Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿ ಡಾನ್ಸ್‌ ಮಾಡುತ್ತಿರುವ ಮಗು ಶಿಕ್ಷಕನಿಂದ ಕೊಲೆಯಾದ ಇಂದ್ರ ಮೇಘ್ವಾಲ್‌ ಅಲ್ಲ

ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿ ಡಾನ್ಸ್‌ ಮಾಡುತ್ತಿರುವ ಮಗು ಶಿಕ್ಷಕನಿಂದ ಕೊಲೆಯಾದ ಇಂದ್ರ ಮೇಘ್ವಾಲ್‌ ಅಲ್ಲ

- Advertisement -
- Advertisement -

ಬಾಲಕನೊಬ್ಬ ರಾಜಸ್ಥಾನಿ ಹಾಡಿಗೆ ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ರಾಜಸ್ಥಾನದ ಜಲೋರ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ತನ್ನ ಶಾಲಾ ಶಿಕ್ಷಕನಿಂದಲೇ ಹಲ್ಲೆಗೊಳದ 9 ವರ್ಷದ ದಲಿತ ವಿದ್ಯಾರ್ಥಿ ಇಂದ್ರ ಕುಮಾರ್ ಮೇಘ್ವಾಲ್ ವಿಡಿಯೊ ಇದೆಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗುತ್ತಿದೆ.

ಸರಸ್ವತಿ ವಿದ್ಯಾ ಮಂದಿರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕ ಚೈಲ್ ಸಿಂಗ್ (40 ವರ್ಷ), ಶಾಲೆಯಲ್ಲಿ ಸವರ್ಣಿಯರಿಗೆ ಕುಡಿಯಲು ಮೀಸಲಿಟ್ಟಿದ್ದ ನೀರನ್ನು ದಲಿತ ಬಾಲಕ ಇಂದ್ರ ಕುಮಾರ್ ಕುಡಿದನೆಂದು ಕೋಪಗೊಂಡು ಬಾಲಕನಿಗೆ ಮನಬಂದಂತೆ ಥಳಿಸಿದ್ದನು. ಇದರಿಂದ ಅಸ್ವಸ್ಥಗೊಂಡ ಬಾಲಕ ಮೃತಪಟ್ಟಿದ್ದಾನೆ. ನಂತರ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದು, ಕೊಲೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈ ಘಟನೆ ದೇಶದ ಆತ್ಮಸಾಕ್ಷಿಯನ್ನು ಕದಡಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಡೆದಿರುವ ಈ ಘಟನೆಯು ಅಮೃತ ಮಹೋತ್ಸವದ ವೈಭವವನ್ನು ಅಣಿಸಿದಂತಿದೆ. ಇದೆಲ್ಲದರ ನಡುವೆ ಬಾಲಕನ ಹತ್ಯೆಗೆ ಥಳುಕು ಹಾಕಿ ಕೆಲವು ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಇಲ್ಲಿ ಚರ್ಚಿಸಲಾಗುತ್ತಿರುವ ವಿಡಿಯೋವನ್ನು ಹಂಚಿಕೊಂಡಿರುವ ಸಾಮಾಜಿಕ ಮಾಧ್ಯಮದ ಬಳಕೆದಾರರು ಬಾಲಕನ ಸಾವಿನ ಕುರಿತು ಹೀಗೆ ಬರೆದಿದ್ದಾರೆ: “ಇಂದ್ರನ  ನೆನಪು, ಎಂತಹ ಮುಗ್ಧತೆ, ಕೇವಲ ತನ್ನ ಬಾಯಾರಿಕೆಯನ್ನು ನೀಗಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುತ್ತೇನೆ ಎಂದು ಈ ಬಡ ಮಗುವಿಗೆ ಹೇಗೆ ತಿಳಿಯಬೇಕು? ಈ ಬಡ ಮಗುವಿಗೆ ಇಂತಹ ಕ್ರೂರ ಶಿಕ್ಷೆಯೇ? ಅವನಿಗೆ ಕೋಟಿ ನಮನಗಳು…”

ಹೀಗೆ ಕೆಲವು ಟಿಪ್ಪಣಿಗಳೊಂದಿಗೆ ವಿಡಿಯೊ ಹಂಚಿಕೆಯಾಗುತ್ತಿದೆ. ಹಾಗಿದರೆ ವೈರಲ್ ವಿಡಿಯೊದಲ್ಲಿ ಹಾಡಿಗೆ ನೃತ್ಯ ಮಾಡಿರುವ ಬಾಲಕ ಇಂದ್ರ ಮೇಘ್ವಾಲ್ ಎಂಬುದು ನಿಜವೇ?

ವೈರಲ್ ವಿಡಿಯೋದಲ್ಲಿ ಡ್ಯಾನ್ಸ್ ಮಾಡುತ್ತಿರುವ ಬಾಲಕ ಇಂದ್ರ ಕುಮಾರ್ ಮೇಘ್ವಾಲ್‌ ಅಲ್ಲ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ವೈರಲ್ ವಿಡಿಯೋದಲ್ಲಿ ನೃತ್ಯ ಮಾಡುತ್ತಿರುವ ಬಾಲಕನ ಚಿತ್ರ, ಥಳಿತಕ್ಕೊಳಗಾಗಿ ಸಾವನಪ್ಪಿದ ದಲಿತ ವಿದ್ಯಾರ್ಥಿ ಇಂದ್ರ ಮೇಘ್ವಾಲ್‌ ಚಿತ್ರವನ್ನು ಹೋಲಿಕೆ ಮಾಡಿದಾಗ ಎರಡು ಬೇರೆ ಬೇರೆ ಎಂಬುದು ಸ್ಪಷ್ಟವಾಗುತ್ತದೆ. ಈ ಫೋಟೋಗಳ ನಡುವೆ ವ್ಯತ್ಯಾಸಗಳಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ವೈರಲ್ ವಿಡಿಯೋದಲ್ಲಿ ಹಾಡಿಗೆ ನೃತ್ಯ ಮಾಡುತ್ತಿರುವ ಬಾಲಕನ ಹೆಸರು ಹರೀಶ್ ಎಂದಾಗಿದೆ. ಈ ಮಗು ರಾಜಸ್ಥಾನದ ಬಾರ್ಮರ್‌ನಲ್ಲಿರುವ ಗೋಮ್ರಖ್ ಧಾಮ್ ಶಾಲೆಯ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ನೃತ್ಯ ಮಾಡುತ್ತಿರುವ ವಿಡಿಯೊವನ್ನು ವಿದ್ಯಾರ್ಥಿ ಹರೀಶನ ಶಾಲೆಯ ಶಿಕ್ಷಕರಾದ ಟಿ.ಆರ್‌. ಚೇಲಾ ರಾಮ್ ರೈಕಾ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.  “ಜುಲೈ 30ರಂದು 2ನೇ ತರಗತಿ ವಿದ್ಯಾರ್ಥಿ ಹರೀಶ್, ನೋ ಬ್ಯಾಗ್ ಡೇ ಸಂದರ್ಭದಲ್ಲಿ ಆತ್ಮವಿಶ್ವಾಸದ ಪ್ರದರ್ಶನ ತೋರಿದನು” ಎಂಬ ಟಿಪ್ಪಣಿಯೊಂದಿಗೆ ಶಿಕ್ಷಕ ಚೇಲಾ ರಾಮ್‌ ಅವರು ಹಂಚಿಕೊಂಡಿರುವ ದೀರ್ಘ ವಿಡಿಯೊವನ್ನು ಇಲ್ಲಿ ಗಮನಿಸಬಹುದು. ಗೋಮ್ರಖ್ ಧಾಮ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಧಿಕೃತ ಫೇಸ್‌ಬುಕ್ ಪೇಜ್‌  ಪರಿಶೀಲಿಸಿದಾಗ ಅಲ್ಲಿಯೂ ಇದೇ ವಿಡಿಯೊವನ್ನು ಹಂಚಿಕೊಂಡಿರುವುದನ್ನು ನೋಡಬಹುದು.

ಗೋಮ್ರಖ್ ಧಾಮ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಗುಣೇಶ ರಾಮ್ ಚೌಧರಿ ಅವರನ್ನು ಇಂಡಿಯಾ ಟುಡೆ ಸಂಪರ್ಕಿಸಿದ್ದು, “ವೀಡಿಯೊದಲ್ಲಿರುವ ಮಗು ನಮ್ಮ ಶಾಲೆಯ ವಿದ್ಯಾರ್ಥಿ ಹರೀಶ್ ಭೀಲ್”’ ಎಂದು ಸ್ಪಷ್ಟಪಡಿಸಿದ್ದಾರೆ. “ಆರು ವರ್ಷದ ಹರೀಶ್ 2 ನೇ ತರಗತಿಯಲ್ಲಿ ಓದುತ್ತಿದ್ದು, ನೃತ್ಯದಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾನೆ. ಇದೇ ಆಗಸ್ಟ್ 15 ರಂದು ರಾಕಿಂಗ್ ಪ್ರದರ್ಶನ ನೀಡಿದ್ದಾನೆ” ಎಂದು ಚೌಧರಿ ಹೇಳಿದ್ದಾರೆ.

“ಜುಲೈ 30ರಂದು ಭೀಲ್ ಅವರ ವೈರಲ್ ನೃತ್ಯ ವೀಡಿಯೊವನ್ನು ಶಾಲೆಯ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಳ್ಳಲಾಗಿತ್ತು. ಆದರೆ, ಜಲೋರ್ ಘಟನೆಯ ಹಿನ್ನೆಲೆಯಲ್ಲಿ ಕೆಲವರು ಹರೀಶನ ವಿಡಿಯೋವನ್ನು ಪ್ರಸಾರ ಮಾಡಲು ಪ್ರಾರಂಭಿಸಿದಾಗ ಶಾಲಾ ಸಿಬ್ಬಂದಿ ಆಘಾತಕ್ಕೊಳಗಾಗಿದ್ದರು” ಎಂದು ಚೌಧರಿ ಪ್ರತಿಕ್ರಿಯೆ ನೀಡಿದ್ದಾರೆ.

“ಭೀಲ್‌ನ ಮತ್ತೊಂದು ವಿಡಿಯೊವನ್ನು ನಮಗೆ ಕಳುಹಿಸಿದ್ದಾರೆ. ಈ ವಿಡಿಯೋದಲ್ಲಿ ಪುಟಾಣಿ ಹರೀಶ್‌ ಭೀಲ್‌ ಮುಖ ಸ್ಪಷ್ಟವಾಗಿ ಕಾಣಬಹುದು. ಈ ವೀಡಿಯೊವನ್ನು ನೋಡಿದರೆ, ವೈರಲ್ ವೀಡಿಯೊದ ಹುಡುಗ ಹರೀಶ್‌ ಎಂಬುದು ಸ್ಪಷ್ಟವಾಗುತ್ತದೆ” ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಇಂಡಿಯಾ ಟುಡೇ ಜಾಲೋರ್ ವರದಿಗಾರ ನರೇಶ್ ಸರ್ನೌ ವಿಷ್ಣೋಯ್ ಅವರು ಇಂದ್ರ ಕುಮಾರ್ ಮೇಘವಾಲ್ ಅವರ ಕುಟುಂಬ ಸದಸ್ಯರನ್ನು ಸಂಪರ್ಕಿಸಿ ವೈರಲ್ ವೀಡಿಯೊದಲ್ಲಿರುವ ಬಾಲಕನ ಬಗ್ಗೆ ವಿಚಾರಿಸಿದಾಗ, “ವೈರಲ್ ಆಗಿರುವ ವಿಡಿಯೋದಲ್ಲಿರುವ ಬಾಲಕ ತನ್ನ ಮಗ ಇಂದ್ರ ಕುಮಾರ್ ಅಲ್ಲ” ಎಂದು ಮೃತ ವಿದ್ಯಾರ್ಥಿಯ ತಂದೆ ದೇವರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಬಾಲಕನೊಬ್ಬ ನೃತ್ಯ ಮಾಡಿರುವ ವಿಡಿಯೋವು ರಾಜಸ್ಥಾನದಲ್ಲಿ ಹತ್ಯೆಯಾದ ಇಂದ್ರ ಮೇಘ್ವಾಲ್‌ದ್ದಲ್ಲ. ಈ ವಿಡಿಯೊದಲ್ಲಿರುವ ಮಗು ರಾಜಸ್ಥಾನದ ಬಾರ್ಮರ್‌ನಲ್ಲಿರುವ ಗೋಮ್ರಖ್ ಧಾಮ್ ಶಾಲೆಯ ವಿದ್ಯಾರ್ಥಿ ಹರೀಶ್‌ ಎಂದು ಸ್ಪಷ್ಟವಾಗಿದೆ.

ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ. ಇಂತಹ ಪೋಸ್ಟ್‌ಗಳನ್ನು ಹಂಚಿಕೊಳ್ಳುವ ಮುನ್ನ ಪರಿಶೀಲಿಸುವುದು ಅಗತ್ಯವಾಗಿದೆ. ಇಲ್ಲದಿದ್ದರೆ ಬದುಕಿರುವ ವ್ಯಕ್ತಿ ಮತ್ತು ಮನೆಯವರ ಭಾವನೆಗಳಿಗೆ ನೋವುಂಟಾಗುತ್ತದೆ.

ವರದಿ ಕೃಪೆ: ಏನ್‌ಸುದ್ದಿ.ಕಾಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....