Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿ ಡಾನ್ಸ್‌ ಮಾಡುತ್ತಿರುವ ಮಗು ಶಿಕ್ಷಕನಿಂದ ಕೊಲೆಯಾದ ಇಂದ್ರ ಮೇಘ್ವಾಲ್‌ ಅಲ್ಲ

ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿ ಡಾನ್ಸ್‌ ಮಾಡುತ್ತಿರುವ ಮಗು ಶಿಕ್ಷಕನಿಂದ ಕೊಲೆಯಾದ ಇಂದ್ರ ಮೇಘ್ವಾಲ್‌ ಅಲ್ಲ

- Advertisement -
- Advertisement -

ಬಾಲಕನೊಬ್ಬ ರಾಜಸ್ಥಾನಿ ಹಾಡಿಗೆ ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ರಾಜಸ್ಥಾನದ ಜಲೋರ್‌ನ ಸರಸ್ವತಿ ವಿದ್ಯಾ ಮಂದಿರದಲ್ಲಿ ತನ್ನ ಶಾಲಾ ಶಿಕ್ಷಕನಿಂದಲೇ ಹಲ್ಲೆಗೊಳದ 9 ವರ್ಷದ ದಲಿತ ವಿದ್ಯಾರ್ಥಿ ಇಂದ್ರ ಕುಮಾರ್ ಮೇಘ್ವಾಲ್ ವಿಡಿಯೊ ಇದೆಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗುತ್ತಿದೆ.

ಸರಸ್ವತಿ ವಿದ್ಯಾ ಮಂದಿರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕ ಚೈಲ್ ಸಿಂಗ್ (40 ವರ್ಷ), ಶಾಲೆಯಲ್ಲಿ ಸವರ್ಣಿಯರಿಗೆ ಕುಡಿಯಲು ಮೀಸಲಿಟ್ಟಿದ್ದ ನೀರನ್ನು ದಲಿತ ಬಾಲಕ ಇಂದ್ರ ಕುಮಾರ್ ಕುಡಿದನೆಂದು ಕೋಪಗೊಂಡು ಬಾಲಕನಿಗೆ ಮನಬಂದಂತೆ ಥಳಿಸಿದ್ದನು. ಇದರಿಂದ ಅಸ್ವಸ್ಥಗೊಂಡ ಬಾಲಕ ಮೃತಪಟ್ಟಿದ್ದಾನೆ. ನಂತರ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದು, ಕೊಲೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಈ ಘಟನೆ ದೇಶದ ಆತ್ಮಸಾಕ್ಷಿಯನ್ನು ಕದಡಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ನಡೆದಿರುವ ಈ ಘಟನೆಯು ಅಮೃತ ಮಹೋತ್ಸವದ ವೈಭವವನ್ನು ಅಣಿಸಿದಂತಿದೆ. ಇದೆಲ್ಲದರ ನಡುವೆ ಬಾಲಕನ ಹತ್ಯೆಗೆ ಥಳುಕು ಹಾಕಿ ಕೆಲವು ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಇಲ್ಲಿ ಚರ್ಚಿಸಲಾಗುತ್ತಿರುವ ವಿಡಿಯೋವನ್ನು ಹಂಚಿಕೊಂಡಿರುವ ಸಾಮಾಜಿಕ ಮಾಧ್ಯಮದ ಬಳಕೆದಾರರು ಬಾಲಕನ ಸಾವಿನ ಕುರಿತು ಹೀಗೆ ಬರೆದಿದ್ದಾರೆ: “ಇಂದ್ರನ  ನೆನಪು, ಎಂತಹ ಮುಗ್ಧತೆ, ಕೇವಲ ತನ್ನ ಬಾಯಾರಿಕೆಯನ್ನು ನೀಗಿಸಿಕೊಳ್ಳುವುದಕ್ಕಾಗಿ ತನ್ನ ಪ್ರಾಣವನ್ನು ಕಳೆದುಕೊಳ್ಳುತ್ತೇನೆ ಎಂದು ಈ ಬಡ ಮಗುವಿಗೆ ಹೇಗೆ ತಿಳಿಯಬೇಕು? ಈ ಬಡ ಮಗುವಿಗೆ ಇಂತಹ ಕ್ರೂರ ಶಿಕ್ಷೆಯೇ? ಅವನಿಗೆ ಕೋಟಿ ನಮನಗಳು…”

ಹೀಗೆ ಕೆಲವು ಟಿಪ್ಪಣಿಗಳೊಂದಿಗೆ ವಿಡಿಯೊ ಹಂಚಿಕೆಯಾಗುತ್ತಿದೆ. ಹಾಗಿದರೆ ವೈರಲ್ ವಿಡಿಯೊದಲ್ಲಿ ಹಾಡಿಗೆ ನೃತ್ಯ ಮಾಡಿರುವ ಬಾಲಕ ಇಂದ್ರ ಮೇಘ್ವಾಲ್ ಎಂಬುದು ನಿಜವೇ?

ವೈರಲ್ ವಿಡಿಯೋದಲ್ಲಿ ಡ್ಯಾನ್ಸ್ ಮಾಡುತ್ತಿರುವ ಬಾಲಕ ಇಂದ್ರ ಕುಮಾರ್ ಮೇಘ್ವಾಲ್‌ ಅಲ್ಲ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ವೈರಲ್ ವಿಡಿಯೋದಲ್ಲಿ ನೃತ್ಯ ಮಾಡುತ್ತಿರುವ ಬಾಲಕನ ಚಿತ್ರ, ಥಳಿತಕ್ಕೊಳಗಾಗಿ ಸಾವನಪ್ಪಿದ ದಲಿತ ವಿದ್ಯಾರ್ಥಿ ಇಂದ್ರ ಮೇಘ್ವಾಲ್‌ ಚಿತ್ರವನ್ನು ಹೋಲಿಕೆ ಮಾಡಿದಾಗ ಎರಡು ಬೇರೆ ಬೇರೆ ಎಂಬುದು ಸ್ಪಷ್ಟವಾಗುತ್ತದೆ. ಈ ಫೋಟೋಗಳ ನಡುವೆ ವ್ಯತ್ಯಾಸಗಳಿರುವುದು ಸ್ಪಷ್ಟವಾಗಿ ಕಂಡುಬಂದಿದೆ. ವೈರಲ್ ವಿಡಿಯೋದಲ್ಲಿ ಹಾಡಿಗೆ ನೃತ್ಯ ಮಾಡುತ್ತಿರುವ ಬಾಲಕನ ಹೆಸರು ಹರೀಶ್ ಎಂದಾಗಿದೆ. ಈ ಮಗು ರಾಜಸ್ಥಾನದ ಬಾರ್ಮರ್‌ನಲ್ಲಿರುವ ಗೋಮ್ರಖ್ ಧಾಮ್ ಶಾಲೆಯ ವಿದ್ಯಾರ್ಥಿ ಎಂದು ತಿಳಿದುಬಂದಿದೆ.

ನೃತ್ಯ ಮಾಡುತ್ತಿರುವ ವಿಡಿಯೊವನ್ನು ವಿದ್ಯಾರ್ಥಿ ಹರೀಶನ ಶಾಲೆಯ ಶಿಕ್ಷಕರಾದ ಟಿ.ಆರ್‌. ಚೇಲಾ ರಾಮ್ ರೈಕಾ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.  “ಜುಲೈ 30ರಂದು 2ನೇ ತರಗತಿ ವಿದ್ಯಾರ್ಥಿ ಹರೀಶ್, ನೋ ಬ್ಯಾಗ್ ಡೇ ಸಂದರ್ಭದಲ್ಲಿ ಆತ್ಮವಿಶ್ವಾಸದ ಪ್ರದರ್ಶನ ತೋರಿದನು” ಎಂಬ ಟಿಪ್ಪಣಿಯೊಂದಿಗೆ ಶಿಕ್ಷಕ ಚೇಲಾ ರಾಮ್‌ ಅವರು ಹಂಚಿಕೊಂಡಿರುವ ದೀರ್ಘ ವಿಡಿಯೊವನ್ನು ಇಲ್ಲಿ ಗಮನಿಸಬಹುದು. ಗೋಮ್ರಖ್ ಧಾಮ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಧಿಕೃತ ಫೇಸ್‌ಬುಕ್ ಪೇಜ್‌  ಪರಿಶೀಲಿಸಿದಾಗ ಅಲ್ಲಿಯೂ ಇದೇ ವಿಡಿಯೊವನ್ನು ಹಂಚಿಕೊಂಡಿರುವುದನ್ನು ನೋಡಬಹುದು.

ಗೋಮ್ರಖ್ ಧಾಮ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಗುಣೇಶ ರಾಮ್ ಚೌಧರಿ ಅವರನ್ನು ಇಂಡಿಯಾ ಟುಡೆ ಸಂಪರ್ಕಿಸಿದ್ದು, “ವೀಡಿಯೊದಲ್ಲಿರುವ ಮಗು ನಮ್ಮ ಶಾಲೆಯ ವಿದ್ಯಾರ್ಥಿ ಹರೀಶ್ ಭೀಲ್”’ ಎಂದು ಸ್ಪಷ್ಟಪಡಿಸಿದ್ದಾರೆ. “ಆರು ವರ್ಷದ ಹರೀಶ್ 2 ನೇ ತರಗತಿಯಲ್ಲಿ ಓದುತ್ತಿದ್ದು, ನೃತ್ಯದಲ್ಲಿ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾನೆ. ಇದೇ ಆಗಸ್ಟ್ 15 ರಂದು ರಾಕಿಂಗ್ ಪ್ರದರ್ಶನ ನೀಡಿದ್ದಾನೆ” ಎಂದು ಚೌಧರಿ ಹೇಳಿದ್ದಾರೆ.

“ಜುಲೈ 30ರಂದು ಭೀಲ್ ಅವರ ವೈರಲ್ ನೃತ್ಯ ವೀಡಿಯೊವನ್ನು ಶಾಲೆಯ ಫೇಸ್‌ಬುಕ್ ಪುಟದಲ್ಲಿ ಹಂಚಿಕೊಳ್ಳಲಾಗಿತ್ತು. ಆದರೆ, ಜಲೋರ್ ಘಟನೆಯ ಹಿನ್ನೆಲೆಯಲ್ಲಿ ಕೆಲವರು ಹರೀಶನ ವಿಡಿಯೋವನ್ನು ಪ್ರಸಾರ ಮಾಡಲು ಪ್ರಾರಂಭಿಸಿದಾಗ ಶಾಲಾ ಸಿಬ್ಬಂದಿ ಆಘಾತಕ್ಕೊಳಗಾಗಿದ್ದರು” ಎಂದು ಚೌಧರಿ ಪ್ರತಿಕ್ರಿಯೆ ನೀಡಿದ್ದಾರೆ.

“ಭೀಲ್‌ನ ಮತ್ತೊಂದು ವಿಡಿಯೊವನ್ನು ನಮಗೆ ಕಳುಹಿಸಿದ್ದಾರೆ. ಈ ವಿಡಿಯೋದಲ್ಲಿ ಪುಟಾಣಿ ಹರೀಶ್‌ ಭೀಲ್‌ ಮುಖ ಸ್ಪಷ್ಟವಾಗಿ ಕಾಣಬಹುದು. ಈ ವೀಡಿಯೊವನ್ನು ನೋಡಿದರೆ, ವೈರಲ್ ವೀಡಿಯೊದ ಹುಡುಗ ಹರೀಶ್‌ ಎಂಬುದು ಸ್ಪಷ್ಟವಾಗುತ್ತದೆ” ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಇಂಡಿಯಾ ಟುಡೇ ಜಾಲೋರ್ ವರದಿಗಾರ ನರೇಶ್ ಸರ್ನೌ ವಿಷ್ಣೋಯ್ ಅವರು ಇಂದ್ರ ಕುಮಾರ್ ಮೇಘವಾಲ್ ಅವರ ಕುಟುಂಬ ಸದಸ್ಯರನ್ನು ಸಂಪರ್ಕಿಸಿ ವೈರಲ್ ವೀಡಿಯೊದಲ್ಲಿರುವ ಬಾಲಕನ ಬಗ್ಗೆ ವಿಚಾರಿಸಿದಾಗ, “ವೈರಲ್ ಆಗಿರುವ ವಿಡಿಯೋದಲ್ಲಿರುವ ಬಾಲಕ ತನ್ನ ಮಗ ಇಂದ್ರ ಕುಮಾರ್ ಅಲ್ಲ” ಎಂದು ಮೃತ ವಿದ್ಯಾರ್ಥಿಯ ತಂದೆ ದೇವರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಬಾಲಕನೊಬ್ಬ ನೃತ್ಯ ಮಾಡಿರುವ ವಿಡಿಯೋವು ರಾಜಸ್ಥಾನದಲ್ಲಿ ಹತ್ಯೆಯಾದ ಇಂದ್ರ ಮೇಘ್ವಾಲ್‌ದ್ದಲ್ಲ. ಈ ವಿಡಿಯೊದಲ್ಲಿರುವ ಮಗು ರಾಜಸ್ಥಾನದ ಬಾರ್ಮರ್‌ನಲ್ಲಿರುವ ಗೋಮ್ರಖ್ ಧಾಮ್ ಶಾಲೆಯ ವಿದ್ಯಾರ್ಥಿ ಹರೀಶ್‌ ಎಂದು ಸ್ಪಷ್ಟವಾಗಿದೆ.

ಹಾಗಾಗಿ ಪೋಸ್ಟ್‌ನಲ್ಲಿ ಮಾಡಲಾದ ಪ್ರತಿಪಾದನೆ ತಪ್ಪಾಗಿದೆ. ಇಂತಹ ಪೋಸ್ಟ್‌ಗಳನ್ನು ಹಂಚಿಕೊಳ್ಳುವ ಮುನ್ನ ಪರಿಶೀಲಿಸುವುದು ಅಗತ್ಯವಾಗಿದೆ. ಇಲ್ಲದಿದ್ದರೆ ಬದುಕಿರುವ ವ್ಯಕ್ತಿ ಮತ್ತು ಮನೆಯವರ ಭಾವನೆಗಳಿಗೆ ನೋವುಂಟಾಗುತ್ತದೆ.

ವರದಿ ಕೃಪೆ: ಏನ್‌ಸುದ್ದಿ.ಕಾಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...