Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ನಾಟಕೀಯ ವಿಡಿಯೋಗಳ ಬಗ್ಗೆ ಗಮನವಿರಲಿ.. ಹಂಚುವ ಮುನ್ನ ಪರಿಶೀಲಿಸಿ

ಫ್ಯಾಕ್ಟ್‌ಚೆಕ್: ನಾಟಕೀಯ ವಿಡಿಯೋಗಳ ಬಗ್ಗೆ ಗಮನವಿರಲಿ.. ಹಂಚುವ ಮುನ್ನ ಪರಿಶೀಲಿಸಿ

ಸೂಟ್‌ಕೇಸ್‌ನಲ್ಲಿ ಬಾಲಕಿಯ ಅಪರಹಣ ಎಂಬುದು ನಿಜವಾಗಿ ನಡೆದ ಘಟನೆಯಲ್ಲ. ಅದು ನಟಿಸಿದ ವಿಡಿಯೋ ಆಗಿದೆ.

- Advertisement -
- Advertisement -

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಡಿಯೋ ಸಂಚಲನ ಮೂಡಿಸಿತ್ತು. ಅದೇನೆಂದರೆ ಒಬ್ಬ ವ್ಯಕ್ತಿ ಅಪ್ರಾಪ್ತ ಬಾಲಕಿಯನ್ನು ಸೂಟ್ ಕೇಸ್ ನಲ್ಲಿ ತುಂಬಿ ಅಪಹರಣ ಮಾಡಿದಂತಹ ವೀಡಿಯೋವನ್ನು ರಾಣಾ ಜಸ್ ವೀರ್ ಎಂಬುವವರು ತಮ್ಮ ಟ್ಟಿಟರ್ ಖಾತೆಯಲ್ಲಿ ಶೇರ್ ಮಾಡಿದ್ದರು. ಆನಂತರ ಅದು ಫೇಸ್‌ಬುಕ್‌ ವಾಟ್ಸಾಪ್‌ಗಳಲ್ಲಿ ವೈರಲ್ ಆಗತೊಡಗಿದೆ. ಸಾವಿರಾರು ಜನರು ಈ ವಿಡಿಯೋವನ್ನು ವೀಕ್ಷಿಸಿರುವುದು ಕಂಡುಬಂದಿದೆ.

ಈ ವಿಡಿಯೋದ ಮೂಲ ಹಿಡಿದು ಹೊರಟಿದಾಗ ಭಗವಂತ್ ಸಿಂಗ್ ರುಪಾಲ್, ಪಂಜಾಬ್ ಮೂಲದ ರೋಜಾನಾ ಸ್ಪೋಕ್ಸ್‌ಮ್ಯಾನ್ ಎಂಬ ಪತ್ರಿಕೆಯ ಫ್ಯಾಕ್ಟ್ ಚೆಕ್ ನಡೆಸುವವರು ಇದು ನಾಟಕೀಯ ವಿಡಿಯೋವಾಗಿದೆ ಎಂದು ಖಚಿತ ಪಡಿಸಿದ್ದಾರೆ. ಭಾರ್ತಿ ಪ್ರಾಂಕ್ ಎಂಬ ಯೂಟ್ಯೂಬ್ ಚಾನೆಲ್‌ ಮೂಲಕ ಹಲವಾರು ನಾಟಕೀಯ ಅಭಿಯನದ ವಿಡಿಯೋಗಳನ್ನು ಅವರು ಹಂಚಿಕೊಂಡಿರುವುದು ಕಂಡುಬಂದಿದೆ.

ಆ ಚಾನೆಲ್‌ನಲ್ಲಿ ಇದರ ಮೂಲ ವಿಡಿಯೋದ ದೊರಕಿದೆ. ಈ ವೀಡಿಯೋದ ಅಸಲಿಯತ್ತು ಏನಂದ್ರೆ ಇದೊಂದು ಪ್ರಾಂಕ್ ವೀಡಿಯೋ. ರಾಜು ಭಾರ್ತಿ ಎಂಬುವವರು ಸಾಮಾಜಿಕ ಜಾಗೃತಿ ಮೂಡಿಸು ಸಲುವಾಗಿ ಕೆಲವು ವೀಡಿಯೋಗಳನ್ನು ಮಾಡಿ ತಮ್ಮ ಸೋಶಿಯಲ್ ಮೀಡಿಯಾಗಳಲ್ಲಿ ಶೇರ್ ಮಾಡುತ್ತಿದ್ದರು. ಮತ್ತು ಇದೊಂದು ಸ್ಕ್ರಿಪ್ಟೆಡ್ ಎಂಬ ಕ್ಯಾಪ್ಷನ್ ಕೂಡ ನೀಡಿದ್ದರು. ಅವರು “ಈ ಪುಟವು ಕಾಲ್ಪನಿಕ ವೀಡಿಯೊಗಳನ್ನು ಒಳಗೊಂಡಿದೆ; ವೀಡಿಯೊದಲ್ಲಿ ಕಾಣಿಸಿಕೊಳ್ಳುವ ಎಲ್ಲಾ ಪಾತ್ರಗಳು ಕಾಲ್ಪನಿಕವಾಗಿವೆ. ಮಾಡಿದ ವೀಡಿಯೊಗಳು ನೈಜ ಘಟನೆಗಳಿಂದ ಪ್ರೇರಿತವಾಗಿವೆ ಮತ್ತು ಸಾಮಾಜಿಕ ಜಾಗೃತಿಯನ್ನು ಹರಡುವ ಧ್ಯೇಯವಾಕ್ಯದೊಂದಿಗೆ ಮಾಡಲಾಗಿದೆ. ಯಾವುದೇ ಧರ್ಮ, ಜಾತಿ, ರಾಷ್ಟ್ರೀಯತೆ, ಲಿಂಗ ಅಥವಾ ಯಾವುದೇ ವ್ಯಕ್ತಿಯನ್ನು ಯಾವುದೇ ರೀತಿಯಲ್ಲಿ ಮಾನಹಾನಿ ಮಾಡುವುದು, ಅಗೌರವಿಸುವುದು ನಮ್ಮ ಉದ್ದೇಶವಲ್ಲ” ಎಂದು ಬರೆದುಕೊಂಡಿದ್ದಾರೆ. ಈ ವಿಡಿಯೋವನ್ನು ಸುಮಾರು 2 ಕೋಟಿ ಜನ ವೀಕ್ಷಿಸಿದ್ದಾರೆ.

ರಾಜು ಭಾರ್ತಿಯವರು ತಾವು ಕೂಡ ವಿಡಿಯೋದಲ್ಲಿ ಅಭಿನಯಿಸಿ ಹಲವು ವಿಡಿಯೋಗಳನ್ನು ಮಾಡಿರುವುದುನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಒಟ್ಟಿನಲ್ಲಿ ಸೂಟ್‌ಕೇಸ್‌ನಲ್ಲಿ ಬಾಲಕಿಯ ಅಪರಹಣ ಎಂಬುದು ನಿಜವಾಗಿ ನಡೆದ ಘಟನೆಯಲ್ಲ. ಅದು ನಟಿಸಿದ ವಿಡಿಯೋ ಆಗಿದೆ.

ಆದರೆ ಕಲವು ವ್ಯಕ್ತಿಗಳು ಈ ವೀಡಿಯೋದ ಅಸಲಿಯತ್ತು ತಿಳಿಯದೆ ಅಪಹರಣವು ನಿಜವೆಂದು ಭಾವಿಸಿ ತಮ್ಮ ತಮ್ಮ ಸೋಶಿಯಲ್ ಮೀಡಿಯಾಗಳ ಮೂಲಕ ಸುಳ್ಳು ಸುದ್ದಿ ಹರಿಯಬಿಟ್ಟಿದ್ದಾರೆ. ಸಾಮಾಜಿಕ ಸ್ವಾಸ್ಥ್ಯವನ್ನು ಹಾಳುಮಾಡಲು ಬಳಸಿಕೊಂಡಿರುವುದು ವಿಷಾದನೀಯ. ಇಂತವು ಸುಳ್ಳು ಸುದ್ದಿಯ ವೀಡಿಯೋಗಳ ಬಗ್ಗೆ ಜನ ಹೆಚ್ಚು ಜಾಗೃತಗೊಳ್ಳಬೇಕಿದೆ. ಈ ರೀತಿಯ ನಾಟಕೀಯ ವಿಡಿಯೋಗಳ ಬಗ್ಗೆ ಗಮನವಿರಲಿ.. ಹಂಚುವ ಮುನ್ನ ಪರಿಶೀಲಿಸಿ..

ಈ ಹಿಂದೆಯೂ ಸಹ ಇದೇ ರೀತಿಯ ನಾಟಕೀಯ ವಿಡಿಯೋವನ್ನು ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ ಎಂದು ಸುಳ್ಳು ಹಬ್ಬಿಸಲಾಗಿತ್ತು. ಅದನ್ನು ನಾನುಗೌರಿ.ಕಾಂ ಅಲ್ಲಗೆಳೆದಿತ್ತು.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...