Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌-ಇದು ತಮಿಳುನಾಡೂ ಅಲ್ಲ, ಧ್ವಜ ಬಿಜೆಪಿಯದ್ದೂ ಅಲ್ಲ; ಎಡಿಟ್‌ ಚಿತ್ರ ಹಂಚಿದ ಸಿಟಿ ರವಿ

ಫ್ಯಾಕ್ಟ್‌ಚೆಕ್‌-ಇದು ತಮಿಳುನಾಡೂ ಅಲ್ಲ, ಧ್ವಜ ಬಿಜೆಪಿಯದ್ದೂ ಅಲ್ಲ; ಎಡಿಟ್‌ ಚಿತ್ರ ಹಂಚಿದ ಸಿಟಿ ರವಿ

- Advertisement -
- Advertisement -

ಒಬ್ಬರ ಮೇಲೊಬ್ಬರು ನಿಂತು ಕಂಬಕ್ಕೆ ಬಿಜೆಪಿ ಧ್ವಜವನ್ನು ಕಟ್ಟುತ್ತಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಈ ಚಿತ್ರವನ್ನು ಉಲ್ಲೇಖಿಸಿ “ತಮಿಳುನಾಡಿನಲ್ಲಿ ಬಿಜೆಪಿ ಅರಳುತ್ತಿದೆ” ಎಂದು  ಎಂದು ಪ್ರತಿಪಾದಿಸಲಾಗುತ್ತಿದೆ.

ಮುಖ್ಯವಾಗಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ, ತಮಿಳುನಾಡು ಉಸ್ತುವಾರಿ ಸಿಟಿ ರವಿ ಅವರು ಇದನ್ನು ಟ್ವಿಟರ್‌ನನಲ್ಲಿ ಹಂಚಿಕೊಂಡಿದ್ದಾರೆ. ಸಿಟಿ ರವಿ ಅಲ್ಲದೆ ಬಿಜೆಪಿ ಇತರ ರಾಷ್ಟ್ರೀಯ ನಾಯಕರು ಮತ್ತು ಬೆಂಬಲಿಗರು ಈ ಚಿತ್ರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಇದನ್ನು ಹಂಚಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಮಾಚಲ ಪ್ರದೇಶದ ಬಿಜೆಪಿ ವಕ್ತಾರೆ ಪ್ರಜ್ವಲ್ ಬುಸ್ತಾ ಮತ್ತು ಉತ್ತರ ದೆಹಲಿಯ ಮಾಜಿ ಮೇಯರ್ ರವೀಂದರ್ ಗುಪ್ತಾ ಸೇರಿದಂತೆ ಅನೇಕ ಟ್ವಿಟರ್‌ ಖಾತೆಗಳು ಈ ಚಿತ್ರವನ್ನು ಹಂಚಿಕೊಂಡಿವೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

ಫ್ಯಾಕ್ಟ್‌ಚೆಕ್

ವೈರಲ್ ಪೋಸ್ಟ್‌ನ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ಮೂಲ ಪೋಟೋದ ಮಾಹಿತಿ ಲಭ್ಯವಾಗಿದ್ದು, ಇದನ್ನು ಬಿಎಸ್‌ಪಿಯ ತೆಲಂಗಾಣ ಘಟಕದ ವಕ್ತಾರರಾದ ಶಿರಿಶಾ ಸ್ವೇರೊ ಅಕಿನಪಲ್ಲಿ ಅವರು ತಮ್ಮ ಖಾತೆಯಿಂದ ಮೇ 31 ರಂದು ಮಾಡಿದ ಟ್ವೀಟ್ ಮಾಡಿದ್ದರು.

ಬಿಜೆಪಿ ವೈರಲ್ ಮಾಡಿವುರ ಫೋಟೋದಲ್ಲಿ, ಯುವಕರು ಬಿಎಸ್ಪಿ ಧ್ವಜವನ್ನು ಹಾರಿಸುತ್ತಿರುವುದು ಕಾಣಬಹುದಾಗಿದೆ.

ಇಷ್ಟೇ ಅಲ್ಲದೆ, ಇದೇ ಚಿತ್ರವನ್ನು “ಅಂಬೇಡ್ಕರ್ ಸ್ಟೇಟಸ್‌” ಎಂಬ Pinterest ಪೇಜ್‌‌ನಲ್ಲಿ ಕೂಡಾ ಅಪ್‌ಲೋಡ್ ಮಾಡಲಾಗಿದೆ. ಅದನ್ನು ಕೆಳಗೆ ನೋಡಬಹುದಾಗಿದೆ.

ಎರಡು ಫೋಟೋಗಳನ್ನು ವಿಶ್ಲೇಷಣೆಗಾಗಿ ‘ಫೋಟೊ ಫೋರೆನ್ಸಿಕ್ಸ್‌’ನಲ್ಲಿ ಹುಡುಕಿದಾಗ ಕೂಡಾ ಬಿಜೆಪಿ ಧ್ವಜವನ್ನು ಮತ್ತೆ ಸೇರಿಸಲಾಗಿದೆ ಎಂದು ಕಂಡುಕೊಳ್ಳಲಾಗಿದೆ.

ಬಿಜೆಪಿ ಧ್ವಜ ಇರುವ ಚಿತ್ರವು ಎಡಿಟ್ ಮಾಡಲಾಗಿದೆ ಎಂದು ಇಂಡಿಯಾ ಟುಡೆ ಕೂಡಾ ಫ್ಯಾಕ್ಟ್‌ಚೆಕ್‌ ಮಾಡಿದೆ. ವೈರಲ್ ಚಿತ್ರದಲ್ಲಿ ಮೂಲ ಫೋಟೋ BSP ಧ್ವಜವನ್ನು ಹೊಂದಿದೆ ಎಂದು ಅದು ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಕಾಶ್ಮೀರದ ಈ ಎಲ್ಲಾ ಘಟನೆಗಳು ಮೋದಿ ಪ್ರಧಾನಿಯಾಗಿದ್ದಾಗಲೆ ನಡೆದಿದೆ!

ಒಟ್ಟಾರೆಯಾಗಿ ಹೇಳುವುದಾದರೆ, ಈ ಚಿತ್ರವೂ ತೆಲಂಗಾಣದ್ದಾಗಿದ್ದು, ಅದರಲ್ಲಿ ಯುವಕರು ಕಂಬವೊಂದಕ್ಕೆ BSPಯ ಧ್ವಜವನ್ನು ಒಬ್ಬರ ಮೇಲೆ ಒಬ್ಬರು ನಿಂತು ಕಟ್ಟಿದ್ದ ಧ್ವಜವನ್ನು ವಿಭಿನ್ನವಾಗಿ ಹಾರಿಸಿದ್ದರು. ಈ ಚಿತ್ರವನ್ನು ಕೆಲವು BJPಯ ಪ್ರಮುಖ ನಾಯಕರು ಸೇರಿದಂತೆ ಬೆಂಬಲಿಗರು, ತಮಿಳುನಾಡಿನಲ್ಲಿ BJP ಅರಳುತ್ತಿದೆ ಎಂದು ಪ್ರತಿಪಾದಿಸಿ, ಎಡಿಟೆಡ್‌ ಚಿತ್ರವನ್ನು ಹಂಚುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...