Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಉಕ್ರೇನ್‌‌‌ ಮೇಲಿನ ದಾಳಿಯ ನಂತರ ಪುಟಿನ್‌ ಅವರು ಮೋದಿ ಜೊತೆಗೆ ಮಾತುಕತೆಗೆ ಮನವಿ ಮಾಡಿಲ್ಲ

ಫ್ಯಾಕ್ಟ್‌ಚೆಕ್: ಉಕ್ರೇನ್‌‌‌ ಮೇಲಿನ ದಾಳಿಯ ನಂತರ ಪುಟಿನ್‌ ಅವರು ಮೋದಿ ಜೊತೆಗೆ ಮಾತುಕತೆಗೆ ಮನವಿ ಮಾಡಿಲ್ಲ

- Advertisement -
- Advertisement -

ಉಕ್ರೇನ್‌-ರಷ್ಯಾ ಬಿಕ್ಕಟ್ಟಿನ ಹಿನ್ನಲೆಯಲ್ಲಿ, ಪ್ರಧಾನಿ ಮೋದಿ ಮತ್ತು ರಷ್ಯಾ ಅಧ್ಯಕ್ಷ ಪುಟಿನ್‌‌ ಜೊತೆಗೆ ನಡೆದುಕೊಂಡು ಹೋಗುತ್ತಿರುವ ವಿಡಿಯೊವೊಂದರ ಜೊತೆಗೆ, “ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ ರಷ್ಯಾ ಅಧ್ಯಕ್ಷ ಪುಟಿನ್, ಭಾರತದ ಪ್ರಧಾನಿ ಜೊತೆಗೆ ಮಾತುಕತೆ ನಡೆಸಲು ಮನವಿ ಮಾಡಿದ್ದರು” ಎಂಬ ಸಂದೇಶವೊಂದು ವೈರಲ್‌ ಆಗುತ್ತಿದೆ.

“ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದ ನಂತರ ರಷ್ಯಾ ಅಧ್ಯಕ್ಷ ವಾಲ್ಡಮೀರ್ ಪುಟಿನ್ ಮೊದಲು ಮಾತುಕತೆ ನೆಡೆಸಲು ಮನವಿ ಮಾಡಿದ್ದು ಭಾರತದ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೊತೆಗೆ ಹೊರತು ಬೇರೆ ದೇಶದ ಜೊತೆಗಲ್ಲ….ಮೋದಿ ಗತ್ತು ವಿಶ್ವಕ್ಕೆ ಗೊತ್ತು” ಎಂದು ವಿಡಿಯೊ ಜೊತೆಗಿನ ಸಂದೇಶ ಪ್ರತಿಪಾದಿಸುತ್ತದೆ.

ಫೇಸ್‌ಬುಕ್‌ನಲ್ಲಿ ಹರಿದಾಡುತ್ತಿರುವ ಈ ವಿಡಿಯೊ ಮತ್ತು ಸಂದೇಶವನ್ನು ಹಲವಾರು ಬಳಕೆದಾರರು, ಅದರಲ್ಲೂ ಮುಖ್ಯವಾಗಿ ಬಿಜೆಪಿ ಬೆಂಬಲಿಗರು ಹಂಚಿಕೊಳ್ಳುತ್ತಿದ್ದಾರೆ. ಅವುಗಳನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ಫ್ಯಾಕ್ಟ್‌ಚೆಕ್

ಉಕ್ರೇನ್‌-ರಷ್ಯಾ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಹಲವಾರು ಸಂಬಂಧಪಡದ, ಹಳೆಯ ಚಿತ್ರಗಳು ಹಾಗೂ ವಿಡಿಯೊಗಳು ಹರಿದಾಡುತ್ತಿದೆ. ವಿಡಿಯೊ ಮತ್ತು ವೈರಲ್ ಸಂದೇಶದ ಬಗ್ಗೆ ನಾನುಗೌರಿ.ಕಾಂ ಬೇರೆ ಬೇರೆಯಾಗಿ ಪರಿಶೀಲನೆ ನಡೆಸಿದೆ.

  • ವೈರಲ್ ವಿಡಿಯೊ 2021 ರ ಡಿಸೆಂಬರ್‌ 6ರದ್ದಾಗಿದೆ

ವೈರಲ್ ಸಂದೇಶ ಜೊತೆಗೆ ಹರಿದಾಡುತ್ತಿರುವ ವಿಡಿಯೊವನ್ನು ಕೆಲವು ಕೀವರ್ಡ್‌ಗಳ ಮೂಲಕ ಹುಡುಕಾಡಿದಾಗ ಈ ವಿಡಿಯೊ 2021 ರ ಡಿಸೆಂಬರ್‌ 6 ರಂದು ಮಾಡಿರುವ ವಿಡಿಯೊ ಎಂದು ತಿಳಿದು ಬಂದಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ 21 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯನ್ನು 2021 ರ ಡಿಸೆಂಬರ್‌ 6ರಂದು ನಡೆಸಿದ್ದರು. ಉಭಯ ನಾಯಕರು ಭಾರತ ಮತ್ತು ರಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳು ಮತ್ತು ಕಾರ್ಯತಂತ್ರದ ಪಾಲುದಾರಿಕೆಯ ನಿರೀಕ್ಷೆಗಳನ್ನು ಚರ್ಚಿಸಿದ್ದರು. ಈ ಭೇಟಿಯ ಸಂದಂರ್ಭದಲ್ಲಿ ಮಾಡಲಾಗಿರುವ ವೀಡಿಯೊ ಇದಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಇಸ್ಲಾಂ ವಿರುದ್ಧ ದ್ವೇಷ ಹರಡುವ ಈ ಲೇಖನ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಬರೆದಿಲ್ಲ

  • ವೈರಲ್‌ ಸಂದೇಶ ಸುಳ್ಳಾಗಿದ್ದು, ಇದಕ್ಕೆ ಯಾವುದೇ ಆಧಾರವಿಲ್ಲ.

ವಿಡಿಯೊ ಜೊತೆಗೆ ಹರಿಡಾಡುತ್ತಿರುವ ಸಂದೇಶವು, “ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದ ನಂತರ ರಷ್ಯಾ ಅಧ್ಯಕ್ಷ ವಾಲ್ಡಮೀರ್ ಪುಟಿನ್ ಅವರು ಪ್ರಧಾನಿ ಮೋದಿ ಜೊತೆಗೆ ಮಾತುಕತೆ ನೆಡೆಸಲು ಮನವಿ ಮಾಡಿದ್ದರು” ಎಂದು ಪ್ರತಿಪಾದಿಸುತ್ತದೆ.

ವೈರಲ್ ಸಂದೇಶದಲ್ಲಿ ಹೇಳಿರುವಂತೆ, ಯುದ್ಧ ಪ್ರಾರಂಭವಾದ ನಂತರ ರಷ್ಯಾ ಅಧ್ಯಕ್ಷ ಪ್ರಧಾಮಿ ಮೋದಿ ಜೊತಗೆ ಮಾತುಕತೆಗೆ ವಿನಂತಿಸಿಯೆ ಇಲ್ಲ. ಈ ಬಗ್ಗೆ ಯಾವುದೇ ಸುದ್ದಿಗಳು ಇದುವರೆಗೂ ಲಭ್ಯವಿಲ್ಲ. ಒಂದು ವೇಳೆ ಪುಟಿನ್‌ ಈ ರೀತಿಯಾಗಿ ವಿನಂತಿಸಿದ್ದರೆ ವಿಶ್ವದ ಹಲವು ಮಾಧ್ಯಮಗಳು ವರದಿ ಮಾಡಿರುತ್ತಿದ್ದವು. ಆದರೆ ನಾನುಗೌರಿ.ಕಾಂಗೆ ಈ ರೀತಿಯ ಯಾವುದೆ ಸುದ್ದಿ ಲಭ್ಯವಾಗಿಲ್ಲ.

ಆದರೆ ರಷ್ಯಾ-ಉಕ್ರೇನ್‌ ಯದ್ಧ ಪ್ರಾರಂಭವಾದ ನಂತರ ಪ್ರಧಾನಿ ಮೋದಿ ಪುಟಿನ್‌ಗೆ ಕರೆ ಮಾಡಿ ಶಾಂತಿ ಕಾಪಾಡುವಂತೆ ಕರೆ ನೀಡಿದ್ದರು. ಜೊತೆಗೆ ಬಿಕ್ಕಟ್ಟಿನ ಬಗ್ಗೆ ವಿಶ್ವಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ಎರಡು ಸಭೆಯಲ್ಲೂ ಭಾರತ ತಟಸ್ಥ ನೀತಿಯನ್ನು ಅನುಸರಿಸಿದೆ.

ಪುಟಿನ್‌ ಪ್ರಧಾನಿ ಮೋದಿಗೆ ಕರೆ ಮಾಡಿರುವ ಯಾವುದೆ ಸುದ್ದಿ ಲಭ್ಯವಾಗಿಲ್ಲ, ಬದಲಾಗಿ ಮೋದಿಯೆ ಪುಟಿನ್‌ಗೆ ಕರೆ ಮಾಡಿದ್ದರು.

ಒಟ್ಟಿನಲ್ಲಿ ವೈರಲ್‌ ವಿಡಿಯೊ ಮತ್ತು ಸಂದೇಶ ಹೇಳುವಂತೆ, ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದ ನಂತರ ರಷ್ಯಾ ಅಧ್ಯಕ್ಷ ವಾಲ್ಡಮೀರ್ ಪುಟಿನ್ ಅವರು ಪ್ರಧಾನಿ ಮೋದಿ ಜೊತೆಗೆ ಮಾತುಕತೆ ನೆಡೆಸಲು ಮನವಿ ಮಾಡಿದ್ದರು ಎಂಬುವುದು ಸುಳ್ಳು ಪ್ರತಿಪಾದನೆಯಾಗಿದೆ. ಅದರ ಜೊತೆಗೆ ವೈರಲ್‌ ಆಗಿರುವ ವಿಡಿಯೊ 2021 ರ ಡಿಸೆಂಬರ್‌ 6ರಂದು ನಡೆದ 21 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯದ್ದಾಗಿದೆ.

ರಷ್ಯಾ ಮತ್ತು ಉಕ್ರೇನ್ ಯುದ್ಧ ಪ್ರಾರಂಭವಾದ ನಂತರ ಪ್ರಧಾನಿ ಮೋದಿ ಶಾಂತಿ ಕಾಪಾಡುವಂತೆ ಕರೆ ನೀಡಿದ್ದರು. ಆದರೂ ರಷ್ಯಾ ಮತ್ತು ಉಕ್ರೇನ್ ಯುದ್ಧ ಮುಂದುವರೆದಿದೆ. ಯುದ್ದದಿಂದಾಗಿ 14 ಮಕ್ಕಳು ಸೇರಿದಂತೆ 352 ಉಕ್ರೇನಿಯನ್ ನಾಗರಿಕರು ಮೃತಪಟ್ಟಿದ್ದು, 1,684 ಮಂದಿಗೆ ಗಾಯಗೊಂಡಿದ್ದಾರೆ ಎಂದು ಉಕ್ರೇನ್‌ ಅಧೀಕೃತವಾಗಿ ಹೇಳಿದೆ.

ರಷ್ಯಾ ಮತ್ತು ಉಕ್ರೇನ್ ಬಿಕ್ಕಟ್ಟು ಪ್ರಾರಂಭವಾದ ನಂತರ ಸಂಬಂಧಪಡದ ಹಲವು ಹಳೆಯ ವಿಡಿಯೊ ಹಾಗೂ ಚಿತ್ರಗಳು ಹರಿದಾಡುತ್ತಿದೆ. ಇವುಗಳನ್ನು ನಾನುಗೌರಿ.ಕಾಂ ಫ್ಯಾಕ್ಟ್‌ಚೆಕ್‌ ಮಾಡಿದೆ. ಇದನ್ನು ನೀವು ಇಲ್ಲಿ   ನೋಡಬಹುದು. ಅಲ್ಲದೆ ಇತರ ಫ್ಯಾಕ್ಟ್‌ಚೆಕ್‌ ಲೇಖನಗಳಿಗೆ ನಮ್ಮ ಏನ್‌ಸುದ್ದಿ.ಕಾಂ ವೆಬ್‌ಸೈಟ್‌ಅನ್ನು ನೀವು ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...