Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿ ಡಾನ್ಸ್‌ ಮಾಡುತ್ತಿರುವ ಮಗು ಶಿಕ್ಷಕನಿಂದ ಕೊಲೆಯಾದ ಇಂದ್ರ ಮೇಘ್ವಾಲ್‌ ಅಲ್ಲ

ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿ ಡಾನ್ಸ್‌ ಮಾಡುತ್ತಿರುವ ಮಗು ಶಿಕ್ಷಕನಿಂದ ಕೊಲೆಯಾದ ಇಂದ್ರ ಮೇಘ್ವಾಲ್‌ ಅಲ್ಲ

- Advertisement -
- Advertisement -

ಬಾಲಕನೊಬ್ಬ ರಾಜಸ್ಥಾನಿ ಹಾಡಿಗೆ ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ರಾಜಸ್ಥಾನದ ಜಲೋರ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ತನ್ನ ಶಾಲಾ ಶಿಕ್ಷಕನಿಂದಲೇ ಹಲ್ಲೆಗೊಳದ 9 ವರ್ಷದ ದಲಿತ ವಿದ್ಯಾರ್ಥಿ ಇಂದ್ರ ಕುಮಾರ್ ಮೇಘ್ವಾಲ್ ವಿಡಿಯೊ ಇದೆಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗುತ್ತಿದೆ.

ಸರಸ್ವತಿ ವಿದ್ಯಾ ಮಂದಿರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕ ಚೈಲ್ ಸಿಂಗ್ (40 ವರ್ಷ), ಶಾಲೆಯಲ್ಲಿ ಸವರ್ಣಿಯರಿಗೆ ಕುಡಿಯಲು ಮೀಸಲಿಟ್ಟಿದ್ದ ನೀರನ್ನು ದಲಿತ ಬಾಲಕ ಇಂದ್ರ ಕುಮಾರ್ ಕುಡಿದನೆಂದು ಕೋಪಗೊಂಡು ಬಾಲಕನಿಗೆ ಮನಬಂದಂತೆ ಥಳಿಸಿದ್ದನು. ಇದರಿಂದ ಅಸ್ವಸ್ಥಗೊಂಡ ಬಾಲಕ ಮೃತಪಟ್ಟಿದ್ದಾನೆ. ನಂತರ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದು, ಕೊಲೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈ ಘಟನೆ ದೇಶದ ಆತ್ಮಸಾಕ್ಷಿಯನ್ನು ಕದಡಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಡೆದಿರುವ ಈ ಘಟನೆಯು ಅಮೃತ ಮಹೋತ್ಸವದ ವೈಭವವನ್ನು ಅಣಿಸಿದಂತಿದೆ. ಇದೆಲ್ಲದರ ನಡುವೆ ಬಾಲಕನ ಹತ್ಯೆಗೆ ಥಳುಕು ಹಾಕಿ ಕೆಲವು ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಇಲ್ಲಿ ಚರ್ಚಿಸಲಾಗುತ್ತಿರುವ ವಿಡಿಯೋವನ್ನು ಹಂಚಿಕೊಂಡಿರುವ ಸಾಮಾಜಿಕ ಮಾಧ್ಯಮದ ಬಳಕೆದಾರರು ಬಾಲಕನ ಸಾವಿನ ಕುರಿತು ಹೀಗೆ ಬರೆದಿದ್ದಾರೆ: “ಇಂದ್ರನ  ನೆನಪು, ಎಂತಹ ಮುಗ್ಧತೆ, ಕೇವಲ ತನ್ನ ಬಾಯಾರಿಕೆಯನ್ನು ನೀಗಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುತ್ತೇನೆ ಎಂದು ಈ ಬಡ ಮಗುವಿಗೆ ಹೇಗೆ ತಿಳಿಯಬೇಕು? ಈ ಬಡ ಮಗುವಿಗೆ ಇಂತಹ ಕ್ರೂರ ಶಿಕ್ಷೆಯೇ? ಅವನಿಗೆ ಕೋಟಿ ನಮನಗಳು…”

ಹೀಗೆ ಕೆಲವು ಟಿಪ್ಪಣಿಗಳೊಂದಿಗೆ ವಿಡಿಯೊ ಹಂಚಿಕೆಯಾಗುತ್ತಿದೆ. ಹಾಗಿದರೆ ವೈರಲ್ ವಿಡಿಯೊದಲ್ಲಿ ಹಾಡಿಗೆ ನೃತ್ಯ ಮಾಡಿರುವ ಬಾಲಕ ಇಂದ್ರ ಮೇಘ್ವಾಲ್ ಎಂಬುದು ನಿಜವೇ?

ವೈರಲ್ ವಿಡಿಯೋದಲ್ಲಿ ಡ್ಯಾನ್ಸ್ ಮಾಡುತ್ತಿರುವ ಬಾಲಕ ಇಂದ್ರ ಕುಮಾರ್ ಮೇಘ್ವಾಲ್‌ ಅಲ್ಲ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ವೈರಲ್ ವಿಡಿಯೋದಲ್ಲಿ ನೃತ್ಯ ಮಾಡುತ್ತಿರುವ ಬಾಲಕನ ಚಿತ್ರ, ಥಳಿತಕ್ಕೊಳಗಾಗಿ ಸಾವನಪ್ಪಿದ ದಲಿತ ವಿದ್ಯಾರ್ಥಿ ಇಂದ್ರ ಮೇಘ್ವಾಲ್‌ ಚಿತ್ರವನ್ನು ಹೋಲಿಕೆ ಮಾಡಿದಾಗ ಎರಡು ಬೇರೆ ಬೇರೆ ಎಂಬುದು ಸ್ಪಷ್ಟವಾಗುತ್ತದೆ. ಈ ಫೋಟೋಗಳ ನಡುವೆ ವ್ಯತ್ಯಾಸಗಳಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ವೈರಲ್ ವಿಡಿಯೋದಲ್ಲಿ ಹಾಡಿಗೆ ನೃತ್ಯ ಮಾಡುತ್ತಿರುವ ಬಾಲಕನ ಹೆಸರು ಹರೀಶ್ ಎಂದಾಗಿದೆ. ಈ ಮಗು ರಾಜಸ್ಥಾನದ ಬಾರ್ಮರ್‌ನಲ್ಲಿರುವ ಗೋಮ್ರಖ್ ಧಾಮ್ ಶಾಲೆಯ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ನೃತ್ಯ ಮಾಡುತ್ತಿರುವ ವಿಡಿಯೊವನ್ನು ವಿದ್ಯಾರ್ಥಿ ಹರೀಶನ ಶಾಲೆಯ ಶಿಕ್ಷಕರಾದ ಟಿ.ಆರ್‌. ಚೇಲಾ ರಾಮ್ ರೈಕಾ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.  “ಜುಲೈ 30ರಂದು 2ನೇ ತರಗತಿ ವಿದ್ಯಾರ್ಥಿ ಹರೀಶ್, ನೋ ಬ್ಯಾಗ್ ಡೇ ಸಂದರ್ಭದಲ್ಲಿ ಆತ್ಮವಿಶ್ವಾಸದ ಪ್ರದರ್ಶನ ತೋರಿದನು” ಎಂಬ ಟಿಪ್ಪಣಿಯೊಂದಿಗೆ ಶಿಕ್ಷಕ ಚೇಲಾ ರಾಮ್‌ ಅವರು ಹಂಚಿಕೊಂಡಿರುವ ದೀರ್ಘ ವಿಡಿಯೊವನ್ನು ಇಲ್ಲಿ ಗಮನಿಸಬಹುದು. ಗೋಮ್ರಖ್ ಧಾಮ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಧಿಕೃತ ಫೇಸ್‌ಬುಕ್ ಪೇಜ್‌  ಪರಿಶೀಲಿಸಿದಾಗ ಅಲ್ಲಿಯೂ ಇದೇ ವಿಡಿಯೊವನ್ನು ಹಂಚಿಕೊಂಡಿರುವುದನ್ನು ನೋಡಬಹುದು.

ಗೋಮ್ರಖ್ ಧಾಮ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಗುಣೇಶ ರಾಮ್ ಚೌಧರಿ ಅವರನ್ನು ಇಂಡಿಯಾ ಟುಡೆ ಸಂಪರ್ಕಿಸಿದ್ದು, “ವೀಡಿಯೊದಲ್ಲಿರುವ ಮಗು ನಮ್ಮ ಶಾಲೆಯ ವಿದ್ಯಾರ್ಥಿ ಹರೀಶ್ ಭೀಲ್”’ ಎಂದು ಸ್ಪಷ್ಟಪಡಿಸಿದ್ದಾರೆ. “ಆರು ವರ್ಷದ ಹರೀಶ್ 2 ನೇ ತರಗತಿಯಲ್ಲಿ ಓದುತ್ತಿದ್ದು, ನೃತ್ಯದಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾನೆ. ಇದೇ ಆಗಸ್ಟ್ 15 ರಂದು ರಾಕಿಂಗ್ ಪ್ರದರ್ಶನ ನೀಡಿದ್ದಾನೆ” ಎಂದು ಚೌಧರಿ ಹೇಳಿದ್ದಾರೆ.

“ಜುಲೈ 30ರಂದು ಭೀಲ್ ಅವರ ವೈರಲ್ ನೃತ್ಯ ವೀಡಿಯೊವನ್ನು ಶಾಲೆಯ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಳ್ಳಲಾಗಿತ್ತು. ಆದರೆ, ಜಲೋರ್ ಘಟನೆಯ ಹಿನ್ನೆಲೆಯಲ್ಲಿ ಕೆಲವರು ಹರೀಶನ ವಿಡಿಯೋವನ್ನು ಪ್ರಸಾರ ಮಾಡಲು ಪ್ರಾರಂಭಿಸಿದಾಗ ಶಾಲಾ ಸಿಬ್ಬಂದಿ ಆಘಾತಕ್ಕೊಳಗಾಗಿದ್ದರು” ಎಂದು ಚೌಧರಿ ಪ್ರತಿಕ್ರಿಯೆ ನೀಡಿದ್ದಾರೆ.

“ಭೀಲ್‌ನ ಮತ್ತೊಂದು ವಿಡಿಯೊವನ್ನು ನಮಗೆ ಕಳುಹಿಸಿದ್ದಾರೆ. ಈ ವಿಡಿಯೋದಲ್ಲಿ ಪುಟಾಣಿ ಹರೀಶ್‌ ಭೀಲ್‌ ಮುಖ ಸ್ಪಷ್ಟವಾಗಿ ಕಾಣಬಹುದು. ಈ ವೀಡಿಯೊವನ್ನು ನೋಡಿದರೆ, ವೈರಲ್ ವೀಡಿಯೊದ ಹುಡುಗ ಹರೀಶ್‌ ಎಂಬುದು ಸ್ಪಷ್ಟವಾಗುತ್ತದೆ” ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಇಂಡಿಯಾ ಟುಡೇ ಜಾಲೋರ್ ವರದಿಗಾರ ನರೇಶ್ ಸರ್ನೌ ವಿಷ್ಣೋಯ್ ಅವರು ಇಂದ್ರ ಕುಮಾರ್ ಮೇಘವಾಲ್ ಅವರ ಕುಟುಂಬ ಸದಸ್ಯರನ್ನು ಸಂಪರ್ಕಿಸಿ ವೈರಲ್ ವೀಡಿಯೊದಲ್ಲಿರುವ ಬಾಲಕನ ಬಗ್ಗೆ ವಿಚಾರಿಸಿದಾಗ, “ವೈರಲ್ ಆಗಿರುವ ವಿಡಿಯೋದಲ್ಲಿರುವ ಬಾಲಕ ತನ್ನ ಮಗ ಇಂದ್ರ ಕುಮಾರ್ ಅಲ್ಲ” ಎಂದು ಮೃತ ವಿದ್ಯಾರ್ಥಿಯ ತಂದೆ ದೇವರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಬಾಲಕನೊಬ್ಬ ನೃತ್ಯ ಮಾಡಿರುವ ವಿಡಿಯೋವು ರಾಜಸ್ಥಾನದಲ್ಲಿ ಹತ್ಯೆಯಾದ ಇಂದ್ರ ಮೇಘ್ವಾಲ್‌ದ್ದಲ್ಲ. ಈ ವಿಡಿಯೊದಲ್ಲಿರುವ ಮಗು ರಾಜಸ್ಥಾನದ ಬಾರ್ಮರ್‌ನಲ್ಲಿರುವ ಗೋಮ್ರಖ್ ಧಾಮ್ ಶಾಲೆಯ ವಿದ್ಯಾರ್ಥಿ ಹರೀಶ್‌ ಎಂದು ಸ್ಪಷ್ಟವಾಗಿದೆ.

ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ. ಇಂತಹ ಪೋಸ್ಟ್‌ಗಳನ್ನು ಹಂಚಿಕೊಳ್ಳುವ ಮುನ್ನ ಪರಿಶೀಲಿಸುವುದು ಅಗತ್ಯವಾಗಿದೆ. ಇಲ್ಲದಿದ್ದರೆ ಬದುಕಿರುವ ವ್ಯಕ್ತಿ ಮತ್ತು ಮನೆಯವರ ಭಾವನೆಗಳಿಗೆ ನೋವುಂಟಾಗುತ್ತದೆ.

ವರದಿ ಕೃಪೆ: ಏನ್‌ಸುದ್ದಿ.ಕಾಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...