Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಉಕ್ರೇನ್‌‌‌ ಮೇಲಿನ ದಾಳಿಯ ನಂತರ ಪುಟಿನ್‌ ಅವರು ಮೋದಿ ಜೊತೆಗೆ ಮಾತುಕತೆಗೆ ಮನವಿ ಮಾಡಿಲ್ಲ

ಫ್ಯಾಕ್ಟ್‌ಚೆಕ್: ಉಕ್ರೇನ್‌‌‌ ಮೇಲಿನ ದಾಳಿಯ ನಂತರ ಪುಟಿನ್‌ ಅವರು ಮೋದಿ ಜೊತೆಗೆ ಮಾತುಕತೆಗೆ ಮನವಿ ಮಾಡಿಲ್ಲ

- Advertisement -
- Advertisement -

ಉಕ್ರೇನ್‌-ರಷ್ಯಾ ಬಿಕ್ಕಟ್ಟಿನ ಹಿನ್ನಲೆಯಲ್ಲಿ, ಪ್ರಧಾನಿ ಮೋದಿ ಮತ್ತು ರಷ್ಯಾ ಅಧ್ಯಕ್ಷ ಪುಟಿನ್‌‌ ಜೊತೆಗೆ ನಡೆದುಕೊಂಡು ಹೋಗುತ್ತಿರುವ ವಿಡಿಯೊವೊಂದರ ಜೊತೆಗೆ, “ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ ರಷ್ಯಾ ಅಧ್ಯಕ್ಷ ಪುಟಿನ್, ಭಾರತದ ಪ್ರಧಾನಿ ಜೊತೆಗೆ ಮಾತುಕತೆ ನಡೆಸಲು ಮನವಿ ಮಾಡಿದ್ದರು” ಎಂಬ ಸಂದೇಶವೊಂದು ವೈರಲ್‌ ಆಗುತ್ತಿದೆ.

“ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದ ನಂತರ ರಷ್ಯಾ ಅಧ್ಯಕ್ಷ ವಾಲ್ಡಮೀರ್ ಪುಟಿನ್ ಮೊದಲು ಮಾತುಕತೆ ನೆಡೆಸಲು ಮನವಿ ಮಾಡಿದ್ದು ಭಾರತದ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೊತೆಗೆ ಹೊರತು ಬೇರೆ ದೇಶದ ಜೊತೆಗಲ್ಲ….ಮೋದಿ ಗತ್ತು ವಿಶ್ವಕ್ಕೆ ಗೊತ್ತು” ಎಂದು ವಿಡಿಯೊ ಜೊತೆಗಿನ ಸಂದೇಶ ಪ್ರತಿಪಾದಿಸುತ್ತದೆ.

ಫೇಸ್‌ಬುಕ್‌ನಲ್ಲಿ ಹರಿದಾಡುತ್ತಿರುವ ಈ ವಿಡಿಯೊ ಮತ್ತು ಸಂದೇಶವನ್ನು ಹಲವಾರು ಬಳಕೆದಾರರು, ಅದರಲ್ಲೂ ಮುಖ್ಯವಾಗಿ ಬಿಜೆಪಿ ಬೆಂಬಲಿಗರು ಹಂಚಿಕೊಳ್ಳುತ್ತಿದ್ದಾರೆ. ಅವುಗಳನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ಫ್ಯಾಕ್ಟ್‌ಚೆಕ್

ಉಕ್ರೇನ್‌-ರಷ್ಯಾ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಹಲವಾರು ಸಂಬಂಧಪಡದ, ಹಳೆಯ ಚಿತ್ರಗಳು ಹಾಗೂ ವಿಡಿಯೊಗಳು ಹರಿದಾಡುತ್ತಿದೆ. ವಿಡಿಯೊ ಮತ್ತು ವೈರಲ್ ಸಂದೇಶದ ಬಗ್ಗೆ ನಾನುಗೌರಿ.ಕಾಂ ಬೇರೆ ಬೇರೆಯಾಗಿ ಪರಿಶೀಲನೆ ನಡೆಸಿದೆ.

  • ವೈರಲ್ ವಿಡಿಯೊ 2021 ರ ಡಿಸೆಂಬರ್‌ 6ರದ್ದಾಗಿದೆ

ವೈರಲ್ ಸಂದೇಶ ಜೊತೆಗೆ ಹರಿದಾಡುತ್ತಿರುವ ವಿಡಿಯೊವನ್ನು ಕೆಲವು ಕೀವರ್ಡ್‌ಗಳ ಮೂಲಕ ಹುಡುಕಾಡಿದಾಗ ಈ ವಿಡಿಯೊ 2021 ರ ಡಿಸೆಂಬರ್‌ 6 ರಂದು ಮಾಡಿರುವ ವಿಡಿಯೊ ಎಂದು ತಿಳಿದು ಬಂದಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ 21 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯನ್ನು 2021 ರ ಡಿಸೆಂಬರ್‌ 6ರಂದು ನಡೆಸಿದ್ದರು. ಉಭಯ ನಾಯಕರು ಭಾರತ ಮತ್ತು ರಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳು ಮತ್ತು ಕಾರ್ಯತಂತ್ರದ ಪಾಲುದಾರಿಕೆಯ ನಿರೀಕ್ಷೆಗಳನ್ನು ಚರ್ಚಿಸಿದ್ದರು. ಈ ಭೇಟಿಯ ಸಂದಂರ್ಭದಲ್ಲಿ ಮಾಡಲಾಗಿರುವ ವೀಡಿಯೊ ಇದಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಇಸ್ಲಾಂ ವಿರುದ್ಧ ದ್ವೇಷ ಹರಡುವ ಈ ಲೇಖನ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಬರೆದಿಲ್ಲ

  • ವೈರಲ್‌ ಸಂದೇಶ ಸುಳ್ಳಾಗಿದ್ದು, ಇದಕ್ಕೆ ಯಾವುದೇ ಆಧಾರವಿಲ್ಲ.

ವಿಡಿಯೊ ಜೊತೆಗೆ ಹರಿಡಾಡುತ್ತಿರುವ ಸಂದೇಶವು, “ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದ ನಂತರ ರಷ್ಯಾ ಅಧ್ಯಕ್ಷ ವಾಲ್ಡಮೀರ್ ಪುಟಿನ್ ಅವರು ಪ್ರಧಾನಿ ಮೋದಿ ಜೊತೆಗೆ ಮಾತುಕತೆ ನೆಡೆಸಲು ಮನವಿ ಮಾಡಿದ್ದರು” ಎಂದು ಪ್ರತಿಪಾದಿಸುತ್ತದೆ.

ವೈರಲ್ ಸಂದೇಶದಲ್ಲಿ ಹೇಳಿರುವಂತೆ, ಯುದ್ಧ ಪ್ರಾರಂಭವಾದ ನಂತರ ರಷ್ಯಾ ಅಧ್ಯಕ್ಷ ಪ್ರಧಾಮಿ ಮೋದಿ ಜೊತಗೆ ಮಾತುಕತೆಗೆ ವಿನಂತಿಸಿಯೆ ಇಲ್ಲ. ಈ ಬಗ್ಗೆ ಯಾವುದೇ ಸುದ್ದಿಗಳು ಇದುವರೆಗೂ ಲಭ್ಯವಿಲ್ಲ. ಒಂದು ವೇಳೆ ಪುಟಿನ್‌ ಈ ರೀತಿಯಾಗಿ ವಿನಂತಿಸಿದ್ದರೆ ವಿಶ್ವದ ಹಲವು ಮಾಧ್ಯಮಗಳು ವರದಿ ಮಾಡಿರುತ್ತಿದ್ದವು. ಆದರೆ ನಾನುಗೌರಿ.ಕಾಂಗೆ ಈ ರೀತಿಯ ಯಾವುದೆ ಸುದ್ದಿ ಲಭ್ಯವಾಗಿಲ್ಲ.

ಆದರೆ ರಷ್ಯಾ-ಉಕ್ರೇನ್‌ ಯದ್ಧ ಪ್ರಾರಂಭವಾದ ನಂತರ ಪ್ರಧಾನಿ ಮೋದಿ ಪುಟಿನ್‌ಗೆ ಕರೆ ಮಾಡಿ ಶಾಂತಿ ಕಾಪಾಡುವಂತೆ ಕರೆ ನೀಡಿದ್ದರು. ಜೊತೆಗೆ ಬಿಕ್ಕಟ್ಟಿನ ಬಗ್ಗೆ ವಿಶ್ವಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ಎರಡು ಸಭೆಯಲ್ಲೂ ಭಾರತ ತಟಸ್ಥ ನೀತಿಯನ್ನು ಅನುಸರಿಸಿದೆ.

ಪುಟಿನ್‌ ಪ್ರಧಾನಿ ಮೋದಿಗೆ ಕರೆ ಮಾಡಿರುವ ಯಾವುದೆ ಸುದ್ದಿ ಲಭ್ಯವಾಗಿಲ್ಲ, ಬದಲಾಗಿ ಮೋದಿಯೆ ಪುಟಿನ್‌ಗೆ ಕರೆ ಮಾಡಿದ್ದರು.

ಒಟ್ಟಿನಲ್ಲಿ ವೈರಲ್‌ ವಿಡಿಯೊ ಮತ್ತು ಸಂದೇಶ ಹೇಳುವಂತೆ, ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದ ನಂತರ ರಷ್ಯಾ ಅಧ್ಯಕ್ಷ ವಾಲ್ಡಮೀರ್ ಪುಟಿನ್ ಅವರು ಪ್ರಧಾನಿ ಮೋದಿ ಜೊತೆಗೆ ಮಾತುಕತೆ ನೆಡೆಸಲು ಮನವಿ ಮಾಡಿದ್ದರು ಎಂಬುವುದು ಸುಳ್ಳು ಪ್ರತಿಪಾದನೆಯಾಗಿದೆ. ಅದರ ಜೊತೆಗೆ ವೈರಲ್‌ ಆಗಿರುವ ವಿಡಿಯೊ 2021 ರ ಡಿಸೆಂಬರ್‌ 6ರಂದು ನಡೆದ 21 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯದ್ದಾಗಿದೆ.

ರಷ್ಯಾ ಮತ್ತು ಉಕ್ರೇನ್ ಯುದ್ಧ ಪ್ರಾರಂಭವಾದ ನಂತರ ಪ್ರಧಾನಿ ಮೋದಿ ಶಾಂತಿ ಕಾಪಾಡುವಂತೆ ಕರೆ ನೀಡಿದ್ದರು. ಆದರೂ ರಷ್ಯಾ ಮತ್ತು ಉಕ್ರೇನ್ ಯುದ್ಧ ಮುಂದುವರೆದಿದೆ. ಯುದ್ದದಿಂದಾಗಿ 14 ಮಕ್ಕಳು ಸೇರಿದಂತೆ 352 ಉಕ್ರೇನಿಯನ್ ನಾಗರಿಕರು ಮೃತಪಟ್ಟಿದ್ದು, 1,684 ಮಂದಿಗೆ ಗಾಯಗೊಂಡಿದ್ದಾರೆ ಎಂದು ಉಕ್ರೇನ್‌ ಅಧೀಕೃತವಾಗಿ ಹೇಳಿದೆ.

ರಷ್ಯಾ ಮತ್ತು ಉಕ್ರೇನ್ ಬಿಕ್ಕಟ್ಟು ಪ್ರಾರಂಭವಾದ ನಂತರ ಸಂಬಂಧಪಡದ ಹಲವು ಹಳೆಯ ವಿಡಿಯೊ ಹಾಗೂ ಚಿತ್ರಗಳು ಹರಿದಾಡುತ್ತಿದೆ. ಇವುಗಳನ್ನು ನಾನುಗೌರಿ.ಕಾಂ ಫ್ಯಾಕ್ಟ್‌ಚೆಕ್‌ ಮಾಡಿದೆ. ಇದನ್ನು ನೀವು ಇಲ್ಲಿ   ನೋಡಬಹುದು. ಅಲ್ಲದೆ ಇತರ ಫ್ಯಾಕ್ಟ್‌ಚೆಕ್‌ ಲೇಖನಗಳಿಗೆ ನಮ್ಮ ಏನ್‌ಸುದ್ದಿ.ಕಾಂ ವೆಬ್‌ಸೈಟ್‌ಅನ್ನು ನೀವು ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...