Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಉಕ್ರೇನ್‌‌‌ ಮೇಲಿನ ದಾಳಿಯ ನಂತರ ಪುಟಿನ್‌ ಅವರು ಮೋದಿ ಜೊತೆಗೆ ಮಾತುಕತೆಗೆ ಮನವಿ ಮಾಡಿಲ್ಲ

ಫ್ಯಾಕ್ಟ್‌ಚೆಕ್: ಉಕ್ರೇನ್‌‌‌ ಮೇಲಿನ ದಾಳಿಯ ನಂತರ ಪುಟಿನ್‌ ಅವರು ಮೋದಿ ಜೊತೆಗೆ ಮಾತುಕತೆಗೆ ಮನವಿ ಮಾಡಿಲ್ಲ

- Advertisement -
- Advertisement -

ಉಕ್ರೇನ್‌-ರಷ್ಯಾ ಬಿಕ್ಕಟ್ಟಿನ ಹಿನ್ನಲೆಯಲ್ಲಿ, ಪ್ರಧಾನಿ ಮೋದಿ ಮತ್ತು ರಷ್ಯಾ ಅಧ್ಯಕ್ಷ ಪುಟಿನ್‌‌ ಜೊತೆಗೆ ನಡೆದುಕೊಂಡು ಹೋಗುತ್ತಿರುವ ವಿಡಿಯೊವೊಂದರ ಜೊತೆಗೆ, “ಉಕ್ರೇನ್ ಮೇಲೆ ಆಕ್ರಮಣ ಮಾಡಿದ ನಂತರ ರಷ್ಯಾ ಅಧ್ಯಕ್ಷ ಪುಟಿನ್, ಭಾರತದ ಪ್ರಧಾನಿ ಜೊತೆಗೆ ಮಾತುಕತೆ ನಡೆಸಲು ಮನವಿ ಮಾಡಿದ್ದರು” ಎಂಬ ಸಂದೇಶವೊಂದು ವೈರಲ್‌ ಆಗುತ್ತಿದೆ.

“ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದ ನಂತರ ರಷ್ಯಾ ಅಧ್ಯಕ್ಷ ವಾಲ್ಡಮೀರ್ ಪುಟಿನ್ ಮೊದಲು ಮಾತುಕತೆ ನೆಡೆಸಲು ಮನವಿ ಮಾಡಿದ್ದು ಭಾರತದ ಪ್ರಧಾನಿ ಶ್ರೀ ನರೇಂದ್ರ ಮೋದಿ ಜೊತೆಗೆ ಹೊರತು ಬೇರೆ ದೇಶದ ಜೊತೆಗಲ್ಲ….ಮೋದಿ ಗತ್ತು ವಿಶ್ವಕ್ಕೆ ಗೊತ್ತು” ಎಂದು ವಿಡಿಯೊ ಜೊತೆಗಿನ ಸಂದೇಶ ಪ್ರತಿಪಾದಿಸುತ್ತದೆ.

ಫೇಸ್‌ಬುಕ್‌ನಲ್ಲಿ ಹರಿದಾಡುತ್ತಿರುವ ಈ ವಿಡಿಯೊ ಮತ್ತು ಸಂದೇಶವನ್ನು ಹಲವಾರು ಬಳಕೆದಾರರು, ಅದರಲ್ಲೂ ಮುಖ್ಯವಾಗಿ ಬಿಜೆಪಿ ಬೆಂಬಲಿಗರು ಹಂಚಿಕೊಳ್ಳುತ್ತಿದ್ದಾರೆ. ಅವುಗಳನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ಫ್ಯಾಕ್ಟ್‌ಚೆಕ್

ಉಕ್ರೇನ್‌-ರಷ್ಯಾ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಹಲವಾರು ಸಂಬಂಧಪಡದ, ಹಳೆಯ ಚಿತ್ರಗಳು ಹಾಗೂ ವಿಡಿಯೊಗಳು ಹರಿದಾಡುತ್ತಿದೆ. ವಿಡಿಯೊ ಮತ್ತು ವೈರಲ್ ಸಂದೇಶದ ಬಗ್ಗೆ ನಾನುಗೌರಿ.ಕಾಂ ಬೇರೆ ಬೇರೆಯಾಗಿ ಪರಿಶೀಲನೆ ನಡೆಸಿದೆ.

  • ವೈರಲ್ ವಿಡಿಯೊ 2021 ರ ಡಿಸೆಂಬರ್‌ 6ರದ್ದಾಗಿದೆ

ವೈರಲ್ ಸಂದೇಶ ಜೊತೆಗೆ ಹರಿದಾಡುತ್ತಿರುವ ವಿಡಿಯೊವನ್ನು ಕೆಲವು ಕೀವರ್ಡ್‌ಗಳ ಮೂಲಕ ಹುಡುಕಾಡಿದಾಗ ಈ ವಿಡಿಯೊ 2021 ರ ಡಿಸೆಂಬರ್‌ 6 ರಂದು ಮಾಡಿರುವ ವಿಡಿಯೊ ಎಂದು ತಿಳಿದು ಬಂದಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ನವದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ 21 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯನ್ನು 2021 ರ ಡಿಸೆಂಬರ್‌ 6ರಂದು ನಡೆಸಿದ್ದರು. ಉಭಯ ನಾಯಕರು ಭಾರತ ಮತ್ತು ರಷ್ಯಾ ನಡುವಿನ ದ್ವಿಪಕ್ಷೀಯ ಸಂಬಂಧಗಳು ಮತ್ತು ಕಾರ್ಯತಂತ್ರದ ಪಾಲುದಾರಿಕೆಯ ನಿರೀಕ್ಷೆಗಳನ್ನು ಚರ್ಚಿಸಿದ್ದರು. ಈ ಭೇಟಿಯ ಸಂದಂರ್ಭದಲ್ಲಿ ಮಾಡಲಾಗಿರುವ ವೀಡಿಯೊ ಇದಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಇಸ್ಲಾಂ ವಿರುದ್ಧ ದ್ವೇಷ ಹರಡುವ ಈ ಲೇಖನ ತೋಂಟದಾರ್ಯ ಮಠದ ನಿಜಗುಣಾನಂದ ಸ್ವಾಮಿ ಬರೆದಿಲ್ಲ

  • ವೈರಲ್‌ ಸಂದೇಶ ಸುಳ್ಳಾಗಿದ್ದು, ಇದಕ್ಕೆ ಯಾವುದೇ ಆಧಾರವಿಲ್ಲ.

ವಿಡಿಯೊ ಜೊತೆಗೆ ಹರಿಡಾಡುತ್ತಿರುವ ಸಂದೇಶವು, “ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದ ನಂತರ ರಷ್ಯಾ ಅಧ್ಯಕ್ಷ ವಾಲ್ಡಮೀರ್ ಪುಟಿನ್ ಅವರು ಪ್ರಧಾನಿ ಮೋದಿ ಜೊತೆಗೆ ಮಾತುಕತೆ ನೆಡೆಸಲು ಮನವಿ ಮಾಡಿದ್ದರು” ಎಂದು ಪ್ರತಿಪಾದಿಸುತ್ತದೆ.

ವೈರಲ್ ಸಂದೇಶದಲ್ಲಿ ಹೇಳಿರುವಂತೆ, ಯುದ್ಧ ಪ್ರಾರಂಭವಾದ ನಂತರ ರಷ್ಯಾ ಅಧ್ಯಕ್ಷ ಪ್ರಧಾಮಿ ಮೋದಿ ಜೊತಗೆ ಮಾತುಕತೆಗೆ ವಿನಂತಿಸಿಯೆ ಇಲ್ಲ. ಈ ಬಗ್ಗೆ ಯಾವುದೇ ಸುದ್ದಿಗಳು ಇದುವರೆಗೂ ಲಭ್ಯವಿಲ್ಲ. ಒಂದು ವೇಳೆ ಪುಟಿನ್‌ ಈ ರೀತಿಯಾಗಿ ವಿನಂತಿಸಿದ್ದರೆ ವಿಶ್ವದ ಹಲವು ಮಾಧ್ಯಮಗಳು ವರದಿ ಮಾಡಿರುತ್ತಿದ್ದವು. ಆದರೆ ನಾನುಗೌರಿ.ಕಾಂಗೆ ಈ ರೀತಿಯ ಯಾವುದೆ ಸುದ್ದಿ ಲಭ್ಯವಾಗಿಲ್ಲ.

ಆದರೆ ರಷ್ಯಾ-ಉಕ್ರೇನ್‌ ಯದ್ಧ ಪ್ರಾರಂಭವಾದ ನಂತರ ಪ್ರಧಾನಿ ಮೋದಿ ಪುಟಿನ್‌ಗೆ ಕರೆ ಮಾಡಿ ಶಾಂತಿ ಕಾಪಾಡುವಂತೆ ಕರೆ ನೀಡಿದ್ದರು. ಜೊತೆಗೆ ಬಿಕ್ಕಟ್ಟಿನ ಬಗ್ಗೆ ವಿಶ್ವಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ ಎರಡು ಸಭೆಯಲ್ಲೂ ಭಾರತ ತಟಸ್ಥ ನೀತಿಯನ್ನು ಅನುಸರಿಸಿದೆ.

ಪುಟಿನ್‌ ಪ್ರಧಾನಿ ಮೋದಿಗೆ ಕರೆ ಮಾಡಿರುವ ಯಾವುದೆ ಸುದ್ದಿ ಲಭ್ಯವಾಗಿಲ್ಲ, ಬದಲಾಗಿ ಮೋದಿಯೆ ಪುಟಿನ್‌ಗೆ ಕರೆ ಮಾಡಿದ್ದರು.

ಒಟ್ಟಿನಲ್ಲಿ ವೈರಲ್‌ ವಿಡಿಯೊ ಮತ್ತು ಸಂದೇಶ ಹೇಳುವಂತೆ, ಉಕ್ರೇನ್ ಮೇಲೆ ರಷ್ಯಾ ಆಕ್ರಮಣ ಮಾಡಿದ ನಂತರ ರಷ್ಯಾ ಅಧ್ಯಕ್ಷ ವಾಲ್ಡಮೀರ್ ಪುಟಿನ್ ಅವರು ಪ್ರಧಾನಿ ಮೋದಿ ಜೊತೆಗೆ ಮಾತುಕತೆ ನೆಡೆಸಲು ಮನವಿ ಮಾಡಿದ್ದರು ಎಂಬುವುದು ಸುಳ್ಳು ಪ್ರತಿಪಾದನೆಯಾಗಿದೆ. ಅದರ ಜೊತೆಗೆ ವೈರಲ್‌ ಆಗಿರುವ ವಿಡಿಯೊ 2021 ರ ಡಿಸೆಂಬರ್‌ 6ರಂದು ನಡೆದ 21 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯದ್ದಾಗಿದೆ.

ರಷ್ಯಾ ಮತ್ತು ಉಕ್ರೇನ್ ಯುದ್ಧ ಪ್ರಾರಂಭವಾದ ನಂತರ ಪ್ರಧಾನಿ ಮೋದಿ ಶಾಂತಿ ಕಾಪಾಡುವಂತೆ ಕರೆ ನೀಡಿದ್ದರು. ಆದರೂ ರಷ್ಯಾ ಮತ್ತು ಉಕ್ರೇನ್ ಯುದ್ಧ ಮುಂದುವರೆದಿದೆ. ಯುದ್ದದಿಂದಾಗಿ 14 ಮಕ್ಕಳು ಸೇರಿದಂತೆ 352 ಉಕ್ರೇನಿಯನ್ ನಾಗರಿಕರು ಮೃತಪಟ್ಟಿದ್ದು, 1,684 ಮಂದಿಗೆ ಗಾಯಗೊಂಡಿದ್ದಾರೆ ಎಂದು ಉಕ್ರೇನ್‌ ಅಧೀಕೃತವಾಗಿ ಹೇಳಿದೆ.

ರಷ್ಯಾ ಮತ್ತು ಉಕ್ರೇನ್ ಬಿಕ್ಕಟ್ಟು ಪ್ರಾರಂಭವಾದ ನಂತರ ಸಂಬಂಧಪಡದ ಹಲವು ಹಳೆಯ ವಿಡಿಯೊ ಹಾಗೂ ಚಿತ್ರಗಳು ಹರಿದಾಡುತ್ತಿದೆ. ಇವುಗಳನ್ನು ನಾನುಗೌರಿ.ಕಾಂ ಫ್ಯಾಕ್ಟ್‌ಚೆಕ್‌ ಮಾಡಿದೆ. ಇದನ್ನು ನೀವು ಇಲ್ಲಿ   ನೋಡಬಹುದು. ಅಲ್ಲದೆ ಇತರ ಫ್ಯಾಕ್ಟ್‌ಚೆಕ್‌ ಲೇಖನಗಳಿಗೆ ನಮ್ಮ ಏನ್‌ಸುದ್ದಿ.ಕಾಂ ವೆಬ್‌ಸೈಟ್‌ಅನ್ನು ನೀವು ನೋಡಬಹುದು.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ‘ಮಸೀದಿ ಕಟ್ಟಿಸು’ ಎಂದು ಅಖಿಲೇಶ್‌ಗೆ ವೃದ್ಧ ಛೀಮಾರಿ ಹಾಕಿಲ್ಲ; ಅವರು ಹೇಳಿದ್ದು EVM ಬಗ್ಗೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...