Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್: ಸೋನಿಯಾ ಗಾಂಧಿ ಕಾಲಿಗೆ ಬಿದ್ದ ಮನಮೋಹನ್‌ ಸಿಂಗ್?‌ ಈ ಘಟನೆ ನಿಜವಲ್ಲ

ಫ್ಯಾಕ್ಟ್‌ಚೆಕ್: ಸೋನಿಯಾ ಗಾಂಧಿ ಕಾಲಿಗೆ ಬಿದ್ದ ಮನಮೋಹನ್‌ ಸಿಂಗ್?‌ ಈ ಘಟನೆ ನಿಜವಲ್ಲ

- Advertisement -
- Advertisement -

“ರಾಹುಲ್‌ ಗಾಂಧಿ ಎದುರಿಗೆ ಸೋನಿಯಾ ಗಾಂಧಿಯವರ ಕಾಲಿಗೆ ಮನಮೋಹನ್‌ ಸಿಂಗ್‌ ಬಿದ್ದು ಆರ್ಶೀವಾದ ಪಡೆದುಕೊಂಡಿದ್ದಾರೆ. 71 ವ‍ರ್ಷದ ಸೋನಿಯಾ ಕಾಳಿಗೆ 85 ವರ್ಷದ ಮನಮೋಹನ್‌ ಸಿಂಗ್‌ ಏಕೆ ಬೀಳಬೇಕು” ಎಂದು ಫೋಟೊವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಹಂಚಿಕೊಂಡಿದ್ದಾರೆ.

ವೈರಲ್‌ ಫೋಟೊದಲ್ಲಿ ಸೋನಿಯಾ ಗಾಂಧಿಯವರ ಕಾಲಿಗೆ ವ್ಯಕ್ತಿಯೋರ್ವ ನಮಸ್ಕರಿಸುತ್ತಿರುವುದು ಕಾಣುತ್ತದೆ. ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ಇದ್ದಾರೆ.

“ಅವಳ ಗುಲಾಮರು ಅವಳನ್ನು ದೇವರು, ತಾಯಿ ಎಂದು ಕರೆಯುತ್ತಾರೆ. ಆದರೆ ಆಕೆಗೆ ಕನಿಷ್ಟ ಸಾಮಾನ್ಯ ಜ್ಞಾನಿವಲ್ಲ” ಎಂದು ಹಲವರು ಆರೋಪಿಸಿದ್ದಾರೆ. ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿ ಇಲ್ಲಿದೆ. ಚಿತ್ರವನ್ನು ಫೇಸ್‌ಬುಕ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಅದರ ಸ್ಕ್ರೀನ್‌ಶಾಟ್ ಕೆಳಗೆ ಇದೆ.

ಕಳೆದ ವರ್ಷವೂ ಸಹ ಇದೇ ಆರೋಪ ಮಾಡಲಾಗಿತ್ತು. ರಾಹುಲ್‌ ಗಾಂಧಿಗಾದರೂ ಬುದ್ಧಿ ಬೇಡವೇ? ಅದನ್ನು ನಗುತ್ತಾ ನೋಡುತ್ತಿದ್ದಾರೆ ಎಂದು ಸಹ ಆರೋಪಿಸಲಾಗಿತ್ತು.

संसद में आँख मारने वाला चाहिए…, या चीन से आँख मिलाने वाला .., या पाकिस्तान को आँख दिखाने वाला ..??तय कर लो….!!

Posted by पंडित राम शर्मा – भट्ट ब्राह्मण on Sunday, April 28, 2019

 

ಫ್ಯಾಕ್ಟ್ ಚೆಕ್

ಗೂಗಲ್‌ ರಿವರ್ಸ್‌ ಇಮೇಜ್‌ ಸರ್ಚ್‌ ಮೂಲಕ ಹುಡುಕಿದಾಗ ಈ ಚಿತ್ರವು 2011ರ ನವೆಂಬರ್‌ನಲ್ಲಿ ನಡೆದ ಭಾರತೀಯ ಯುವ ಕಾಂಗ್ರೆಸ್ ಸಮಾವೇಶದಲ್ಲಿ ತೆಗೆಯಲಾದ ಫೋಟೊ ಇದಾಗಿದೆ. ಚಿತ್ರಕ್ಕೆ “ನವದೆಹಲಿ, ಭಾರತ – ನವೆಂಬರ್ 29: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ನೋಡುವಾಗ ಪ್ರತಿನಿಧಿಯೊಬ್ಬರು ಸೋನಿಯಾ ಗಾಂಧಿಯವರ ಪಾದಗಳನ್ನು ಮುಟ್ಟುತ್ತಾರೆ. ಮಂಗಳವಾರ ನವದೆಹಲಿಯಲ್ಲಿ ಚುನಾಯಿತ ಪದಾಧಿಕಾರಿಗಳ ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಮಟ್ಟದ ಸಮಾವೇಶ. (ಶೇಖರ್ ಯಾದವ್ / ಗೆಟ್ಟಿ ಇಮೇಜಸ್ ಮೂಲಕ ಇಂಡಿಯಾ ಟುಡೆ ಚಿತ್ರ)” ಎಂದು ಶೀರ್ಷಿಕೆ ನೀಡಲಾಗಿದೆ. ಅಲ್ಲಿಗೆ ಅದು ಬೇರೆಯೇ ಪ್ರತಿನಿಧಿ ಹೊರತು ಮನಮೋಹನ್‌ ಸಿಂಗ್‌ ಅಲ್ಲ ಎನ್ನುವುದು ಸ್ಪಷ್ಟವಾಗಿದೆ.

ಜೊತೆಗೆ ಗೆಟ್ಟಿ ಇಮೇಜಸ್‌ನಲ್ಲಿ ಅದೇ ದಿನದಿಂದ ಮನಮೋಹನ್‌ ಸಿಂಗ್‌ರವರ ಚಿತ್ರ ಹುಡುಕಿದಾಗ ಇದರಲ್ಲಿ ಡಾ. ಮನಮೋಹನ್ ಸಿಂಗ್ ನೀಲಿ ಪೇಟ ಧರಿಸಿರುವುದನ್ನು ಕಾಣಬಹುದು. ಹಾಗಾಗಿ ಮನಮೋಹನ್ ಸಿಂಗ್ ಸೋನಿಯಾ ಗಾಂಧಿಯವರ ಕಾಲಿಗೆ ಬಿದ್ದಿದ್ದಾರೆ ಎಂಬ ಆರೋಪವು ಸಂಪೂರ್ಣ ತಪ್ಪಾಗಿದೆ.

NEW DELHI, INDIA – NOVEMBER 29: Congress Chief Sonia Gandhi, Prime Minister Manmohan Singh and General Secretary Rahul Gandhi with other leaders during the Indian Youth Congress’s national level convention of Elected Office Bearers in New Delhi on Tuesday. (Photo by Shekhar Yadav/The India Today Group via Getty Images)

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇತ್ತೀಚಿನ ಭಾರತ-ಚೀನಾ ಸೈನಿಕರ ಘರ್ಷಣೆಯ ವಿಡಿಯೋ ಬಹಿರಂಗ? ವಾಸ್ತವವೇನು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...