನ್ಯಾಯ ದೊರಕುವುದೇ?


ಇದನ್ನೂ ಓದಿ: Fact Check: ಬಿಪಿನ್ ರಾವತ್‌ರವರ ಹೆಲಿಕಾಪ್ಟರ್ ಪತನ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...