Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ಫೇಸ್‌ಬುಕ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿರುವ ಶೆಫಾಲಿ ವೈದ್ಯ, "ಹಿಂದೂ ತಂದೆಯೋರ್ವ ತನ್ನ ಮಗಳನ್ನು ಲವ್ ಜಿಹಾದ್‌ಗೆ ಬಲಿಯಾಗದಂತೆ ಕೇಳಿಕೊಳ್ಳುತ್ತಿದ್ದಾನೆ" ಎಂದು ಬರೆದುಕೊಂಡಿದ್ದಾರೆ.

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೊವೊಂದು ವೈರಲ್ ಆಗುತ್ತಿದ್ದು, ಇದರಲ್ಲಿ ಪೋಷಕರು ತಮ್ಮ ಮಗಳಲ್ಲಿ ಮನವಿ ಮಾಡುತ್ತಿರುವ ಮತ್ತು ಮನವೊಲಿಸಲು ಪ್ರಯತ್ನಿಸುತ್ತಿರುವ ದೃಶ್ಯ ಕಂಡುಬಂದಿದ್ದು, ಇದನ್ನು ‘ಲವ್ ಜಿಹಾದ್’ ಎಂಬ ಪ್ರತಿಪಾದನೆಯೊಂದಿಗೆ ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಈ ಪೋಸ್ಟನ್ನು ಹಂಚಿಕೊಂಡಿದ್ದಾರೆ.

ಇದೇ ವಿಡಿಯೋ ಹಂಚಿಕೊಂಡವರಲ್ಲಿ ಬಲಪಂಥೀಯ ನಿರೂಪಕಿ ಶೆಫಾಲಿ ವೈದ್ಯ ಕೂಡ ಇದ್ದಾರೆ.

This video broke my heart!If the info that I have is correct, this is a Hindu father begging his daughter to not fall…

Posted by Shefali Vaidya on Monday, October 5, 2020

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ನಟ ಅಮಿತಾಬ್ ಬಚ್ಚನ್‌ ದಾವೂದ್ ಇಬ್ರಾಹಿಂನನ್ನು ಭೇಟಿ ಆಗಿದ್ದು ನಿಜವೆ?

ಫೇಸ್‌ಬುಕ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿರುವ ಶೆಫಾಲಿ ವೈದ್ಯ, “ಈ ವಿಡಿಯೋ ನನ್ನ ಹೃದಯವನ್ನು ಘಾಸಿಗೊಳಿಸಿದೆ! ನನ್ನಲ್ಲಿರುವ ಮಾಹಿತಿಯು ಸರಿಯಾಗಿದ್ದರೆ, ಇದು ಹಿಂದೂ ತಂದೆಯೋರ್ವ ತನ್ನ ಮಗಳನ್ನು ಲವ್ ಜಿಹಾದ್‌ಗೆ ಬಲಿಯಾಗದಂತೆ ಕೇಳಿಕೊಳ್ಳುತ್ತಿದ್ದಾನೆ. ಅವನು ತನ್ನ ಪಗಡಿಯನ್ನು ಅವಳ ಕಾಲುಗಳ ಬಳಿ ಇಡುತ್ತಾನೆ. ರಾಜಸ್ಥಾನಿ ಸಂಪ್ರದಾಯವನ್ನು ಚೆನ್ನಾಗಿ ಬಲ್ಲವರು ಮಾತ್ರ ಇದರ ತೀವ್ರತೆಯನ್ನು ಅರ್ಥಮಾಡಿಕೊಳ್ಳುತ್ತಾರೆ. ಹುಡುಗಿ ಎಷ್ಟು ಮುಗುಳ್ನಗುತ್ತಾ ಅವನನ್ನು ತಳ್ಳುತ್ತಾಳೆಂದು ನೋಡಿ! ಅವಳು ಬಹುಶಃ ತನ್ನ ಐದನೇ ಮಗುವನ್ನು ಹೊತ್ತುಕೊಂಡು ಮೂರನೆಯ ಹೆಂಡತಿಯಾಗಿ ಕೊನೆಗೊಳ್ಳಬಹುದು ಅಥವಾ ಸೋನ್‌ಭದ್ರಾದ ಮಹಿಳೆಯಂತೆ ಶಿರಚ್ಚೇದನಕ್ಕೆ ಒಳಗಾಗಬಹುದು. ಆದರೆ ಅಷ್ಟರೊಳಗೆ ಆ ಮುದುಕ ಬಹುಶಃ ಹೃದಯ ಒಡೆದು ಸತ್ತಿರಬಹುದು!” ಎಂದು ಬರೆದುಕೊಂಡಿದ್ದಾರೆ. ಇದರ ತನಿಖೆ ಮಾಡುತ್ತಿರುವ ಸಂಸ್ಥೆಯೊಂದು ತನಗೆ ಮಾಹಿತಿ ನೀಡಿದೆ ಎಂದು ಅವರು ವಿಶೇಷ ಸೂಚನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಕಂಗನಾ ರಾಣಾವತ್‌ ಚುನಾವಣೆಯಲ್ಲಿ ಬಲವಂತವಾಗಿ ಶಿವಸೇನೆಗೆ ಮತ ಚಲಾಯಿಸಿದರೆ?

ಇದೇ ವೀಡಿಯೋವನ್ನು ಇದೇ ಹೇಳಿಕೆಯೊಂದಿಗೆ ಟ್ವಿಟ್ಟರ್‌ನಲ್ಲಿಯೂ ಹಂಚಿಕೊಳ್ಳಲಾಗುತ್ತಿದೆ.

ಈ ವರದಿಯನ್ನು ಬರೆಯುವ ವೇಳೆಗೆ ಈ ಟ್ವೀಟ್‌ಗೆ ಸುಮಾರು 3,700 ಕ್ಕೂ ಹೆಚ್ಚು ಲೈಕ್‌ಗಳು ಮತ್ತು 2,200 ರಿಟ್ವೀಟ್‌ಗಳನ್ನು ಮಾಡಿದ್ದಾರೆ. 31,700 ಬಳಕೆದಾರರು ಇದನ್ನು ವೀಕ್ಷಿಸಿದ್ದಾರೆ.

ಫ್ಯಾಕ್ಟ್‌ಚೆಕ್: 

ರಾಯಲ್ ರೈಕಾ ಎಂಬ ಫೇಸ್‌ಬುಕ್ ಪುಟದಿಂದ ಅಪ್‌ಲೋಡ್ ಮಾಡಲಾದ ವೀಡಿಯೊವನ್ನು ಸುಳ್ಳು ಮಾಹಿತಿಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ವೀಡಿಯೊದಲ್ಲಿರುವ ಹುಡುಗಿ ಸೀತಾ ಮತ್ತು ವ್ಯಕ್ತಿ ಲಖರಾಮ್ ಎಂದು ಆ ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ನಾವು ಎರಡೂ ಜಿಲ್ಲೆಗಳಲ್ಲಿನ ಪೊಲೀಸರನ್ನು ಸಂಪರ್ಕಿಸಿದಾಗ, ಕಳೆದ ತಿಂಗಳು ಪಾಲಿಯಲ್ಲಿ ಈ ಘಟನೆ ನಡೆದಿರುವುದು ಕಂಡುಬಂದಿದೆ ಎಂದು ದಿ ಕ್ವಿಂಟ್ ವರದಿ ಮಾಡಿದೆ.

ಪಾಲಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬ್ರಿಜೇಶ್ ಕುಮಾರ್ ಸೋನಿ ದಿ ಕ್ವಿಂಟ್ ಜೊತೆ ಮಾತನಾಡಿದ್ದು, “ಈ ಘಟನೆ ಪಾಲಿಯಲ್ಲಿ ನಡೆದಿದೆ. ಆದರೆ, ಇದು ಲವ್ ಜಿಹಾದ್ ಪ್ರಕರಣ ಎಂದು ಹೇಳಿತ್ತಿರುವುದು ಸಂಪೂರ್ಣವಾಗಿ ಸುಳ್ಳು. ಇಲ್ಲಿ ಮಹಿಳೆ ಮತ್ತು ಪುರುಷ ಇಬ್ಬರೂ ಒಂದೇ ಸಮುದಾಯಕ್ಕೆ ಸೇರಿದವರು” ಎಂದು ಸ್ಪಷ್ಟಪಡಿಸಿದ್ದಾರೆ.

ವೀಡಿಯೊದಲ್ಲಿ ನೋಡಬಹುದಾದ ಮಹಿಳೆ ಸೀತಾ. ಲಖರಾಮ್ ಎಂಬ ಈ ವ್ಯಕ್ತಿಯೊಂದಿಗೆ ಓಡಿಹೋಗಿದ್ದು, ಅವರು ಈಗಾಗಲೇ ಮದುವೆಯಾಗಿದ್ದಾರೆ. ಅವರನ್ನು ವೀಡಿಯೊದಲ್ಲಿ ಸಹ ಕಾಣಬಹುದು. ಇಲ್ಲಿ ಆಕೆಯ ಪೋಷಕರು ಮನೆಗೆ ಮರಳುವಂತೆ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ಆಗಸ್ಟ್ 28 ರಂದು ಸೀತಾ ತನ್ನ ಹೇಳಿಕೆಯನ್ನು ಪೊಲೀಸರ ಬಳಿ ನೀಡಿದ್ದು, “ನಾನು ಲಖರಾಮ್‌ನೊಂದಿಗೆ ಸ್ವಯಿಚ್ಚೆಯಿಂದ ಬಂದಿದ್ದೇನೆ. ಅವರೊಂದಿಗೇ ವಾಸಿಸಲು ಬಯಸುತ್ತೇನೆ. ನಾನು ನನ್ನ ಪೋಷಕರ ಮನೆಗೆ ಹೋಗುವುದಿಲ್ಲ” ಎಂದು ಹೇಳಿರುವುದು ಉಲ್ಲೇಖವಾಗಿದೆ.

ಫ್ಯಾಕ್ಟ್-ಚೆಕಿಂಗ್ ವೆಬ್‌ಸೈಟ್ ಆಲ್ಟ್ ನ್ಯೂಸ್ ಸಹ ನವ ದಂಪತಿಗಳನ್ನು ಸಂಪರ್ಕಿಸಿದ್ದು, “ನಾವು ಒಂದೇ ಜಾತಿಗೆ ಸೇರಿದವರಾಗಿದ್ದು, ಈಗ ಮದುವೆಯಾಗಿ ಒಂದು ತಿಂಗಳಾಗಿದೆ. ಆದರೆ ಈ ವೀಡಿಯೊ ಸಂಪೂರ್ಣವಾಗಿ ಸುಳ್ಳು ಪ್ರತಿಪಾದನೆಯೊಂದಿಗೆ ವೈರಲ್ ಆಗಿದೆ. ನಾವು ನ್ಯಾಯಾಲಯದಲ್ಲಿ ಮದುವೆಯಾಗುತ್ತಿದ್ದಾಗ, ಸೀತಾಳ ತಂದೆ ಮದುವೆಯಾಗಬಾರದೆಂದು ಅವಳೊಂದಿಗೆ ತಮಾಷೆ ಮಾಡುತ್ತಿದ್ದರು. ಯಾರೋ ಈ ಕ್ಲಿಪ್ ಅನ್ನು ಬೇರೆ ಸಂದರ್ಭದಲ್ಲಿ ವೈರಲ್ ಮಾಡಿದ್ದಾರೆ. ಜೊತೆಗೆ ಮಹಿಳೆಯ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳುತ್ತಿದ್ದಾರೆ. ಇದು ಸಂಪೂರ್ಣ ಸುಳ್ಳು ಎಲ್ಲವೂ ಸರಿಯಾಗಿಯೇ ಇದೆ” ಎಂದು ಲಖರಾಮ್ ಹೇಳಿಕೆ ನೀಡಿದ್ದಾರೆ.

ಹಾಗಾಗಿ ಸ್ಪಷ್ಟವಾಗಿ, ಹಲವಾರು ಸುಳ್ಳು ಹಕ್ಕುಗಳೊಂದಿಗೆ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗುತ್ತಿದೆ ಎಂಬುದು ತಿಳಿದುಬಂದಿದೆ.


ಇದನ್ನೂ ಓದಿ: ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...