Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ಫೇಸ್‌ಬುಕ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿರುವ ಶೆಫಾಲಿ ವೈದ್ಯ, "ಹಿಂದೂ ತಂದೆಯೋರ್ವ ತನ್ನ ಮಗಳನ್ನು ಲವ್ ಜಿಹಾದ್‌ಗೆ ಬಲಿಯಾಗದಂತೆ ಕೇಳಿಕೊಳ್ಳುತ್ತಿದ್ದಾನೆ" ಎಂದು ಬರೆದುಕೊಂಡಿದ್ದಾರೆ.

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೊವೊಂದು ವೈರಲ್ ಆಗುತ್ತಿದ್ದು, ಇದರಲ್ಲಿ ಪೋಷಕರು ತಮ್ಮ ಮಗಳಲ್ಲಿ ಮನವಿ ಮಾಡುತ್ತಿರುವ ಮತ್ತು ಮನವೊಲಿಸಲು ಪ್ರಯತ್ನಿಸುತ್ತಿರುವ ದೃಶ್ಯ ಕಂಡುಬಂದಿದ್ದು, ಇದನ್ನು ‘ಲವ್ ಜಿಹಾದ್’ ಎಂಬ ಪ್ರತಿಪಾದನೆಯೊಂದಿಗೆ ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಈ ಪೋಸ್ಟನ್ನು ಹಂಚಿಕೊಂಡಿದ್ದಾರೆ.

ಇದೇ ವಿಡಿಯೋ ಹಂಚಿಕೊಂಡವರಲ್ಲಿ ಬಲಪಂಥೀಯ ನಿರೂಪಕಿ ಶೆಫಾಲಿ ವೈದ್ಯ ಕೂಡ ಇದ್ದಾರೆ.

This video broke my heart!If the info that I have is correct, this is a Hindu father begging his daughter to not fall…

Posted by Shefali Vaidya on Monday, October 5, 2020

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ನಟ ಅಮಿತಾಬ್ ಬಚ್ಚನ್‌ ದಾವೂದ್ ಇಬ್ರಾಹಿಂನನ್ನು ಭೇಟಿ ಆಗಿದ್ದು ನಿಜವೆ?

ಫೇಸ್‌ಬುಕ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿರುವ ಶೆಫಾಲಿ ವೈದ್ಯ, “ಈ ವಿಡಿಯೋ ನನ್ನ ಹೃದಯವನ್ನು ಘಾಸಿಗೊಳಿಸಿದೆ! ನನ್ನಲ್ಲಿರುವ ಮಾಹಿತಿಯು ಸರಿಯಾಗಿದ್ದರೆ, ಇದು ಹಿಂದೂ ತಂದೆಯೋರ್ವ ತನ್ನ ಮಗಳನ್ನು ಲವ್ ಜಿಹಾದ್‌ಗೆ ಬಲಿಯಾಗದಂತೆ ಕೇಳಿಕೊಳ್ಳುತ್ತಿದ್ದಾನೆ. ಅವನು ತನ್ನ ಪಗಡಿಯನ್ನು ಅವಳ ಕಾಲುಗಳ ಬಳಿ ಇಡುತ್ತಾನೆ. ರಾಜಸ್ಥಾನಿ ಸಂಪ್ರದಾಯವನ್ನು ಚೆನ್ನಾಗಿ ಬಲ್ಲವರು ಮಾತ್ರ ಇದರ ತೀವ್ರತೆಯನ್ನು ಅರ್ಥಮಾಡಿಕೊಳ್ಳುತ್ತಾರೆ. ಹುಡುಗಿ ಎಷ್ಟು ಮುಗುಳ್ನಗುತ್ತಾ ಅವನನ್ನು ತಳ್ಳುತ್ತಾಳೆಂದು ನೋಡಿ! ಅವಳು ಬಹುಶಃ ತನ್ನ ಐದನೇ ಮಗುವನ್ನು ಹೊತ್ತುಕೊಂಡು ಮೂರನೆಯ ಹೆಂಡತಿಯಾಗಿ ಕೊನೆಗೊಳ್ಳಬಹುದು ಅಥವಾ ಸೋನ್‌ಭದ್ರಾದ ಮಹಿಳೆಯಂತೆ ಶಿರಚ್ಚೇದನಕ್ಕೆ ಒಳಗಾಗಬಹುದು. ಆದರೆ ಅಷ್ಟರೊಳಗೆ ಆ ಮುದುಕ ಬಹುಶಃ ಹೃದಯ ಒಡೆದು ಸತ್ತಿರಬಹುದು!” ಎಂದು ಬರೆದುಕೊಂಡಿದ್ದಾರೆ. ಇದರ ತನಿಖೆ ಮಾಡುತ್ತಿರುವ ಸಂಸ್ಥೆಯೊಂದು ತನಗೆ ಮಾಹಿತಿ ನೀಡಿದೆ ಎಂದು ಅವರು ವಿಶೇಷ ಸೂಚನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಕಂಗನಾ ರಾಣಾವತ್‌ ಚುನಾವಣೆಯಲ್ಲಿ ಬಲವಂತವಾಗಿ ಶಿವಸೇನೆಗೆ ಮತ ಚಲಾಯಿಸಿದರೆ?

ಇದೇ ವೀಡಿಯೋವನ್ನು ಇದೇ ಹೇಳಿಕೆಯೊಂದಿಗೆ ಟ್ವಿಟ್ಟರ್‌ನಲ್ಲಿಯೂ ಹಂಚಿಕೊಳ್ಳಲಾಗುತ್ತಿದೆ.

ಈ ವರದಿಯನ್ನು ಬರೆಯುವ ವೇಳೆಗೆ ಈ ಟ್ವೀಟ್‌ಗೆ ಸುಮಾರು 3,700 ಕ್ಕೂ ಹೆಚ್ಚು ಲೈಕ್‌ಗಳು ಮತ್ತು 2,200 ರಿಟ್ವೀಟ್‌ಗಳನ್ನು ಮಾಡಿದ್ದಾರೆ. 31,700 ಬಳಕೆದಾರರು ಇದನ್ನು ವೀಕ್ಷಿಸಿದ್ದಾರೆ.

ಫ್ಯಾಕ್ಟ್‌ಚೆಕ್: 

ರಾಯಲ್ ರೈಕಾ ಎಂಬ ಫೇಸ್‌ಬುಕ್ ಪುಟದಿಂದ ಅಪ್‌ಲೋಡ್ ಮಾಡಲಾದ ವೀಡಿಯೊವನ್ನು ಸುಳ್ಳು ಮಾಹಿತಿಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ವೀಡಿಯೊದಲ್ಲಿರುವ ಹುಡುಗಿ ಸೀತಾ ಮತ್ತು ವ್ಯಕ್ತಿ ಲಖರಾಮ್ ಎಂದು ಆ ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ನಾವು ಎರಡೂ ಜಿಲ್ಲೆಗಳಲ್ಲಿನ ಪೊಲೀಸರನ್ನು ಸಂಪರ್ಕಿಸಿದಾಗ, ಕಳೆದ ತಿಂಗಳು ಪಾಲಿಯಲ್ಲಿ ಈ ಘಟನೆ ನಡೆದಿರುವುದು ಕಂಡುಬಂದಿದೆ ಎಂದು ದಿ ಕ್ವಿಂಟ್ ವರದಿ ಮಾಡಿದೆ.

ಪಾಲಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬ್ರಿಜೇಶ್ ಕುಮಾರ್ ಸೋನಿ ದಿ ಕ್ವಿಂಟ್ ಜೊತೆ ಮಾತನಾಡಿದ್ದು, “ಈ ಘಟನೆ ಪಾಲಿಯಲ್ಲಿ ನಡೆದಿದೆ. ಆದರೆ, ಇದು ಲವ್ ಜಿಹಾದ್ ಪ್ರಕರಣ ಎಂದು ಹೇಳಿತ್ತಿರುವುದು ಸಂಪೂರ್ಣವಾಗಿ ಸುಳ್ಳು. ಇಲ್ಲಿ ಮಹಿಳೆ ಮತ್ತು ಪುರುಷ ಇಬ್ಬರೂ ಒಂದೇ ಸಮುದಾಯಕ್ಕೆ ಸೇರಿದವರು” ಎಂದು ಸ್ಪಷ್ಟಪಡಿಸಿದ್ದಾರೆ.

ವೀಡಿಯೊದಲ್ಲಿ ನೋಡಬಹುದಾದ ಮಹಿಳೆ ಸೀತಾ. ಲಖರಾಮ್ ಎಂಬ ಈ ವ್ಯಕ್ತಿಯೊಂದಿಗೆ ಓಡಿಹೋಗಿದ್ದು, ಅವರು ಈಗಾಗಲೇ ಮದುವೆಯಾಗಿದ್ದಾರೆ. ಅವರನ್ನು ವೀಡಿಯೊದಲ್ಲಿ ಸಹ ಕಾಣಬಹುದು. ಇಲ್ಲಿ ಆಕೆಯ ಪೋಷಕರು ಮನೆಗೆ ಮರಳುವಂತೆ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ಆಗಸ್ಟ್ 28 ರಂದು ಸೀತಾ ತನ್ನ ಹೇಳಿಕೆಯನ್ನು ಪೊಲೀಸರ ಬಳಿ ನೀಡಿದ್ದು, “ನಾನು ಲಖರಾಮ್‌ನೊಂದಿಗೆ ಸ್ವಯಿಚ್ಚೆಯಿಂದ ಬಂದಿದ್ದೇನೆ. ಅವರೊಂದಿಗೇ ವಾಸಿಸಲು ಬಯಸುತ್ತೇನೆ. ನಾನು ನನ್ನ ಪೋಷಕರ ಮನೆಗೆ ಹೋಗುವುದಿಲ್ಲ” ಎಂದು ಹೇಳಿರುವುದು ಉಲ್ಲೇಖವಾಗಿದೆ.

ಫ್ಯಾಕ್ಟ್-ಚೆಕಿಂಗ್ ವೆಬ್‌ಸೈಟ್ ಆಲ್ಟ್ ನ್ಯೂಸ್ ಸಹ ನವ ದಂಪತಿಗಳನ್ನು ಸಂಪರ್ಕಿಸಿದ್ದು, “ನಾವು ಒಂದೇ ಜಾತಿಗೆ ಸೇರಿದವರಾಗಿದ್ದು, ಈಗ ಮದುವೆಯಾಗಿ ಒಂದು ತಿಂಗಳಾಗಿದೆ. ಆದರೆ ಈ ವೀಡಿಯೊ ಸಂಪೂರ್ಣವಾಗಿ ಸುಳ್ಳು ಪ್ರತಿಪಾದನೆಯೊಂದಿಗೆ ವೈರಲ್ ಆಗಿದೆ. ನಾವು ನ್ಯಾಯಾಲಯದಲ್ಲಿ ಮದುವೆಯಾಗುತ್ತಿದ್ದಾಗ, ಸೀತಾಳ ತಂದೆ ಮದುವೆಯಾಗಬಾರದೆಂದು ಅವಳೊಂದಿಗೆ ತಮಾಷೆ ಮಾಡುತ್ತಿದ್ದರು. ಯಾರೋ ಈ ಕ್ಲಿಪ್ ಅನ್ನು ಬೇರೆ ಸಂದರ್ಭದಲ್ಲಿ ವೈರಲ್ ಮಾಡಿದ್ದಾರೆ. ಜೊತೆಗೆ ಮಹಿಳೆಯ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳುತ್ತಿದ್ದಾರೆ. ಇದು ಸಂಪೂರ್ಣ ಸುಳ್ಳು ಎಲ್ಲವೂ ಸರಿಯಾಗಿಯೇ ಇದೆ” ಎಂದು ಲಖರಾಮ್ ಹೇಳಿಕೆ ನೀಡಿದ್ದಾರೆ.

ಹಾಗಾಗಿ ಸ್ಪಷ್ಟವಾಗಿ, ಹಲವಾರು ಸುಳ್ಳು ಹಕ್ಕುಗಳೊಂದಿಗೆ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗುತ್ತಿದೆ ಎಂಬುದು ತಿಳಿದುಬಂದಿದೆ.


ಇದನ್ನೂ ಓದಿ: ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...