Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌-ಇದು ತಮಿಳುನಾಡೂ ಅಲ್ಲ, ಧ್ವಜ ಬಿಜೆಪಿಯದ್ದೂ ಅಲ್ಲ; ಎಡಿಟ್‌ ಚಿತ್ರ ಹಂಚಿದ ಸಿಟಿ ರವಿ

ಫ್ಯಾಕ್ಟ್‌ಚೆಕ್‌-ಇದು ತಮಿಳುನಾಡೂ ಅಲ್ಲ, ಧ್ವಜ ಬಿಜೆಪಿಯದ್ದೂ ಅಲ್ಲ; ಎಡಿಟ್‌ ಚಿತ್ರ ಹಂಚಿದ ಸಿಟಿ ರವಿ

- Advertisement -
- Advertisement -

ಒಬ್ಬರ ಮೇಲೊಬ್ಬರು ನಿಂತು ಕಂಬಕ್ಕೆ ಬಿಜೆಪಿ ಧ್ವಜವನ್ನು ಕಟ್ಟುತ್ತಿರುವ ಚಿತ್ರವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಈ ಚಿತ್ರವನ್ನು ಉಲ್ಲೇಖಿಸಿ “ತಮಿಳುನಾಡಿನಲ್ಲಿ ಬಿಜೆಪಿ ಅರಳುತ್ತಿದೆ” ಎಂದು  ಎಂದು ಪ್ರತಿಪಾದಿಸಲಾಗುತ್ತಿದೆ.

ಮುಖ್ಯವಾಗಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ, ತಮಿಳುನಾಡು ಉಸ್ತುವಾರಿ ಸಿಟಿ ರವಿ ಅವರು ಇದನ್ನು ಟ್ವಿಟರ್‌ನನಲ್ಲಿ ಹಂಚಿಕೊಂಡಿದ್ದಾರೆ. ಸಿಟಿ ರವಿ ಅಲ್ಲದೆ ಬಿಜೆಪಿ ಇತರ ರಾಷ್ಟ್ರೀಯ ನಾಯಕರು ಮತ್ತು ಬೆಂಬಲಿಗರು ಈ ಚಿತ್ರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಇದನ್ನು ಹಂಚಿಕೊಂಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಮಾಚಲ ಪ್ರದೇಶದ ಬಿಜೆಪಿ ವಕ್ತಾರೆ ಪ್ರಜ್ವಲ್ ಬುಸ್ತಾ ಮತ್ತು ಉತ್ತರ ದೆಹಲಿಯ ಮಾಜಿ ಮೇಯರ್ ರವೀಂದರ್ ಗುಪ್ತಾ ಸೇರಿದಂತೆ ಅನೇಕ ಟ್ವಿಟರ್‌ ಖಾತೆಗಳು ಈ ಚಿತ್ರವನ್ನು ಹಂಚಿಕೊಂಡಿವೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

ಫ್ಯಾಕ್ಟ್‌ಚೆಕ್

ವೈರಲ್ ಪೋಸ್ಟ್‌ನ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ಮೂಲ ಪೋಟೋದ ಮಾಹಿತಿ ಲಭ್ಯವಾಗಿದ್ದು, ಇದನ್ನು ಬಿಎಸ್‌ಪಿಯ ತೆಲಂಗಾಣ ಘಟಕದ ವಕ್ತಾರರಾದ ಶಿರಿಶಾ ಸ್ವೇರೊ ಅಕಿನಪಲ್ಲಿ ಅವರು ತಮ್ಮ ಖಾತೆಯಿಂದ ಮೇ 31 ರಂದು ಮಾಡಿದ ಟ್ವೀಟ್ ಮಾಡಿದ್ದರು.

ಬಿಜೆಪಿ ವೈರಲ್ ಮಾಡಿವುರ ಫೋಟೋದಲ್ಲಿ, ಯುವಕರು ಬಿಎಸ್ಪಿ ಧ್ವಜವನ್ನು ಹಾರಿಸುತ್ತಿರುವುದು ಕಾಣಬಹುದಾಗಿದೆ.

ಇಷ್ಟೇ ಅಲ್ಲದೆ, ಇದೇ ಚಿತ್ರವನ್ನು “ಅಂಬೇಡ್ಕರ್ ಸ್ಟೇಟಸ್‌” ಎಂಬ Pinterest ಪೇಜ್‌‌ನಲ್ಲಿ ಕೂಡಾ ಅಪ್‌ಲೋಡ್ ಮಾಡಲಾಗಿದೆ. ಅದನ್ನು ಕೆಳಗೆ ನೋಡಬಹುದಾಗಿದೆ.

ಎರಡು ಫೋಟೋಗಳನ್ನು ವಿಶ್ಲೇಷಣೆಗಾಗಿ ‘ಫೋಟೊ ಫೋರೆನ್ಸಿಕ್ಸ್‌’ನಲ್ಲಿ ಹುಡುಕಿದಾಗ ಕೂಡಾ ಬಿಜೆಪಿ ಧ್ವಜವನ್ನು ಮತ್ತೆ ಸೇರಿಸಲಾಗಿದೆ ಎಂದು ಕಂಡುಕೊಳ್ಳಲಾಗಿದೆ.

ಬಿಜೆಪಿ ಧ್ವಜ ಇರುವ ಚಿತ್ರವು ಎಡಿಟ್ ಮಾಡಲಾಗಿದೆ ಎಂದು ಇಂಡಿಯಾ ಟುಡೆ ಕೂಡಾ ಫ್ಯಾಕ್ಟ್‌ಚೆಕ್‌ ಮಾಡಿದೆ. ವೈರಲ್ ಚಿತ್ರದಲ್ಲಿ ಮೂಲ ಫೋಟೋ BSP ಧ್ವಜವನ್ನು ಹೊಂದಿದೆ ಎಂದು ಅದು ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಕಾಶ್ಮೀರದ ಈ ಎಲ್ಲಾ ಘಟನೆಗಳು ಮೋದಿ ಪ್ರಧಾನಿಯಾಗಿದ್ದಾಗಲೆ ನಡೆದಿದೆ!

ಒಟ್ಟಾರೆಯಾಗಿ ಹೇಳುವುದಾದರೆ, ಈ ಚಿತ್ರವೂ ತೆಲಂಗಾಣದ್ದಾಗಿದ್ದು, ಅದರಲ್ಲಿ ಯುವಕರು ಕಂಬವೊಂದಕ್ಕೆ BSPಯ ಧ್ವಜವನ್ನು ಒಬ್ಬರ ಮೇಲೆ ಒಬ್ಬರು ನಿಂತು ಕಟ್ಟಿದ್ದ ಧ್ವಜವನ್ನು ವಿಭಿನ್ನವಾಗಿ ಹಾರಿಸಿದ್ದರು. ಈ ಚಿತ್ರವನ್ನು ಕೆಲವು BJPಯ ಪ್ರಮುಖ ನಾಯಕರು ಸೇರಿದಂತೆ ಬೆಂಬಲಿಗರು, ತಮಿಳುನಾಡಿನಲ್ಲಿ BJP ಅರಳುತ್ತಿದೆ ಎಂದು ಪ್ರತಿಪಾದಿಸಿ, ಎಡಿಟೆಡ್‌ ಚಿತ್ರವನ್ನು ಹಂಚುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...