Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ನಾಟಕೀಯ ವಿಡಿಯೋಗಳ ಬಗ್ಗೆ ಗಮನವಿರಲಿ.. ಹಂಚುವ ಮುನ್ನ ಪರಿಶೀಲಿಸಿ

ಫ್ಯಾಕ್ಟ್‌ಚೆಕ್: ನಾಟಕೀಯ ವಿಡಿಯೋಗಳ ಬಗ್ಗೆ ಗಮನವಿರಲಿ.. ಹಂಚುವ ಮುನ್ನ ಪರಿಶೀಲಿಸಿ

ಸೂಟ್‌ಕೇಸ್‌ನಲ್ಲಿ ಬಾಲಕಿಯ ಅಪರಹಣ ಎಂಬುದು ನಿಜವಾಗಿ ನಡೆದ ಘಟನೆಯಲ್ಲ. ಅದು ನಟಿಸಿದ ವಿಡಿಯೋ ಆಗಿದೆ.

- Advertisement -
- Advertisement -

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಡಿಯೋ ಸಂಚಲನ ಮೂಡಿಸಿತ್ತು. ಅದೇನೆಂದರೆ ಒಬ್ಬ ವ್ಯಕ್ತಿ ಅಪ್ರಾಪ್ತ ಬಾಲಕಿಯನ್ನು ಸೂಟ್ ಕೇಸ್ ನಲ್ಲಿ ತುಂಬಿ ಅಪಹರಣ ಮಾಡಿದಂತಹ ವೀಡಿಯೋವನ್ನು ರಾಣಾ ಜಸ್ ವೀರ್ ಎಂಬುವವರು ತಮ್ಮ ಟ್ಟಿಟರ್ ಖಾತೆಯಲ್ಲಿ ಶೇರ್ ಮಾಡಿದ್ದರು. ಆನಂತರ ಅದು ಫೇಸ್‌ಬುಕ್‌ ವಾಟ್ಸಾಪ್‌ಗಳಲ್ಲಿ ವೈರಲ್ ಆಗತೊಡಗಿದೆ. ಸಾವಿರಾರು ಜನರು ಈ ವಿಡಿಯೋವನ್ನು ವೀಕ್ಷಿಸಿರುವುದು ಕಂಡುಬಂದಿದೆ.

ಈ ವಿಡಿಯೋದ ಮೂಲ ಹಿಡಿದು ಹೊರಟಿದಾಗ ಭಗವಂತ್ ಸಿಂಗ್ ರುಪಾಲ್, ಪಂಜಾಬ್ ಮೂಲದ ರೋಜಾನಾ ಸ್ಪೋಕ್ಸ್‌ಮ್ಯಾನ್ ಎಂಬ ಪತ್ರಿಕೆಯ ಫ್ಯಾಕ್ಟ್ ಚೆಕ್ ನಡೆಸುವವರು ಇದು ನಾಟಕೀಯ ವಿಡಿಯೋವಾಗಿದೆ ಎಂದು ಖಚಿತ ಪಡಿಸಿದ್ದಾರೆ. ಭಾರ್ತಿ ಪ್ರಾಂಕ್ ಎಂಬ ಯೂಟ್ಯೂಬ್ ಚಾನೆಲ್‌ ಮೂಲಕ ಹಲವಾರು ನಾಟಕೀಯ ಅಭಿಯನದ ವಿಡಿಯೋಗಳನ್ನು ಅವರು ಹಂಚಿಕೊಂಡಿರುವುದು ಕಂಡುಬಂದಿದೆ.

ಆ ಚಾನೆಲ್‌ನಲ್ಲಿ ಇದರ ಮೂಲ ವಿಡಿಯೋದ ದೊರಕಿದೆ. ಈ ವೀಡಿಯೋದ ಅಸಲಿಯತ್ತು ಏನಂದ್ರೆ ಇದೊಂದು ಪ್ರಾಂಕ್ ವೀಡಿಯೋ. ರಾಜು ಭಾರ್ತಿ ಎಂಬುವವರು ಸಾಮಾಜಿಕ ಜಾಗೃತಿ ಮೂಡಿಸು ಸಲುವಾಗಿ ಕೆಲವು ವೀಡಿಯೋಗಳನ್ನು ಮಾಡಿ ತಮ್ಮ ಸೋಶಿಯಲ್ ಮೀಡಿಯಾಗಳಲ್ಲಿ ಶೇರ್ ಮಾಡುತ್ತಿದ್ದರು. ಮತ್ತು ಇದೊಂದು ಸ್ಕ್ರಿಪ್ಟೆಡ್ ಎಂಬ ಕ್ಯಾಪ್ಷನ್ ಕೂಡ ನೀಡಿದ್ದರು. ಅವರು “ಈ ಪುಟವು ಕಾಲ್ಪನಿಕ ವೀಡಿಯೊಗಳನ್ನು ಒಳಗೊಂಡಿದೆ; ವೀಡಿಯೊದಲ್ಲಿ ಕಾಣಿಸಿಕೊಳ್ಳುವ ಎಲ್ಲಾ ಪಾತ್ರಗಳು ಕಾಲ್ಪನಿಕವಾಗಿವೆ. ಮಾಡಿದ ವೀಡಿಯೊಗಳು ನೈಜ ಘಟನೆಗಳಿಂದ ಪ್ರೇರಿತವಾಗಿವೆ ಮತ್ತು ಸಾಮಾಜಿಕ ಜಾಗೃತಿಯನ್ನು ಹರಡುವ ಧ್ಯೇಯವಾಕ್ಯದೊಂದಿಗೆ ಮಾಡಲಾಗಿದೆ. ಯಾವುದೇ ಧರ್ಮ, ಜಾತಿ, ರಾಷ್ಟ್ರೀಯತೆ, ಲಿಂಗ ಅಥವಾ ಯಾವುದೇ ವ್ಯಕ್ತಿಯನ್ನು ಯಾವುದೇ ರೀತಿಯಲ್ಲಿ ಮಾನಹಾನಿ ಮಾಡುವುದು, ಅಗೌರವಿಸುವುದು ನಮ್ಮ ಉದ್ದೇಶವಲ್ಲ” ಎಂದು ಬರೆದುಕೊಂಡಿದ್ದಾರೆ. ಈ ವಿಡಿಯೋವನ್ನು ಸುಮಾರು 2 ಕೋಟಿ ಜನ ವೀಕ್ಷಿಸಿದ್ದಾರೆ.

ರಾಜು ಭಾರ್ತಿಯವರು ತಾವು ಕೂಡ ವಿಡಿಯೋದಲ್ಲಿ ಅಭಿನಯಿಸಿ ಹಲವು ವಿಡಿಯೋಗಳನ್ನು ಮಾಡಿರುವುದುನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಒಟ್ಟಿನಲ್ಲಿ ಸೂಟ್‌ಕೇಸ್‌ನಲ್ಲಿ ಬಾಲಕಿಯ ಅಪರಹಣ ಎಂಬುದು ನಿಜವಾಗಿ ನಡೆದ ಘಟನೆಯಲ್ಲ. ಅದು ನಟಿಸಿದ ವಿಡಿಯೋ ಆಗಿದೆ.

ಆದರೆ ಕಲವು ವ್ಯಕ್ತಿಗಳು ಈ ವೀಡಿಯೋದ ಅಸಲಿಯತ್ತು ತಿಳಿಯದೆ ಅಪಹರಣವು ನಿಜವೆಂದು ಭಾವಿಸಿ ತಮ್ಮ ತಮ್ಮ ಸೋಶಿಯಲ್ ಮೀಡಿಯಾಗಳ ಮೂಲಕ ಸುಳ್ಳು ಸುದ್ದಿ ಹರಿಯಬಿಟ್ಟಿದ್ದಾರೆ. ಸಾಮಾಜಿಕ ಸ್ವಾಸ್ಥ್ಯವನ್ನು ಹಾಳುಮಾಡಲು ಬಳಸಿಕೊಂಡಿರುವುದು ವಿಷಾದನೀಯ. ಇಂತವು ಸುಳ್ಳು ಸುದ್ದಿಯ ವೀಡಿಯೋಗಳ ಬಗ್ಗೆ ಜನ ಹೆಚ್ಚು ಜಾಗೃತಗೊಳ್ಳಬೇಕಿದೆ. ಈ ರೀತಿಯ ನಾಟಕೀಯ ವಿಡಿಯೋಗಳ ಬಗ್ಗೆ ಗಮನವಿರಲಿ.. ಹಂಚುವ ಮುನ್ನ ಪರಿಶೀಲಿಸಿ..

ಈ ಹಿಂದೆಯೂ ಸಹ ಇದೇ ರೀತಿಯ ನಾಟಕೀಯ ವಿಡಿಯೋವನ್ನು ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ ಎಂದು ಸುಳ್ಳು ಹಬ್ಬಿಸಲಾಗಿತ್ತು. ಅದನ್ನು ನಾನುಗೌರಿ.ಕಾಂ ಅಲ್ಲಗೆಳೆದಿತ್ತು.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...