Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ನಾಳೆಯಿಂದ ಮತ್ತೆ ಲಾಕ್‌ಡೌನ್‌! ಈ ಸುದ್ದಿ ನಿಜವೇ?

ಫ್ಯಾಕ್ಟ್‌ಚೆಕ್‌: ನಾಳೆಯಿಂದ ಮತ್ತೆ ಲಾಕ್‌ಡೌನ್‌! ಈ ಸುದ್ದಿ ನಿಜವೇ?

- Advertisement -
- Advertisement -

ದೇಶದಲ್ಲಿ ಕೊರೊನಾ ವೈರಸ್‌ ಪ್ರಕರಣಗಳ ಸಂಖ್ಯೆ ಪ್ರತಿ ದಿನ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಮತ್ತೆ ಲಾಕ್‌ಡೌನ್‌ ಹೇರಲಾಗುತ್ತಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಭಾರತದಲ್ಲಿ ಸದ್ಯಕ್ಕೆ ಪ್ರಕರಣಗಳ ಸಂಖ್ಯೆ 3ಲಕ್ಷದ 32 ಸಾವಿರಕ್ಕೆ ತಲುಪಿದೆ. ಕಳೆದ ಮೂರು ದಿನಗಳಿಂದಲೂ 11 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜನ ಭಯಭೀತರಾಗಿದ್ದು ಮತ್ತೆ ಲಾಕ್‌ಡೌನ್‌ ಹೇರಬಹುದು ಎಂದು ನಂಬಿದ್ದಾರೆ.

ಕನ್ನಡ ಫ್ಲಾಶ್‌ ನ್ಯೂಸ್‌ ಎನ್ನುವ ಫೇಸ್‌ಬುಕ್‌ ಮತ್ತು ಹೆಲೊ ಆಪ್‌ ಅಕೌಂಟ್‌ನಿಂದ “ಬ್ರೆಕಿಂಗ್‌ ನ್ಯೂಸ್‌’ ನಾಳೆಯಿಂದ ಮತ್ತೆ ಲಾಕ್‌ಡೌನ್‌ ಎಂಬ ಪೋಸ್ಟರ್‌ ಹಂಚಿಕೊಳ್ಳಲಾಗಿದೆ. ಕೊರೊನಾ ಸೋಂಕು ಹತೋಟಿಗೆ ಬಾರದ ಹಿನ್ನೆಲೆಯಲ್ಲಿ ನಾಳೆಯಿಂದ ಲಾಕ್‌ಡೌನ್‌ ಎಂದು ಬರೆಯಲಾಗಿದೆ.

ಕೊರೋನಾ ಸೋಂಕು ಹತೋಟಿಗೆ ಬಾರದ ಹಿನ್ನಲೆಯಲ್ಲಿ ನಾಳೆಯಿಂದ ಲಾಕ್ ಡೌನ್‌ ಜಾರಿಯಾಗಲಿದ್ಯಾ ಎನ್ನುವ ಪ್ರಶ್ನೆ ಕಾಡ್ತಿದೆ.ಈ ಹಿನ್ನಲೆಯಲ್ಲಿ ಇಂದು…

Posted by Kannada Flash News – ಕನ್ನಡ ಫ್ಲಾಶ್ ನ್ಯೂಸ್ on Saturday, June 13, 2020

ಫ್ಯಾಕ್ಟ್‌ಚೆಕ್‌

ದೇಶದಲ್ಲಿ ಕೊರೊನಾ ಪ್ರಕರಣ ಸಂಖ್ಯೆ ಹೆಚ್ಚಳವಾಗುತ್ತಿರುವುದು ನಿಜವಾಗಿದೆ. ಅಲ್ಲದೇ ಭಾರತದಾದ್ಯಂತ ಈಗಾಗಲೇ ಲಾಕ್‌ಡೌನ್‌ ಜಾರಿಯಲ್ಲಿದೆ. ಲಾಕ್‌ಡೌನ್‌ ನಿಯಮಾವಳಿಗಳಲ್ಲಿ ಕೆಲವು ಸಡಿಲಿಕೆ ಆಗಿದೆಯೇ ಹೊರತು ಐದನೇ ಹಂತದ ಲಾಕ್‌ಡೌನ್‌ ಈಗ ಜಾರಿಯಲ್ಲಿದೆ. ಇನ್ನು ದೇಶದಲ್ಲಿ ಅತಿ ಹೆಚ್ಚು ಪ್ರಕರಣಗಳಲ್ಲಿ ಮೂರನೇ ಸ್ಥಾನದಲ್ಲಿರು ದೆಹಲಿ ರಾಜ್ಯದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ರವರು ಈ ಕುರಿತು ಸ್ಪಷ್ಟನೆ ನೀಡಿದ್ದು ನಾಳೆಯಿಂದ ಮತ್ತೆ ಲಾಕ್‌ಡೌನ್‌ ಅನ್ನುವುದು ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು “ಬಹಳಷ್ಟು ಜನರು ದೆಹಲಿಯಲ್ಲಿ ಮತ್ತೆ ಲಾಕ್‌ಡೌನ್‌ ಎಂಬ ವದಂತಿಗಳನ್ನು ಹರಡುತ್ತಿದ್ದಾರೆ. ಅಂತಹ ಯಾವುದೇ ಯೋಜನೆಗಳಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಜೊತೆಗೆ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪನವರು ಸಹ ಯಾವುದೇ ವಿಶೇಷ ಲಾಕ್‌ಡೌನ್‌ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾರವರು ದೆಹಲಿಯಲ್ಲಿ ಸರ್ವಪಕ್ಷ ಸಭೆ ನಡೆಸಿದ್ದಾರೆ. ಅಲ್ಲಿಯೂ ಕೂಡ ಮತ್ತೆ ಲಾಕ್‌ಡೌನ್‌ ಎಂಬ ಯಾವುದೇ ಚರ್ಚೆ ನಡೆಸಿಲ್ಲ. ಗೃಹ ಸಚಿವಾಲಯವು ಈ ಕುರಿತು ಯಾವುದೇ ಹೇಳಿಕೆಗಳನ್ನು ನೀಡಿಲ್ಲ. ಹಾಗಾಗಿ ಮತ್ತೆ ಲಾಕ್‌ಡೌನ್‌ ಎಂಬುದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಅಸ್ಸಾಂನಲ್ಲಿ ತಾಯಿ ಕಳೆದುಕೊಂಡ ಚಿರತೆ ಮರಿಗೆ ಅಮ್ಮನ ಪ್ರೀತಿ ನೀಡಿದ ಸಾಕಿದ ಹಸು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...

ಮೊದಲ ಪತ್ನಿಗೆ ಮುಸ್ಲಿಂ ಪತಿ ಜೀವನಾಂಶ ನಿರಾಕರಿಸುವಂತಿಲ್ಲ: ಕೇರಳ ಹೈಕೋರ್ಟ್

ಎರಡನೇ ಪತ್ನಿಯ ಮೇಲಿನ ಆರ್ಥಿಕ ಜವಾಬ್ದಾರಿ ಕುರಿತ ಮಹತ್ವದ ತೀರ್ಪಿನಲ್ಲಿ, ಮುಸ್ಲಿಂ ಪುರುಷನು ತನ್ನ ಮೊದಲ ಪತ್ನಿಗೆ ಜೀವನಾಂಶ ಪಾವತಿಸುವುದನ್ನು ತಪ್ಪಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಹೇಳಿದೆ. ಎಲ್ಲ ಪತ್ನಿಯರನ್ನು ಸಮಾನವಾಗಿ...

ಆಸ್ಪತ್ರೆಗಳು ಕಡ್ಡಾಯವಾಗಿ ದರಪಟ್ಟಿ ಪ್ರದರ್ಶಿಸಬೇಕು, ಹಣ ಪಾವತಿಸದ ಕಾರಣ ತುರ್ತು ಆರೈಕೆ ನಿರಾಕರಿಸುವಂತಿಲ್ಲ : ಕಾನೂನು ಎತ್ತಿ ಹಿಡಿದ ಹೈಕೋರ್ಟ್

ಕೇರಳ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಮತ್ತು ನಿಬಂಧನೆಗಳನ್ನು ಎತ್ತಿಹಿಡಿದ ಹೈಕೋರ್ಟ್‌ನ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಮತ್ತು ಕೇರಳ ಖಾಸಗಿ ಆಸ್ಪತ್ರೆಗಳ ಸಂಘ ಸಲ್ಲಿಸಿದ್ದ ಮೇಲ್ಮನವಿಗಳನ್ನು...