Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ನಾಟಕೀಯ ವಿಡಿಯೋಗಳ ಬಗ್ಗೆ ಗಮನವಿರಲಿ.. ಹಂಚುವ ಮುನ್ನ ಪರಿಶೀಲಿಸಿ

ಫ್ಯಾಕ್ಟ್‌ಚೆಕ್: ನಾಟಕೀಯ ವಿಡಿಯೋಗಳ ಬಗ್ಗೆ ಗಮನವಿರಲಿ.. ಹಂಚುವ ಮುನ್ನ ಪರಿಶೀಲಿಸಿ

ಸೂಟ್‌ಕೇಸ್‌ನಲ್ಲಿ ಬಾಲಕಿಯ ಅಪರಹಣ ಎಂಬುದು ನಿಜವಾಗಿ ನಡೆದ ಘಟನೆಯಲ್ಲ. ಅದು ನಟಿಸಿದ ವಿಡಿಯೋ ಆಗಿದೆ.

- Advertisement -
- Advertisement -

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಡಿಯೋ ಸಂಚಲನ ಮೂಡಿಸಿತ್ತು. ಅದೇನೆಂದರೆ ಒಬ್ಬ ವ್ಯಕ್ತಿ ಅಪ್ರಾಪ್ತ ಬಾಲಕಿಯನ್ನು ಸೂಟ್ ಕೇಸ್ ನಲ್ಲಿ ತುಂಬಿ ಅಪಹರಣ ಮಾಡಿದಂತಹ ವೀಡಿಯೋವನ್ನು ರಾಣಾ ಜಸ್ ವೀರ್ ಎಂಬುವವರು ತಮ್ಮ ಟ್ಟಿಟರ್ ಖಾತೆಯಲ್ಲಿ ಶೇರ್ ಮಾಡಿದ್ದರು. ಆನಂತರ ಅದು ಫೇಸ್‌ಬುಕ್‌ ವಾಟ್ಸಾಪ್‌ಗಳಲ್ಲಿ ವೈರಲ್ ಆಗತೊಡಗಿದೆ. ಸಾವಿರಾರು ಜನರು ಈ ವಿಡಿಯೋವನ್ನು ವೀಕ್ಷಿಸಿರುವುದು ಕಂಡುಬಂದಿದೆ.

ಈ ವಿಡಿಯೋದ ಮೂಲ ಹಿಡಿದು ಹೊರಟಿದಾಗ ಭಗವಂತ್ ಸಿಂಗ್ ರುಪಾಲ್, ಪಂಜಾಬ್ ಮೂಲದ ರೋಜಾನಾ ಸ್ಪೋಕ್ಸ್‌ಮ್ಯಾನ್ ಎಂಬ ಪತ್ರಿಕೆಯ ಫ್ಯಾಕ್ಟ್ ಚೆಕ್ ನಡೆಸುವವರು ಇದು ನಾಟಕೀಯ ವಿಡಿಯೋವಾಗಿದೆ ಎಂದು ಖಚಿತ ಪಡಿಸಿದ್ದಾರೆ. ಭಾರ್ತಿ ಪ್ರಾಂಕ್ ಎಂಬ ಯೂಟ್ಯೂಬ್ ಚಾನೆಲ್‌ ಮೂಲಕ ಹಲವಾರು ನಾಟಕೀಯ ಅಭಿಯನದ ವಿಡಿಯೋಗಳನ್ನು ಅವರು ಹಂಚಿಕೊಂಡಿರುವುದು ಕಂಡುಬಂದಿದೆ.

ಆ ಚಾನೆಲ್‌ನಲ್ಲಿ ಇದರ ಮೂಲ ವಿಡಿಯೋದ ದೊರಕಿದೆ. ಈ ವೀಡಿಯೋದ ಅಸಲಿಯತ್ತು ಏನಂದ್ರೆ ಇದೊಂದು ಪ್ರಾಂಕ್ ವೀಡಿಯೋ. ರಾಜು ಭಾರ್ತಿ ಎಂಬುವವರು ಸಾಮಾಜಿಕ ಜಾಗೃತಿ ಮೂಡಿಸು ಸಲುವಾಗಿ ಕೆಲವು ವೀಡಿಯೋಗಳನ್ನು ಮಾಡಿ ತಮ್ಮ ಸೋಶಿಯಲ್ ಮೀಡಿಯಾಗಳಲ್ಲಿ ಶೇರ್ ಮಾಡುತ್ತಿದ್ದರು. ಮತ್ತು ಇದೊಂದು ಸ್ಕ್ರಿಪ್ಟೆಡ್ ಎಂಬ ಕ್ಯಾಪ್ಷನ್ ಕೂಡ ನೀಡಿದ್ದರು. ಅವರು “ಈ ಪುಟವು ಕಾಲ್ಪನಿಕ ವೀಡಿಯೊಗಳನ್ನು ಒಳಗೊಂಡಿದೆ; ವೀಡಿಯೊದಲ್ಲಿ ಕಾಣಿಸಿಕೊಳ್ಳುವ ಎಲ್ಲಾ ಪಾತ್ರಗಳು ಕಾಲ್ಪನಿಕವಾಗಿವೆ. ಮಾಡಿದ ವೀಡಿಯೊಗಳು ನೈಜ ಘಟನೆಗಳಿಂದ ಪ್ರೇರಿತವಾಗಿವೆ ಮತ್ತು ಸಾಮಾಜಿಕ ಜಾಗೃತಿಯನ್ನು ಹರಡುವ ಧ್ಯೇಯವಾಕ್ಯದೊಂದಿಗೆ ಮಾಡಲಾಗಿದೆ. ಯಾವುದೇ ಧರ್ಮ, ಜಾತಿ, ರಾಷ್ಟ್ರೀಯತೆ, ಲಿಂಗ ಅಥವಾ ಯಾವುದೇ ವ್ಯಕ್ತಿಯನ್ನು ಯಾವುದೇ ರೀತಿಯಲ್ಲಿ ಮಾನಹಾನಿ ಮಾಡುವುದು, ಅಗೌರವಿಸುವುದು ನಮ್ಮ ಉದ್ದೇಶವಲ್ಲ” ಎಂದು ಬರೆದುಕೊಂಡಿದ್ದಾರೆ. ಈ ವಿಡಿಯೋವನ್ನು ಸುಮಾರು 2 ಕೋಟಿ ಜನ ವೀಕ್ಷಿಸಿದ್ದಾರೆ.

ರಾಜು ಭಾರ್ತಿಯವರು ತಾವು ಕೂಡ ವಿಡಿಯೋದಲ್ಲಿ ಅಭಿನಯಿಸಿ ಹಲವು ವಿಡಿಯೋಗಳನ್ನು ಮಾಡಿರುವುದುನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಒಟ್ಟಿನಲ್ಲಿ ಸೂಟ್‌ಕೇಸ್‌ನಲ್ಲಿ ಬಾಲಕಿಯ ಅಪರಹಣ ಎಂಬುದು ನಿಜವಾಗಿ ನಡೆದ ಘಟನೆಯಲ್ಲ. ಅದು ನಟಿಸಿದ ವಿಡಿಯೋ ಆಗಿದೆ.

ಆದರೆ ಕಲವು ವ್ಯಕ್ತಿಗಳು ಈ ವೀಡಿಯೋದ ಅಸಲಿಯತ್ತು ತಿಳಿಯದೆ ಅಪಹರಣವು ನಿಜವೆಂದು ಭಾವಿಸಿ ತಮ್ಮ ತಮ್ಮ ಸೋಶಿಯಲ್ ಮೀಡಿಯಾಗಳ ಮೂಲಕ ಸುಳ್ಳು ಸುದ್ದಿ ಹರಿಯಬಿಟ್ಟಿದ್ದಾರೆ. ಸಾಮಾಜಿಕ ಸ್ವಾಸ್ಥ್ಯವನ್ನು ಹಾಳುಮಾಡಲು ಬಳಸಿಕೊಂಡಿರುವುದು ವಿಷಾದನೀಯ. ಇಂತವು ಸುಳ್ಳು ಸುದ್ದಿಯ ವೀಡಿಯೋಗಳ ಬಗ್ಗೆ ಜನ ಹೆಚ್ಚು ಜಾಗೃತಗೊಳ್ಳಬೇಕಿದೆ. ಈ ರೀತಿಯ ನಾಟಕೀಯ ವಿಡಿಯೋಗಳ ಬಗ್ಗೆ ಗಮನವಿರಲಿ.. ಹಂಚುವ ಮುನ್ನ ಪರಿಶೀಲಿಸಿ..

ಈ ಹಿಂದೆಯೂ ಸಹ ಇದೇ ರೀತಿಯ ನಾಟಕೀಯ ವಿಡಿಯೋವನ್ನು ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ ಎಂದು ಸುಳ್ಳು ಹಬ್ಬಿಸಲಾಗಿತ್ತು. ಅದನ್ನು ನಾನುಗೌರಿ.ಕಾಂ ಅಲ್ಲಗೆಳೆದಿತ್ತು.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...