Homeಕರ್ನಾಟಕFactcheck: ಕಲಬುರಗಿಯಲ್ಲಿ ಯಡಿಯೂರಪ್ಪ ಮೂರೇ ತಿಂಗಳಲ್ಲಿ ವಿಮಾನ ನಿಲ್ದಾಣ ಕಟ್ಟಿದರೆ? ನಿಜವೇನು?

Factcheck: ಕಲಬುರಗಿಯಲ್ಲಿ ಯಡಿಯೂರಪ್ಪ ಮೂರೇ ತಿಂಗಳಲ್ಲಿ ವಿಮಾನ ನಿಲ್ದಾಣ ಕಟ್ಟಿದರೆ? ನಿಜವೇನು?

- Advertisement -
- Advertisement -

ಫ್ಯಾಕ್ಟ್‌ಚೆಕ್‌

ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬ ಕಲಬುರಗಿ ಜಿಲ್ಲೆಯಲ್ಲಿ 40 ವರ್ಷಕ್ಕಿಂತ ಹೆಚ್ಚು ಕಾಲದಿಂದ ಆಡಳಿತ ನಡೆಸುತ್ತಿತ್ತು. ಆದರೆ ಒಂದೇ ಒಂದು ವಿಮಾನ ನಿಲ್ದಾಣ ನಿರ್ಮಿಸಲು ಸಾಧ್ಯವಾಗಲಿಲ್ಲ. ಇಂದು ಕಲಬುರ್ಗಿಯಲ್ಲಿ ವಿಮಾಣ ನಿಲ್ದಾಣವಾಗಿದೆ, ನರೇಂದ್ರ ಮೋದಿ ಮತ್ತು ಯಡಿಯೂರಪ್ಪನವರಿಗೆ ಧನ್ಯವಾದಗಳು ಎಂದು ‘ಪೋಸ್ಟ್ ಕಾರ್ಡ್ ಕನ್ನಡ’ ವಾದ ಮಾಡಿದೆ.

ಪೋಸ್ಟ್‌ ಕಾರ್ಡ್‌‌ನ ಆ ಸುಳ್ಳು ಸುದ್ದಿಇಯನ್ನು 826 ಜನ ಷೇರ್‌ ಮಾಡಿದ್ದು ಎರಡು ಸಾವಿರದಷ್ಟು ಜನ ಲೈಕ್‌ ಮಾಡಿದ್ದಾರೆ.

ಆದರೆ ವಾಸ್ತವವೇನು?

ನವೆಂಬರ್ 22ರಂದು ಕಲಬುರಗಿಯ ಶ್ರೀನಿವಾಸ ಸರಡಗಿ ಗ್ರಾಮದ ಬಳಿ ವಿಮಾನ ನಿಲ್ದಾಣವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಉದ್ಘಾಟನೆ ಮಾಡಿದರು. ಆಗ ಅಲ್ಲಿದ್ದ ಬಹಳಷ್ಟು ಕಾರ್ಯಕರ್ತರು ಮಲ್ಲಿಕಾರ್ಜುನ ಖರ್ಗೆಯವರಿಗೆ ಜೈಕಾರ ಕೂಗಿದರು. ಇದು ಯಡಿಯೂರಪ್ಪನವರಿಗೆ ಮುಜುಗರ ಉಂಟಾಯಿತು. ಆ ಕಾರ್ಯಕರ್ತರು ಹಾಗೇಕೆ ಮಾಡಿದರು?

ಇದನ್ನು ಓದಿ: ಯಡಿಯೂರಪ್ಪನವರ ಎದುರೆ ಖರ್ಗೆಗೆ ಜೈಕಾರ : ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆ ವೇಳೆ ಗದ್ದಲ

ಸತ್ಯ ಏನಂದರೆ, ಮಲ್ಲಿಕಾರ್ಜುನ ಖರ್ಗೆಯವರ ಅವಿರತ ಪ್ರಯತ್ನವಿಲ್ಲದಿದ್ದರೆ ಕಲಬುರ್ಗಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಸಾಧ್ಯವೇ ಇಲ್ಲವೆಂದು ಕಲಬುರ್ಗಿಯ ಸಣ್ಣ ಮಕ್ಕಳನ್ನು ಕೇಳಿದರೂ ಹೇಳುತ್ತಾರೆ. ಅದಕ್ಕಾಗಿ ಅವರು ಸಾಕಷ್ಟು ಶ್ರಮಿಸಿದ್ದಾರೆ. ಅವರು ಸಂಸದರಾಗಿದ್ದಾಗ 2016ರ ನವೆಂಬರ್ 5ರಂದು ಸ್ಥಳಕ್ಕೆ ಭೇಟಿ ನೀಡಿದ್ದ ಖರ್ಗೆಯವರು ಒಂದು ವರ್ಷದಲ್ಲಿ ಕಾಮಗಾರಿ ಮುಗಿಸುವಂತೆ ತಾಕೀತು ಮಾಡಿದ್ದರು ಮಾತ್ರವಲ್ಲದೇ ಅಗತ್ಯವಿದ್ದ 109 ಕೋಟಿ ರೂಗಳನ್ನು ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿಸಿದ್ದರು.

ಖರ್ಗೆ ಭೇಟಿ ನೀಡಿದ್ದ ಪತ್ರಿಕಾ ವರದಿ

ಅಲ್ಲದೇ ಕಳೆದ ವರ್ಷ ಆಗಸ್ಟ್ 25ರಂದು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು. ಆದರೆ ಅವರು ಈ ಬಾರಿ ಸೋತ ಕಾರಣ, ಪೂರ್ಣಗೊಂಡ ವಿಮಾನ ನಿಲ್ದಾಣವನ್ನು ಈಗಿನ ಮುಖ್ಯಮಂತ್ರಿ ಯಡಿಯೂರಪ್ಪನವರು ಉದ್ಘಾಟಿಸಿದ್ದಾರೆ ಅಷ್ಟೇ ಹೊರತು ಆ ನಿಲ್ದಾಣ ನಿರ್ಮಾಣದ ಪೂರ್ಣ ಶ್ರೇಯ ಖರ್ಗೆಯವರಿಗೆ ಸಲ್ಲಬೇಕು. ಪೋಸ್ಟ್‌ ಕಾರ್ಡ್‌ ನ್ಯೂಸ್‌ ಫೇಕ್‌ ಆಗಿದೆ.

ಡೆಕ್ಕನ್‌ ಹೆರಾಲ್ಡ್‌ ವರದಿ

ಯಡಿಯೂರಪ್ಪನವರು ಅಧಿಕಾರ ವಹಿಸಿಕೊಂಡು ಕೇವಲ ಮೂರು ತಿಂಗಳಾಗಿದೆ ಅಷ್ಟೇ. ಅಷ್ಟೊಂದು ಕಡಿಮೆ ಸಮಯದಲ್ಲಿ ವಿಮಾನ ನಿಲ್ದಾಣ ಕಟ್ಟಲಿಕ್ಕೆ ಸಾಧ್ಯವಿಲ್ಲ. ಆದರೂ ಅದರ ಕ್ರೆಡಿಟ್‌ ತೆಗೆದುಕೊಳ್ಳಲು ಯತ್ನಿಸಿದ್ದಾರೆ. ಹಾಗಾಗಿಯೇ ಸಿಟ್ಟೆಗೆದ್ದ ಆ ಕಾರ್ಯಕರ್ತರು ಖರ್ಗೆ ಪರ ಘೋಷಣೆ ಕೂಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...