Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ಫೇಸ್‌ಬುಕ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿರುವ ಶೆಫಾಲಿ ವೈದ್ಯ, "ಹಿಂದೂ ತಂದೆಯೋರ್ವ ತನ್ನ ಮಗಳನ್ನು ಲವ್ ಜಿಹಾದ್‌ಗೆ ಬಲಿಯಾಗದಂತೆ ಕೇಳಿಕೊಳ್ಳುತ್ತಿದ್ದಾನೆ" ಎಂದು ಬರೆದುಕೊಂಡಿದ್ದಾರೆ.

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೊವೊಂದು ವೈರಲ್ ಆಗುತ್ತಿದ್ದು, ಇದರಲ್ಲಿ ಪೋಷಕರು ತಮ್ಮ ಮಗಳಲ್ಲಿ ಮನವಿ ಮಾಡುತ್ತಿರುವ ಮತ್ತು ಮನವೊಲಿಸಲು ಪ್ರಯತ್ನಿಸುತ್ತಿರುವ ದೃಶ್ಯ ಕಂಡುಬಂದಿದ್ದು, ಇದನ್ನು ‘ಲವ್ ಜಿಹಾದ್’ ಎಂಬ ಪ್ರತಿಪಾದನೆಯೊಂದಿಗೆ ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಈ ಪೋಸ್ಟನ್ನು ಹಂಚಿಕೊಂಡಿದ್ದಾರೆ.

ಇದೇ ವಿಡಿಯೋ ಹಂಚಿಕೊಂಡವರಲ್ಲಿ ಬಲಪಂಥೀಯ ನಿರೂಪಕಿ ಶೆಫಾಲಿ ವೈದ್ಯ ಕೂಡ ಇದ್ದಾರೆ.

This video broke my heart!If the info that I have is correct, this is a Hindu father begging his daughter to not fall…

Posted by Shefali Vaidya on Monday, October 5, 2020

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ನಟ ಅಮಿತಾಬ್ ಬಚ್ಚನ್‌ ದಾವೂದ್ ಇಬ್ರಾಹಿಂನನ್ನು ಭೇಟಿ ಆಗಿದ್ದು ನಿಜವೆ?

ಫೇಸ್‌ಬುಕ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿರುವ ಶೆಫಾಲಿ ವೈದ್ಯ, “ಈ ವಿಡಿಯೋ ನನ್ನ ಹೃದಯವನ್ನು ಘಾಸಿಗೊಳಿಸಿದೆ! ನನ್ನಲ್ಲಿರುವ ಮಾಹಿತಿಯು ಸರಿಯಾಗಿದ್ದರೆ, ಇದು ಹಿಂದೂ ತಂದೆಯೋರ್ವ ತನ್ನ ಮಗಳನ್ನು ಲವ್ ಜಿಹಾದ್‌ಗೆ ಬಲಿಯಾಗದಂತೆ ಕೇಳಿಕೊಳ್ಳುತ್ತಿದ್ದಾನೆ. ಅವನು ತನ್ನ ಪಗಡಿಯನ್ನು ಅವಳ ಕಾಲುಗಳ ಬಳಿ ಇಡುತ್ತಾನೆ. ರಾಜಸ್ಥಾನಿ ಸಂಪ್ರದಾಯವನ್ನು ಚೆನ್ನಾಗಿ ಬಲ್ಲವರು ಮಾತ್ರ ಇದರ ತೀವ್ರತೆಯನ್ನು ಅರ್ಥಮಾಡಿಕೊಳ್ಳುತ್ತಾರೆ. ಹುಡುಗಿ ಎಷ್ಟು ಮುಗುಳ್ನಗುತ್ತಾ ಅವನನ್ನು ತಳ್ಳುತ್ತಾಳೆಂದು ನೋಡಿ! ಅವಳು ಬಹುಶಃ ತನ್ನ ಐದನೇ ಮಗುವನ್ನು ಹೊತ್ತುಕೊಂಡು ಮೂರನೆಯ ಹೆಂಡತಿಯಾಗಿ ಕೊನೆಗೊಳ್ಳಬಹುದು ಅಥವಾ ಸೋನ್‌ಭದ್ರಾದ ಮಹಿಳೆಯಂತೆ ಶಿರಚ್ಚೇದನಕ್ಕೆ ಒಳಗಾಗಬಹುದು. ಆದರೆ ಅಷ್ಟರೊಳಗೆ ಆ ಮುದುಕ ಬಹುಶಃ ಹೃದಯ ಒಡೆದು ಸತ್ತಿರಬಹುದು!” ಎಂದು ಬರೆದುಕೊಂಡಿದ್ದಾರೆ. ಇದರ ತನಿಖೆ ಮಾಡುತ್ತಿರುವ ಸಂಸ್ಥೆಯೊಂದು ತನಗೆ ಮಾಹಿತಿ ನೀಡಿದೆ ಎಂದು ಅವರು ವಿಶೇಷ ಸೂಚನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಕಂಗನಾ ರಾಣಾವತ್‌ ಚುನಾವಣೆಯಲ್ಲಿ ಬಲವಂತವಾಗಿ ಶಿವಸೇನೆಗೆ ಮತ ಚಲಾಯಿಸಿದರೆ?

ಇದೇ ವೀಡಿಯೋವನ್ನು ಇದೇ ಹೇಳಿಕೆಯೊಂದಿಗೆ ಟ್ವಿಟ್ಟರ್‌ನಲ್ಲಿಯೂ ಹಂಚಿಕೊಳ್ಳಲಾಗುತ್ತಿದೆ.

ಈ ವರದಿಯನ್ನು ಬರೆಯುವ ವೇಳೆಗೆ ಈ ಟ್ವೀಟ್‌ಗೆ ಸುಮಾರು 3,700 ಕ್ಕೂ ಹೆಚ್ಚು ಲೈಕ್‌ಗಳು ಮತ್ತು 2,200 ರಿಟ್ವೀಟ್‌ಗಳನ್ನು ಮಾಡಿದ್ದಾರೆ. 31,700 ಬಳಕೆದಾರರು ಇದನ್ನು ವೀಕ್ಷಿಸಿದ್ದಾರೆ.

ಫ್ಯಾಕ್ಟ್‌ಚೆಕ್: 

ರಾಯಲ್ ರೈಕಾ ಎಂಬ ಫೇಸ್‌ಬುಕ್ ಪುಟದಿಂದ ಅಪ್‌ಲೋಡ್ ಮಾಡಲಾದ ವೀಡಿಯೊವನ್ನು ಸುಳ್ಳು ಮಾಹಿತಿಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ವೀಡಿಯೊದಲ್ಲಿರುವ ಹುಡುಗಿ ಸೀತಾ ಮತ್ತು ವ್ಯಕ್ತಿ ಲಖರಾಮ್ ಎಂದು ಆ ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ನಾವು ಎರಡೂ ಜಿಲ್ಲೆಗಳಲ್ಲಿನ ಪೊಲೀಸರನ್ನು ಸಂಪರ್ಕಿಸಿದಾಗ, ಕಳೆದ ತಿಂಗಳು ಪಾಲಿಯಲ್ಲಿ ಈ ಘಟನೆ ನಡೆದಿರುವುದು ಕಂಡುಬಂದಿದೆ ಎಂದು ದಿ ಕ್ವಿಂಟ್ ವರದಿ ಮಾಡಿದೆ.

ಪಾಲಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬ್ರಿಜೇಶ್ ಕುಮಾರ್ ಸೋನಿ ದಿ ಕ್ವಿಂಟ್ ಜೊತೆ ಮಾತನಾಡಿದ್ದು, “ಈ ಘಟನೆ ಪಾಲಿಯಲ್ಲಿ ನಡೆದಿದೆ. ಆದರೆ, ಇದು ಲವ್ ಜಿಹಾದ್ ಪ್ರಕರಣ ಎಂದು ಹೇಳಿತ್ತಿರುವುದು ಸಂಪೂರ್ಣವಾಗಿ ಸುಳ್ಳು. ಇಲ್ಲಿ ಮಹಿಳೆ ಮತ್ತು ಪುರುಷ ಇಬ್ಬರೂ ಒಂದೇ ಸಮುದಾಯಕ್ಕೆ ಸೇರಿದವರು” ಎಂದು ಸ್ಪಷ್ಟಪಡಿಸಿದ್ದಾರೆ.

ವೀಡಿಯೊದಲ್ಲಿ ನೋಡಬಹುದಾದ ಮಹಿಳೆ ಸೀತಾ. ಲಖರಾಮ್ ಎಂಬ ಈ ವ್ಯಕ್ತಿಯೊಂದಿಗೆ ಓಡಿಹೋಗಿದ್ದು, ಅವರು ಈಗಾಗಲೇ ಮದುವೆಯಾಗಿದ್ದಾರೆ. ಅವರನ್ನು ವೀಡಿಯೊದಲ್ಲಿ ಸಹ ಕಾಣಬಹುದು. ಇಲ್ಲಿ ಆಕೆಯ ಪೋಷಕರು ಮನೆಗೆ ಮರಳುವಂತೆ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ಆಗಸ್ಟ್ 28 ರಂದು ಸೀತಾ ತನ್ನ ಹೇಳಿಕೆಯನ್ನು ಪೊಲೀಸರ ಬಳಿ ನೀಡಿದ್ದು, “ನಾನು ಲಖರಾಮ್‌ನೊಂದಿಗೆ ಸ್ವಯಿಚ್ಚೆಯಿಂದ ಬಂದಿದ್ದೇನೆ. ಅವರೊಂದಿಗೇ ವಾಸಿಸಲು ಬಯಸುತ್ತೇನೆ. ನಾನು ನನ್ನ ಪೋಷಕರ ಮನೆಗೆ ಹೋಗುವುದಿಲ್ಲ” ಎಂದು ಹೇಳಿರುವುದು ಉಲ್ಲೇಖವಾಗಿದೆ.

ಫ್ಯಾಕ್ಟ್-ಚೆಕಿಂಗ್ ವೆಬ್‌ಸೈಟ್ ಆಲ್ಟ್ ನ್ಯೂಸ್ ಸಹ ನವ ದಂಪತಿಗಳನ್ನು ಸಂಪರ್ಕಿಸಿದ್ದು, “ನಾವು ಒಂದೇ ಜಾತಿಗೆ ಸೇರಿದವರಾಗಿದ್ದು, ಈಗ ಮದುವೆಯಾಗಿ ಒಂದು ತಿಂಗಳಾಗಿದೆ. ಆದರೆ ಈ ವೀಡಿಯೊ ಸಂಪೂರ್ಣವಾಗಿ ಸುಳ್ಳು ಪ್ರತಿಪಾದನೆಯೊಂದಿಗೆ ವೈರಲ್ ಆಗಿದೆ. ನಾವು ನ್ಯಾಯಾಲಯದಲ್ಲಿ ಮದುವೆಯಾಗುತ್ತಿದ್ದಾಗ, ಸೀತಾಳ ತಂದೆ ಮದುವೆಯಾಗಬಾರದೆಂದು ಅವಳೊಂದಿಗೆ ತಮಾಷೆ ಮಾಡುತ್ತಿದ್ದರು. ಯಾರೋ ಈ ಕ್ಲಿಪ್ ಅನ್ನು ಬೇರೆ ಸಂದರ್ಭದಲ್ಲಿ ವೈರಲ್ ಮಾಡಿದ್ದಾರೆ. ಜೊತೆಗೆ ಮಹಿಳೆಯ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳುತ್ತಿದ್ದಾರೆ. ಇದು ಸಂಪೂರ್ಣ ಸುಳ್ಳು ಎಲ್ಲವೂ ಸರಿಯಾಗಿಯೇ ಇದೆ” ಎಂದು ಲಖರಾಮ್ ಹೇಳಿಕೆ ನೀಡಿದ್ದಾರೆ.

ಹಾಗಾಗಿ ಸ್ಪಷ್ಟವಾಗಿ, ಹಲವಾರು ಸುಳ್ಳು ಹಕ್ಕುಗಳೊಂದಿಗೆ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗುತ್ತಿದೆ ಎಂಬುದು ತಿಳಿದುಬಂದಿದೆ.


ಇದನ್ನೂ ಓದಿ: ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...