Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಉಕ್ರೇನ್‌‌‌ ಮೇಲಿನ ದಾಳಿಯ ನಂತರ ಪುಟಿನ್‌ ಅವರು ಮೋದಿ ಜೊತೆಗೆ ಮಾತುಕತೆಗೆ ಮನವಿ ಮಾಡಿಲ್ಲ

ಫ್ಯಾಕ್ಟ್‌ಚೆಕ್: ಉಕ್ರೇನ್‌‌‌ ಮೇಲಿನ ದಾಳಿಯ ನಂತರ ಪುಟಿನ್‌ ಅವರು ಮೋದಿ ಜೊತೆಗೆ ಮಾತುಕತೆಗೆ ಮನವಿ ಮಾಡಿಲ್ಲ

- Advertisement -
- Advertisement -

ಉಕ್ರೇನ್‌-ರಷ್ಯಾ ಬಿಕ್ಕಟ್ಟಿನ ಹಿನ್ನಲೆಯಲ್ಲಿ, ಪ್ರಧಾನಿ ಮೋದಿ ಮತ್ತು ರಷ್ಯಾ ಅಧ್ಯಕ್ಷ ಪುಟಿನ್‌‌ ಜೊತೆಗೆ ನಡೆದುಕೊಂಡು ಹೋಗುತ್ತಿರುವ ವಿಡಿಯೊವೊಂದರ ಜೊತೆಗೆ, “ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ ರಷ್ಯಾ ಅಧ್ಯಕ್ಷ ಪುಟಿನ್, ಭಾರತದ ಪ್ರಧಾನಿ ಜೊತೆಗೆ ಮಾತುಕತೆ ನಡೆಸಲು ಮನವಿ ಮಾಡಿದ್ದರು” ಎಂಬ ಸಂದೇಶವೊಂದು ವೈರಲ್‌ ಆಗುತ್ತಿದೆ.

“ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದ ನಂತರ ರಷ್ಯಾ ಅಧ್ಯಕ್ಷ ವಾಲ್ಡಮೀರ್ ಪುಟಿನ್ ಮೊದಲು ಮಾತುಕತೆ ನೆಡೆಸಲು ಮನವಿ ಮಾಡಿದ್ದು ಭಾರತದ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೊತೆಗೆ ಹೊರತು ಬೇರೆ ದೇಶದ ಜೊತೆಗಲ್ಲ….ಮೋದಿ ಗತ್ತು ವಿಶ್ವಕ್ಕೆ ಗೊತ್ತು” ಎಂದು ವಿಡಿಯೊ ಜೊತೆಗಿನ ಸಂದೇಶ ಪ್ರತಿಪಾದಿಸುತ್ತದೆ.

ಫೇಸ್‌ಬುಕ್‌ನಲ್ಲಿ ಹರಿದಾಡುತ್ತಿರುವ ಈ ವಿಡಿಯೊ ಮತ್ತು ಸಂದೇಶವನ್ನು ಹಲವಾರು ಬಳಕೆದಾರರು, ಅದರಲ್ಲೂ ಮುಖ್ಯವಾಗಿ ಬಿಜೆಪಿ ಬೆಂಬಲಿಗರು ಹಂಚಿಕೊಳ್ಳುತ್ತಿದ್ದಾರೆ. ಅವುಗಳನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ಫ್ಯಾಕ್ಟ್‌ಚೆಕ್

ಉಕ್ರೇನ್‌-ರಷ್ಯಾ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಹಲವಾರು ಸಂಬಂಧಪಡದ, ಹಳೆಯ ಚಿತ್ರಗಳು ಹಾಗೂ ವಿಡಿಯೊಗಳು ಹರಿದಾಡುತ್ತಿದೆ. ವಿಡಿಯೊ ಮತ್ತು ವೈರಲ್ ಸಂದೇಶದ ಬಗ್ಗೆ ನಾನುಗೌರಿ.ಕಾಂ ಬೇರೆ ಬೇರೆಯಾಗಿ ಪರಿಶೀಲನೆ ನಡೆಸಿದೆ.

  • ವೈರಲ್ ವಿಡಿಯೊ 2021 ರ ಡಿಸೆಂಬರ್‌ 6ರದ್ದಾಗಿದೆ

ವೈರಲ್ ಸಂದೇಶ ಜೊತೆಗೆ ಹರಿದಾಡುತ್ತಿರುವ ವಿಡಿಯೊವನ್ನು ಕೆಲವು ಕೀವರ್ಡ್‌ಗಳ ಮೂಲಕ ಹುಡುಕಾಡಿದಾಗ ಈ ವಿಡಿಯೊ 2021 ರ ಡಿಸೆಂಬರ್‌ 6 ರಂದು ಮಾಡಿರುವ ವಿಡಿಯೊ ಎಂದು ತಿಳಿದು ಬಂದಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ 21 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯನ್ನು 2021 ರ ಡಿಸೆಂಬರ್‌ 6ರಂದು ನಡೆಸಿದ್ದರು. ಉಭಯ ನಾಯಕರು ಭಾರತ ಮತ್ತು ರಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳು ಮತ್ತು ಕಾರ್ಯತಂತ್ರದ ಪಾಲುದಾರಿಕೆಯ ನಿರೀಕ್ಷೆಗಳನ್ನು ಚರ್ಚಿಸಿದ್ದರು. ಈ ಭೇಟಿಯ ಸಂದಂರ್ಭದಲ್ಲಿ ಮಾಡಲಾಗಿರುವ ವೀಡಿಯೊ ಇದಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಇಸ್ಲಾಂ ವಿರುದ್ಧ ದ್ವೇಷ ಹರಡುವ ಈ ಲೇಖನ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಬರೆದಿಲ್ಲ

  • ವೈರಲ್‌ ಸಂದೇಶ ಸುಳ್ಳಾಗಿದ್ದು, ಇದಕ್ಕೆ ಯಾವುದೇ ಆಧಾರವಿಲ್ಲ.

ವಿಡಿಯೊ ಜೊತೆಗೆ ಹರಿಡಾಡುತ್ತಿರುವ ಸಂದೇಶವು, “ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದ ನಂತರ ರಷ್ಯಾ ಅಧ್ಯಕ್ಷ ವಾಲ್ಡಮೀರ್ ಪುಟಿನ್ ಅವರು ಪ್ರಧಾನಿ ಮೋದಿ ಜೊತೆಗೆ ಮಾತುಕತೆ ನೆಡೆಸಲು ಮನವಿ ಮಾಡಿದ್ದರು” ಎಂದು ಪ್ರತಿಪಾದಿಸುತ್ತದೆ.

ವೈರಲ್ ಸಂದೇಶದಲ್ಲಿ ಹೇಳಿರುವಂತೆ, ಯುದ್ಧ ಪ್ರಾರಂಭವಾದ ನಂತರ ರಷ್ಯಾ ಅಧ್ಯಕ್ಷ ಪ್ರಧಾಮಿ ಮೋದಿ ಜೊತಗೆ ಮಾತುಕತೆಗೆ ವಿನಂತಿಸಿಯೆ ಇಲ್ಲ. ಈ ಬಗ್ಗೆ ಯಾವುದೇ ಸುದ್ದಿಗಳು ಇದುವರೆಗೂ ಲಭ್ಯವಿಲ್ಲ. ಒಂದು ವೇಳೆ ಪುಟಿನ್‌ ಈ ರೀತಿಯಾಗಿ ವಿನಂತಿಸಿದ್ದರೆ ವಿಶ್ವದ ಹಲವು ಮಾಧ್ಯಮಗಳು ವರದಿ ಮಾಡಿರುತ್ತಿದ್ದವು. ಆದರೆ ನಾನುಗೌರಿ.ಕಾಂಗೆ ಈ ರೀತಿಯ ಯಾವುದೆ ಸುದ್ದಿ ಲಭ್ಯವಾಗಿಲ್ಲ.

ಆದರೆ ರಷ್ಯಾ-ಉಕ್ರೇನ್‌ ಯದ್ಧ ಪ್ರಾರಂಭವಾದ ನಂತರ ಪ್ರಧಾನಿ ಮೋದಿ ಪುಟಿನ್‌ಗೆ ಕರೆ ಮಾಡಿ ಶಾಂತಿ ಕಾಪಾಡುವಂತೆ ಕರೆ ನೀಡಿದ್ದರು. ಜೊತೆಗೆ ಬಿಕ್ಕಟ್ಟಿನ ಬಗ್ಗೆ ವಿಶ್ವಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ಎರಡು ಸಭೆಯಲ್ಲೂ ಭಾರತ ತಟಸ್ಥ ನೀತಿಯನ್ನು ಅನುಸರಿಸಿದೆ.

ಪುಟಿನ್‌ ಪ್ರಧಾನಿ ಮೋದಿಗೆ ಕರೆ ಮಾಡಿರುವ ಯಾವುದೆ ಸುದ್ದಿ ಲಭ್ಯವಾಗಿಲ್ಲ, ಬದಲಾಗಿ ಮೋದಿಯೆ ಪುಟಿನ್‌ಗೆ ಕರೆ ಮಾಡಿದ್ದರು.

ಒಟ್ಟಿನಲ್ಲಿ ವೈರಲ್‌ ವಿಡಿಯೊ ಮತ್ತು ಸಂದೇಶ ಹೇಳುವಂತೆ, ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದ ನಂತರ ರಷ್ಯಾ ಅಧ್ಯಕ್ಷ ವಾಲ್ಡಮೀರ್ ಪುಟಿನ್ ಅವರು ಪ್ರಧಾನಿ ಮೋದಿ ಜೊತೆಗೆ ಮಾತುಕತೆ ನೆಡೆಸಲು ಮನವಿ ಮಾಡಿದ್ದರು ಎಂಬುವುದು ಸುಳ್ಳು ಪ್ರತಿಪಾದನೆಯಾಗಿದೆ. ಅದರ ಜೊತೆಗೆ ವೈರಲ್‌ ಆಗಿರುವ ವಿಡಿಯೊ 2021 ರ ಡಿಸೆಂಬರ್‌ 6ರಂದು ನಡೆದ 21 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯದ್ದಾಗಿದೆ.

ರಷ್ಯಾ ಮತ್ತು ಉಕ್ರೇನ್ ಯುದ್ಧ ಪ್ರಾರಂಭವಾದ ನಂತರ ಪ್ರಧಾನಿ ಮೋದಿ ಶಾಂತಿ ಕಾಪಾಡುವಂತೆ ಕರೆ ನೀಡಿದ್ದರು. ಆದರೂ ರಷ್ಯಾ ಮತ್ತು ಉಕ್ರೇನ್ ಯುದ್ಧ ಮುಂದುವರೆದಿದೆ. ಯುದ್ದದಿಂದಾಗಿ 14 ಮಕ್ಕಳು ಸೇರಿದಂತೆ 352 ಉಕ್ರೇನಿಯನ್ ನಾಗರಿಕರು ಮೃತಪಟ್ಟಿದ್ದು, 1,684 ಮಂದಿಗೆ ಗಾಯಗೊಂಡಿದ್ದಾರೆ ಎಂದು ಉಕ್ರೇನ್‌ ಅಧೀಕೃತವಾಗಿ ಹೇಳಿದೆ.

ರಷ್ಯಾ ಮತ್ತು ಉಕ್ರೇನ್ ಬಿಕ್ಕಟ್ಟು ಪ್ರಾರಂಭವಾದ ನಂತರ ಸಂಬಂಧಪಡದ ಹಲವು ಹಳೆಯ ವಿಡಿಯೊ ಹಾಗೂ ಚಿತ್ರಗಳು ಹರಿದಾಡುತ್ತಿದೆ. ಇವುಗಳನ್ನು ನಾನುಗೌರಿ.ಕಾಂ ಫ್ಯಾಕ್ಟ್‌ಚೆಕ್‌ ಮಾಡಿದೆ. ಇದನ್ನು ನೀವು ಇಲ್ಲಿ   ನೋಡಬಹುದು. ಅಲ್ಲದೆ ಇತರ ಫ್ಯಾಕ್ಟ್‌ಚೆಕ್‌ ಲೇಖನಗಳಿಗೆ ನಮ್ಮ ಏನ್‌ಸುದ್ದಿ.ಕಾಂ ವೆಬ್‌ಸೈಟ್‌ಅನ್ನು ನೀವು ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...