Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ನಾಳೆಯಿಂದ ಮತ್ತೆ ಲಾಕ್‌ಡೌನ್‌! ಈ ಸುದ್ದಿ ನಿಜವೇ?

ಫ್ಯಾಕ್ಟ್‌ಚೆಕ್‌: ನಾಳೆಯಿಂದ ಮತ್ತೆ ಲಾಕ್‌ಡೌನ್‌! ಈ ಸುದ್ದಿ ನಿಜವೇ?

- Advertisement -
- Advertisement -

ದೇಶದಲ್ಲಿ ಕೊರೊನಾ ವೈರಸ್‌ ಪ್ರಕರಣಗಳ ಸಂಖ್ಯೆ ಪ್ರತಿ ದಿನ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ಮತ್ತೆ ಲಾಕ್‌ಡೌನ್‌ ಹೇರಲಾಗುತ್ತಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಭಾರತದಲ್ಲಿ ಸದ್ಯಕ್ಕೆ ಪ್ರಕರಣಗಳ ಸಂಖ್ಯೆ 3ಲಕ್ಷದ 32 ಸಾವಿರಕ್ಕೆ ತಲುಪಿದೆ. ಕಳೆದ ಮೂರು ದಿನಗಳಿಂದಲೂ 11 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜನ ಭಯಭೀತರಾಗಿದ್ದು ಮತ್ತೆ ಲಾಕ್‌ಡೌನ್‌ ಹೇರಬಹುದು ಎಂದು ನಂಬಿದ್ದಾರೆ.

ಕನ್ನಡ ಫ್ಲಾಶ್‌ ನ್ಯೂಸ್‌ ಎನ್ನುವ ಫೇಸ್‌ಬುಕ್‌ ಮತ್ತು ಹೆಲೊ ಆಪ್‌ ಅಕೌಂಟ್‌ನಿಂದ “ಬ್ರೆಕಿಂಗ್‌ ನ್ಯೂಸ್‌’ ನಾಳೆಯಿಂದ ಮತ್ತೆ ಲಾಕ್‌ಡೌನ್‌ ಎಂಬ ಪೋಸ್ಟರ್‌ ಹಂಚಿಕೊಳ್ಳಲಾಗಿದೆ. ಕೊರೊನಾ ಸೋಂಕು ಹತೋಟಿಗೆ ಬಾರದ ಹಿನ್ನೆಲೆಯಲ್ಲಿ ನಾಳೆಯಿಂದ ಲಾಕ್‌ಡೌನ್‌ ಎಂದು ಬರೆಯಲಾಗಿದೆ.

ಕೊರೋನಾ ಸೋಂಕು ಹತೋಟಿಗೆ ಬಾರದ ಹಿನ್ನಲೆಯಲ್ಲಿ ನಾಳೆಯಿಂದ ಲಾಕ್ ಡೌನ್‌ ಜಾರಿಯಾಗಲಿದ್ಯಾ ಎನ್ನುವ ಪ್ರಶ್ನೆ ಕಾಡ್ತಿದೆ.ಈ ಹಿನ್ನಲೆಯಲ್ಲಿ ಇಂದು…

Posted by Kannada Flash News – ಕನ್ನಡ ಫ್ಲಾಶ್ ನ್ಯೂಸ್ on Saturday, June 13, 2020

ಫ್ಯಾಕ್ಟ್‌ಚೆಕ್‌

ದೇಶದಲ್ಲಿ ಕೊರೊನಾ ಪ್ರಕರಣ ಸಂಖ್ಯೆ ಹೆಚ್ಚಳವಾಗುತ್ತಿರುವುದು ನಿಜವಾಗಿದೆ. ಅಲ್ಲದೇ ಭಾರತದಾದ್ಯಂತ ಈಗಾಗಲೇ ಲಾಕ್‌ಡೌನ್‌ ಜಾರಿಯಲ್ಲಿದೆ. ಲಾಕ್‌ಡೌನ್‌ ನಿಯಮಾವಳಿಗಳಲ್ಲಿ ಕೆಲವು ಸಡಿಲಿಕೆ ಆಗಿದೆಯೇ ಹೊರತು ಐದನೇ ಹಂತದ ಲಾಕ್‌ಡೌನ್‌ ಈಗ ಜಾರಿಯಲ್ಲಿದೆ. ಇನ್ನು ದೇಶದಲ್ಲಿ ಅತಿ ಹೆಚ್ಚು ಪ್ರಕರಣಗಳಲ್ಲಿ ಮೂರನೇ ಸ್ಥಾನದಲ್ಲಿರು ದೆಹಲಿ ರಾಜ್ಯದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ರವರು ಈ ಕುರಿತು ಸ್ಪಷ್ಟನೆ ನೀಡಿದ್ದು ನಾಳೆಯಿಂದ ಮತ್ತೆ ಲಾಕ್‌ಡೌನ್‌ ಅನ್ನುವುದು ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು “ಬಹಳಷ್ಟು ಜನರು ದೆಹಲಿಯಲ್ಲಿ ಮತ್ತೆ ಲಾಕ್‌ಡೌನ್‌ ಎಂಬ ವದಂತಿಗಳನ್ನು ಹರಡುತ್ತಿದ್ದಾರೆ. ಅಂತಹ ಯಾವುದೇ ಯೋಜನೆಗಳಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

ಜೊತೆಗೆ ಕರ್ನಾಟಕದ ಮುಖ್ಯಮಂತ್ರಿ ಯಡಿಯೂರಪ್ಪನವರು ಸಹ ಯಾವುದೇ ವಿಶೇಷ ಲಾಕ್‌ಡೌನ್‌ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾರವರು ದೆಹಲಿಯಲ್ಲಿ ಸರ್ವಪಕ್ಷ ಸಭೆ ನಡೆಸಿದ್ದಾರೆ. ಅಲ್ಲಿಯೂ ಕೂಡ ಮತ್ತೆ ಲಾಕ್‌ಡೌನ್‌ ಎಂಬ ಯಾವುದೇ ಚರ್ಚೆ ನಡೆಸಿಲ್ಲ. ಗೃಹ ಸಚಿವಾಲಯವು ಈ ಕುರಿತು ಯಾವುದೇ ಹೇಳಿಕೆಗಳನ್ನು ನೀಡಿಲ್ಲ. ಹಾಗಾಗಿ ಮತ್ತೆ ಲಾಕ್‌ಡೌನ್‌ ಎಂಬುದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಅಸ್ಸಾಂನಲ್ಲಿ ತಾಯಿ ಕಳೆದುಕೊಂಡ ಚಿರತೆ ಮರಿಗೆ ಅಮ್ಮನ ಪ್ರೀತಿ ನೀಡಿದ ಸಾಕಿದ ಹಸು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...