Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿ ಡಾನ್ಸ್‌ ಮಾಡುತ್ತಿರುವ ಮಗು ಶಿಕ್ಷಕನಿಂದ ಕೊಲೆಯಾದ ಇಂದ್ರ ಮೇಘ್ವಾಲ್‌ ಅಲ್ಲ

ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿ ಡಾನ್ಸ್‌ ಮಾಡುತ್ತಿರುವ ಮಗು ಶಿಕ್ಷಕನಿಂದ ಕೊಲೆಯಾದ ಇಂದ್ರ ಮೇಘ್ವಾಲ್‌ ಅಲ್ಲ

- Advertisement -
- Advertisement -

ಬಾಲಕನೊಬ್ಬ ರಾಜಸ್ಥಾನಿ ಹಾಡಿಗೆ ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ರಾಜಸ್ಥಾನದ ಜಲೋರ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ತನ್ನ ಶಾಲಾ ಶಿಕ್ಷಕನಿಂದಲೇ ಹಲ್ಲೆಗೊಳದ 9 ವರ್ಷದ ದಲಿತ ವಿದ್ಯಾರ್ಥಿ ಇಂದ್ರ ಕುಮಾರ್ ಮೇಘ್ವಾಲ್ ವಿಡಿಯೊ ಇದೆಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗುತ್ತಿದೆ.

ಸರಸ್ವತಿ ವಿದ್ಯಾ ಮಂದಿರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕ ಚೈಲ್ ಸಿಂಗ್ (40 ವರ್ಷ), ಶಾಲೆಯಲ್ಲಿ ಸವರ್ಣಿಯರಿಗೆ ಕುಡಿಯಲು ಮೀಸಲಿಟ್ಟಿದ್ದ ನೀರನ್ನು ದಲಿತ ಬಾಲಕ ಇಂದ್ರ ಕುಮಾರ್ ಕುಡಿದನೆಂದು ಕೋಪಗೊಂಡು ಬಾಲಕನಿಗೆ ಮನಬಂದಂತೆ ಥಳಿಸಿದ್ದನು. ಇದರಿಂದ ಅಸ್ವಸ್ಥಗೊಂಡ ಬಾಲಕ ಮೃತಪಟ್ಟಿದ್ದಾನೆ. ನಂತರ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದು, ಕೊಲೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈ ಘಟನೆ ದೇಶದ ಆತ್ಮಸಾಕ್ಷಿಯನ್ನು ಕದಡಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಡೆದಿರುವ ಈ ಘಟನೆಯು ಅಮೃತ ಮಹೋತ್ಸವದ ವೈಭವವನ್ನು ಅಣಿಸಿದಂತಿದೆ. ಇದೆಲ್ಲದರ ನಡುವೆ ಬಾಲಕನ ಹತ್ಯೆಗೆ ಥಳುಕು ಹಾಕಿ ಕೆಲವು ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಇಲ್ಲಿ ಚರ್ಚಿಸಲಾಗುತ್ತಿರುವ ವಿಡಿಯೋವನ್ನು ಹಂಚಿಕೊಂಡಿರುವ ಸಾಮಾಜಿಕ ಮಾಧ್ಯಮದ ಬಳಕೆದಾರರು ಬಾಲಕನ ಸಾವಿನ ಕುರಿತು ಹೀಗೆ ಬರೆದಿದ್ದಾರೆ: “ಇಂದ್ರನ  ನೆನಪು, ಎಂತಹ ಮುಗ್ಧತೆ, ಕೇವಲ ತನ್ನ ಬಾಯಾರಿಕೆಯನ್ನು ನೀಗಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುತ್ತೇನೆ ಎಂದು ಈ ಬಡ ಮಗುವಿಗೆ ಹೇಗೆ ತಿಳಿಯಬೇಕು? ಈ ಬಡ ಮಗುವಿಗೆ ಇಂತಹ ಕ್ರೂರ ಶಿಕ್ಷೆಯೇ? ಅವನಿಗೆ ಕೋಟಿ ನಮನಗಳು…”

ಹೀಗೆ ಕೆಲವು ಟಿಪ್ಪಣಿಗಳೊಂದಿಗೆ ವಿಡಿಯೊ ಹಂಚಿಕೆಯಾಗುತ್ತಿದೆ. ಹಾಗಿದರೆ ವೈರಲ್ ವಿಡಿಯೊದಲ್ಲಿ ಹಾಡಿಗೆ ನೃತ್ಯ ಮಾಡಿರುವ ಬಾಲಕ ಇಂದ್ರ ಮೇಘ್ವಾಲ್ ಎಂಬುದು ನಿಜವೇ?

ವೈರಲ್ ವಿಡಿಯೋದಲ್ಲಿ ಡ್ಯಾನ್ಸ್ ಮಾಡುತ್ತಿರುವ ಬಾಲಕ ಇಂದ್ರ ಕುಮಾರ್ ಮೇಘ್ವಾಲ್‌ ಅಲ್ಲ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ವೈರಲ್ ವಿಡಿಯೋದಲ್ಲಿ ನೃತ್ಯ ಮಾಡುತ್ತಿರುವ ಬಾಲಕನ ಚಿತ್ರ, ಥಳಿತಕ್ಕೊಳಗಾಗಿ ಸಾವನಪ್ಪಿದ ದಲಿತ ವಿದ್ಯಾರ್ಥಿ ಇಂದ್ರ ಮೇಘ್ವಾಲ್‌ ಚಿತ್ರವನ್ನು ಹೋಲಿಕೆ ಮಾಡಿದಾಗ ಎರಡು ಬೇರೆ ಬೇರೆ ಎಂಬುದು ಸ್ಪಷ್ಟವಾಗುತ್ತದೆ. ಈ ಫೋಟೋಗಳ ನಡುವೆ ವ್ಯತ್ಯಾಸಗಳಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ವೈರಲ್ ವಿಡಿಯೋದಲ್ಲಿ ಹಾಡಿಗೆ ನೃತ್ಯ ಮಾಡುತ್ತಿರುವ ಬಾಲಕನ ಹೆಸರು ಹರೀಶ್ ಎಂದಾಗಿದೆ. ಈ ಮಗು ರಾಜಸ್ಥಾನದ ಬಾರ್ಮರ್‌ನಲ್ಲಿರುವ ಗೋಮ್ರಖ್ ಧಾಮ್ ಶಾಲೆಯ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ನೃತ್ಯ ಮಾಡುತ್ತಿರುವ ವಿಡಿಯೊವನ್ನು ವಿದ್ಯಾರ್ಥಿ ಹರೀಶನ ಶಾಲೆಯ ಶಿಕ್ಷಕರಾದ ಟಿ.ಆರ್‌. ಚೇಲಾ ರಾಮ್ ರೈಕಾ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.  “ಜುಲೈ 30ರಂದು 2ನೇ ತರಗತಿ ವಿದ್ಯಾರ್ಥಿ ಹರೀಶ್, ನೋ ಬ್ಯಾಗ್ ಡೇ ಸಂದರ್ಭದಲ್ಲಿ ಆತ್ಮವಿಶ್ವಾಸದ ಪ್ರದರ್ಶನ ತೋರಿದನು” ಎಂಬ ಟಿಪ್ಪಣಿಯೊಂದಿಗೆ ಶಿಕ್ಷಕ ಚೇಲಾ ರಾಮ್‌ ಅವರು ಹಂಚಿಕೊಂಡಿರುವ ದೀರ್ಘ ವಿಡಿಯೊವನ್ನು ಇಲ್ಲಿ ಗಮನಿಸಬಹುದು. ಗೋಮ್ರಖ್ ಧಾಮ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಧಿಕೃತ ಫೇಸ್‌ಬುಕ್ ಪೇಜ್‌  ಪರಿಶೀಲಿಸಿದಾಗ ಅಲ್ಲಿಯೂ ಇದೇ ವಿಡಿಯೊವನ್ನು ಹಂಚಿಕೊಂಡಿರುವುದನ್ನು ನೋಡಬಹುದು.

ಗೋಮ್ರಖ್ ಧಾಮ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಗುಣೇಶ ರಾಮ್ ಚೌಧರಿ ಅವರನ್ನು ಇಂಡಿಯಾ ಟುಡೆ ಸಂಪರ್ಕಿಸಿದ್ದು, “ವೀಡಿಯೊದಲ್ಲಿರುವ ಮಗು ನಮ್ಮ ಶಾಲೆಯ ವಿದ್ಯಾರ್ಥಿ ಹರೀಶ್ ಭೀಲ್”’ ಎಂದು ಸ್ಪಷ್ಟಪಡಿಸಿದ್ದಾರೆ. “ಆರು ವರ್ಷದ ಹರೀಶ್ 2 ನೇ ತರಗತಿಯಲ್ಲಿ ಓದುತ್ತಿದ್ದು, ನೃತ್ಯದಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾನೆ. ಇದೇ ಆಗಸ್ಟ್ 15 ರಂದು ರಾಕಿಂಗ್ ಪ್ರದರ್ಶನ ನೀಡಿದ್ದಾನೆ” ಎಂದು ಚೌಧರಿ ಹೇಳಿದ್ದಾರೆ.

“ಜುಲೈ 30ರಂದು ಭೀಲ್ ಅವರ ವೈರಲ್ ನೃತ್ಯ ವೀಡಿಯೊವನ್ನು ಶಾಲೆಯ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಳ್ಳಲಾಗಿತ್ತು. ಆದರೆ, ಜಲೋರ್ ಘಟನೆಯ ಹಿನ್ನೆಲೆಯಲ್ಲಿ ಕೆಲವರು ಹರೀಶನ ವಿಡಿಯೋವನ್ನು ಪ್ರಸಾರ ಮಾಡಲು ಪ್ರಾರಂಭಿಸಿದಾಗ ಶಾಲಾ ಸಿಬ್ಬಂದಿ ಆಘಾತಕ್ಕೊಳಗಾಗಿದ್ದರು” ಎಂದು ಚೌಧರಿ ಪ್ರತಿಕ್ರಿಯೆ ನೀಡಿದ್ದಾರೆ.

“ಭೀಲ್‌ನ ಮತ್ತೊಂದು ವಿಡಿಯೊವನ್ನು ನಮಗೆ ಕಳುಹಿಸಿದ್ದಾರೆ. ಈ ವಿಡಿಯೋದಲ್ಲಿ ಪುಟಾಣಿ ಹರೀಶ್‌ ಭೀಲ್‌ ಮುಖ ಸ್ಪಷ್ಟವಾಗಿ ಕಾಣಬಹುದು. ಈ ವೀಡಿಯೊವನ್ನು ನೋಡಿದರೆ, ವೈರಲ್ ವೀಡಿಯೊದ ಹುಡುಗ ಹರೀಶ್‌ ಎಂಬುದು ಸ್ಪಷ್ಟವಾಗುತ್ತದೆ” ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಇಂಡಿಯಾ ಟುಡೇ ಜಾಲೋರ್ ವರದಿಗಾರ ನರೇಶ್ ಸರ್ನೌ ವಿಷ್ಣೋಯ್ ಅವರು ಇಂದ್ರ ಕುಮಾರ್ ಮೇಘವಾಲ್ ಅವರ ಕುಟುಂಬ ಸದಸ್ಯರನ್ನು ಸಂಪರ್ಕಿಸಿ ವೈರಲ್ ವೀಡಿಯೊದಲ್ಲಿರುವ ಬಾಲಕನ ಬಗ್ಗೆ ವಿಚಾರಿಸಿದಾಗ, “ವೈರಲ್ ಆಗಿರುವ ವಿಡಿಯೋದಲ್ಲಿರುವ ಬಾಲಕ ತನ್ನ ಮಗ ಇಂದ್ರ ಕುಮಾರ್ ಅಲ್ಲ” ಎಂದು ಮೃತ ವಿದ್ಯಾರ್ಥಿಯ ತಂದೆ ದೇವರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಬಾಲಕನೊಬ್ಬ ನೃತ್ಯ ಮಾಡಿರುವ ವಿಡಿಯೋವು ರಾಜಸ್ಥಾನದಲ್ಲಿ ಹತ್ಯೆಯಾದ ಇಂದ್ರ ಮೇಘ್ವಾಲ್‌ದ್ದಲ್ಲ. ಈ ವಿಡಿಯೊದಲ್ಲಿರುವ ಮಗು ರಾಜಸ್ಥಾನದ ಬಾರ್ಮರ್‌ನಲ್ಲಿರುವ ಗೋಮ್ರಖ್ ಧಾಮ್ ಶಾಲೆಯ ವಿದ್ಯಾರ್ಥಿ ಹರೀಶ್‌ ಎಂದು ಸ್ಪಷ್ಟವಾಗಿದೆ.

ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ. ಇಂತಹ ಪೋಸ್ಟ್‌ಗಳನ್ನು ಹಂಚಿಕೊಳ್ಳುವ ಮುನ್ನ ಪರಿಶೀಲಿಸುವುದು ಅಗತ್ಯವಾಗಿದೆ. ಇಲ್ಲದಿದ್ದರೆ ಬದುಕಿರುವ ವ್ಯಕ್ತಿ ಮತ್ತು ಮನೆಯವರ ಭಾವನೆಗಳಿಗೆ ನೋವುಂಟಾಗುತ್ತದೆ.

ವರದಿ ಕೃಪೆ: ಏನ್‌ಸುದ್ದಿ.ಕಾಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...