Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ಫೇಸ್‌ಬುಕ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿರುವ ಶೆಫಾಲಿ ವೈದ್ಯ, "ಹಿಂದೂ ತಂದೆಯೋರ್ವ ತನ್ನ ಮಗಳನ್ನು ಲವ್ ಜಿಹಾದ್‌ಗೆ ಬಲಿಯಾಗದಂತೆ ಕೇಳಿಕೊಳ್ಳುತ್ತಿದ್ದಾನೆ" ಎಂದು ಬರೆದುಕೊಂಡಿದ್ದಾರೆ.

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೊವೊಂದು ವೈರಲ್ ಆಗುತ್ತಿದ್ದು, ಇದರಲ್ಲಿ ಪೋಷಕರು ತಮ್ಮ ಮಗಳಲ್ಲಿ ಮನವಿ ಮಾಡುತ್ತಿರುವ ಮತ್ತು ಮನವೊಲಿಸಲು ಪ್ರಯತ್ನಿಸುತ್ತಿರುವ ದೃಶ್ಯ ಕಂಡುಬಂದಿದ್ದು, ಇದನ್ನು ‘ಲವ್ ಜಿಹಾದ್’ ಎಂಬ ಪ್ರತಿಪಾದನೆಯೊಂದಿಗೆ ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಈ ಪೋಸ್ಟನ್ನು ಹಂಚಿಕೊಂಡಿದ್ದಾರೆ.

ಇದೇ ವಿಡಿಯೋ ಹಂಚಿಕೊಂಡವರಲ್ಲಿ ಬಲಪಂಥೀಯ ನಿರೂಪಕಿ ಶೆಫಾಲಿ ವೈದ್ಯ ಕೂಡ ಇದ್ದಾರೆ.

This video broke my heart!If the info that I have is correct, this is a Hindu father begging his daughter to not fall…

Posted by Shefali Vaidya on Monday, October 5, 2020

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ನಟ ಅಮಿತಾಬ್ ಬಚ್ಚನ್‌ ದಾವೂದ್ ಇಬ್ರಾಹಿಂನನ್ನು ಭೇಟಿ ಆಗಿದ್ದು ನಿಜವೆ?

ಫೇಸ್‌ಬುಕ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿರುವ ಶೆಫಾಲಿ ವೈದ್ಯ, “ಈ ವಿಡಿಯೋ ನನ್ನ ಹೃದಯವನ್ನು ಘಾಸಿಗೊಳಿಸಿದೆ! ನನ್ನಲ್ಲಿರುವ ಮಾಹಿತಿಯು ಸರಿಯಾಗಿದ್ದರೆ, ಇದು ಹಿಂದೂ ತಂದೆಯೋರ್ವ ತನ್ನ ಮಗಳನ್ನು ಲವ್ ಜಿಹಾದ್‌ಗೆ ಬಲಿಯಾಗದಂತೆ ಕೇಳಿಕೊಳ್ಳುತ್ತಿದ್ದಾನೆ. ಅವನು ತನ್ನ ಪಗಡಿಯನ್ನು ಅವಳ ಕಾಲುಗಳ ಬಳಿ ಇಡುತ್ತಾನೆ. ರಾಜಸ್ಥಾನಿ ಸಂಪ್ರದಾಯವನ್ನು ಚೆನ್ನಾಗಿ ಬಲ್ಲವರು ಮಾತ್ರ ಇದರ ತೀವ್ರತೆಯನ್ನು ಅರ್ಥಮಾಡಿಕೊಳ್ಳುತ್ತಾರೆ. ಹುಡುಗಿ ಎಷ್ಟು ಮುಗುಳ್ನಗುತ್ತಾ ಅವನನ್ನು ತಳ್ಳುತ್ತಾಳೆಂದು ನೋಡಿ! ಅವಳು ಬಹುಶಃ ತನ್ನ ಐದನೇ ಮಗುವನ್ನು ಹೊತ್ತುಕೊಂಡು ಮೂರನೆಯ ಹೆಂಡತಿಯಾಗಿ ಕೊನೆಗೊಳ್ಳಬಹುದು ಅಥವಾ ಸೋನ್‌ಭದ್ರಾದ ಮಹಿಳೆಯಂತೆ ಶಿರಚ್ಚೇದನಕ್ಕೆ ಒಳಗಾಗಬಹುದು. ಆದರೆ ಅಷ್ಟರೊಳಗೆ ಆ ಮುದುಕ ಬಹುಶಃ ಹೃದಯ ಒಡೆದು ಸತ್ತಿರಬಹುದು!” ಎಂದು ಬರೆದುಕೊಂಡಿದ್ದಾರೆ. ಇದರ ತನಿಖೆ ಮಾಡುತ್ತಿರುವ ಸಂಸ್ಥೆಯೊಂದು ತನಗೆ ಮಾಹಿತಿ ನೀಡಿದೆ ಎಂದು ಅವರು ವಿಶೇಷ ಸೂಚನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಕಂಗನಾ ರಾಣಾವತ್‌ ಚುನಾವಣೆಯಲ್ಲಿ ಬಲವಂತವಾಗಿ ಶಿವಸೇನೆಗೆ ಮತ ಚಲಾಯಿಸಿದರೆ?

ಇದೇ ವೀಡಿಯೋವನ್ನು ಇದೇ ಹೇಳಿಕೆಯೊಂದಿಗೆ ಟ್ವಿಟ್ಟರ್‌ನಲ್ಲಿಯೂ ಹಂಚಿಕೊಳ್ಳಲಾಗುತ್ತಿದೆ.

ಈ ವರದಿಯನ್ನು ಬರೆಯುವ ವೇಳೆಗೆ ಈ ಟ್ವೀಟ್‌ಗೆ ಸುಮಾರು 3,700 ಕ್ಕೂ ಹೆಚ್ಚು ಲೈಕ್‌ಗಳು ಮತ್ತು 2,200 ರಿಟ್ವೀಟ್‌ಗಳನ್ನು ಮಾಡಿದ್ದಾರೆ. 31,700 ಬಳಕೆದಾರರು ಇದನ್ನು ವೀಕ್ಷಿಸಿದ್ದಾರೆ.

ಫ್ಯಾಕ್ಟ್‌ಚೆಕ್: 

ರಾಯಲ್ ರೈಕಾ ಎಂಬ ಫೇಸ್‌ಬುಕ್ ಪುಟದಿಂದ ಅಪ್‌ಲೋಡ್ ಮಾಡಲಾದ ವೀಡಿಯೊವನ್ನು ಸುಳ್ಳು ಮಾಹಿತಿಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ವೀಡಿಯೊದಲ್ಲಿರುವ ಹುಡುಗಿ ಸೀತಾ ಮತ್ತು ವ್ಯಕ್ತಿ ಲಖರಾಮ್ ಎಂದು ಆ ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ನಾವು ಎರಡೂ ಜಿಲ್ಲೆಗಳಲ್ಲಿನ ಪೊಲೀಸರನ್ನು ಸಂಪರ್ಕಿಸಿದಾಗ, ಕಳೆದ ತಿಂಗಳು ಪಾಲಿಯಲ್ಲಿ ಈ ಘಟನೆ ನಡೆದಿರುವುದು ಕಂಡುಬಂದಿದೆ ಎಂದು ದಿ ಕ್ವಿಂಟ್ ವರದಿ ಮಾಡಿದೆ.

ಪಾಲಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬ್ರಿಜೇಶ್ ಕುಮಾರ್ ಸೋನಿ ದಿ ಕ್ವಿಂಟ್ ಜೊತೆ ಮಾತನಾಡಿದ್ದು, “ಈ ಘಟನೆ ಪಾಲಿಯಲ್ಲಿ ನಡೆದಿದೆ. ಆದರೆ, ಇದು ಲವ್ ಜಿಹಾದ್ ಪ್ರಕರಣ ಎಂದು ಹೇಳಿತ್ತಿರುವುದು ಸಂಪೂರ್ಣವಾಗಿ ಸುಳ್ಳು. ಇಲ್ಲಿ ಮಹಿಳೆ ಮತ್ತು ಪುರುಷ ಇಬ್ಬರೂ ಒಂದೇ ಸಮುದಾಯಕ್ಕೆ ಸೇರಿದವರು” ಎಂದು ಸ್ಪಷ್ಟಪಡಿಸಿದ್ದಾರೆ.

ವೀಡಿಯೊದಲ್ಲಿ ನೋಡಬಹುದಾದ ಮಹಿಳೆ ಸೀತಾ. ಲಖರಾಮ್ ಎಂಬ ಈ ವ್ಯಕ್ತಿಯೊಂದಿಗೆ ಓಡಿಹೋಗಿದ್ದು, ಅವರು ಈಗಾಗಲೇ ಮದುವೆಯಾಗಿದ್ದಾರೆ. ಅವರನ್ನು ವೀಡಿಯೊದಲ್ಲಿ ಸಹ ಕಾಣಬಹುದು. ಇಲ್ಲಿ ಆಕೆಯ ಪೋಷಕರು ಮನೆಗೆ ಮರಳುವಂತೆ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ಆಗಸ್ಟ್ 28 ರಂದು ಸೀತಾ ತನ್ನ ಹೇಳಿಕೆಯನ್ನು ಪೊಲೀಸರ ಬಳಿ ನೀಡಿದ್ದು, “ನಾನು ಲಖರಾಮ್‌ನೊಂದಿಗೆ ಸ್ವಯಿಚ್ಚೆಯಿಂದ ಬಂದಿದ್ದೇನೆ. ಅವರೊಂದಿಗೇ ವಾಸಿಸಲು ಬಯಸುತ್ತೇನೆ. ನಾನು ನನ್ನ ಪೋಷಕರ ಮನೆಗೆ ಹೋಗುವುದಿಲ್ಲ” ಎಂದು ಹೇಳಿರುವುದು ಉಲ್ಲೇಖವಾಗಿದೆ.

ಫ್ಯಾಕ್ಟ್-ಚೆಕಿಂಗ್ ವೆಬ್‌ಸೈಟ್ ಆಲ್ಟ್ ನ್ಯೂಸ್ ಸಹ ನವ ದಂಪತಿಗಳನ್ನು ಸಂಪರ್ಕಿಸಿದ್ದು, “ನಾವು ಒಂದೇ ಜಾತಿಗೆ ಸೇರಿದವರಾಗಿದ್ದು, ಈಗ ಮದುವೆಯಾಗಿ ಒಂದು ತಿಂಗಳಾಗಿದೆ. ಆದರೆ ಈ ವೀಡಿಯೊ ಸಂಪೂರ್ಣವಾಗಿ ಸುಳ್ಳು ಪ್ರತಿಪಾದನೆಯೊಂದಿಗೆ ವೈರಲ್ ಆಗಿದೆ. ನಾವು ನ್ಯಾಯಾಲಯದಲ್ಲಿ ಮದುವೆಯಾಗುತ್ತಿದ್ದಾಗ, ಸೀತಾಳ ತಂದೆ ಮದುವೆಯಾಗಬಾರದೆಂದು ಅವಳೊಂದಿಗೆ ತಮಾಷೆ ಮಾಡುತ್ತಿದ್ದರು. ಯಾರೋ ಈ ಕ್ಲಿಪ್ ಅನ್ನು ಬೇರೆ ಸಂದರ್ಭದಲ್ಲಿ ವೈರಲ್ ಮಾಡಿದ್ದಾರೆ. ಜೊತೆಗೆ ಮಹಿಳೆಯ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳುತ್ತಿದ್ದಾರೆ. ಇದು ಸಂಪೂರ್ಣ ಸುಳ್ಳು ಎಲ್ಲವೂ ಸರಿಯಾಗಿಯೇ ಇದೆ” ಎಂದು ಲಖರಾಮ್ ಹೇಳಿಕೆ ನೀಡಿದ್ದಾರೆ.

ಹಾಗಾಗಿ ಸ್ಪಷ್ಟವಾಗಿ, ಹಲವಾರು ಸುಳ್ಳು ಹಕ್ಕುಗಳೊಂದಿಗೆ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗುತ್ತಿದೆ ಎಂಬುದು ತಿಳಿದುಬಂದಿದೆ.


ಇದನ್ನೂ ಓದಿ: ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...