Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿ ಡಾನ್ಸ್‌ ಮಾಡುತ್ತಿರುವ ಮಗು ಶಿಕ್ಷಕನಿಂದ ಕೊಲೆಯಾದ ಇಂದ್ರ ಮೇಘ್ವಾಲ್‌ ಅಲ್ಲ

ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿ ಡಾನ್ಸ್‌ ಮಾಡುತ್ತಿರುವ ಮಗು ಶಿಕ್ಷಕನಿಂದ ಕೊಲೆಯಾದ ಇಂದ್ರ ಮೇಘ್ವಾಲ್‌ ಅಲ್ಲ

- Advertisement -
- Advertisement -

ಬಾಲಕನೊಬ್ಬ ರಾಜಸ್ಥಾನಿ ಹಾಡಿಗೆ ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ರಾಜಸ್ಥಾನದ ಜಲೋರ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ತನ್ನ ಶಾಲಾ ಶಿಕ್ಷಕನಿಂದಲೇ ಹಲ್ಲೆಗೊಳದ 9 ವರ್ಷದ ದಲಿತ ವಿದ್ಯಾರ್ಥಿ ಇಂದ್ರ ಕುಮಾರ್ ಮೇಘ್ವಾಲ್ ವಿಡಿಯೊ ಇದೆಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗುತ್ತಿದೆ.

ಸರಸ್ವತಿ ವಿದ್ಯಾ ಮಂದಿರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕ ಚೈಲ್ ಸಿಂಗ್ (40 ವರ್ಷ), ಶಾಲೆಯಲ್ಲಿ ಸವರ್ಣಿಯರಿಗೆ ಕುಡಿಯಲು ಮೀಸಲಿಟ್ಟಿದ್ದ ನೀರನ್ನು ದಲಿತ ಬಾಲಕ ಇಂದ್ರ ಕುಮಾರ್ ಕುಡಿದನೆಂದು ಕೋಪಗೊಂಡು ಬಾಲಕನಿಗೆ ಮನಬಂದಂತೆ ಥಳಿಸಿದ್ದನು. ಇದರಿಂದ ಅಸ್ವಸ್ಥಗೊಂಡ ಬಾಲಕ ಮೃತಪಟ್ಟಿದ್ದಾನೆ. ನಂತರ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದು, ಕೊಲೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈ ಘಟನೆ ದೇಶದ ಆತ್ಮಸಾಕ್ಷಿಯನ್ನು ಕದಡಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಡೆದಿರುವ ಈ ಘಟನೆಯು ಅಮೃತ ಮಹೋತ್ಸವದ ವೈಭವವನ್ನು ಅಣಿಸಿದಂತಿದೆ. ಇದೆಲ್ಲದರ ನಡುವೆ ಬಾಲಕನ ಹತ್ಯೆಗೆ ಥಳುಕು ಹಾಕಿ ಕೆಲವು ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಇಲ್ಲಿ ಚರ್ಚಿಸಲಾಗುತ್ತಿರುವ ವಿಡಿಯೋವನ್ನು ಹಂಚಿಕೊಂಡಿರುವ ಸಾಮಾಜಿಕ ಮಾಧ್ಯಮದ ಬಳಕೆದಾರರು ಬಾಲಕನ ಸಾವಿನ ಕುರಿತು ಹೀಗೆ ಬರೆದಿದ್ದಾರೆ: “ಇಂದ್ರನ  ನೆನಪು, ಎಂತಹ ಮುಗ್ಧತೆ, ಕೇವಲ ತನ್ನ ಬಾಯಾರಿಕೆಯನ್ನು ನೀಗಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುತ್ತೇನೆ ಎಂದು ಈ ಬಡ ಮಗುವಿಗೆ ಹೇಗೆ ತಿಳಿಯಬೇಕು? ಈ ಬಡ ಮಗುವಿಗೆ ಇಂತಹ ಕ್ರೂರ ಶಿಕ್ಷೆಯೇ? ಅವನಿಗೆ ಕೋಟಿ ನಮನಗಳು…”

ಹೀಗೆ ಕೆಲವು ಟಿಪ್ಪಣಿಗಳೊಂದಿಗೆ ವಿಡಿಯೊ ಹಂಚಿಕೆಯಾಗುತ್ತಿದೆ. ಹಾಗಿದರೆ ವೈರಲ್ ವಿಡಿಯೊದಲ್ಲಿ ಹಾಡಿಗೆ ನೃತ್ಯ ಮಾಡಿರುವ ಬಾಲಕ ಇಂದ್ರ ಮೇಘ್ವಾಲ್ ಎಂಬುದು ನಿಜವೇ?

ವೈರಲ್ ವಿಡಿಯೋದಲ್ಲಿ ಡ್ಯಾನ್ಸ್ ಮಾಡುತ್ತಿರುವ ಬಾಲಕ ಇಂದ್ರ ಕುಮಾರ್ ಮೇಘ್ವಾಲ್‌ ಅಲ್ಲ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ವೈರಲ್ ವಿಡಿಯೋದಲ್ಲಿ ನೃತ್ಯ ಮಾಡುತ್ತಿರುವ ಬಾಲಕನ ಚಿತ್ರ, ಥಳಿತಕ್ಕೊಳಗಾಗಿ ಸಾವನಪ್ಪಿದ ದಲಿತ ವಿದ್ಯಾರ್ಥಿ ಇಂದ್ರ ಮೇಘ್ವಾಲ್‌ ಚಿತ್ರವನ್ನು ಹೋಲಿಕೆ ಮಾಡಿದಾಗ ಎರಡು ಬೇರೆ ಬೇರೆ ಎಂಬುದು ಸ್ಪಷ್ಟವಾಗುತ್ತದೆ. ಈ ಫೋಟೋಗಳ ನಡುವೆ ವ್ಯತ್ಯಾಸಗಳಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ವೈರಲ್ ವಿಡಿಯೋದಲ್ಲಿ ಹಾಡಿಗೆ ನೃತ್ಯ ಮಾಡುತ್ತಿರುವ ಬಾಲಕನ ಹೆಸರು ಹರೀಶ್ ಎಂದಾಗಿದೆ. ಈ ಮಗು ರಾಜಸ್ಥಾನದ ಬಾರ್ಮರ್‌ನಲ್ಲಿರುವ ಗೋಮ್ರಖ್ ಧಾಮ್ ಶಾಲೆಯ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ನೃತ್ಯ ಮಾಡುತ್ತಿರುವ ವಿಡಿಯೊವನ್ನು ವಿದ್ಯಾರ್ಥಿ ಹರೀಶನ ಶಾಲೆಯ ಶಿಕ್ಷಕರಾದ ಟಿ.ಆರ್‌. ಚೇಲಾ ರಾಮ್ ರೈಕಾ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.  “ಜುಲೈ 30ರಂದು 2ನೇ ತರಗತಿ ವಿದ್ಯಾರ್ಥಿ ಹರೀಶ್, ನೋ ಬ್ಯಾಗ್ ಡೇ ಸಂದರ್ಭದಲ್ಲಿ ಆತ್ಮವಿಶ್ವಾಸದ ಪ್ರದರ್ಶನ ತೋರಿದನು” ಎಂಬ ಟಿಪ್ಪಣಿಯೊಂದಿಗೆ ಶಿಕ್ಷಕ ಚೇಲಾ ರಾಮ್‌ ಅವರು ಹಂಚಿಕೊಂಡಿರುವ ದೀರ್ಘ ವಿಡಿಯೊವನ್ನು ಇಲ್ಲಿ ಗಮನಿಸಬಹುದು. ಗೋಮ್ರಖ್ ಧಾಮ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಧಿಕೃತ ಫೇಸ್‌ಬುಕ್ ಪೇಜ್‌  ಪರಿಶೀಲಿಸಿದಾಗ ಅಲ್ಲಿಯೂ ಇದೇ ವಿಡಿಯೊವನ್ನು ಹಂಚಿಕೊಂಡಿರುವುದನ್ನು ನೋಡಬಹುದು.

ಗೋಮ್ರಖ್ ಧಾಮ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಗುಣೇಶ ರಾಮ್ ಚೌಧರಿ ಅವರನ್ನು ಇಂಡಿಯಾ ಟುಡೆ ಸಂಪರ್ಕಿಸಿದ್ದು, “ವೀಡಿಯೊದಲ್ಲಿರುವ ಮಗು ನಮ್ಮ ಶಾಲೆಯ ವಿದ್ಯಾರ್ಥಿ ಹರೀಶ್ ಭೀಲ್”’ ಎಂದು ಸ್ಪಷ್ಟಪಡಿಸಿದ್ದಾರೆ. “ಆರು ವರ್ಷದ ಹರೀಶ್ 2 ನೇ ತರಗತಿಯಲ್ಲಿ ಓದುತ್ತಿದ್ದು, ನೃತ್ಯದಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾನೆ. ಇದೇ ಆಗಸ್ಟ್ 15 ರಂದು ರಾಕಿಂಗ್ ಪ್ರದರ್ಶನ ನೀಡಿದ್ದಾನೆ” ಎಂದು ಚೌಧರಿ ಹೇಳಿದ್ದಾರೆ.

“ಜುಲೈ 30ರಂದು ಭೀಲ್ ಅವರ ವೈರಲ್ ನೃತ್ಯ ವೀಡಿಯೊವನ್ನು ಶಾಲೆಯ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಳ್ಳಲಾಗಿತ್ತು. ಆದರೆ, ಜಲೋರ್ ಘಟನೆಯ ಹಿನ್ನೆಲೆಯಲ್ಲಿ ಕೆಲವರು ಹರೀಶನ ವಿಡಿಯೋವನ್ನು ಪ್ರಸಾರ ಮಾಡಲು ಪ್ರಾರಂಭಿಸಿದಾಗ ಶಾಲಾ ಸಿಬ್ಬಂದಿ ಆಘಾತಕ್ಕೊಳಗಾಗಿದ್ದರು” ಎಂದು ಚೌಧರಿ ಪ್ರತಿಕ್ರಿಯೆ ನೀಡಿದ್ದಾರೆ.

“ಭೀಲ್‌ನ ಮತ್ತೊಂದು ವಿಡಿಯೊವನ್ನು ನಮಗೆ ಕಳುಹಿಸಿದ್ದಾರೆ. ಈ ವಿಡಿಯೋದಲ್ಲಿ ಪುಟಾಣಿ ಹರೀಶ್‌ ಭೀಲ್‌ ಮುಖ ಸ್ಪಷ್ಟವಾಗಿ ಕಾಣಬಹುದು. ಈ ವೀಡಿಯೊವನ್ನು ನೋಡಿದರೆ, ವೈರಲ್ ವೀಡಿಯೊದ ಹುಡುಗ ಹರೀಶ್‌ ಎಂಬುದು ಸ್ಪಷ್ಟವಾಗುತ್ತದೆ” ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಇಂಡಿಯಾ ಟುಡೇ ಜಾಲೋರ್ ವರದಿಗಾರ ನರೇಶ್ ಸರ್ನೌ ವಿಷ್ಣೋಯ್ ಅವರು ಇಂದ್ರ ಕುಮಾರ್ ಮೇಘವಾಲ್ ಅವರ ಕುಟುಂಬ ಸದಸ್ಯರನ್ನು ಸಂಪರ್ಕಿಸಿ ವೈರಲ್ ವೀಡಿಯೊದಲ್ಲಿರುವ ಬಾಲಕನ ಬಗ್ಗೆ ವಿಚಾರಿಸಿದಾಗ, “ವೈರಲ್ ಆಗಿರುವ ವಿಡಿಯೋದಲ್ಲಿರುವ ಬಾಲಕ ತನ್ನ ಮಗ ಇಂದ್ರ ಕುಮಾರ್ ಅಲ್ಲ” ಎಂದು ಮೃತ ವಿದ್ಯಾರ್ಥಿಯ ತಂದೆ ದೇವರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಬಾಲಕನೊಬ್ಬ ನೃತ್ಯ ಮಾಡಿರುವ ವಿಡಿಯೋವು ರಾಜಸ್ಥಾನದಲ್ಲಿ ಹತ್ಯೆಯಾದ ಇಂದ್ರ ಮೇಘ್ವಾಲ್‌ದ್ದಲ್ಲ. ಈ ವಿಡಿಯೊದಲ್ಲಿರುವ ಮಗು ರಾಜಸ್ಥಾನದ ಬಾರ್ಮರ್‌ನಲ್ಲಿರುವ ಗೋಮ್ರಖ್ ಧಾಮ್ ಶಾಲೆಯ ವಿದ್ಯಾರ್ಥಿ ಹರೀಶ್‌ ಎಂದು ಸ್ಪಷ್ಟವಾಗಿದೆ.

ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ. ಇಂತಹ ಪೋಸ್ಟ್‌ಗಳನ್ನು ಹಂಚಿಕೊಳ್ಳುವ ಮುನ್ನ ಪರಿಶೀಲಿಸುವುದು ಅಗತ್ಯವಾಗಿದೆ. ಇಲ್ಲದಿದ್ದರೆ ಬದುಕಿರುವ ವ್ಯಕ್ತಿ ಮತ್ತು ಮನೆಯವರ ಭಾವನೆಗಳಿಗೆ ನೋವುಂಟಾಗುತ್ತದೆ.

ವರದಿ ಕೃಪೆ: ಏನ್‌ಸುದ್ದಿ.ಕಾಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...