Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿ ಡಾನ್ಸ್‌ ಮಾಡುತ್ತಿರುವ ಮಗು ಶಿಕ್ಷಕನಿಂದ ಕೊಲೆಯಾದ ಇಂದ್ರ ಮೇಘ್ವಾಲ್‌ ಅಲ್ಲ

ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿ ಡಾನ್ಸ್‌ ಮಾಡುತ್ತಿರುವ ಮಗು ಶಿಕ್ಷಕನಿಂದ ಕೊಲೆಯಾದ ಇಂದ್ರ ಮೇಘ್ವಾಲ್‌ ಅಲ್ಲ

- Advertisement -
- Advertisement -

ಬಾಲಕನೊಬ್ಬ ರಾಜಸ್ಥಾನಿ ಹಾಡಿಗೆ ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ರಾಜಸ್ಥಾನದ ಜಲೋರ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ತನ್ನ ಶಾಲಾ ಶಿಕ್ಷಕನಿಂದಲೇ ಹಲ್ಲೆಗೊಳದ 9 ವರ್ಷದ ದಲಿತ ವಿದ್ಯಾರ್ಥಿ ಇಂದ್ರ ಕುಮಾರ್ ಮೇಘ್ವಾಲ್ ವಿಡಿಯೊ ಇದೆಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗುತ್ತಿದೆ.

ಸರಸ್ವತಿ ವಿದ್ಯಾ ಮಂದಿರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕ ಚೈಲ್ ಸಿಂಗ್ (40 ವರ್ಷ), ಶಾಲೆಯಲ್ಲಿ ಸವರ್ಣಿಯರಿಗೆ ಕುಡಿಯಲು ಮೀಸಲಿಟ್ಟಿದ್ದ ನೀರನ್ನು ದಲಿತ ಬಾಲಕ ಇಂದ್ರ ಕುಮಾರ್ ಕುಡಿದನೆಂದು ಕೋಪಗೊಂಡು ಬಾಲಕನಿಗೆ ಮನಬಂದಂತೆ ಥಳಿಸಿದ್ದನು. ಇದರಿಂದ ಅಸ್ವಸ್ಥಗೊಂಡ ಬಾಲಕ ಮೃತಪಟ್ಟಿದ್ದಾನೆ. ನಂತರ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದು, ಕೊಲೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈ ಘಟನೆ ದೇಶದ ಆತ್ಮಸಾಕ್ಷಿಯನ್ನು ಕದಡಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಡೆದಿರುವ ಈ ಘಟನೆಯು ಅಮೃತ ಮಹೋತ್ಸವದ ವೈಭವವನ್ನು ಅಣಿಸಿದಂತಿದೆ. ಇದೆಲ್ಲದರ ನಡುವೆ ಬಾಲಕನ ಹತ್ಯೆಗೆ ಥಳುಕು ಹಾಕಿ ಕೆಲವು ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಇಲ್ಲಿ ಚರ್ಚಿಸಲಾಗುತ್ತಿರುವ ವಿಡಿಯೋವನ್ನು ಹಂಚಿಕೊಂಡಿರುವ ಸಾಮಾಜಿಕ ಮಾಧ್ಯಮದ ಬಳಕೆದಾರರು ಬಾಲಕನ ಸಾವಿನ ಕುರಿತು ಹೀಗೆ ಬರೆದಿದ್ದಾರೆ: “ಇಂದ್ರನ  ನೆನಪು, ಎಂತಹ ಮುಗ್ಧತೆ, ಕೇವಲ ತನ್ನ ಬಾಯಾರಿಕೆಯನ್ನು ನೀಗಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುತ್ತೇನೆ ಎಂದು ಈ ಬಡ ಮಗುವಿಗೆ ಹೇಗೆ ತಿಳಿಯಬೇಕು? ಈ ಬಡ ಮಗುವಿಗೆ ಇಂತಹ ಕ್ರೂರ ಶಿಕ್ಷೆಯೇ? ಅವನಿಗೆ ಕೋಟಿ ನಮನಗಳು…”

ಹೀಗೆ ಕೆಲವು ಟಿಪ್ಪಣಿಗಳೊಂದಿಗೆ ವಿಡಿಯೊ ಹಂಚಿಕೆಯಾಗುತ್ತಿದೆ. ಹಾಗಿದರೆ ವೈರಲ್ ವಿಡಿಯೊದಲ್ಲಿ ಹಾಡಿಗೆ ನೃತ್ಯ ಮಾಡಿರುವ ಬಾಲಕ ಇಂದ್ರ ಮೇಘ್ವಾಲ್ ಎಂಬುದು ನಿಜವೇ?

ವೈರಲ್ ವಿಡಿಯೋದಲ್ಲಿ ಡ್ಯಾನ್ಸ್ ಮಾಡುತ್ತಿರುವ ಬಾಲಕ ಇಂದ್ರ ಕುಮಾರ್ ಮೇಘ್ವಾಲ್‌ ಅಲ್ಲ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ವೈರಲ್ ವಿಡಿಯೋದಲ್ಲಿ ನೃತ್ಯ ಮಾಡುತ್ತಿರುವ ಬಾಲಕನ ಚಿತ್ರ, ಥಳಿತಕ್ಕೊಳಗಾಗಿ ಸಾವನಪ್ಪಿದ ದಲಿತ ವಿದ್ಯಾರ್ಥಿ ಇಂದ್ರ ಮೇಘ್ವಾಲ್‌ ಚಿತ್ರವನ್ನು ಹೋಲಿಕೆ ಮಾಡಿದಾಗ ಎರಡು ಬೇರೆ ಬೇರೆ ಎಂಬುದು ಸ್ಪಷ್ಟವಾಗುತ್ತದೆ. ಈ ಫೋಟೋಗಳ ನಡುವೆ ವ್ಯತ್ಯಾಸಗಳಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ವೈರಲ್ ವಿಡಿಯೋದಲ್ಲಿ ಹಾಡಿಗೆ ನೃತ್ಯ ಮಾಡುತ್ತಿರುವ ಬಾಲಕನ ಹೆಸರು ಹರೀಶ್ ಎಂದಾಗಿದೆ. ಈ ಮಗು ರಾಜಸ್ಥಾನದ ಬಾರ್ಮರ್‌ನಲ್ಲಿರುವ ಗೋಮ್ರಖ್ ಧಾಮ್ ಶಾಲೆಯ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ನೃತ್ಯ ಮಾಡುತ್ತಿರುವ ವಿಡಿಯೊವನ್ನು ವಿದ್ಯಾರ್ಥಿ ಹರೀಶನ ಶಾಲೆಯ ಶಿಕ್ಷಕರಾದ ಟಿ.ಆರ್‌. ಚೇಲಾ ರಾಮ್ ರೈಕಾ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.  “ಜುಲೈ 30ರಂದು 2ನೇ ತರಗತಿ ವಿದ್ಯಾರ್ಥಿ ಹರೀಶ್, ನೋ ಬ್ಯಾಗ್ ಡೇ ಸಂದರ್ಭದಲ್ಲಿ ಆತ್ಮವಿಶ್ವಾಸದ ಪ್ರದರ್ಶನ ತೋರಿದನು” ಎಂಬ ಟಿಪ್ಪಣಿಯೊಂದಿಗೆ ಶಿಕ್ಷಕ ಚೇಲಾ ರಾಮ್‌ ಅವರು ಹಂಚಿಕೊಂಡಿರುವ ದೀರ್ಘ ವಿಡಿಯೊವನ್ನು ಇಲ್ಲಿ ಗಮನಿಸಬಹುದು. ಗೋಮ್ರಖ್ ಧಾಮ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಧಿಕೃತ ಫೇಸ್‌ಬುಕ್ ಪೇಜ್‌  ಪರಿಶೀಲಿಸಿದಾಗ ಅಲ್ಲಿಯೂ ಇದೇ ವಿಡಿಯೊವನ್ನು ಹಂಚಿಕೊಂಡಿರುವುದನ್ನು ನೋಡಬಹುದು.

ಗೋಮ್ರಖ್ ಧಾಮ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಗುಣೇಶ ರಾಮ್ ಚೌಧರಿ ಅವರನ್ನು ಇಂಡಿಯಾ ಟುಡೆ ಸಂಪರ್ಕಿಸಿದ್ದು, “ವೀಡಿಯೊದಲ್ಲಿರುವ ಮಗು ನಮ್ಮ ಶಾಲೆಯ ವಿದ್ಯಾರ್ಥಿ ಹರೀಶ್ ಭೀಲ್”’ ಎಂದು ಸ್ಪಷ್ಟಪಡಿಸಿದ್ದಾರೆ. “ಆರು ವರ್ಷದ ಹರೀಶ್ 2 ನೇ ತರಗತಿಯಲ್ಲಿ ಓದುತ್ತಿದ್ದು, ನೃತ್ಯದಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾನೆ. ಇದೇ ಆಗಸ್ಟ್ 15 ರಂದು ರಾಕಿಂಗ್ ಪ್ರದರ್ಶನ ನೀಡಿದ್ದಾನೆ” ಎಂದು ಚೌಧರಿ ಹೇಳಿದ್ದಾರೆ.

“ಜುಲೈ 30ರಂದು ಭೀಲ್ ಅವರ ವೈರಲ್ ನೃತ್ಯ ವೀಡಿಯೊವನ್ನು ಶಾಲೆಯ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಳ್ಳಲಾಗಿತ್ತು. ಆದರೆ, ಜಲೋರ್ ಘಟನೆಯ ಹಿನ್ನೆಲೆಯಲ್ಲಿ ಕೆಲವರು ಹರೀಶನ ವಿಡಿಯೋವನ್ನು ಪ್ರಸಾರ ಮಾಡಲು ಪ್ರಾರಂಭಿಸಿದಾಗ ಶಾಲಾ ಸಿಬ್ಬಂದಿ ಆಘಾತಕ್ಕೊಳಗಾಗಿದ್ದರು” ಎಂದು ಚೌಧರಿ ಪ್ರತಿಕ್ರಿಯೆ ನೀಡಿದ್ದಾರೆ.

“ಭೀಲ್‌ನ ಮತ್ತೊಂದು ವಿಡಿಯೊವನ್ನು ನಮಗೆ ಕಳುಹಿಸಿದ್ದಾರೆ. ಈ ವಿಡಿಯೋದಲ್ಲಿ ಪುಟಾಣಿ ಹರೀಶ್‌ ಭೀಲ್‌ ಮುಖ ಸ್ಪಷ್ಟವಾಗಿ ಕಾಣಬಹುದು. ಈ ವೀಡಿಯೊವನ್ನು ನೋಡಿದರೆ, ವೈರಲ್ ವೀಡಿಯೊದ ಹುಡುಗ ಹರೀಶ್‌ ಎಂಬುದು ಸ್ಪಷ್ಟವಾಗುತ್ತದೆ” ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಇಂಡಿಯಾ ಟುಡೇ ಜಾಲೋರ್ ವರದಿಗಾರ ನರೇಶ್ ಸರ್ನೌ ವಿಷ್ಣೋಯ್ ಅವರು ಇಂದ್ರ ಕುಮಾರ್ ಮೇಘವಾಲ್ ಅವರ ಕುಟುಂಬ ಸದಸ್ಯರನ್ನು ಸಂಪರ್ಕಿಸಿ ವೈರಲ್ ವೀಡಿಯೊದಲ್ಲಿರುವ ಬಾಲಕನ ಬಗ್ಗೆ ವಿಚಾರಿಸಿದಾಗ, “ವೈರಲ್ ಆಗಿರುವ ವಿಡಿಯೋದಲ್ಲಿರುವ ಬಾಲಕ ತನ್ನ ಮಗ ಇಂದ್ರ ಕುಮಾರ್ ಅಲ್ಲ” ಎಂದು ಮೃತ ವಿದ್ಯಾರ್ಥಿಯ ತಂದೆ ದೇವರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಬಾಲಕನೊಬ್ಬ ನೃತ್ಯ ಮಾಡಿರುವ ವಿಡಿಯೋವು ರಾಜಸ್ಥಾನದಲ್ಲಿ ಹತ್ಯೆಯಾದ ಇಂದ್ರ ಮೇಘ್ವಾಲ್‌ದ್ದಲ್ಲ. ಈ ವಿಡಿಯೊದಲ್ಲಿರುವ ಮಗು ರಾಜಸ್ಥಾನದ ಬಾರ್ಮರ್‌ನಲ್ಲಿರುವ ಗೋಮ್ರಖ್ ಧಾಮ್ ಶಾಲೆಯ ವಿದ್ಯಾರ್ಥಿ ಹರೀಶ್‌ ಎಂದು ಸ್ಪಷ್ಟವಾಗಿದೆ.

ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ. ಇಂತಹ ಪೋಸ್ಟ್‌ಗಳನ್ನು ಹಂಚಿಕೊಳ್ಳುವ ಮುನ್ನ ಪರಿಶೀಲಿಸುವುದು ಅಗತ್ಯವಾಗಿದೆ. ಇಲ್ಲದಿದ್ದರೆ ಬದುಕಿರುವ ವ್ಯಕ್ತಿ ಮತ್ತು ಮನೆಯವರ ಭಾವನೆಗಳಿಗೆ ನೋವುಂಟಾಗುತ್ತದೆ.

ವರದಿ ಕೃಪೆ: ಏನ್‌ಸುದ್ದಿ.ಕಾಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...