Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್: ಸೋನಿಯಾ ಗಾಂಧಿ ಕಾಲಿಗೆ ಬಿದ್ದ ಮನಮೋಹನ್‌ ಸಿಂಗ್?‌ ಈ ಘಟನೆ ನಿಜವಲ್ಲ

ಫ್ಯಾಕ್ಟ್‌ಚೆಕ್: ಸೋನಿಯಾ ಗಾಂಧಿ ಕಾಲಿಗೆ ಬಿದ್ದ ಮನಮೋಹನ್‌ ಸಿಂಗ್?‌ ಈ ಘಟನೆ ನಿಜವಲ್ಲ

- Advertisement -
- Advertisement -

“ರಾಹುಲ್‌ ಗಾಂಧಿ ಎದುರಿಗೆ ಸೋನಿಯಾ ಗಾಂಧಿಯವರ ಕಾಲಿಗೆ ಮನಮೋಹನ್‌ ಸಿಂಗ್‌ ಬಿದ್ದು ಆರ್ಶೀವಾದ ಪಡೆದುಕೊಂಡಿದ್ದಾರೆ. 71 ವ‍ರ್ಷದ ಸೋನಿಯಾ ಕಾಳಿಗೆ 85 ವರ್ಷದ ಮನಮೋಹನ್‌ ಸಿಂಗ್‌ ಏಕೆ ಬೀಳಬೇಕು” ಎಂದು ಫೋಟೊವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಹಂಚಿಕೊಂಡಿದ್ದಾರೆ.

ವೈರಲ್‌ ಫೋಟೊದಲ್ಲಿ ಸೋನಿಯಾ ಗಾಂಧಿಯವರ ಕಾಲಿಗೆ ವ್ಯಕ್ತಿಯೋರ್ವ ನಮಸ್ಕರಿಸುತ್ತಿರುವುದು ಕಾಣುತ್ತದೆ. ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ಇದ್ದಾರೆ.

“ಅವಳ ಗುಲಾಮರು ಅವಳನ್ನು ದೇವರು, ತಾಯಿ ಎಂದು ಕರೆಯುತ್ತಾರೆ. ಆದರೆ ಆಕೆಗೆ ಕನಿಷ್ಟ ಸಾಮಾನ್ಯ ಜ್ಞಾನಿವಲ್ಲ” ಎಂದು ಹಲವರು ಆರೋಪಿಸಿದ್ದಾರೆ. ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿ ಇಲ್ಲಿದೆ. ಚಿತ್ರವನ್ನು ಫೇಸ್‌ಬುಕ್‌ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ಅದರ ಸ್ಕ್ರೀನ್‌ಶಾಟ್ ಕೆಳಗೆ ಇದೆ.

ಕಳೆದ ವರ್ಷವೂ ಸಹ ಇದೇ ಆರೋಪ ಮಾಡಲಾಗಿತ್ತು. ರಾಹುಲ್‌ ಗಾಂಧಿಗಾದರೂ ಬುದ್ಧಿ ಬೇಡವೇ? ಅದನ್ನು ನಗುತ್ತಾ ನೋಡುತ್ತಿದ್ದಾರೆ ಎಂದು ಸಹ ಆರೋಪಿಸಲಾಗಿತ್ತು.

संसद में आँख मारने वाला चाहिए…, या चीन से आँख मिलाने वाला .., या पाकिस्तान को आँख दिखाने वाला ..??तय कर लो….!!

Posted by पंडित राम शर्मा – भट्ट ब्राह्मण on Sunday, April 28, 2019

 

ಫ್ಯಾಕ್ಟ್ ಚೆಕ್

ಗೂಗಲ್‌ ರಿವರ್ಸ್‌ ಇಮೇಜ್‌ ಸರ್ಚ್‌ ಮೂಲಕ ಹುಡುಕಿದಾಗ ಈ ಚಿತ್ರವು 2011ರ ನವೆಂಬರ್‌ನಲ್ಲಿ ನಡೆದ ಭಾರತೀಯ ಯುವ ಕಾಂಗ್ರೆಸ್ ಸಮಾವೇಶದಲ್ಲಿ ತೆಗೆಯಲಾದ ಫೋಟೊ ಇದಾಗಿದೆ. ಚಿತ್ರಕ್ಕೆ “ನವದೆಹಲಿ, ಭಾರತ – ನವೆಂಬರ್ 29: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ನೋಡುವಾಗ ಪ್ರತಿನಿಧಿಯೊಬ್ಬರು ಸೋನಿಯಾ ಗಾಂಧಿಯವರ ಪಾದಗಳನ್ನು ಮುಟ್ಟುತ್ತಾರೆ. ಮಂಗಳವಾರ ನವದೆಹಲಿಯಲ್ಲಿ ಚುನಾಯಿತ ಪದಾಧಿಕಾರಿಗಳ ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ ಮಟ್ಟದ ಸಮಾವೇಶ. (ಶೇಖರ್ ಯಾದವ್ / ಗೆಟ್ಟಿ ಇಮೇಜಸ್ ಮೂಲಕ ಇಂಡಿಯಾ ಟುಡೆ ಚಿತ್ರ)” ಎಂದು ಶೀರ್ಷಿಕೆ ನೀಡಲಾಗಿದೆ. ಅಲ್ಲಿಗೆ ಅದು ಬೇರೆಯೇ ಪ್ರತಿನಿಧಿ ಹೊರತು ಮನಮೋಹನ್‌ ಸಿಂಗ್‌ ಅಲ್ಲ ಎನ್ನುವುದು ಸ್ಪಷ್ಟವಾಗಿದೆ.

ಜೊತೆಗೆ ಗೆಟ್ಟಿ ಇಮೇಜಸ್‌ನಲ್ಲಿ ಅದೇ ದಿನದಿಂದ ಮನಮೋಹನ್‌ ಸಿಂಗ್‌ರವರ ಚಿತ್ರ ಹುಡುಕಿದಾಗ ಇದರಲ್ಲಿ ಡಾ. ಮನಮೋಹನ್ ಸಿಂಗ್ ನೀಲಿ ಪೇಟ ಧರಿಸಿರುವುದನ್ನು ಕಾಣಬಹುದು. ಹಾಗಾಗಿ ಮನಮೋಹನ್ ಸಿಂಗ್ ಸೋನಿಯಾ ಗಾಂಧಿಯವರ ಕಾಲಿಗೆ ಬಿದ್ದಿದ್ದಾರೆ ಎಂಬ ಆರೋಪವು ಸಂಪೂರ್ಣ ತಪ್ಪಾಗಿದೆ.

NEW DELHI, INDIA – NOVEMBER 29: Congress Chief Sonia Gandhi, Prime Minister Manmohan Singh and General Secretary Rahul Gandhi with other leaders during the Indian Youth Congress’s national level convention of Elected Office Bearers in New Delhi on Tuesday. (Photo by Shekhar Yadav/The India Today Group via Getty Images)

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇತ್ತೀಚಿನ ಭಾರತ-ಚೀನಾ ಸೈನಿಕರ ಘರ್ಷಣೆಯ ವಿಡಿಯೋ ಬಹಿರಂಗ? ವಾಸ್ತವವೇನು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...