Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ಫ್ಯಾಕ್ಟ್‌ಚೆಕ್: ಲವ್ ಜಿಹಾದ್ ಹೆಸರಿನಲ್ಲಿ ದ್ವೇಷ ಹರಡುವ ಸುಳ್ಳು ಸುದ್ದಿ, ವಿಡಿಯೋ ಹಂಚಿಕೊಳ್ಳಲಾಗುತ್ತಿದೆ!

ಫೇಸ್‌ಬುಕ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿರುವ ಶೆಫಾಲಿ ವೈದ್ಯ, "ಹಿಂದೂ ತಂದೆಯೋರ್ವ ತನ್ನ ಮಗಳನ್ನು ಲವ್ ಜಿಹಾದ್‌ಗೆ ಬಲಿಯಾಗದಂತೆ ಕೇಳಿಕೊಳ್ಳುತ್ತಿದ್ದಾನೆ" ಎಂದು ಬರೆದುಕೊಂಡಿದ್ದಾರೆ.

- Advertisement -
- Advertisement -

ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೊವೊಂದು ವೈರಲ್ ಆಗುತ್ತಿದ್ದು, ಇದರಲ್ಲಿ ಪೋಷಕರು ತಮ್ಮ ಮಗಳಲ್ಲಿ ಮನವಿ ಮಾಡುತ್ತಿರುವ ಮತ್ತು ಮನವೊಲಿಸಲು ಪ್ರಯತ್ನಿಸುತ್ತಿರುವ ದೃಶ್ಯ ಕಂಡುಬಂದಿದ್ದು, ಇದನ್ನು ‘ಲವ್ ಜಿಹಾದ್’ ಎಂಬ ಪ್ರತಿಪಾದನೆಯೊಂದಿಗೆ ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಈ ಪೋಸ್ಟನ್ನು ಹಂಚಿಕೊಂಡಿದ್ದಾರೆ.

ಇದೇ ವಿಡಿಯೋ ಹಂಚಿಕೊಂಡವರಲ್ಲಿ ಬಲಪಂಥೀಯ ನಿರೂಪಕಿ ಶೆಫಾಲಿ ವೈದ್ಯ ಕೂಡ ಇದ್ದಾರೆ.

This video broke my heart!If the info that I have is correct, this is a Hindu father begging his daughter to not fall…

Posted by Shefali Vaidya on Monday, October 5, 2020

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ನಟ ಅಮಿತಾಬ್ ಬಚ್ಚನ್‌ ದಾವೂದ್ ಇಬ್ರಾಹಿಂನನ್ನು ಭೇಟಿ ಆಗಿದ್ದು ನಿಜವೆ?

ಫೇಸ್‌ಬುಕ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿರುವ ಶೆಫಾಲಿ ವೈದ್ಯ, “ಈ ವಿಡಿಯೋ ನನ್ನ ಹೃದಯವನ್ನು ಘಾಸಿಗೊಳಿಸಿದೆ! ನನ್ನಲ್ಲಿರುವ ಮಾಹಿತಿಯು ಸರಿಯಾಗಿದ್ದರೆ, ಇದು ಹಿಂದೂ ತಂದೆಯೋರ್ವ ತನ್ನ ಮಗಳನ್ನು ಲವ್ ಜಿಹಾದ್‌ಗೆ ಬಲಿಯಾಗದಂತೆ ಕೇಳಿಕೊಳ್ಳುತ್ತಿದ್ದಾನೆ. ಅವನು ತನ್ನ ಪಗಡಿಯನ್ನು ಅವಳ ಕಾಲುಗಳ ಬಳಿ ಇಡುತ್ತಾನೆ. ರಾಜಸ್ಥಾನಿ ಸಂಪ್ರದಾಯವನ್ನು ಚೆನ್ನಾಗಿ ಬಲ್ಲವರು ಮಾತ್ರ ಇದರ ತೀವ್ರತೆಯನ್ನು ಅರ್ಥಮಾಡಿಕೊಳ್ಳುತ್ತಾರೆ. ಹುಡುಗಿ ಎಷ್ಟು ಮುಗುಳ್ನಗುತ್ತಾ ಅವನನ್ನು ತಳ್ಳುತ್ತಾಳೆಂದು ನೋಡಿ! ಅವಳು ಬಹುಶಃ ತನ್ನ ಐದನೇ ಮಗುವನ್ನು ಹೊತ್ತುಕೊಂಡು ಮೂರನೆಯ ಹೆಂಡತಿಯಾಗಿ ಕೊನೆಗೊಳ್ಳಬಹುದು ಅಥವಾ ಸೋನ್‌ಭದ್ರಾದ ಮಹಿಳೆಯಂತೆ ಶಿರಚ್ಚೇದನಕ್ಕೆ ಒಳಗಾಗಬಹುದು. ಆದರೆ ಅಷ್ಟರೊಳಗೆ ಆ ಮುದುಕ ಬಹುಶಃ ಹೃದಯ ಒಡೆದು ಸತ್ತಿರಬಹುದು!” ಎಂದು ಬರೆದುಕೊಂಡಿದ್ದಾರೆ. ಇದರ ತನಿಖೆ ಮಾಡುತ್ತಿರುವ ಸಂಸ್ಥೆಯೊಂದು ತನಗೆ ಮಾಹಿತಿ ನೀಡಿದೆ ಎಂದು ಅವರು ವಿಶೇಷ ಸೂಚನೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್: ಕಂಗನಾ ರಾಣಾವತ್‌ ಚುನಾವಣೆಯಲ್ಲಿ ಬಲವಂತವಾಗಿ ಶಿವಸೇನೆಗೆ ಮತ ಚಲಾಯಿಸಿದರೆ?

ಇದೇ ವೀಡಿಯೋವನ್ನು ಇದೇ ಹೇಳಿಕೆಯೊಂದಿಗೆ ಟ್ವಿಟ್ಟರ್‌ನಲ್ಲಿಯೂ ಹಂಚಿಕೊಳ್ಳಲಾಗುತ್ತಿದೆ.

ಈ ವರದಿಯನ್ನು ಬರೆಯುವ ವೇಳೆಗೆ ಈ ಟ್ವೀಟ್‌ಗೆ ಸುಮಾರು 3,700 ಕ್ಕೂ ಹೆಚ್ಚು ಲೈಕ್‌ಗಳು ಮತ್ತು 2,200 ರಿಟ್ವೀಟ್‌ಗಳನ್ನು ಮಾಡಿದ್ದಾರೆ. 31,700 ಬಳಕೆದಾರರು ಇದನ್ನು ವೀಕ್ಷಿಸಿದ್ದಾರೆ.

ಫ್ಯಾಕ್ಟ್‌ಚೆಕ್: 

ರಾಯಲ್ ರೈಕಾ ಎಂಬ ಫೇಸ್‌ಬುಕ್ ಪುಟದಿಂದ ಅಪ್‌ಲೋಡ್ ಮಾಡಲಾದ ವೀಡಿಯೊವನ್ನು ಸುಳ್ಳು ಮಾಹಿತಿಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ವೀಡಿಯೊದಲ್ಲಿರುವ ಹುಡುಗಿ ಸೀತಾ ಮತ್ತು ವ್ಯಕ್ತಿ ಲಖರಾಮ್ ಎಂದು ಆ ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಫ್ಯಾಕ್ಟ್‌‌ಚೆಕ್‌: ಯುವತಿಯನ್ನು ಅಮಾನುಷವಾಗಿ ಕೊಲ್ಲುತ್ತಿರುವ ಈ ವಿಡಿಯೋ ಭಾರತದ್ದಲ್ಲ

ನಾವು ಎರಡೂ ಜಿಲ್ಲೆಗಳಲ್ಲಿನ ಪೊಲೀಸರನ್ನು ಸಂಪರ್ಕಿಸಿದಾಗ, ಕಳೆದ ತಿಂಗಳು ಪಾಲಿಯಲ್ಲಿ ಈ ಘಟನೆ ನಡೆದಿರುವುದು ಕಂಡುಬಂದಿದೆ ಎಂದು ದಿ ಕ್ವಿಂಟ್ ವರದಿ ಮಾಡಿದೆ.

ಪಾಲಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬ್ರಿಜೇಶ್ ಕುಮಾರ್ ಸೋನಿ ದಿ ಕ್ವಿಂಟ್ ಜೊತೆ ಮಾತನಾಡಿದ್ದು, “ಈ ಘಟನೆ ಪಾಲಿಯಲ್ಲಿ ನಡೆದಿದೆ. ಆದರೆ, ಇದು ಲವ್ ಜಿಹಾದ್ ಪ್ರಕರಣ ಎಂದು ಹೇಳಿತ್ತಿರುವುದು ಸಂಪೂರ್ಣವಾಗಿ ಸುಳ್ಳು. ಇಲ್ಲಿ ಮಹಿಳೆ ಮತ್ತು ಪುರುಷ ಇಬ್ಬರೂ ಒಂದೇ ಸಮುದಾಯಕ್ಕೆ ಸೇರಿದವರು” ಎಂದು ಸ್ಪಷ್ಟಪಡಿಸಿದ್ದಾರೆ.

ವೀಡಿಯೊದಲ್ಲಿ ನೋಡಬಹುದಾದ ಮಹಿಳೆ ಸೀತಾ. ಲಖರಾಮ್ ಎಂಬ ಈ ವ್ಯಕ್ತಿಯೊಂದಿಗೆ ಓಡಿಹೋಗಿದ್ದು, ಅವರು ಈಗಾಗಲೇ ಮದುವೆಯಾಗಿದ್ದಾರೆ. ಅವರನ್ನು ವೀಡಿಯೊದಲ್ಲಿ ಸಹ ಕಾಣಬಹುದು. ಇಲ್ಲಿ ಆಕೆಯ ಪೋಷಕರು ಮನೆಗೆ ಮರಳುವಂತೆ ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಮುಸ್ಲಿಂ ಮದುವೆಯಲ್ಲಿ ಪಾಲ್ಗೊಂಡಿದ್ದಕ್ಕೆ ಕೇರಳದ RSS ಕಾರ್ಯಕರ್ತನ ಮೇಲೆ ಹಲ್ಲೆ ಮಾಡಲಾಯಿತೇ?

ಆಗಸ್ಟ್ 28 ರಂದು ಸೀತಾ ತನ್ನ ಹೇಳಿಕೆಯನ್ನು ಪೊಲೀಸರ ಬಳಿ ನೀಡಿದ್ದು, “ನಾನು ಲಖರಾಮ್‌ನೊಂದಿಗೆ ಸ್ವಯಿಚ್ಚೆಯಿಂದ ಬಂದಿದ್ದೇನೆ. ಅವರೊಂದಿಗೇ ವಾಸಿಸಲು ಬಯಸುತ್ತೇನೆ. ನಾನು ನನ್ನ ಪೋಷಕರ ಮನೆಗೆ ಹೋಗುವುದಿಲ್ಲ” ಎಂದು ಹೇಳಿರುವುದು ಉಲ್ಲೇಖವಾಗಿದೆ.

ಫ್ಯಾಕ್ಟ್-ಚೆಕಿಂಗ್ ವೆಬ್‌ಸೈಟ್ ಆಲ್ಟ್ ನ್ಯೂಸ್ ಸಹ ನವ ದಂಪತಿಗಳನ್ನು ಸಂಪರ್ಕಿಸಿದ್ದು, “ನಾವು ಒಂದೇ ಜಾತಿಗೆ ಸೇರಿದವರಾಗಿದ್ದು, ಈಗ ಮದುವೆಯಾಗಿ ಒಂದು ತಿಂಗಳಾಗಿದೆ. ಆದರೆ ಈ ವೀಡಿಯೊ ಸಂಪೂರ್ಣವಾಗಿ ಸುಳ್ಳು ಪ್ರತಿಪಾದನೆಯೊಂದಿಗೆ ವೈರಲ್ ಆಗಿದೆ. ನಾವು ನ್ಯಾಯಾಲಯದಲ್ಲಿ ಮದುವೆಯಾಗುತ್ತಿದ್ದಾಗ, ಸೀತಾಳ ತಂದೆ ಮದುವೆಯಾಗಬಾರದೆಂದು ಅವಳೊಂದಿಗೆ ತಮಾಷೆ ಮಾಡುತ್ತಿದ್ದರು. ಯಾರೋ ಈ ಕ್ಲಿಪ್ ಅನ್ನು ಬೇರೆ ಸಂದರ್ಭದಲ್ಲಿ ವೈರಲ್ ಮಾಡಿದ್ದಾರೆ. ಜೊತೆಗೆ ಮಹಿಳೆಯ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳುತ್ತಿದ್ದಾರೆ. ಇದು ಸಂಪೂರ್ಣ ಸುಳ್ಳು ಎಲ್ಲವೂ ಸರಿಯಾಗಿಯೇ ಇದೆ” ಎಂದು ಲಖರಾಮ್ ಹೇಳಿಕೆ ನೀಡಿದ್ದಾರೆ.

ಹಾಗಾಗಿ ಸ್ಪಷ್ಟವಾಗಿ, ಹಲವಾರು ಸುಳ್ಳು ಹಕ್ಕುಗಳೊಂದಿಗೆ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗುತ್ತಿದೆ ಎಂಬುದು ತಿಳಿದುಬಂದಿದೆ.


ಇದನ್ನೂ ಓದಿ: ಭಾರತಕ್ಕಿಂತ ಅಮೆರಿಕ, ಜಪಾನ್ ಜಿಡಿಪಿ ಕುಸಿತ ಹೆಚ್ಚು?: ಸುಳ್ಳು ಹರಡುತ್ತಿರುವ ಪೋಸ್ಟ್ ಕಾರ್ಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...