Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ಫೇಸ್‌ಬುಕ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿರುವ ಶೆಫಾಲಿ ವೈದ್ಯ, "ಹಿಂದೂ ತಂದೆಯೋರ್ವ ತನ್ನ ಮಗಳನ್ನು ಲವ್ ಜಿಹಾದ್‌ಗೆ ಬಲಿಯಾಗದಂತೆ ಕೇಳಿಕೊಳ್ಳುತ್ತಿದ್ದಾನೆ" ಎಂದು ಬರೆದುಕೊಂಡಿದ್ದಾರೆ.

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೊವೊಂದು ವೈರಲ್ ಆಗುತ್ತಿದ್ದು, ಇದರಲ್ಲಿ ಪೋಷಕರು ತಮ್ಮ ಮಗಳಲ್ಲಿ ಮನವಿ ಮಾಡುತ್ತಿರುವ ಮತ್ತು ಮನವೊಲಿಸಲು ಪ್ರಯತ್ನಿಸುತ್ತಿರುವ ದೃಶ್ಯ ಕಂಡುಬಂದಿದ್ದು, ಇದನ್ನು ‘ಲವ್ ಜಿಹಾದ್’ ಎಂಬ ಪ್ರತಿಪಾದನೆಯೊಂದಿಗೆ ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಈ ಪೋಸ್ಟನ್ನು ಹಂಚಿಕೊಂಡಿದ್ದಾರೆ.

ಇದೇ ವಿಡಿಯೋ ಹಂಚಿಕೊಂಡವರಲ್ಲಿ ಬಲಪಂಥೀಯ ನಿರೂಪಕಿ ಶೆಫಾಲಿ ವೈದ್ಯ ಕೂಡ ಇದ್ದಾರೆ.

This video broke my heart!If the info that I have is correct, this is a Hindu father begging his daughter to not fall…

Posted by Shefali Vaidya on Monday, October 5, 2020

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ನಟ ಅಮಿತಾಬ್ ಬಚ್ಚನ್‌ ದಾವೂದ್ ಇಬ್ರಾಹಿಂನನ್ನು ಭೇಟಿ ಆಗಿದ್ದು ನಿಜವೆ?

ಫೇಸ್‌ಬುಕ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿರುವ ಶೆಫಾಲಿ ವೈದ್ಯ, “ಈ ವಿಡಿಯೋ ನನ್ನ ಹೃದಯವನ್ನು ಘಾಸಿಗೊಳಿಸಿದೆ! ನನ್ನಲ್ಲಿರುವ ಮಾಹಿತಿಯು ಸರಿಯಾಗಿದ್ದರೆ, ಇದು ಹಿಂದೂ ತಂದೆಯೋರ್ವ ತನ್ನ ಮಗಳನ್ನು ಲವ್ ಜಿಹಾದ್‌ಗೆ ಬಲಿಯಾಗದಂತೆ ಕೇಳಿಕೊಳ್ಳುತ್ತಿದ್ದಾನೆ. ಅವನು ತನ್ನ ಪಗಡಿಯನ್ನು ಅವಳ ಕಾಲುಗಳ ಬಳಿ ಇಡುತ್ತಾನೆ. ರಾಜಸ್ಥಾನಿ ಸಂಪ್ರದಾಯವನ್ನು ಚೆನ್ನಾಗಿ ಬಲ್ಲವರು ಮಾತ್ರ ಇದರ ತೀವ್ರತೆಯನ್ನು ಅರ್ಥಮಾಡಿಕೊಳ್ಳುತ್ತಾರೆ. ಹುಡುಗಿ ಎಷ್ಟು ಮುಗುಳ್ನಗುತ್ತಾ ಅವನನ್ನು ತಳ್ಳುತ್ತಾಳೆಂದು ನೋಡಿ! ಅವಳು ಬಹುಶಃ ತನ್ನ ಐದನೇ ಮಗುವನ್ನು ಹೊತ್ತುಕೊಂಡು ಮೂರನೆಯ ಹೆಂಡತಿಯಾಗಿ ಕೊನೆಗೊಳ್ಳಬಹುದು ಅಥವಾ ಸೋನ್‌ಭದ್ರಾದ ಮಹಿಳೆಯಂತೆ ಶಿರಚ್ಚೇದನಕ್ಕೆ ಒಳಗಾಗಬಹುದು. ಆದರೆ ಅಷ್ಟರೊಳಗೆ ಆ ಮುದುಕ ಬಹುಶಃ ಹೃದಯ ಒಡೆದು ಸತ್ತಿರಬಹುದು!” ಎಂದು ಬರೆದುಕೊಂಡಿದ್ದಾರೆ. ಇದರ ತನಿಖೆ ಮಾಡುತ್ತಿರುವ ಸಂಸ್ಥೆಯೊಂದು ತನಗೆ ಮಾಹಿತಿ ನೀಡಿದೆ ಎಂದು ಅವರು ವಿಶೇಷ ಸೂಚನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಕಂಗನಾ ರಾಣಾವತ್‌ ಚುನಾವಣೆಯಲ್ಲಿ ಬಲವಂತವಾಗಿ ಶಿವಸೇನೆಗೆ ಮತ ಚಲಾಯಿಸಿದರೆ?

ಇದೇ ವೀಡಿಯೋವನ್ನು ಇದೇ ಹೇಳಿಕೆಯೊಂದಿಗೆ ಟ್ವಿಟ್ಟರ್‌ನಲ್ಲಿಯೂ ಹಂಚಿಕೊಳ್ಳಲಾಗುತ್ತಿದೆ.

ಈ ವರದಿಯನ್ನು ಬರೆಯುವ ವೇಳೆಗೆ ಈ ಟ್ವೀಟ್‌ಗೆ ಸುಮಾರು 3,700 ಕ್ಕೂ ಹೆಚ್ಚು ಲೈಕ್‌ಗಳು ಮತ್ತು 2,200 ರಿಟ್ವೀಟ್‌ಗಳನ್ನು ಮಾಡಿದ್ದಾರೆ. 31,700 ಬಳಕೆದಾರರು ಇದನ್ನು ವೀಕ್ಷಿಸಿದ್ದಾರೆ.

ಫ್ಯಾಕ್ಟ್‌ಚೆಕ್: 

ರಾಯಲ್ ರೈಕಾ ಎಂಬ ಫೇಸ್‌ಬುಕ್ ಪುಟದಿಂದ ಅಪ್‌ಲೋಡ್ ಮಾಡಲಾದ ವೀಡಿಯೊವನ್ನು ಸುಳ್ಳು ಮಾಹಿತಿಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ವೀಡಿಯೊದಲ್ಲಿರುವ ಹುಡುಗಿ ಸೀತಾ ಮತ್ತು ವ್ಯಕ್ತಿ ಲಖರಾಮ್ ಎಂದು ಆ ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ನಾವು ಎರಡೂ ಜಿಲ್ಲೆಗಳಲ್ಲಿನ ಪೊಲೀಸರನ್ನು ಸಂಪರ್ಕಿಸಿದಾಗ, ಕಳೆದ ತಿಂಗಳು ಪಾಲಿಯಲ್ಲಿ ಈ ಘಟನೆ ನಡೆದಿರುವುದು ಕಂಡುಬಂದಿದೆ ಎಂದು ದಿ ಕ್ವಿಂಟ್ ವರದಿ ಮಾಡಿದೆ.

ಪಾಲಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬ್ರಿಜೇಶ್ ಕುಮಾರ್ ಸೋನಿ ದಿ ಕ್ವಿಂಟ್ ಜೊತೆ ಮಾತನಾಡಿದ್ದು, “ಈ ಘಟನೆ ಪಾಲಿಯಲ್ಲಿ ನಡೆದಿದೆ. ಆದರೆ, ಇದು ಲವ್ ಜಿಹಾದ್ ಪ್ರಕರಣ ಎಂದು ಹೇಳಿತ್ತಿರುವುದು ಸಂಪೂರ್ಣವಾಗಿ ಸುಳ್ಳು. ಇಲ್ಲಿ ಮಹಿಳೆ ಮತ್ತು ಪುರುಷ ಇಬ್ಬರೂ ಒಂದೇ ಸಮುದಾಯಕ್ಕೆ ಸೇರಿದವರು” ಎಂದು ಸ್ಪಷ್ಟಪಡಿಸಿದ್ದಾರೆ.

ವೀಡಿಯೊದಲ್ಲಿ ನೋಡಬಹುದಾದ ಮಹಿಳೆ ಸೀತಾ. ಲಖರಾಮ್ ಎಂಬ ಈ ವ್ಯಕ್ತಿಯೊಂದಿಗೆ ಓಡಿಹೋಗಿದ್ದು, ಅವರು ಈಗಾಗಲೇ ಮದುವೆಯಾಗಿದ್ದಾರೆ. ಅವರನ್ನು ವೀಡಿಯೊದಲ್ಲಿ ಸಹ ಕಾಣಬಹುದು. ಇಲ್ಲಿ ಆಕೆಯ ಪೋಷಕರು ಮನೆಗೆ ಮರಳುವಂತೆ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ಆಗಸ್ಟ್ 28 ರಂದು ಸೀತಾ ತನ್ನ ಹೇಳಿಕೆಯನ್ನು ಪೊಲೀಸರ ಬಳಿ ನೀಡಿದ್ದು, “ನಾನು ಲಖರಾಮ್‌ನೊಂದಿಗೆ ಸ್ವಯಿಚ್ಚೆಯಿಂದ ಬಂದಿದ್ದೇನೆ. ಅವರೊಂದಿಗೇ ವಾಸಿಸಲು ಬಯಸುತ್ತೇನೆ. ನಾನು ನನ್ನ ಪೋಷಕರ ಮನೆಗೆ ಹೋಗುವುದಿಲ್ಲ” ಎಂದು ಹೇಳಿರುವುದು ಉಲ್ಲೇಖವಾಗಿದೆ.

ಫ್ಯಾಕ್ಟ್-ಚೆಕಿಂಗ್ ವೆಬ್‌ಸೈಟ್ ಆಲ್ಟ್ ನ್ಯೂಸ್ ಸಹ ನವ ದಂಪತಿಗಳನ್ನು ಸಂಪರ್ಕಿಸಿದ್ದು, “ನಾವು ಒಂದೇ ಜಾತಿಗೆ ಸೇರಿದವರಾಗಿದ್ದು, ಈಗ ಮದುವೆಯಾಗಿ ಒಂದು ತಿಂಗಳಾಗಿದೆ. ಆದರೆ ಈ ವೀಡಿಯೊ ಸಂಪೂರ್ಣವಾಗಿ ಸುಳ್ಳು ಪ್ರತಿಪಾದನೆಯೊಂದಿಗೆ ವೈರಲ್ ಆಗಿದೆ. ನಾವು ನ್ಯಾಯಾಲಯದಲ್ಲಿ ಮದುವೆಯಾಗುತ್ತಿದ್ದಾಗ, ಸೀತಾಳ ತಂದೆ ಮದುವೆಯಾಗಬಾರದೆಂದು ಅವಳೊಂದಿಗೆ ತಮಾಷೆ ಮಾಡುತ್ತಿದ್ದರು. ಯಾರೋ ಈ ಕ್ಲಿಪ್ ಅನ್ನು ಬೇರೆ ಸಂದರ್ಭದಲ್ಲಿ ವೈರಲ್ ಮಾಡಿದ್ದಾರೆ. ಜೊತೆಗೆ ಮಹಿಳೆಯ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳುತ್ತಿದ್ದಾರೆ. ಇದು ಸಂಪೂರ್ಣ ಸುಳ್ಳು ಎಲ್ಲವೂ ಸರಿಯಾಗಿಯೇ ಇದೆ” ಎಂದು ಲಖರಾಮ್ ಹೇಳಿಕೆ ನೀಡಿದ್ದಾರೆ.

ಹಾಗಾಗಿ ಸ್ಪಷ್ಟವಾಗಿ, ಹಲವಾರು ಸುಳ್ಳು ಹಕ್ಕುಗಳೊಂದಿಗೆ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗುತ್ತಿದೆ ಎಂಬುದು ತಿಳಿದುಬಂದಿದೆ.


ಇದನ್ನೂ ಓದಿ: ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...