Homeಕರ್ನಾಟಕFactcheck: ಕಲಬುರಗಿಯಲ್ಲಿ ಯಡಿಯೂರಪ್ಪ ಮೂರೇ ತಿಂಗಳಲ್ಲಿ ವಿಮಾನ ನಿಲ್ದಾಣ ಕಟ್ಟಿದರೆ? ನಿಜವೇನು?

Factcheck: ಕಲಬುರಗಿಯಲ್ಲಿ ಯಡಿಯೂರಪ್ಪ ಮೂರೇ ತಿಂಗಳಲ್ಲಿ ವಿಮಾನ ನಿಲ್ದಾಣ ಕಟ್ಟಿದರೆ? ನಿಜವೇನು?

- Advertisement -
- Advertisement -

ಫ್ಯಾಕ್ಟ್‌ಚೆಕ್‌

ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬ ಕಲಬುರಗಿ ಜಿಲ್ಲೆಯಲ್ಲಿ 40 ವರ್ಷಕ್ಕಿಂತ ಹೆಚ್ಚು ಕಾಲದಿಂದ ಆಡಳಿತ ನಡೆಸುತ್ತಿತ್ತು. ಆದರೆ ಒಂದೇ ಒಂದು ವಿಮಾನ ನಿಲ್ದಾಣ ನಿರ್ಮಿಸಲು ಸಾಧ್ಯವಾಗಲಿಲ್ಲ. ಇಂದು ಕಲಬುರ್ಗಿಯಲ್ಲಿ ವಿಮಾಣ ನಿಲ್ದಾಣವಾಗಿದೆ, ನರೇಂದ್ರ ಮೋದಿ ಮತ್ತು ಯಡಿಯೂರಪ್ಪನವರಿಗೆ ಧನ್ಯವಾದಗಳು ಎಂದು ‘ಪೋಸ್ಟ್ ಕಾರ್ಡ್ ಕನ್ನಡ’ ವಾದ ಮಾಡಿದೆ.

ಪೋಸ್ಟ್‌ ಕಾರ್ಡ್‌‌ನ ಆ ಸುಳ್ಳು ಸುದ್ದಿಇಯನ್ನು 826 ಜನ ಷೇರ್‌ ಮಾಡಿದ್ದು ಎರಡು ಸಾವಿರದಷ್ಟು ಜನ ಲೈಕ್‌ ಮಾಡಿದ್ದಾರೆ.

ಆದರೆ ವಾಸ್ತವವೇನು?

ನವೆಂಬರ್ 22ರಂದು ಕಲಬುರಗಿಯ ಶ್ರೀನಿವಾಸ ಸರಡಗಿ ಗ್ರಾಮದ ಬಳಿ ವಿಮಾನ ನಿಲ್ದಾಣವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಉದ್ಘಾಟನೆ ಮಾಡಿದರು. ಆಗ ಅಲ್ಲಿದ್ದ ಬಹಳಷ್ಟು ಕಾರ್ಯಕರ್ತರು ಮಲ್ಲಿಕಾರ್ಜುನ ಖರ್ಗೆಯವರಿಗೆ ಜೈಕಾರ ಕೂಗಿದರು. ಇದು ಯಡಿಯೂರಪ್ಪನವರಿಗೆ ಮುಜುಗರ ಉಂಟಾಯಿತು. ಆ ಕಾರ್ಯಕರ್ತರು ಹಾಗೇಕೆ ಮಾಡಿದರು?

ಇದನ್ನು ಓದಿ: ಯಡಿಯೂರಪ್ಪನವರ ಎದುರೆ ಖರ್ಗೆಗೆ ಜೈಕಾರ : ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆ ವೇಳೆ ಗದ್ದಲ

ಸತ್ಯ ಏನಂದರೆ, ಮಲ್ಲಿಕಾರ್ಜುನ ಖರ್ಗೆಯವರ ಅವಿರತ ಪ್ರಯತ್ನವಿಲ್ಲದಿದ್ದರೆ ಕಲಬುರ್ಗಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಸಾಧ್ಯವೇ ಇಲ್ಲವೆಂದು ಕಲಬುರ್ಗಿಯ ಸಣ್ಣ ಮಕ್ಕಳನ್ನು ಕೇಳಿದರೂ ಹೇಳುತ್ತಾರೆ. ಅದಕ್ಕಾಗಿ ಅವರು ಸಾಕಷ್ಟು ಶ್ರಮಿಸಿದ್ದಾರೆ. ಅವರು ಸಂಸದರಾಗಿದ್ದಾಗ 2016ರ ನವೆಂಬರ್ 5ರಂದು ಸ್ಥಳಕ್ಕೆ ಭೇಟಿ ನೀಡಿದ್ದ ಖರ್ಗೆಯವರು ಒಂದು ವರ್ಷದಲ್ಲಿ ಕಾಮಗಾರಿ ಮುಗಿಸುವಂತೆ ತಾಕೀತು ಮಾಡಿದ್ದರು ಮಾತ್ರವಲ್ಲದೇ ಅಗತ್ಯವಿದ್ದ 109 ಕೋಟಿ ರೂಗಳನ್ನು ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿಸಿದ್ದರು.

ಖರ್ಗೆ ಭೇಟಿ ನೀಡಿದ್ದ ಪತ್ರಿಕಾ ವರದಿ

ಅಲ್ಲದೇ ಕಳೆದ ವರ್ಷ ಆಗಸ್ಟ್ 25ರಂದು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು. ಆದರೆ ಅವರು ಈ ಬಾರಿ ಸೋತ ಕಾರಣ, ಪೂರ್ಣಗೊಂಡ ವಿಮಾನ ನಿಲ್ದಾಣವನ್ನು ಈಗಿನ ಮುಖ್ಯಮಂತ್ರಿ ಯಡಿಯೂರಪ್ಪನವರು ಉದ್ಘಾಟಿಸಿದ್ದಾರೆ ಅಷ್ಟೇ ಹೊರತು ಆ ನಿಲ್ದಾಣ ನಿರ್ಮಾಣದ ಪೂರ್ಣ ಶ್ರೇಯ ಖರ್ಗೆಯವರಿಗೆ ಸಲ್ಲಬೇಕು. ಪೋಸ್ಟ್‌ ಕಾರ್ಡ್‌ ನ್ಯೂಸ್‌ ಫೇಕ್‌ ಆಗಿದೆ.

ಡೆಕ್ಕನ್‌ ಹೆರಾಲ್ಡ್‌ ವರದಿ

ಯಡಿಯೂರಪ್ಪನವರು ಅಧಿಕಾರ ವಹಿಸಿಕೊಂಡು ಕೇವಲ ಮೂರು ತಿಂಗಳಾಗಿದೆ ಅಷ್ಟೇ. ಅಷ್ಟೊಂದು ಕಡಿಮೆ ಸಮಯದಲ್ಲಿ ವಿಮಾನ ನಿಲ್ದಾಣ ಕಟ್ಟಲಿಕ್ಕೆ ಸಾಧ್ಯವಿಲ್ಲ. ಆದರೂ ಅದರ ಕ್ರೆಡಿಟ್‌ ತೆಗೆದುಕೊಳ್ಳಲು ಯತ್ನಿಸಿದ್ದಾರೆ. ಹಾಗಾಗಿಯೇ ಸಿಟ್ಟೆಗೆದ್ದ ಆ ಕಾರ್ಯಕರ್ತರು ಖರ್ಗೆ ಪರ ಘೋಷಣೆ ಕೂಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...