Homeಕರ್ನಾಟಕFactcheck: ಕಲಬುರಗಿಯಲ್ಲಿ ಯಡಿಯೂರಪ್ಪ ಮೂರೇ ತಿಂಗಳಲ್ಲಿ ವಿಮಾನ ನಿಲ್ದಾಣ ಕಟ್ಟಿದರೆ? ನಿಜವೇನು?

Factcheck: ಕಲಬುರಗಿಯಲ್ಲಿ ಯಡಿಯೂರಪ್ಪ ಮೂರೇ ತಿಂಗಳಲ್ಲಿ ವಿಮಾನ ನಿಲ್ದಾಣ ಕಟ್ಟಿದರೆ? ನಿಜವೇನು?

- Advertisement -
- Advertisement -

ಫ್ಯಾಕ್ಟ್‌ಚೆಕ್‌

ಮಲ್ಲಿಕಾರ್ಜುನ ಖರ್ಗೆಯವರ ಕುಟುಂಬ ಕಲಬುರಗಿ ಜಿಲ್ಲೆಯಲ್ಲಿ 40 ವರ್ಷಕ್ಕಿಂತ ಹೆಚ್ಚು ಕಾಲದಿಂದ ಆಡಳಿತ ನಡೆಸುತ್ತಿತ್ತು. ಆದರೆ ಒಂದೇ ಒಂದು ವಿಮಾನ ನಿಲ್ದಾಣ ನಿರ್ಮಿಸಲು ಸಾಧ್ಯವಾಗಲಿಲ್ಲ. ಇಂದು ಕಲಬುರ್ಗಿಯಲ್ಲಿ ವಿಮಾಣ ನಿಲ್ದಾಣವಾಗಿದೆ, ನರೇಂದ್ರ ಮೋದಿ ಮತ್ತು ಯಡಿಯೂರಪ್ಪನವರಿಗೆ ಧನ್ಯವಾದಗಳು ಎಂದು ‘ಪೋಸ್ಟ್ ಕಾರ್ಡ್ ಕನ್ನಡ’ ವಾದ ಮಾಡಿದೆ.

ಪೋಸ್ಟ್‌ ಕಾರ್ಡ್‌‌ನ ಆ ಸುಳ್ಳು ಸುದ್ದಿಇಯನ್ನು 826 ಜನ ಷೇರ್‌ ಮಾಡಿದ್ದು ಎರಡು ಸಾವಿರದಷ್ಟು ಜನ ಲೈಕ್‌ ಮಾಡಿದ್ದಾರೆ.

ಆದರೆ ವಾಸ್ತವವೇನು?

ನವೆಂಬರ್ 22ರಂದು ಕಲಬುರಗಿಯ ಶ್ರೀನಿವಾಸ ಸರಡಗಿ ಗ್ರಾಮದ ಬಳಿ ವಿಮಾನ ನಿಲ್ದಾಣವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಉದ್ಘಾಟನೆ ಮಾಡಿದರು. ಆಗ ಅಲ್ಲಿದ್ದ ಬಹಳಷ್ಟು ಕಾರ್ಯಕರ್ತರು ಮಲ್ಲಿಕಾರ್ಜುನ ಖರ್ಗೆಯವರಿಗೆ ಜೈಕಾರ ಕೂಗಿದರು. ಇದು ಯಡಿಯೂರಪ್ಪನವರಿಗೆ ಮುಜುಗರ ಉಂಟಾಯಿತು. ಆ ಕಾರ್ಯಕರ್ತರು ಹಾಗೇಕೆ ಮಾಡಿದರು?

ಇದನ್ನು ಓದಿ: ಯಡಿಯೂರಪ್ಪನವರ ಎದುರೆ ಖರ್ಗೆಗೆ ಜೈಕಾರ : ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆ ವೇಳೆ ಗದ್ದಲ

ಸತ್ಯ ಏನಂದರೆ, ಮಲ್ಲಿಕಾರ್ಜುನ ಖರ್ಗೆಯವರ ಅವಿರತ ಪ್ರಯತ್ನವಿಲ್ಲದಿದ್ದರೆ ಕಲಬುರ್ಗಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಸಾಧ್ಯವೇ ಇಲ್ಲವೆಂದು ಕಲಬುರ್ಗಿಯ ಸಣ್ಣ ಮಕ್ಕಳನ್ನು ಕೇಳಿದರೂ ಹೇಳುತ್ತಾರೆ. ಅದಕ್ಕಾಗಿ ಅವರು ಸಾಕಷ್ಟು ಶ್ರಮಿಸಿದ್ದಾರೆ. ಅವರು ಸಂಸದರಾಗಿದ್ದಾಗ 2016ರ ನವೆಂಬರ್ 5ರಂದು ಸ್ಥಳಕ್ಕೆ ಭೇಟಿ ನೀಡಿದ್ದ ಖರ್ಗೆಯವರು ಒಂದು ವರ್ಷದಲ್ಲಿ ಕಾಮಗಾರಿ ಮುಗಿಸುವಂತೆ ತಾಕೀತು ಮಾಡಿದ್ದರು ಮಾತ್ರವಲ್ಲದೇ ಅಗತ್ಯವಿದ್ದ 109 ಕೋಟಿ ರೂಗಳನ್ನು ರಾಜ್ಯ ಸರ್ಕಾರದಿಂದ ಬಿಡುಗಡೆ ಮಾಡಿಸಿದ್ದರು.

ಖರ್ಗೆ ಭೇಟಿ ನೀಡಿದ್ದ ಪತ್ರಿಕಾ ವರದಿ

ಅಲ್ಲದೇ ಕಳೆದ ವರ್ಷ ಆಗಸ್ಟ್ 25ರಂದು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು. ಆದರೆ ಅವರು ಈ ಬಾರಿ ಸೋತ ಕಾರಣ, ಪೂರ್ಣಗೊಂಡ ವಿಮಾನ ನಿಲ್ದಾಣವನ್ನು ಈಗಿನ ಮುಖ್ಯಮಂತ್ರಿ ಯಡಿಯೂರಪ್ಪನವರು ಉದ್ಘಾಟಿಸಿದ್ದಾರೆ ಅಷ್ಟೇ ಹೊರತು ಆ ನಿಲ್ದಾಣ ನಿರ್ಮಾಣದ ಪೂರ್ಣ ಶ್ರೇಯ ಖರ್ಗೆಯವರಿಗೆ ಸಲ್ಲಬೇಕು. ಪೋಸ್ಟ್‌ ಕಾರ್ಡ್‌ ನ್ಯೂಸ್‌ ಫೇಕ್‌ ಆಗಿದೆ.

ಡೆಕ್ಕನ್‌ ಹೆರಾಲ್ಡ್‌ ವರದಿ

ಯಡಿಯೂರಪ್ಪನವರು ಅಧಿಕಾರ ವಹಿಸಿಕೊಂಡು ಕೇವಲ ಮೂರು ತಿಂಗಳಾಗಿದೆ ಅಷ್ಟೇ. ಅಷ್ಟೊಂದು ಕಡಿಮೆ ಸಮಯದಲ್ಲಿ ವಿಮಾನ ನಿಲ್ದಾಣ ಕಟ್ಟಲಿಕ್ಕೆ ಸಾಧ್ಯವಿಲ್ಲ. ಆದರೂ ಅದರ ಕ್ರೆಡಿಟ್‌ ತೆಗೆದುಕೊಳ್ಳಲು ಯತ್ನಿಸಿದ್ದಾರೆ. ಹಾಗಾಗಿಯೇ ಸಿಟ್ಟೆಗೆದ್ದ ಆ ಕಾರ್ಯಕರ್ತರು ಖರ್ಗೆ ಪರ ಘೋಷಣೆ ಕೂಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...