Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ನಾಟಕೀಯ ವಿಡಿಯೋಗಳ ಬಗ್ಗೆ ಗಮನವಿರಲಿ.. ಹಂಚುವ ಮುನ್ನ ಪರಿಶೀಲಿಸಿ

ಫ್ಯಾಕ್ಟ್‌ಚೆಕ್: ನಾಟಕೀಯ ವಿಡಿಯೋಗಳ ಬಗ್ಗೆ ಗಮನವಿರಲಿ.. ಹಂಚುವ ಮುನ್ನ ಪರಿಶೀಲಿಸಿ

ಸೂಟ್‌ಕೇಸ್‌ನಲ್ಲಿ ಬಾಲಕಿಯ ಅಪರಹಣ ಎಂಬುದು ನಿಜವಾಗಿ ನಡೆದ ಘಟನೆಯಲ್ಲ. ಅದು ನಟಿಸಿದ ವಿಡಿಯೋ ಆಗಿದೆ.

- Advertisement -
- Advertisement -

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಡಿಯೋ ಸಂಚಲನ ಮೂಡಿಸಿತ್ತು. ಅದೇನೆಂದರೆ ಒಬ್ಬ ವ್ಯಕ್ತಿ ಅಪ್ರಾಪ್ತ ಬಾಲಕಿಯನ್ನು ಸೂಟ್ ಕೇಸ್ ನಲ್ಲಿ ತುಂಬಿ ಅಪಹರಣ ಮಾಡಿದಂತಹ ವೀಡಿಯೋವನ್ನು ರಾಣಾ ಜಸ್ ವೀರ್ ಎಂಬುವವರು ತಮ್ಮ ಟ್ಟಿಟರ್ ಖಾತೆಯಲ್ಲಿ ಶೇರ್ ಮಾಡಿದ್ದರು. ಆನಂತರ ಅದು ಫೇಸ್‌ಬುಕ್‌ ವಾಟ್ಸಾಪ್‌ಗಳಲ್ಲಿ ವೈರಲ್ ಆಗತೊಡಗಿದೆ. ಸಾವಿರಾರು ಜನರು ಈ ವಿಡಿಯೋವನ್ನು ವೀಕ್ಷಿಸಿರುವುದು ಕಂಡುಬಂದಿದೆ.

ಈ ವಿಡಿಯೋದ ಮೂಲ ಹಿಡಿದು ಹೊರಟಿದಾಗ ಭಗವಂತ್ ಸಿಂಗ್ ರುಪಾಲ್, ಪಂಜಾಬ್ ಮೂಲದ ರೋಜಾನಾ ಸ್ಪೋಕ್ಸ್‌ಮ್ಯಾನ್ ಎಂಬ ಪತ್ರಿಕೆಯ ಫ್ಯಾಕ್ಟ್ ಚೆಕ್ ನಡೆಸುವವರು ಇದು ನಾಟಕೀಯ ವಿಡಿಯೋವಾಗಿದೆ ಎಂದು ಖಚಿತ ಪಡಿಸಿದ್ದಾರೆ. ಭಾರ್ತಿ ಪ್ರಾಂಕ್ ಎಂಬ ಯೂಟ್ಯೂಬ್ ಚಾನೆಲ್‌ ಮೂಲಕ ಹಲವಾರು ನಾಟಕೀಯ ಅಭಿಯನದ ವಿಡಿಯೋಗಳನ್ನು ಅವರು ಹಂಚಿಕೊಂಡಿರುವುದು ಕಂಡುಬಂದಿದೆ.

ಆ ಚಾನೆಲ್‌ನಲ್ಲಿ ಇದರ ಮೂಲ ವಿಡಿಯೋದ ದೊರಕಿದೆ. ಈ ವೀಡಿಯೋದ ಅಸಲಿಯತ್ತು ಏನಂದ್ರೆ ಇದೊಂದು ಪ್ರಾಂಕ್ ವೀಡಿಯೋ. ರಾಜು ಭಾರ್ತಿ ಎಂಬುವವರು ಸಾಮಾಜಿಕ ಜಾಗೃತಿ ಮೂಡಿಸು ಸಲುವಾಗಿ ಕೆಲವು ವೀಡಿಯೋಗಳನ್ನು ಮಾಡಿ ತಮ್ಮ ಸೋಶಿಯಲ್ ಮೀಡಿಯಾಗಳಲ್ಲಿ ಶೇರ್ ಮಾಡುತ್ತಿದ್ದರು. ಮತ್ತು ಇದೊಂದು ಸ್ಕ್ರಿಪ್ಟೆಡ್ ಎಂಬ ಕ್ಯಾಪ್ಷನ್ ಕೂಡ ನೀಡಿದ್ದರು. ಅವರು “ಈ ಪುಟವು ಕಾಲ್ಪನಿಕ ವೀಡಿಯೊಗಳನ್ನು ಒಳಗೊಂಡಿದೆ; ವೀಡಿಯೊದಲ್ಲಿ ಕಾಣಿಸಿಕೊಳ್ಳುವ ಎಲ್ಲಾ ಪಾತ್ರಗಳು ಕಾಲ್ಪನಿಕವಾಗಿವೆ. ಮಾಡಿದ ವೀಡಿಯೊಗಳು ನೈಜ ಘಟನೆಗಳಿಂದ ಪ್ರೇರಿತವಾಗಿವೆ ಮತ್ತು ಸಾಮಾಜಿಕ ಜಾಗೃತಿಯನ್ನು ಹರಡುವ ಧ್ಯೇಯವಾಕ್ಯದೊಂದಿಗೆ ಮಾಡಲಾಗಿದೆ. ಯಾವುದೇ ಧರ್ಮ, ಜಾತಿ, ರಾಷ್ಟ್ರೀಯತೆ, ಲಿಂಗ ಅಥವಾ ಯಾವುದೇ ವ್ಯಕ್ತಿಯನ್ನು ಯಾವುದೇ ರೀತಿಯಲ್ಲಿ ಮಾನಹಾನಿ ಮಾಡುವುದು, ಅಗೌರವಿಸುವುದು ನಮ್ಮ ಉದ್ದೇಶವಲ್ಲ” ಎಂದು ಬರೆದುಕೊಂಡಿದ್ದಾರೆ. ಈ ವಿಡಿಯೋವನ್ನು ಸುಮಾರು 2 ಕೋಟಿ ಜನ ವೀಕ್ಷಿಸಿದ್ದಾರೆ.

ರಾಜು ಭಾರ್ತಿಯವರು ತಾವು ಕೂಡ ವಿಡಿಯೋದಲ್ಲಿ ಅಭಿನಯಿಸಿ ಹಲವು ವಿಡಿಯೋಗಳನ್ನು ಮಾಡಿರುವುದುನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಒಟ್ಟಿನಲ್ಲಿ ಸೂಟ್‌ಕೇಸ್‌ನಲ್ಲಿ ಬಾಲಕಿಯ ಅಪರಹಣ ಎಂಬುದು ನಿಜವಾಗಿ ನಡೆದ ಘಟನೆಯಲ್ಲ. ಅದು ನಟಿಸಿದ ವಿಡಿಯೋ ಆಗಿದೆ.

ಆದರೆ ಕಲವು ವ್ಯಕ್ತಿಗಳು ಈ ವೀಡಿಯೋದ ಅಸಲಿಯತ್ತು ತಿಳಿಯದೆ ಅಪಹರಣವು ನಿಜವೆಂದು ಭಾವಿಸಿ ತಮ್ಮ ತಮ್ಮ ಸೋಶಿಯಲ್ ಮೀಡಿಯಾಗಳ ಮೂಲಕ ಸುಳ್ಳು ಸುದ್ದಿ ಹರಿಯಬಿಟ್ಟಿದ್ದಾರೆ. ಸಾಮಾಜಿಕ ಸ್ವಾಸ್ಥ್ಯವನ್ನು ಹಾಳುಮಾಡಲು ಬಳಸಿಕೊಂಡಿರುವುದು ವಿಷಾದನೀಯ. ಇಂತವು ಸುಳ್ಳು ಸುದ್ದಿಯ ವೀಡಿಯೋಗಳ ಬಗ್ಗೆ ಜನ ಹೆಚ್ಚು ಜಾಗೃತಗೊಳ್ಳಬೇಕಿದೆ. ಈ ರೀತಿಯ ನಾಟಕೀಯ ವಿಡಿಯೋಗಳ ಬಗ್ಗೆ ಗಮನವಿರಲಿ.. ಹಂಚುವ ಮುನ್ನ ಪರಿಶೀಲಿಸಿ..

ಈ ಹಿಂದೆಯೂ ಸಹ ಇದೇ ರೀತಿಯ ನಾಟಕೀಯ ವಿಡಿಯೋವನ್ನು ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ ಎಂದು ಸುಳ್ಳು ಹಬ್ಬಿಸಲಾಗಿತ್ತು. ಅದನ್ನು ನಾನುಗೌರಿ.ಕಾಂ ಅಲ್ಲಗೆಳೆದಿತ್ತು.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...