Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ನಾಟಕೀಯ ವಿಡಿಯೋಗಳ ಬಗ್ಗೆ ಗಮನವಿರಲಿ.. ಹಂಚುವ ಮುನ್ನ ಪರಿಶೀಲಿಸಿ

ಫ್ಯಾಕ್ಟ್‌ಚೆಕ್: ನಾಟಕೀಯ ವಿಡಿಯೋಗಳ ಬಗ್ಗೆ ಗಮನವಿರಲಿ.. ಹಂಚುವ ಮುನ್ನ ಪರಿಶೀಲಿಸಿ

ಸೂಟ್‌ಕೇಸ್‌ನಲ್ಲಿ ಬಾಲಕಿಯ ಅಪರಹಣ ಎಂಬುದು ನಿಜವಾಗಿ ನಡೆದ ಘಟನೆಯಲ್ಲ. ಅದು ನಟಿಸಿದ ವಿಡಿಯೋ ಆಗಿದೆ.

- Advertisement -
- Advertisement -

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಡಿಯೋ ಸಂಚಲನ ಮೂಡಿಸಿತ್ತು. ಅದೇನೆಂದರೆ ಒಬ್ಬ ವ್ಯಕ್ತಿ ಅಪ್ರಾಪ್ತ ಬಾಲಕಿಯನ್ನು ಸೂಟ್ ಕೇಸ್ ನಲ್ಲಿ ತುಂಬಿ ಅಪಹರಣ ಮಾಡಿದಂತಹ ವೀಡಿಯೋವನ್ನು ರಾಣಾ ಜಸ್ ವೀರ್ ಎಂಬುವವರು ತಮ್ಮ ಟ್ಟಿಟರ್ ಖಾತೆಯಲ್ಲಿ ಶೇರ್ ಮಾಡಿದ್ದರು. ಆನಂತರ ಅದು ಫೇಸ್‌ಬುಕ್‌ ವಾಟ್ಸಾಪ್‌ಗಳಲ್ಲಿ ವೈರಲ್ ಆಗತೊಡಗಿದೆ. ಸಾವಿರಾರು ಜನರು ಈ ವಿಡಿಯೋವನ್ನು ವೀಕ್ಷಿಸಿರುವುದು ಕಂಡುಬಂದಿದೆ.

ಈ ವಿಡಿಯೋದ ಮೂಲ ಹಿಡಿದು ಹೊರಟಿದಾಗ ಭಗವಂತ್ ಸಿಂಗ್ ರುಪಾಲ್, ಪಂಜಾಬ್ ಮೂಲದ ರೋಜಾನಾ ಸ್ಪೋಕ್ಸ್‌ಮ್ಯಾನ್ ಎಂಬ ಪತ್ರಿಕೆಯ ಫ್ಯಾಕ್ಟ್ ಚೆಕ್ ನಡೆಸುವವರು ಇದು ನಾಟಕೀಯ ವಿಡಿಯೋವಾಗಿದೆ ಎಂದು ಖಚಿತ ಪಡಿಸಿದ್ದಾರೆ. ಭಾರ್ತಿ ಪ್ರಾಂಕ್ ಎಂಬ ಯೂಟ್ಯೂಬ್ ಚಾನೆಲ್‌ ಮೂಲಕ ಹಲವಾರು ನಾಟಕೀಯ ಅಭಿಯನದ ವಿಡಿಯೋಗಳನ್ನು ಅವರು ಹಂಚಿಕೊಂಡಿರುವುದು ಕಂಡುಬಂದಿದೆ.

ಆ ಚಾನೆಲ್‌ನಲ್ಲಿ ಇದರ ಮೂಲ ವಿಡಿಯೋದ ದೊರಕಿದೆ. ಈ ವೀಡಿಯೋದ ಅಸಲಿಯತ್ತು ಏನಂದ್ರೆ ಇದೊಂದು ಪ್ರಾಂಕ್ ವೀಡಿಯೋ. ರಾಜು ಭಾರ್ತಿ ಎಂಬುವವರು ಸಾಮಾಜಿಕ ಜಾಗೃತಿ ಮೂಡಿಸು ಸಲುವಾಗಿ ಕೆಲವು ವೀಡಿಯೋಗಳನ್ನು ಮಾಡಿ ತಮ್ಮ ಸೋಶಿಯಲ್ ಮೀಡಿಯಾಗಳಲ್ಲಿ ಶೇರ್ ಮಾಡುತ್ತಿದ್ದರು. ಮತ್ತು ಇದೊಂದು ಸ್ಕ್ರಿಪ್ಟೆಡ್ ಎಂಬ ಕ್ಯಾಪ್ಷನ್ ಕೂಡ ನೀಡಿದ್ದರು. ಅವರು “ಈ ಪುಟವು ಕಾಲ್ಪನಿಕ ವೀಡಿಯೊಗಳನ್ನು ಒಳಗೊಂಡಿದೆ; ವೀಡಿಯೊದಲ್ಲಿ ಕಾಣಿಸಿಕೊಳ್ಳುವ ಎಲ್ಲಾ ಪಾತ್ರಗಳು ಕಾಲ್ಪನಿಕವಾಗಿವೆ. ಮಾಡಿದ ವೀಡಿಯೊಗಳು ನೈಜ ಘಟನೆಗಳಿಂದ ಪ್ರೇರಿತವಾಗಿವೆ ಮತ್ತು ಸಾಮಾಜಿಕ ಜಾಗೃತಿಯನ್ನು ಹರಡುವ ಧ್ಯೇಯವಾಕ್ಯದೊಂದಿಗೆ ಮಾಡಲಾಗಿದೆ. ಯಾವುದೇ ಧರ್ಮ, ಜಾತಿ, ರಾಷ್ಟ್ರೀಯತೆ, ಲಿಂಗ ಅಥವಾ ಯಾವುದೇ ವ್ಯಕ್ತಿಯನ್ನು ಯಾವುದೇ ರೀತಿಯಲ್ಲಿ ಮಾನಹಾನಿ ಮಾಡುವುದು, ಅಗೌರವಿಸುವುದು ನಮ್ಮ ಉದ್ದೇಶವಲ್ಲ” ಎಂದು ಬರೆದುಕೊಂಡಿದ್ದಾರೆ. ಈ ವಿಡಿಯೋವನ್ನು ಸುಮಾರು 2 ಕೋಟಿ ಜನ ವೀಕ್ಷಿಸಿದ್ದಾರೆ.

ರಾಜು ಭಾರ್ತಿಯವರು ತಾವು ಕೂಡ ವಿಡಿಯೋದಲ್ಲಿ ಅಭಿನಯಿಸಿ ಹಲವು ವಿಡಿಯೋಗಳನ್ನು ಮಾಡಿರುವುದುನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಒಟ್ಟಿನಲ್ಲಿ ಸೂಟ್‌ಕೇಸ್‌ನಲ್ಲಿ ಬಾಲಕಿಯ ಅಪರಹಣ ಎಂಬುದು ನಿಜವಾಗಿ ನಡೆದ ಘಟನೆಯಲ್ಲ. ಅದು ನಟಿಸಿದ ವಿಡಿಯೋ ಆಗಿದೆ.

ಆದರೆ ಕಲವು ವ್ಯಕ್ತಿಗಳು ಈ ವೀಡಿಯೋದ ಅಸಲಿಯತ್ತು ತಿಳಿಯದೆ ಅಪಹರಣವು ನಿಜವೆಂದು ಭಾವಿಸಿ ತಮ್ಮ ತಮ್ಮ ಸೋಶಿಯಲ್ ಮೀಡಿಯಾಗಳ ಮೂಲಕ ಸುಳ್ಳು ಸುದ್ದಿ ಹರಿಯಬಿಟ್ಟಿದ್ದಾರೆ. ಸಾಮಾಜಿಕ ಸ್ವಾಸ್ಥ್ಯವನ್ನು ಹಾಳುಮಾಡಲು ಬಳಸಿಕೊಂಡಿರುವುದು ವಿಷಾದನೀಯ. ಇಂತವು ಸುಳ್ಳು ಸುದ್ದಿಯ ವೀಡಿಯೋಗಳ ಬಗ್ಗೆ ಜನ ಹೆಚ್ಚು ಜಾಗೃತಗೊಳ್ಳಬೇಕಿದೆ. ಈ ರೀತಿಯ ನಾಟಕೀಯ ವಿಡಿಯೋಗಳ ಬಗ್ಗೆ ಗಮನವಿರಲಿ.. ಹಂಚುವ ಮುನ್ನ ಪರಿಶೀಲಿಸಿ..

ಈ ಹಿಂದೆಯೂ ಸಹ ಇದೇ ರೀತಿಯ ನಾಟಕೀಯ ವಿಡಿಯೋವನ್ನು ಮುಸ್ಲಿಂ ಯುವಕರು ಹಿಂದೂ ಯುವತಿಯರನ್ನು ಟ್ಯ್ರಾಪ್‌‌ ಮಾಡುತ್ತಿದ್ದಾರೆ ಎಂದು ತಪ್ಪಾಗಿ ವಿಡಿಯೊ ಶೇರ್‌ ಮಾಡಲಾಗುತ್ತಿದೆ ಎಂದು ಸುಳ್ಳು ಹಬ್ಬಿಸಲಾಗಿತ್ತು. ಅದನ್ನು ನಾನುಗೌರಿ.ಕಾಂ ಅಲ್ಲಗೆಳೆದಿತ್ತು.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪಾಕಿಸ್ತಾನದ ಸಂಸತ್‌ನಲ್ಲಿ ಮೋದಿ ಮೋದಿ ಎಂಬ ಘೋಷಣೆ ಕೂಗಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...